Homeಕರ್ನಾಟಕಸಿ.ಡಿ. ಇದ್ದರೆ ಬಿಡುಗಡೆ ಮಾಡಲಿ: ಯತ್ನಾಳ್‌‌ ಪ್ರತಿಕ್ರಿಯೆ

ಸಿ.ಡಿ. ಇದ್ದರೆ ಬಿಡುಗಡೆ ಮಾಡಲಿ: ಯತ್ನಾಳ್‌‌ ಪ್ರತಿಕ್ರಿಯೆ

ಕಾಂಗ್ರೆಸ್‌, ಬಿಜೆಪಿ ಎರಡೂ ಪಕ್ಷದಲ್ಲಿಯೂ ಸಿ.ಡಿ. ಮಾಡುವ ಒಬ್ಬರದು ಫ್ಯಾಕ್ಟರಿ ಇದೆ.

- Advertisement -
- Advertisement -

ಇತ್ತೀಚಿನ ದಿನಗಳಲ್ಲಿ ಬಿಜೆಪಿ ನಾಯಕರ ಸಿ.ಡಿ.ಗಳು ಸಾಮಾಜಿಕ ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿವೆ. ಹೀಗಾಗಿ ಹಲವರು ಕೋರ್ಟ್‌ನಿಂದ ತಡೆಯಾಜ್ಞೆಯನ್ನು ತಂದಿದ್ದಾರೆ. ಮಾಜಿ ಸಚಿವ ರಮೇಶ್‌ ಜಾರಕಿಹೊಳಿಯವರ ಸಿ.ಡಿ. ಮೊದಲು ಬಿಡುಗಡೆಯಾಗಿತ್ತು. ನಂತರದಲ್ಲಿ ಹಲವು ನಾಯಕರು ಕೋರ್ಟ್ ಮೆಟ್ಟಿಲೇರಿ ಎಚ್ಚರಿಕೆ ವಹಿಸಿದ್ದಾರೆ.

ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದಗೌಡರದ್ದು ಎನ್ನಲಾದ ವಿಡಿಯೊ ಇತ್ತೀಚೆಗೆ ವೈರಲ್‌ ಆಗಿತ್ತು. “ಆತ್ಮೀಯ ಹಿತೈಷಿಗಳೇ, ನನ್ನ ಮಾರ್ಫ್ ಮಾಡಿದ (ನಕಲಿ) ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆ ವಿಡಿಯೊದಲ್ಲಿ ಇರುವುದು ನಾನಲ್ಲ, ನನ್ನ ವಿರೋಧಿಗಳು ನನ್ನ ನಿಷ್ಪಕ್ಷಪಾತ ವ್ಯಕ್ತಿತ್ವವನ್ನು ಹಾಳುಮಾಡಲು ಇದನ್ನು ನಿರ್ಮಿಸಿದ್ದಾರೆ ಎಂದು ತಿಳಿಸಲು ಇಚ್ಚಿಸುತ್ತೇನೆ” ಎಂದು ಸದಾನಂದಗೌಡರು ಹೇಳಿದ್ದರು. ಈಗ ಯತ್ನಾಳ್ ಅವರ ಭಾವಚಿತ್ರವನ್ನು ಹೋಲುವ ಫೋಟೋವೊಂದು ವೈರಲ್‌ ಆಗಿದೆ.

ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಫೋಟೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿ ವಿಜಯಪುರ ನಗರದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಸಿಡಿ ಇದ್ದರೆ ಬಿಡುಗಡೆ ಮಾಡಲಿ ಎಂದು ಸವಾಲ್ ಹಾಕಿದ್ದಾರೆ.

ಇದನ್ನೂ ಓದಿರಿ: ವಿಡಿಯೊದಲ್ಲಿ ಇರುವುದು ನಾನಲ್ಲ- ಬಿಜೆಪಿ ಸಂಸದ ಸದಾನಂದ ಗೌಡ ಸ್ಪಷ್ಟನೆ

“ಇದರಲ್ಲಿ ಯಾರ್ಯಾರು ಇದ್ದಾರೆ, ಎಲ್ಲವೂ ಗೊತ್ತಿದೆ. ದಾಖಲೆ ಸಮೇತ ನಮಗೆ ಮಾಹಿತಿ ಇದೆ. ಫೋಟೋ ವೈರಲ್ ಹಿಂದೆ ಇರುವವರಿಗೆ ತಕ್ಕ ಶಾಸ್ತಿಯಾಗುತ್ತೆ. ಭ್ರಷ್ಟಾಚಾರದ ವಿರುದ್ಧ, ಹಿಂದುತ್ವದ ಪರ ಮಾತನಾಡುತ್ತೇನೆ. ನನ್ನ ಮಾತು ಅವರಿಗೆ ಸಮಸ್ಯೆಯಾಗುತ್ತಿದೆ. ಫೋಟೋ ವೈರಲ್ ಪ್ರಕರಣದಲ್ಲಿ ಎಲ್ಲ ಪಕ್ಷದವರಿದ್ದಾರೆ ” ಎಂದು ಯತ್ನಾಳ್‌ ಆರೋಪಿಸಿದ್ದಾರೆ.

ಸಿ.ಡಿ. ಮಾಡುವಂತಹದ್ದು ಬಿಜೆಪಿ, ಕಾಂಗ್ರೆಸ್‌ನಲ್ಲಿ ಫ್ಯಾಕ್ಟರಿ ಇದೆ. ಎರಡೂ ಪಕ್ಷದಲ್ಲಿಯೂ ಸಿ.ಡಿ. ಮಾಡುವ ಒಬ್ಬರದು ಫ್ಯಾಕ್ಟರಿ ಇದೆ. ನನಗೆ ಅವಕಾಶ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ನನ್ನ ಸಿ.ಡಿ. ಇದ್ದರೆ ಬಿಡುಗಡೆ ‌ಆಗಬೇಕಲ್ಲ. ಕಾರ್ಯಕರ್ತರು ಕೆಲವೊಮ್ಮೆ ವಿಡಿಯೋ ಕಾಲ್ ಮಾಡ್ತಾರೆ. ವಿಡಿಯೋ ಕಾಲ್ ಮಾಡಿದಾಗ ನಾನು ರಿಸೀವ್ ಮಾಡುತ್ತೇನೆ. ಸಿ.ಡಿ. ಇದ್ದರೆ ಬಿಡುಗಡೆ ಮಾಡಲಿ ಎಂದಿದ್ದಾರೆ.

ಪೊಲೀಸರು ಫೋಟೋ ಪ್ರಕರಣವನ್ನು ತನಿಖೆ ಮಾಡುತ್ತಾರೆ. ಇಂತಹ ನೂರು ಆರೋಪ ಬಂದರೂ ಎದುರಿಸುವ ತಾಕತ್ತಿದೆ. ಕಳ್ಳರು ಇನ್ನೊಂದು ಸ್ವಲ್ಪ ದಿನದಲ್ಲಿ ಸಿಗುತ್ತಾರೆ. ಜನರ ಮುಂದೆ ಬೆತ್ತಲಾಗುತ್ತಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಕುರಿತು ಕಾಂಗ್ರೆಸ್ ಮುಖಂಡ ಸಲೀಂ ಹಾಗೂ ಉಗ್ರಪ್ಪ ನಡುವಿನ ಸಂಭಾಷಣೆ ವಿಚಾರಕ್ಕೆ ಸಂಬಂಧಿಸಿ ಯತ್ನಾಳ್ ಪ್ರತಿಕ್ರಿಯಿಸಿದ್ದಾರೆ. ಜಲಸಂಪನ್ಮೂಲ ಇಲಾಖೆ ಭ್ರಷ್ಟಾಚಾರ ಪ್ರಕರಣ ನಿಜ. ಅದು ಸತ್ಯವೇ ಇದೆ, ಆ ಕಾರಣಕ್ಕೆ ರೇಡ್ ಆಗಿದೆ. ಸಾವಿರಾರು ಕೋಟಿ ಮೌಲ್ಯದ ಆಸ್ತಿ ಸಿಕ್ಕಿದೆ. ಜಲಸಂಪನ್ಮೂಲ ಇಲಾಖೆಯಲ್ಲಿ ನಡೆದ ಭ್ರಷ್ಟಾಚಾರದ್ದೇ ರೇಡ್ ಆಗಿದೆ. ಅದರಲ್ಲಿ ಎಲ್ಲ ಪಕ್ಷದವರಿದ್ದಾರೆ, ಯಾವುದೇ ಒಂದು ಪಕ್ಷದವರಿಲ್ಲ. ಇನ್‌ಕಮ್‌ ಟ್ಯಾಕ್ಸ್‌ನವರು ರೇಡ್ ಮಾಡಿ ಒಳ್ಳೆಯ ಕೆಲಸ ಮಾಡಿದ್ದಾರೆ. ಭ್ರಷ್ಟಾಚಾರದ ಹಣವನೆಲ್ಲ ವಸೂಲಿ ಮಾಡಿದ್ದಾರೆ. ಪ್ರವಾಹ ಪೀಡಿತ ಪ್ರದೇಶದ ಮನೆಗಳು ಅರ್ಧಕ್ಕೆ ನಿಂತಿವೆ. ಬಡವರಿಗೆ ಹೋಗಿ ಅದು ಮುಟ್ಟಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ಸಿಡಿ ಭಯ: ಕೋರ್ಟ್‌ನಿಂದ ತಡೆಯಾಜ್ಞೆ ತರಲಿರುವ ಶಾಸಕ ರೇಣುಕಾಚಾರ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಯ ಸಾರ ಮತ್ತು ಶೈಲಿ ಎರಡಕ್ಕೂ ರಾಷ್ಟ್ರವು ಭಾರಿ ಬೆಲೆ ತೆರುತ್ತಿದೆ’: ಕಾಂಗ್ರೆಸ್

ನವದೆಹಲಿ: ಇರಾನ್ ಮೇಲೆ ನಡೆದ ಯುದ್ಧಕ್ಕೆ ಸರ್ಕಾರದ ಪ್ರತಿಕ್ರಿಯೆಯು ಭಾರತದ ಮೌಲ್ಯಗಳು, ತತ್ವಗಳು ಮತ್ತು ಹಿತಾಸಕ್ತಿಗಳಿಗೆ ಮಾಡಿದ ದ್ರೋಹವಾಗಿದೆ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ, ಪ್ರಧಾನಿ ನರೇಂದ್ರ ಮೋದಿಯವರ ವಿದೇಶಾಂಗ ನೀತಿಯ ಸಾರ...

ಬಂಗಾಳ ಎಸ್‌ಐಆರ್| ಮುಸ್ಲಿಂ ಬಹುಸಂಖ್ಯಾತ ಮುರ್ಷಿದಾಬಾದ್-ಮಾಲ್ಡಾದಲ್ಲಿ ಅತ್ಯಧಿಕ ಮತದಾರರ ಪರಿಶೀಲನೆ ಬಾಕಿ

ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಚುನಾವಣಾ ಆಯೋಗ ಪ್ರಕಟಿಸಿದ ಅಂತಿಮ ಮತದಾರರ ಪಟ್ಟಿಯ ಪ್ರಕಾರ, ಪಶ್ಚಿಮ ಬಂಗಾಳದ ಮುಸ್ಲಿಂ ಪ್ರಾಬಲ್ಯದ ಮುರ್ಷಿದಾಬಾದ್ ಮತ್ತು ಮಾಲ್ಡಾ ಜಿಲ್ಲೆಗಳಲ್ಲಿ ದಾಖಲೆಗಳ ಪರಿಶೀಲನೆಗೆ...

‘ಪ್ರಜಾಪ್ರಭುತ್ವ ಜಗತ್ತಿನ ನಾಯಕರು, ಸಾರ್ವಭೌಮ ರಾಷ್ಟ್ರದ ನಾಯಕನನ್ನು ಹತ್ಯೆ ಮಾಡಿದ್ದು ಹೇಯ ಕೃತ್ಯ’: ಖಮೇನಿ ಹತ್ಯೆಗೆ ಪ್ರಿಯಾಂಕ ಗಾಂಧಿ ಖಂಡನೆ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. "ಪ್ರಜಾಪ್ರಭುತ್ವ ಜಗತ್ತಿನ ನಾಯಕರು ಎಂದು ಕರೆಯಲ್ಪಡುವವರು" ಸಾರ್ವಭೌಮ ರಾಷ್ಟ್ರದ ನಾಯಕತ್ವವನ್ನು ಗುರಿಯಾಗಿಸಿಕೊಂಡು...

ದುಬೈ-ಅಬುಧಾಬಿ ಮೇಲೆ ದಾಳಿ; ಇರಾನ್‌ಗೆ ಯುಎಇ ಎಚ್ಚರಿಕೆ

ಇರಾನ್ ತನ್ನ ನೆರೆಹೊರೆಯವರನ್ನು ಗುರಿಯಾಗಿಸಿಕೊಳ್ಳಬಾರದು ಎಂದು ಯುಎಇ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರ ಅನ್ವರ್ ಗರ್ಗಶ್ ಎಚ್ಚರಿಕೆ ನೀಡಿದ್ದಾರೆ. "ಗಲ್ಫ್ ರಾಷ್ಟ್ರಗಳ ವಿರುದ್ಧ ಇರಾನ್ ಆಕ್ರಮಣವು ತಪ್ಪು ಲೆಕ್ಕಾಚಾರವಾಗಿದೆ. ಇದೇ ಬೆಳವಣಿಗೆ ನಿರ್ಣಾಯಕ ಹಂತದಲ್ಲಿ ಇರಾನ್...

ಇರಾನ್‌ ಹಂಗಾಮಿ ಸರ್ವೋಚ್ಚ ನಾಯಕರಾಗಿ ಅಯಾತೊಲ್ಲ ಅಲಿರೆಝಾ ಅರಾಫಿ ನೇಮಕ

ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಹಿನ್ನೆಲೆ, ಹಿರಿಯ ಧರ್ಮಗುರು ಅಯತೊಲ್ಲಾ ಅಲಿರೆಝಾ ಅರಾಫಿ ಅವರು ಇರಾನ್‌ನ ಹಂಗಾಮಿ ಸರ್ವೋಚ್ಚ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ಸರ್ಕಾರಿ-ಸಂಯೋಜಿತ...

ಖಮೇನಿ ಹತ್ಯೆ ವಿರೋಧಿಸಿ ಬೃಹತ್ ಪ್ರತಿಭಟನೆ; ಶ್ರೀನಗರದಲ್ಲಿ ಇಂಟರ್‌ನೆಟ್ ಸ್ತಬ್ಧ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ಕಾಶ್ಮೀರದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿವೆ. ಶ್ರೀನಗರದಲ್ಲಿರುವ ವಿಶ್ವಸಂಸ್ಥೆಯ ಮಿಲಿಟರಿ ವೀಕ್ಷಕರ ಗುಂಪು (UNMOGIP) ಪ್ರಧಾನ ಕಚೇರಿಯ ಮುಂದೆ ದೊಡ್ಡ ಜನಸಮೂಹ ಜಮಾಯಿಸಿತ್ತು....

ಅಮೆರಿಕಾ-ಇಸ್ರೇಲ್ ‘ಪುಂಡ ರಾಷ್ಟ್ರಗಳು’; ಇರಾನ್ ಮೇಲಿನ ದಾಳಿ ಖಂಡಿಸಿದ ಕೇರಳ ಸಿಎಂ; ಅನಿವಾಸಿ ಭಾರತೀಯರ ಆತಂಕ ಪರಿಹರಿಸಲು ಕೇಂದ್ರಕ್ಕೆ ಮನವಿ

ತಿರುವನಂತಪುರಂ: ಇಸ್ರೇಲ್ ಮತ್ತು ಅಮೆರಿಕ ಇರಾನ್ ಮೇಲೆ ನಡೆಸುತ್ತಿರುವ ದಾಳಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರವಾಗಿ ಖಂಡಿಸಿದ್ದಾರೆ ಮತ್ತು ಗಲ್ಫ್ ರಾಷ್ಟ್ರಗಳಲ್ಲಿರುವ ಹಲವಾರು ಅನಿವಾಸಿ ಭಾರತೀಯರ ಆತಂಕವನ್ನು ಪರಿಹರಿಸಲು ಕೇಂದ್ರವು ತಕ್ಷಣ...

ಅಮೆರಿಕ-ಇಸ್ರೇಲಿ ಮಿಲಿಟರಿ ದಾಳಿಯಲ್ಲಿ ‘ಇರಾನ್‌ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಹತ್ಯೆ; ಇರಾನ್ ಮಾಧ್ಯಮಗಳ ವರದಿ 

ಟೆಹ್ರಾನ್: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸ್ವಾಮ್ಯದ ಐಆರ್‌ಐಬಿ ಟಿವಿ ಭಾನುವಾರ ವರದಿ ಮಾಡಿದೆ. ಟೆಹ್ರಾನ್ ಮೇಲಿನ ದಾಳಿಯಲ್ಲಿ...

ಕರಾಚಿ| ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ ವೇಳೆ ಘರ್ಷಣೆ : ಕನಿಷ್ಠ 9 ಸಾವು

ಪಾಕಿಸ್ತಾನದ ಕರಾಚಿಯಲ್ಲಿರುವ ಅಮೆರಿಕ ದೂತಾವಾಸದ ಬಳಿ ಭಾನುವಾರ (ಮಾ.1) ಇರಾನ್ ಪರ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ಘರ್ಷಣೆ ಉಂಟಾಗಿ ಕನಿಷ್ಠ ಒಂಭತ್ತು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. "ನಾವು ಕನಿಷ್ಠ ಎಂಟು...

ಇರಾನ್-ಇಸ್ರೇಲ್ ಯುದ್ಧ: ಭಾರತ ತಕ್ಷಣದ ಆರ್ಥಿಕ ಸವಾಲುಗಳನ್ನು ಎದುರಿಸುವ ಸಾಧ್ಯತೆಯಿದೆ; ವರದಿ

ಫೆಬ್ರವರಿ 28, 2026 ರಂದು ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಮುಷ್ಕರದ ನಂತರ ಇರಾನ್-ಇಸ್ರೇಲ್ ಸಂಘರ್ಷದಲ್ಲಿ ತೀವ್ರ ಏರಿಕೆಯು ಪಶ್ಚಿಮ ಏಷ್ಯಾದಲ್ಲಿ ಭೌಗೋಳಿಕ ರಾಜಕೀಯ ಅಪಾಯಗಳನ್ನು ತೀವ್ರಗೊಳಿಸಿದೆ ಮತ್ತು ಜಾಗತಿಕ ಇಂಧನ ಮಾರುಕಟ್ಟೆಗಳಿಗೆ ತಕ್ಷಣದ...