Homeಕರ್ನಾಟಕಸಿ.ಡಿ. ಇದ್ದರೆ ಬಿಡುಗಡೆ ಮಾಡಲಿ: ಯತ್ನಾಳ್‌‌ ಪ್ರತಿಕ್ರಿಯೆ

ಸಿ.ಡಿ. ಇದ್ದರೆ ಬಿಡುಗಡೆ ಮಾಡಲಿ: ಯತ್ನಾಳ್‌‌ ಪ್ರತಿಕ್ರಿಯೆ

ಕಾಂಗ್ರೆಸ್‌, ಬಿಜೆಪಿ ಎರಡೂ ಪಕ್ಷದಲ್ಲಿಯೂ ಸಿ.ಡಿ. ಮಾಡುವ ಒಬ್ಬರದು ಫ್ಯಾಕ್ಟರಿ ಇದೆ.

- Advertisement -
- Advertisement -

ಇತ್ತೀಚಿನ ದಿನಗಳಲ್ಲಿ ಬಿಜೆಪಿ ನಾಯಕರ ಸಿ.ಡಿ.ಗಳು ಸಾಮಾಜಿಕ ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿವೆ. ಹೀಗಾಗಿ ಹಲವರು ಕೋರ್ಟ್‌ನಿಂದ ತಡೆಯಾಜ್ಞೆಯನ್ನು ತಂದಿದ್ದಾರೆ. ಮಾಜಿ ಸಚಿವ ರಮೇಶ್‌ ಜಾರಕಿಹೊಳಿಯವರ ಸಿ.ಡಿ. ಮೊದಲು ಬಿಡುಗಡೆಯಾಗಿತ್ತು. ನಂತರದಲ್ಲಿ ಹಲವು ನಾಯಕರು ಕೋರ್ಟ್ ಮೆಟ್ಟಿಲೇರಿ ಎಚ್ಚರಿಕೆ ವಹಿಸಿದ್ದಾರೆ.

ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದಗೌಡರದ್ದು ಎನ್ನಲಾದ ವಿಡಿಯೊ ಇತ್ತೀಚೆಗೆ ವೈರಲ್‌ ಆಗಿತ್ತು. “ಆತ್ಮೀಯ ಹಿತೈಷಿಗಳೇ, ನನ್ನ ಮಾರ್ಫ್ ಮಾಡಿದ (ನಕಲಿ) ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆ ವಿಡಿಯೊದಲ್ಲಿ ಇರುವುದು ನಾನಲ್ಲ, ನನ್ನ ವಿರೋಧಿಗಳು ನನ್ನ ನಿಷ್ಪಕ್ಷಪಾತ ವ್ಯಕ್ತಿತ್ವವನ್ನು ಹಾಳುಮಾಡಲು ಇದನ್ನು ನಿರ್ಮಿಸಿದ್ದಾರೆ ಎಂದು ತಿಳಿಸಲು ಇಚ್ಚಿಸುತ್ತೇನೆ” ಎಂದು ಸದಾನಂದಗೌಡರು ಹೇಳಿದ್ದರು. ಈಗ ಯತ್ನಾಳ್ ಅವರ ಭಾವಚಿತ್ರವನ್ನು ಹೋಲುವ ಫೋಟೋವೊಂದು ವೈರಲ್‌ ಆಗಿದೆ.

ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಫೋಟೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿ ವಿಜಯಪುರ ನಗರದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಸಿಡಿ ಇದ್ದರೆ ಬಿಡುಗಡೆ ಮಾಡಲಿ ಎಂದು ಸವಾಲ್ ಹಾಕಿದ್ದಾರೆ.

ಇದನ್ನೂ ಓದಿರಿ: ವಿಡಿಯೊದಲ್ಲಿ ಇರುವುದು ನಾನಲ್ಲ- ಬಿಜೆಪಿ ಸಂಸದ ಸದಾನಂದ ಗೌಡ ಸ್ಪಷ್ಟನೆ

“ಇದರಲ್ಲಿ ಯಾರ್ಯಾರು ಇದ್ದಾರೆ, ಎಲ್ಲವೂ ಗೊತ್ತಿದೆ. ದಾಖಲೆ ಸಮೇತ ನಮಗೆ ಮಾಹಿತಿ ಇದೆ. ಫೋಟೋ ವೈರಲ್ ಹಿಂದೆ ಇರುವವರಿಗೆ ತಕ್ಕ ಶಾಸ್ತಿಯಾಗುತ್ತೆ. ಭ್ರಷ್ಟಾಚಾರದ ವಿರುದ್ಧ, ಹಿಂದುತ್ವದ ಪರ ಮಾತನಾಡುತ್ತೇನೆ. ನನ್ನ ಮಾತು ಅವರಿಗೆ ಸಮಸ್ಯೆಯಾಗುತ್ತಿದೆ. ಫೋಟೋ ವೈರಲ್ ಪ್ರಕರಣದಲ್ಲಿ ಎಲ್ಲ ಪಕ್ಷದವರಿದ್ದಾರೆ ” ಎಂದು ಯತ್ನಾಳ್‌ ಆರೋಪಿಸಿದ್ದಾರೆ.

ಸಿ.ಡಿ. ಮಾಡುವಂತಹದ್ದು ಬಿಜೆಪಿ, ಕಾಂಗ್ರೆಸ್‌ನಲ್ಲಿ ಫ್ಯಾಕ್ಟರಿ ಇದೆ. ಎರಡೂ ಪಕ್ಷದಲ್ಲಿಯೂ ಸಿ.ಡಿ. ಮಾಡುವ ಒಬ್ಬರದು ಫ್ಯಾಕ್ಟರಿ ಇದೆ. ನನಗೆ ಅವಕಾಶ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ನನ್ನ ಸಿ.ಡಿ. ಇದ್ದರೆ ಬಿಡುಗಡೆ ‌ಆಗಬೇಕಲ್ಲ. ಕಾರ್ಯಕರ್ತರು ಕೆಲವೊಮ್ಮೆ ವಿಡಿಯೋ ಕಾಲ್ ಮಾಡ್ತಾರೆ. ವಿಡಿಯೋ ಕಾಲ್ ಮಾಡಿದಾಗ ನಾನು ರಿಸೀವ್ ಮಾಡುತ್ತೇನೆ. ಸಿ.ಡಿ. ಇದ್ದರೆ ಬಿಡುಗಡೆ ಮಾಡಲಿ ಎಂದಿದ್ದಾರೆ.

ಪೊಲೀಸರು ಫೋಟೋ ಪ್ರಕರಣವನ್ನು ತನಿಖೆ ಮಾಡುತ್ತಾರೆ. ಇಂತಹ ನೂರು ಆರೋಪ ಬಂದರೂ ಎದುರಿಸುವ ತಾಕತ್ತಿದೆ. ಕಳ್ಳರು ಇನ್ನೊಂದು ಸ್ವಲ್ಪ ದಿನದಲ್ಲಿ ಸಿಗುತ್ತಾರೆ. ಜನರ ಮುಂದೆ ಬೆತ್ತಲಾಗುತ್ತಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಕುರಿತು ಕಾಂಗ್ರೆಸ್ ಮುಖಂಡ ಸಲೀಂ ಹಾಗೂ ಉಗ್ರಪ್ಪ ನಡುವಿನ ಸಂಭಾಷಣೆ ವಿಚಾರಕ್ಕೆ ಸಂಬಂಧಿಸಿ ಯತ್ನಾಳ್ ಪ್ರತಿಕ್ರಿಯಿಸಿದ್ದಾರೆ. ಜಲಸಂಪನ್ಮೂಲ ಇಲಾಖೆ ಭ್ರಷ್ಟಾಚಾರ ಪ್ರಕರಣ ನಿಜ. ಅದು ಸತ್ಯವೇ ಇದೆ, ಆ ಕಾರಣಕ್ಕೆ ರೇಡ್ ಆಗಿದೆ. ಸಾವಿರಾರು ಕೋಟಿ ಮೌಲ್ಯದ ಆಸ್ತಿ ಸಿಕ್ಕಿದೆ. ಜಲಸಂಪನ್ಮೂಲ ಇಲಾಖೆಯಲ್ಲಿ ನಡೆದ ಭ್ರಷ್ಟಾಚಾರದ್ದೇ ರೇಡ್ ಆಗಿದೆ. ಅದರಲ್ಲಿ ಎಲ್ಲ ಪಕ್ಷದವರಿದ್ದಾರೆ, ಯಾವುದೇ ಒಂದು ಪಕ್ಷದವರಿಲ್ಲ. ಇನ್‌ಕಮ್‌ ಟ್ಯಾಕ್ಸ್‌ನವರು ರೇಡ್ ಮಾಡಿ ಒಳ್ಳೆಯ ಕೆಲಸ ಮಾಡಿದ್ದಾರೆ. ಭ್ರಷ್ಟಾಚಾರದ ಹಣವನೆಲ್ಲ ವಸೂಲಿ ಮಾಡಿದ್ದಾರೆ. ಪ್ರವಾಹ ಪೀಡಿತ ಪ್ರದೇಶದ ಮನೆಗಳು ಅರ್ಧಕ್ಕೆ ನಿಂತಿವೆ. ಬಡವರಿಗೆ ಹೋಗಿ ಅದು ಮುಟ್ಟಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ಸಿಡಿ ಭಯ: ಕೋರ್ಟ್‌ನಿಂದ ತಡೆಯಾಜ್ಞೆ ತರಲಿರುವ ಶಾಸಕ ರೇಣುಕಾಚಾರ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...