Homeಕರ್ನಾಟಕಸಿ.ಡಿ. ಇದ್ದರೆ ಬಿಡುಗಡೆ ಮಾಡಲಿ: ಯತ್ನಾಳ್‌‌ ಪ್ರತಿಕ್ರಿಯೆ

ಸಿ.ಡಿ. ಇದ್ದರೆ ಬಿಡುಗಡೆ ಮಾಡಲಿ: ಯತ್ನಾಳ್‌‌ ಪ್ರತಿಕ್ರಿಯೆ

ಕಾಂಗ್ರೆಸ್‌, ಬಿಜೆಪಿ ಎರಡೂ ಪಕ್ಷದಲ್ಲಿಯೂ ಸಿ.ಡಿ. ಮಾಡುವ ಒಬ್ಬರದು ಫ್ಯಾಕ್ಟರಿ ಇದೆ.

- Advertisement -
- Advertisement -

ಇತ್ತೀಚಿನ ದಿನಗಳಲ್ಲಿ ಬಿಜೆಪಿ ನಾಯಕರ ಸಿ.ಡಿ.ಗಳು ಸಾಮಾಜಿಕ ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿವೆ. ಹೀಗಾಗಿ ಹಲವರು ಕೋರ್ಟ್‌ನಿಂದ ತಡೆಯಾಜ್ಞೆಯನ್ನು ತಂದಿದ್ದಾರೆ. ಮಾಜಿ ಸಚಿವ ರಮೇಶ್‌ ಜಾರಕಿಹೊಳಿಯವರ ಸಿ.ಡಿ. ಮೊದಲು ಬಿಡುಗಡೆಯಾಗಿತ್ತು. ನಂತರದಲ್ಲಿ ಹಲವು ನಾಯಕರು ಕೋರ್ಟ್ ಮೆಟ್ಟಿಲೇರಿ ಎಚ್ಚರಿಕೆ ವಹಿಸಿದ್ದಾರೆ.

ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದಗೌಡರದ್ದು ಎನ್ನಲಾದ ವಿಡಿಯೊ ಇತ್ತೀಚೆಗೆ ವೈರಲ್‌ ಆಗಿತ್ತು. “ಆತ್ಮೀಯ ಹಿತೈಷಿಗಳೇ, ನನ್ನ ಮಾರ್ಫ್ ಮಾಡಿದ (ನಕಲಿ) ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆ ವಿಡಿಯೊದಲ್ಲಿ ಇರುವುದು ನಾನಲ್ಲ, ನನ್ನ ವಿರೋಧಿಗಳು ನನ್ನ ನಿಷ್ಪಕ್ಷಪಾತ ವ್ಯಕ್ತಿತ್ವವನ್ನು ಹಾಳುಮಾಡಲು ಇದನ್ನು ನಿರ್ಮಿಸಿದ್ದಾರೆ ಎಂದು ತಿಳಿಸಲು ಇಚ್ಚಿಸುತ್ತೇನೆ” ಎಂದು ಸದಾನಂದಗೌಡರು ಹೇಳಿದ್ದರು. ಈಗ ಯತ್ನಾಳ್ ಅವರ ಭಾವಚಿತ್ರವನ್ನು ಹೋಲುವ ಫೋಟೋವೊಂದು ವೈರಲ್‌ ಆಗಿದೆ.

ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಫೋಟೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿ ವಿಜಯಪುರ ನಗರದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಸಿಡಿ ಇದ್ದರೆ ಬಿಡುಗಡೆ ಮಾಡಲಿ ಎಂದು ಸವಾಲ್ ಹಾಕಿದ್ದಾರೆ.

ಇದನ್ನೂ ಓದಿರಿ: ವಿಡಿಯೊದಲ್ಲಿ ಇರುವುದು ನಾನಲ್ಲ- ಬಿಜೆಪಿ ಸಂಸದ ಸದಾನಂದ ಗೌಡ ಸ್ಪಷ್ಟನೆ

“ಇದರಲ್ಲಿ ಯಾರ್ಯಾರು ಇದ್ದಾರೆ, ಎಲ್ಲವೂ ಗೊತ್ತಿದೆ. ದಾಖಲೆ ಸಮೇತ ನಮಗೆ ಮಾಹಿತಿ ಇದೆ. ಫೋಟೋ ವೈರಲ್ ಹಿಂದೆ ಇರುವವರಿಗೆ ತಕ್ಕ ಶಾಸ್ತಿಯಾಗುತ್ತೆ. ಭ್ರಷ್ಟಾಚಾರದ ವಿರುದ್ಧ, ಹಿಂದುತ್ವದ ಪರ ಮಾತನಾಡುತ್ತೇನೆ. ನನ್ನ ಮಾತು ಅವರಿಗೆ ಸಮಸ್ಯೆಯಾಗುತ್ತಿದೆ. ಫೋಟೋ ವೈರಲ್ ಪ್ರಕರಣದಲ್ಲಿ ಎಲ್ಲ ಪಕ್ಷದವರಿದ್ದಾರೆ ” ಎಂದು ಯತ್ನಾಳ್‌ ಆರೋಪಿಸಿದ್ದಾರೆ.

ಸಿ.ಡಿ. ಮಾಡುವಂತಹದ್ದು ಬಿಜೆಪಿ, ಕಾಂಗ್ರೆಸ್‌ನಲ್ಲಿ ಫ್ಯಾಕ್ಟರಿ ಇದೆ. ಎರಡೂ ಪಕ್ಷದಲ್ಲಿಯೂ ಸಿ.ಡಿ. ಮಾಡುವ ಒಬ್ಬರದು ಫ್ಯಾಕ್ಟರಿ ಇದೆ. ನನಗೆ ಅವಕಾಶ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ನನ್ನ ಸಿ.ಡಿ. ಇದ್ದರೆ ಬಿಡುಗಡೆ ‌ಆಗಬೇಕಲ್ಲ. ಕಾರ್ಯಕರ್ತರು ಕೆಲವೊಮ್ಮೆ ವಿಡಿಯೋ ಕಾಲ್ ಮಾಡ್ತಾರೆ. ವಿಡಿಯೋ ಕಾಲ್ ಮಾಡಿದಾಗ ನಾನು ರಿಸೀವ್ ಮಾಡುತ್ತೇನೆ. ಸಿ.ಡಿ. ಇದ್ದರೆ ಬಿಡುಗಡೆ ಮಾಡಲಿ ಎಂದಿದ್ದಾರೆ.

ಪೊಲೀಸರು ಫೋಟೋ ಪ್ರಕರಣವನ್ನು ತನಿಖೆ ಮಾಡುತ್ತಾರೆ. ಇಂತಹ ನೂರು ಆರೋಪ ಬಂದರೂ ಎದುರಿಸುವ ತಾಕತ್ತಿದೆ. ಕಳ್ಳರು ಇನ್ನೊಂದು ಸ್ವಲ್ಪ ದಿನದಲ್ಲಿ ಸಿಗುತ್ತಾರೆ. ಜನರ ಮುಂದೆ ಬೆತ್ತಲಾಗುತ್ತಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಕುರಿತು ಕಾಂಗ್ರೆಸ್ ಮುಖಂಡ ಸಲೀಂ ಹಾಗೂ ಉಗ್ರಪ್ಪ ನಡುವಿನ ಸಂಭಾಷಣೆ ವಿಚಾರಕ್ಕೆ ಸಂಬಂಧಿಸಿ ಯತ್ನಾಳ್ ಪ್ರತಿಕ್ರಿಯಿಸಿದ್ದಾರೆ. ಜಲಸಂಪನ್ಮೂಲ ಇಲಾಖೆ ಭ್ರಷ್ಟಾಚಾರ ಪ್ರಕರಣ ನಿಜ. ಅದು ಸತ್ಯವೇ ಇದೆ, ಆ ಕಾರಣಕ್ಕೆ ರೇಡ್ ಆಗಿದೆ. ಸಾವಿರಾರು ಕೋಟಿ ಮೌಲ್ಯದ ಆಸ್ತಿ ಸಿಕ್ಕಿದೆ. ಜಲಸಂಪನ್ಮೂಲ ಇಲಾಖೆಯಲ್ಲಿ ನಡೆದ ಭ್ರಷ್ಟಾಚಾರದ್ದೇ ರೇಡ್ ಆಗಿದೆ. ಅದರಲ್ಲಿ ಎಲ್ಲ ಪಕ್ಷದವರಿದ್ದಾರೆ, ಯಾವುದೇ ಒಂದು ಪಕ್ಷದವರಿಲ್ಲ. ಇನ್‌ಕಮ್‌ ಟ್ಯಾಕ್ಸ್‌ನವರು ರೇಡ್ ಮಾಡಿ ಒಳ್ಳೆಯ ಕೆಲಸ ಮಾಡಿದ್ದಾರೆ. ಭ್ರಷ್ಟಾಚಾರದ ಹಣವನೆಲ್ಲ ವಸೂಲಿ ಮಾಡಿದ್ದಾರೆ. ಪ್ರವಾಹ ಪೀಡಿತ ಪ್ರದೇಶದ ಮನೆಗಳು ಅರ್ಧಕ್ಕೆ ನಿಂತಿವೆ. ಬಡವರಿಗೆ ಹೋಗಿ ಅದು ಮುಟ್ಟಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ಸಿಡಿ ಭಯ: ಕೋರ್ಟ್‌ನಿಂದ ತಡೆಯಾಜ್ಞೆ ತರಲಿರುವ ಶಾಸಕ ರೇಣುಕಾಚಾರ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...