Homeಕರ್ನಾಟಕಯತ್ನಾಳ್ ಕಾಂಗ್ರೆಸ್‌ನ 'ಬಿ' ಟೀಂ ಆಗಿ ಕೆಲಸ ಮಾಡುತ್ತಿದ್ದಾರೆ - ಸಚಿವ ಮುರುಗೇಶ ನಿರಾಣಿ ಆರೋಪ

ಯತ್ನಾಳ್ ಕಾಂಗ್ರೆಸ್‌ನ ‘ಬಿ’ ಟೀಂ ಆಗಿ ಕೆಲಸ ಮಾಡುತ್ತಿದ್ದಾರೆ – ಸಚಿವ ಮುರುಗೇಶ ನಿರಾಣಿ ಆರೋಪ

ಯತ್ನಾಳ್ ಮತ್ತು ಕಾಂಗ್ರೆಸ್‌ನ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಅವರು ಪಂಚಮಸಾಲಿ ಮಠಾಧೀಶ ಬಸವಜಯ ಮೃತ್ಯುಂಜಯ ಸ್ವಾಮೀಜಿಯನ್ನು ತಮ್ಮ ಕಪಿಮುಷ್ಠಿಗೆ ತೆಗೆದುಕೊಂಡು ತಮ್ಮ ತಾಳಕ್ಕೆ ತಕ್ಕಂತೆ ಕುಣಿಸುತ್ತಿದ್ದಾರೆ

- Advertisement -
- Advertisement -

ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಕಾಂಗ್ರೆಸ್‌ನ ಬಿ ಟೀಂ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ನೂತನ ಬಿಜೆಪಿ ಸಚಿವ ಮುರುಗೇಶ ನಿರಾಣಿ ವಾಗ್ದಾಳಿ ನಡೆಸಿದ್ದಾರೆ. ಪಂಚಮಸಾಲಿ ಲಿಂಗಾಯತ ಸಮುದಾಯ ಮೀಸಲಾತಿಗಾಗಿ ನಡೆಸಿದ ಸಮಾವೇಶದಲ್ಲಿ ಯತ್ನಾಳ್ ಯಡಿಯೂರಪ್ಪನವರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದನ್ನು ಖಂಡಿಸಿದ ನಿರಾಣಿ ಈ ರೀತಿ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿ.ಸಿ. ಪಾಟೀಲ ಮತ್ತು ಮುರುಗೇಶ ನಿರಾಣಿ, “ಯತ್ನಾಳ್ ಮತ್ತು ಕಾಂಗ್ರೆಸ್‌ನ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಅವರು ಪಂಚಮಸಾಲಿ ಮಠಾಧೀಶ ಬಸವಜಯ ಮೃತ್ಯುಂಜಯ ಸ್ವಾಮೀಜಿಯನ್ನು ತಮ್ಮ ಕಪಿಮುಷ್ಠಿಗೆ ತೆಗೆದುಕೊಂಡು ತಮ್ಮ ತಾಳಕ್ಕೆ ತಕ್ಕಂತೆ ಕುಣಿಸುತ್ತಿದ್ದಾರೆ” ಎಂದು ಆರೋಪಿಸಿದರು.

“ಪಂಚಮಸಾಲಿಗಳ 2 ಎ ಮೀಸಲಾತಿ ಹೋರಾಟವನ್ನು ವಿಜಯಾನಂದ ಕಾಶಪ್ಪನವರ ಅವರು ತಮ್ಮ ಕುಟುಂಬದ ಹೋರಾಟವಾಗಿ ಪರಿವರ್ತಿಸಿದರು. ಇದಕ್ಕೆ ಕಾಂಗ್ರೆಸ್‌ನ ‘ಬಿ’ ಟೀಮ್‌ ಆಗಿ ವರ್ತಿಸುತ್ತಿರುವ ಯತ್ನಾಳ ನೆರವಾದರು” ಎಂದು ಹೇಳಿದರು.

ಇದನ್ನೂ ಓದಿ: ಹೈಕಮಾಂಡ್ ನೀಡಿದ ನೋಟಿಸ್‌ಗೆ ಉತ್ತರಿಸಿದ ಯತ್ನಾಳ್: ಯಡಿಯೂರಪ್ಪ ವಿರುದ್ಧ 11 ಪುಟಗಳ ಆರೋಪ

“ಕಾಂಗ್ರೆಸ್‌ ಸರ್ಕಾರ ಇದ್ದಾಗ ಶಾಸಕರಾಗಿದ್ದ ಕಾಶಪ್ಪನವರ ಅವರು 2 ಎ ಮೀಸಲಾತಿ ಸಂಬಂಧಿಸಿದಂತೆ ಏನು ಹೋರಾಟ ಮಾಡಿದ್ದರು? ಆಗ ಏನೂ ಮಾಡದೇ ಈಗ ಬೂಟಾಟಿಕೆ ಮಾತನಾಡುತ್ತಿದ್ದಾರೆ. ಪಂಚಮಸಾಲಿ ಸಮಾಜ ಟ್ರಸ್ಟ್‌ಗೆ ತಾವೇ ಸ್ವಯಂ ಘೋಷಿತವಾಗಿ ಅಧ್ಯಕ್ಷ ಎಂದು ಕರೆದುಕೊಂಡಿದ್ದಾರೆ. ಅಧ್ಯಕ್ಷ ಎಂದು ಹೇಳಿಕೊಳ್ಳಲು ಇವರಿಗೆ ಅಧಿಕಾರ ಕೊಟ್ಟವರು ಯಾರು? ಟ್ರಸ್ಟ್‌ ಪದಾಧಿಕಾರಿಗಳು ಪಕ್ಷಾತೀತ ವ್ಯಕ್ತಿ ಆಗಿರಬೇಕು. ಇವರನ್ನು ಅಧ್ಯಕ್ಷ ಎಂದು ಸಮಾಜದ ಯಾವುದೇ ವ್ಯಕ್ತಿ ಒಪ್ಪಲು ತಯಾರಿಲ್ಲ” ಎಂದು ಸಿ ಸಿ ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.

“ಪಂಚಮಸಾಲಿ ಮಂತ್ರಿಗಳು ಮತ್ತು ಶಾಸಕರು ರಾಜೀನಾಮೆ ನೀಡಬೇಕು ಎಂದು ಯತ್ನಾಳ್ ಸಮಾವೇಶದಲ್ಲಿ ಹೇಳಿದ್ದಾರೆ. ನಾವು ನಮ್ಮ ನಮ್ಮ ಕ್ಷೇತ್ರಗಳ ಎಲ್ಲ ಮತದಾರರ ಆಶೀರ್ವಾದದಿಂದ ಗೆದ್ದು ಬಂದಿದ್ದೇವೆ. ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿಯವರು ನಮ್ಮನ್ನು ಮಂತ್ರಿ ಮಾಡಿದ್ದು. ಮೊದಲಿಗೆ ಅವರು (ಯತ್ನಾಳ) ರಾಜೀನಾಮೆ ಕೊಟ್ಟು, ವಿಜಯಪುರದಿಂದ ಸ್ವರ್ಧಿಸಿ ಗೆದ್ದು ಬರಲಿ” ಎಂದು ಮುರಗೇಶ ನಿರಾಣಿ ಸವಾಲು ಹಾಕಿದರು.

ಇದನ್ನೂ ಓದಿ: ನನ್ನನ್ನು ಹೆದರಿಸೋಕೆ ನೋಟಿಸ್ ನೀಡಿದ್ದಾರೆ, ಫೆ. 21ರೊಳಗೆ ಹಿಂಪಡೆಯುತ್ತಾರಂತೆ: ಯತ್ನಾಳ್

“ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ಸಮಾವೇಶದಲ್ಲಿ ವಾಗ್ದಾಳಿ ನಡೆಸಿದರು. ಇದರ ಅವಶ್ಯಕತೆ ಏನಿತ್ತು? ಪಕ್ಷದ ಶಾಸಕನಾಗಿ ನಾಯಕತ್ವದ ವಿರುದ್ಧವೇ ಹರಿಹಾಯ್ದಿರುವುದು ಸರಿಯಲ್ಲ. ಯತ್ನಾಳ ಕಾಂಗ್ರೆಸ್‌ನ ಬಿ ಟೀಮ್‌ ಆಗಿ ಕೆಲಸ ಮಾಡುತ್ತಿದ್ದಾರೆ. ನಾವು ಸಚಿವರು ಮತ್ತು ಶಾಸಕರು ಸೇರಿ 2 ಎ ಗೆ ಸೇರಿಸಲು ಪ್ರಯತ್ನ ನಡೆಸುತ್ತಿದ್ದೇವೆ. ಅದಕ್ಕೂ ನೀತಿ ನಿಯಮ ಎಂಬುದಿದೆ. ಮುಖ್ಯಮಂತ್ರಿಯವರು ಅಧ್ಯಯನ ನಡೆಸಲು ಹಿಂದುಳಿದ ವರ್ಗಗಳ ಆಯೋಗಕ್ಕೆ ತಿಳಿಸಿದ್ದಾರೆ. ವರದಿ ಬಂದ ಬಳಿಕ ಸೇರಿಸುವ ಕೆಲಸ ಆಗುತ್ತದೆ. ಅಲ್ಲಿಯವರೆಗೆ ಕಾಲಾವಕಾಶ ನೀಡಬೇಕಲ್ಲವೇ? ಅದನ್ನು ಬಿಟ್ಟು ನಾಳೆ ಮಾಡಿ ಎಂದು ಪಟ್ಟು ಹಿಡಿದು ಕುಳಿತರೆ ಕಾನೂನಿನ ಚೌಕಟ್ಟಿನಲ್ಲಿ ಸಾಧ್ಯವಿಲ್ಲದ ಮಾತು” ಎಂದು ಹೇಳಿದರು.

ಪಂಚಮಸಾಲಿ ಲಿಂಗಾಯತ ಸಮುದಾಯವು ಕಳೆದ ಒಂದು ತಿಂಗಳಿನಿಂದ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿತ್ತು. ಇದರ ಅಂತಿಮ ಸಮಾವೇಶ ಬೆಂಗಳೂರಿನ ಅರಮನೆ ಮೈದಾನದಲ್ಲಿ ನೆರವೇರಿತು. ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಪಂಚಮಸಾಲಿ ಲಿಂಗಾಯತ ಸಮುದಾಯ ಜನ ಸೇರಿದ್ದು, 2 ಎ ಮೀಸಲಾತಿಗಾಗಿ ಒತ್ತಾಯಿಸಿದರು.


ಇದನ್ನೂ ಓದಿ: ಸಿಎಂ ವಿರುದ್ಧ ಟೀಕೆ: ಯತ್ನಾಳ್‌ಗೆ ನೀಡಿದ್ದ ವೈಯಕ್ತಿಕ ಭದ್ರತೆ ಹಿಂಪಡೆದ ರಾಜ್ಯ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...