Homeಕರ್ನಾಟಕಯತ್ನಾಳ್ ಕಾಂಗ್ರೆಸ್‌ನ 'ಬಿ' ಟೀಂ ಆಗಿ ಕೆಲಸ ಮಾಡುತ್ತಿದ್ದಾರೆ - ಸಚಿವ ಮುರುಗೇಶ ನಿರಾಣಿ ಆರೋಪ

ಯತ್ನಾಳ್ ಕಾಂಗ್ರೆಸ್‌ನ ‘ಬಿ’ ಟೀಂ ಆಗಿ ಕೆಲಸ ಮಾಡುತ್ತಿದ್ದಾರೆ – ಸಚಿವ ಮುರುಗೇಶ ನಿರಾಣಿ ಆರೋಪ

ಯತ್ನಾಳ್ ಮತ್ತು ಕಾಂಗ್ರೆಸ್‌ನ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಅವರು ಪಂಚಮಸಾಲಿ ಮಠಾಧೀಶ ಬಸವಜಯ ಮೃತ್ಯುಂಜಯ ಸ್ವಾಮೀಜಿಯನ್ನು ತಮ್ಮ ಕಪಿಮುಷ್ಠಿಗೆ ತೆಗೆದುಕೊಂಡು ತಮ್ಮ ತಾಳಕ್ಕೆ ತಕ್ಕಂತೆ ಕುಣಿಸುತ್ತಿದ್ದಾರೆ

- Advertisement -
- Advertisement -

ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಕಾಂಗ್ರೆಸ್‌ನ ಬಿ ಟೀಂ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ನೂತನ ಬಿಜೆಪಿ ಸಚಿವ ಮುರುಗೇಶ ನಿರಾಣಿ ವಾಗ್ದಾಳಿ ನಡೆಸಿದ್ದಾರೆ. ಪಂಚಮಸಾಲಿ ಲಿಂಗಾಯತ ಸಮುದಾಯ ಮೀಸಲಾತಿಗಾಗಿ ನಡೆಸಿದ ಸಮಾವೇಶದಲ್ಲಿ ಯತ್ನಾಳ್ ಯಡಿಯೂರಪ್ಪನವರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದನ್ನು ಖಂಡಿಸಿದ ನಿರಾಣಿ ಈ ರೀತಿ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿ.ಸಿ. ಪಾಟೀಲ ಮತ್ತು ಮುರುಗೇಶ ನಿರಾಣಿ, “ಯತ್ನಾಳ್ ಮತ್ತು ಕಾಂಗ್ರೆಸ್‌ನ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಅವರು ಪಂಚಮಸಾಲಿ ಮಠಾಧೀಶ ಬಸವಜಯ ಮೃತ್ಯುಂಜಯ ಸ್ವಾಮೀಜಿಯನ್ನು ತಮ್ಮ ಕಪಿಮುಷ್ಠಿಗೆ ತೆಗೆದುಕೊಂಡು ತಮ್ಮ ತಾಳಕ್ಕೆ ತಕ್ಕಂತೆ ಕುಣಿಸುತ್ತಿದ್ದಾರೆ” ಎಂದು ಆರೋಪಿಸಿದರು.

“ಪಂಚಮಸಾಲಿಗಳ 2 ಎ ಮೀಸಲಾತಿ ಹೋರಾಟವನ್ನು ವಿಜಯಾನಂದ ಕಾಶಪ್ಪನವರ ಅವರು ತಮ್ಮ ಕುಟುಂಬದ ಹೋರಾಟವಾಗಿ ಪರಿವರ್ತಿಸಿದರು. ಇದಕ್ಕೆ ಕಾಂಗ್ರೆಸ್‌ನ ‘ಬಿ’ ಟೀಮ್‌ ಆಗಿ ವರ್ತಿಸುತ್ತಿರುವ ಯತ್ನಾಳ ನೆರವಾದರು” ಎಂದು ಹೇಳಿದರು.

ಇದನ್ನೂ ಓದಿ: ಹೈಕಮಾಂಡ್ ನೀಡಿದ ನೋಟಿಸ್‌ಗೆ ಉತ್ತರಿಸಿದ ಯತ್ನಾಳ್: ಯಡಿಯೂರಪ್ಪ ವಿರುದ್ಧ 11 ಪುಟಗಳ ಆರೋಪ

“ಕಾಂಗ್ರೆಸ್‌ ಸರ್ಕಾರ ಇದ್ದಾಗ ಶಾಸಕರಾಗಿದ್ದ ಕಾಶಪ್ಪನವರ ಅವರು 2 ಎ ಮೀಸಲಾತಿ ಸಂಬಂಧಿಸಿದಂತೆ ಏನು ಹೋರಾಟ ಮಾಡಿದ್ದರು? ಆಗ ಏನೂ ಮಾಡದೇ ಈಗ ಬೂಟಾಟಿಕೆ ಮಾತನಾಡುತ್ತಿದ್ದಾರೆ. ಪಂಚಮಸಾಲಿ ಸಮಾಜ ಟ್ರಸ್ಟ್‌ಗೆ ತಾವೇ ಸ್ವಯಂ ಘೋಷಿತವಾಗಿ ಅಧ್ಯಕ್ಷ ಎಂದು ಕರೆದುಕೊಂಡಿದ್ದಾರೆ. ಅಧ್ಯಕ್ಷ ಎಂದು ಹೇಳಿಕೊಳ್ಳಲು ಇವರಿಗೆ ಅಧಿಕಾರ ಕೊಟ್ಟವರು ಯಾರು? ಟ್ರಸ್ಟ್‌ ಪದಾಧಿಕಾರಿಗಳು ಪಕ್ಷಾತೀತ ವ್ಯಕ್ತಿ ಆಗಿರಬೇಕು. ಇವರನ್ನು ಅಧ್ಯಕ್ಷ ಎಂದು ಸಮಾಜದ ಯಾವುದೇ ವ್ಯಕ್ತಿ ಒಪ್ಪಲು ತಯಾರಿಲ್ಲ” ಎಂದು ಸಿ ಸಿ ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.

“ಪಂಚಮಸಾಲಿ ಮಂತ್ರಿಗಳು ಮತ್ತು ಶಾಸಕರು ರಾಜೀನಾಮೆ ನೀಡಬೇಕು ಎಂದು ಯತ್ನಾಳ್ ಸಮಾವೇಶದಲ್ಲಿ ಹೇಳಿದ್ದಾರೆ. ನಾವು ನಮ್ಮ ನಮ್ಮ ಕ್ಷೇತ್ರಗಳ ಎಲ್ಲ ಮತದಾರರ ಆಶೀರ್ವಾದದಿಂದ ಗೆದ್ದು ಬಂದಿದ್ದೇವೆ. ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿಯವರು ನಮ್ಮನ್ನು ಮಂತ್ರಿ ಮಾಡಿದ್ದು. ಮೊದಲಿಗೆ ಅವರು (ಯತ್ನಾಳ) ರಾಜೀನಾಮೆ ಕೊಟ್ಟು, ವಿಜಯಪುರದಿಂದ ಸ್ವರ್ಧಿಸಿ ಗೆದ್ದು ಬರಲಿ” ಎಂದು ಮುರಗೇಶ ನಿರಾಣಿ ಸವಾಲು ಹಾಕಿದರು.

ಇದನ್ನೂ ಓದಿ: ನನ್ನನ್ನು ಹೆದರಿಸೋಕೆ ನೋಟಿಸ್ ನೀಡಿದ್ದಾರೆ, ಫೆ. 21ರೊಳಗೆ ಹಿಂಪಡೆಯುತ್ತಾರಂತೆ: ಯತ್ನಾಳ್

“ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ಸಮಾವೇಶದಲ್ಲಿ ವಾಗ್ದಾಳಿ ನಡೆಸಿದರು. ಇದರ ಅವಶ್ಯಕತೆ ಏನಿತ್ತು? ಪಕ್ಷದ ಶಾಸಕನಾಗಿ ನಾಯಕತ್ವದ ವಿರುದ್ಧವೇ ಹರಿಹಾಯ್ದಿರುವುದು ಸರಿಯಲ್ಲ. ಯತ್ನಾಳ ಕಾಂಗ್ರೆಸ್‌ನ ಬಿ ಟೀಮ್‌ ಆಗಿ ಕೆಲಸ ಮಾಡುತ್ತಿದ್ದಾರೆ. ನಾವು ಸಚಿವರು ಮತ್ತು ಶಾಸಕರು ಸೇರಿ 2 ಎ ಗೆ ಸೇರಿಸಲು ಪ್ರಯತ್ನ ನಡೆಸುತ್ತಿದ್ದೇವೆ. ಅದಕ್ಕೂ ನೀತಿ ನಿಯಮ ಎಂಬುದಿದೆ. ಮುಖ್ಯಮಂತ್ರಿಯವರು ಅಧ್ಯಯನ ನಡೆಸಲು ಹಿಂದುಳಿದ ವರ್ಗಗಳ ಆಯೋಗಕ್ಕೆ ತಿಳಿಸಿದ್ದಾರೆ. ವರದಿ ಬಂದ ಬಳಿಕ ಸೇರಿಸುವ ಕೆಲಸ ಆಗುತ್ತದೆ. ಅಲ್ಲಿಯವರೆಗೆ ಕಾಲಾವಕಾಶ ನೀಡಬೇಕಲ್ಲವೇ? ಅದನ್ನು ಬಿಟ್ಟು ನಾಳೆ ಮಾಡಿ ಎಂದು ಪಟ್ಟು ಹಿಡಿದು ಕುಳಿತರೆ ಕಾನೂನಿನ ಚೌಕಟ್ಟಿನಲ್ಲಿ ಸಾಧ್ಯವಿಲ್ಲದ ಮಾತು” ಎಂದು ಹೇಳಿದರು.

ಪಂಚಮಸಾಲಿ ಲಿಂಗಾಯತ ಸಮುದಾಯವು ಕಳೆದ ಒಂದು ತಿಂಗಳಿನಿಂದ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿತ್ತು. ಇದರ ಅಂತಿಮ ಸಮಾವೇಶ ಬೆಂಗಳೂರಿನ ಅರಮನೆ ಮೈದಾನದಲ್ಲಿ ನೆರವೇರಿತು. ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಪಂಚಮಸಾಲಿ ಲಿಂಗಾಯತ ಸಮುದಾಯ ಜನ ಸೇರಿದ್ದು, 2 ಎ ಮೀಸಲಾತಿಗಾಗಿ ಒತ್ತಾಯಿಸಿದರು.


ಇದನ್ನೂ ಓದಿ: ಸಿಎಂ ವಿರುದ್ಧ ಟೀಕೆ: ಯತ್ನಾಳ್‌ಗೆ ನೀಡಿದ್ದ ವೈಯಕ್ತಿಕ ಭದ್ರತೆ ಹಿಂಪಡೆದ ರಾಜ್ಯ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...