Homeಕರ್ನಾಟಕಯತ್ನಾಳ್ ಕಾಂಗ್ರೆಸ್‌ನ 'ಬಿ' ಟೀಂ ಆಗಿ ಕೆಲಸ ಮಾಡುತ್ತಿದ್ದಾರೆ - ಸಚಿವ ಮುರುಗೇಶ ನಿರಾಣಿ ಆರೋಪ

ಯತ್ನಾಳ್ ಕಾಂಗ್ರೆಸ್‌ನ ‘ಬಿ’ ಟೀಂ ಆಗಿ ಕೆಲಸ ಮಾಡುತ್ತಿದ್ದಾರೆ – ಸಚಿವ ಮುರುಗೇಶ ನಿರಾಣಿ ಆರೋಪ

ಯತ್ನಾಳ್ ಮತ್ತು ಕಾಂಗ್ರೆಸ್‌ನ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಅವರು ಪಂಚಮಸಾಲಿ ಮಠಾಧೀಶ ಬಸವಜಯ ಮೃತ್ಯುಂಜಯ ಸ್ವಾಮೀಜಿಯನ್ನು ತಮ್ಮ ಕಪಿಮುಷ್ಠಿಗೆ ತೆಗೆದುಕೊಂಡು ತಮ್ಮ ತಾಳಕ್ಕೆ ತಕ್ಕಂತೆ ಕುಣಿಸುತ್ತಿದ್ದಾರೆ

- Advertisement -
- Advertisement -

ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಕಾಂಗ್ರೆಸ್‌ನ ಬಿ ಟೀಂ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ನೂತನ ಬಿಜೆಪಿ ಸಚಿವ ಮುರುಗೇಶ ನಿರಾಣಿ ವಾಗ್ದಾಳಿ ನಡೆಸಿದ್ದಾರೆ. ಪಂಚಮಸಾಲಿ ಲಿಂಗಾಯತ ಸಮುದಾಯ ಮೀಸಲಾತಿಗಾಗಿ ನಡೆಸಿದ ಸಮಾವೇಶದಲ್ಲಿ ಯತ್ನಾಳ್ ಯಡಿಯೂರಪ್ಪನವರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದನ್ನು ಖಂಡಿಸಿದ ನಿರಾಣಿ ಈ ರೀತಿ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿ.ಸಿ. ಪಾಟೀಲ ಮತ್ತು ಮುರುಗೇಶ ನಿರಾಣಿ, “ಯತ್ನಾಳ್ ಮತ್ತು ಕಾಂಗ್ರೆಸ್‌ನ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಅವರು ಪಂಚಮಸಾಲಿ ಮಠಾಧೀಶ ಬಸವಜಯ ಮೃತ್ಯುಂಜಯ ಸ್ವಾಮೀಜಿಯನ್ನು ತಮ್ಮ ಕಪಿಮುಷ್ಠಿಗೆ ತೆಗೆದುಕೊಂಡು ತಮ್ಮ ತಾಳಕ್ಕೆ ತಕ್ಕಂತೆ ಕುಣಿಸುತ್ತಿದ್ದಾರೆ” ಎಂದು ಆರೋಪಿಸಿದರು.

“ಪಂಚಮಸಾಲಿಗಳ 2 ಎ ಮೀಸಲಾತಿ ಹೋರಾಟವನ್ನು ವಿಜಯಾನಂದ ಕಾಶಪ್ಪನವರ ಅವರು ತಮ್ಮ ಕುಟುಂಬದ ಹೋರಾಟವಾಗಿ ಪರಿವರ್ತಿಸಿದರು. ಇದಕ್ಕೆ ಕಾಂಗ್ರೆಸ್‌ನ ‘ಬಿ’ ಟೀಮ್‌ ಆಗಿ ವರ್ತಿಸುತ್ತಿರುವ ಯತ್ನಾಳ ನೆರವಾದರು” ಎಂದು ಹೇಳಿದರು.

ಇದನ್ನೂ ಓದಿ: ಹೈಕಮಾಂಡ್ ನೀಡಿದ ನೋಟಿಸ್‌ಗೆ ಉತ್ತರಿಸಿದ ಯತ್ನಾಳ್: ಯಡಿಯೂರಪ್ಪ ವಿರುದ್ಧ 11 ಪುಟಗಳ ಆರೋಪ

“ಕಾಂಗ್ರೆಸ್‌ ಸರ್ಕಾರ ಇದ್ದಾಗ ಶಾಸಕರಾಗಿದ್ದ ಕಾಶಪ್ಪನವರ ಅವರು 2 ಎ ಮೀಸಲಾತಿ ಸಂಬಂಧಿಸಿದಂತೆ ಏನು ಹೋರಾಟ ಮಾಡಿದ್ದರು? ಆಗ ಏನೂ ಮಾಡದೇ ಈಗ ಬೂಟಾಟಿಕೆ ಮಾತನಾಡುತ್ತಿದ್ದಾರೆ. ಪಂಚಮಸಾಲಿ ಸಮಾಜ ಟ್ರಸ್ಟ್‌ಗೆ ತಾವೇ ಸ್ವಯಂ ಘೋಷಿತವಾಗಿ ಅಧ್ಯಕ್ಷ ಎಂದು ಕರೆದುಕೊಂಡಿದ್ದಾರೆ. ಅಧ್ಯಕ್ಷ ಎಂದು ಹೇಳಿಕೊಳ್ಳಲು ಇವರಿಗೆ ಅಧಿಕಾರ ಕೊಟ್ಟವರು ಯಾರು? ಟ್ರಸ್ಟ್‌ ಪದಾಧಿಕಾರಿಗಳು ಪಕ್ಷಾತೀತ ವ್ಯಕ್ತಿ ಆಗಿರಬೇಕು. ಇವರನ್ನು ಅಧ್ಯಕ್ಷ ಎಂದು ಸಮಾಜದ ಯಾವುದೇ ವ್ಯಕ್ತಿ ಒಪ್ಪಲು ತಯಾರಿಲ್ಲ” ಎಂದು ಸಿ ಸಿ ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.

“ಪಂಚಮಸಾಲಿ ಮಂತ್ರಿಗಳು ಮತ್ತು ಶಾಸಕರು ರಾಜೀನಾಮೆ ನೀಡಬೇಕು ಎಂದು ಯತ್ನಾಳ್ ಸಮಾವೇಶದಲ್ಲಿ ಹೇಳಿದ್ದಾರೆ. ನಾವು ನಮ್ಮ ನಮ್ಮ ಕ್ಷೇತ್ರಗಳ ಎಲ್ಲ ಮತದಾರರ ಆಶೀರ್ವಾದದಿಂದ ಗೆದ್ದು ಬಂದಿದ್ದೇವೆ. ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿಯವರು ನಮ್ಮನ್ನು ಮಂತ್ರಿ ಮಾಡಿದ್ದು. ಮೊದಲಿಗೆ ಅವರು (ಯತ್ನಾಳ) ರಾಜೀನಾಮೆ ಕೊಟ್ಟು, ವಿಜಯಪುರದಿಂದ ಸ್ವರ್ಧಿಸಿ ಗೆದ್ದು ಬರಲಿ” ಎಂದು ಮುರಗೇಶ ನಿರಾಣಿ ಸವಾಲು ಹಾಕಿದರು.

ಇದನ್ನೂ ಓದಿ: ನನ್ನನ್ನು ಹೆದರಿಸೋಕೆ ನೋಟಿಸ್ ನೀಡಿದ್ದಾರೆ, ಫೆ. 21ರೊಳಗೆ ಹಿಂಪಡೆಯುತ್ತಾರಂತೆ: ಯತ್ನಾಳ್

“ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ಸಮಾವೇಶದಲ್ಲಿ ವಾಗ್ದಾಳಿ ನಡೆಸಿದರು. ಇದರ ಅವಶ್ಯಕತೆ ಏನಿತ್ತು? ಪಕ್ಷದ ಶಾಸಕನಾಗಿ ನಾಯಕತ್ವದ ವಿರುದ್ಧವೇ ಹರಿಹಾಯ್ದಿರುವುದು ಸರಿಯಲ್ಲ. ಯತ್ನಾಳ ಕಾಂಗ್ರೆಸ್‌ನ ಬಿ ಟೀಮ್‌ ಆಗಿ ಕೆಲಸ ಮಾಡುತ್ತಿದ್ದಾರೆ. ನಾವು ಸಚಿವರು ಮತ್ತು ಶಾಸಕರು ಸೇರಿ 2 ಎ ಗೆ ಸೇರಿಸಲು ಪ್ರಯತ್ನ ನಡೆಸುತ್ತಿದ್ದೇವೆ. ಅದಕ್ಕೂ ನೀತಿ ನಿಯಮ ಎಂಬುದಿದೆ. ಮುಖ್ಯಮಂತ್ರಿಯವರು ಅಧ್ಯಯನ ನಡೆಸಲು ಹಿಂದುಳಿದ ವರ್ಗಗಳ ಆಯೋಗಕ್ಕೆ ತಿಳಿಸಿದ್ದಾರೆ. ವರದಿ ಬಂದ ಬಳಿಕ ಸೇರಿಸುವ ಕೆಲಸ ಆಗುತ್ತದೆ. ಅಲ್ಲಿಯವರೆಗೆ ಕಾಲಾವಕಾಶ ನೀಡಬೇಕಲ್ಲವೇ? ಅದನ್ನು ಬಿಟ್ಟು ನಾಳೆ ಮಾಡಿ ಎಂದು ಪಟ್ಟು ಹಿಡಿದು ಕುಳಿತರೆ ಕಾನೂನಿನ ಚೌಕಟ್ಟಿನಲ್ಲಿ ಸಾಧ್ಯವಿಲ್ಲದ ಮಾತು” ಎಂದು ಹೇಳಿದರು.

ಪಂಚಮಸಾಲಿ ಲಿಂಗಾಯತ ಸಮುದಾಯವು ಕಳೆದ ಒಂದು ತಿಂಗಳಿನಿಂದ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿತ್ತು. ಇದರ ಅಂತಿಮ ಸಮಾವೇಶ ಬೆಂಗಳೂರಿನ ಅರಮನೆ ಮೈದಾನದಲ್ಲಿ ನೆರವೇರಿತು. ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಪಂಚಮಸಾಲಿ ಲಿಂಗಾಯತ ಸಮುದಾಯ ಜನ ಸೇರಿದ್ದು, 2 ಎ ಮೀಸಲಾತಿಗಾಗಿ ಒತ್ತಾಯಿಸಿದರು.


ಇದನ್ನೂ ಓದಿ: ಸಿಎಂ ವಿರುದ್ಧ ಟೀಕೆ: ಯತ್ನಾಳ್‌ಗೆ ನೀಡಿದ್ದ ವೈಯಕ್ತಿಕ ಭದ್ರತೆ ಹಿಂಪಡೆದ ರಾಜ್ಯ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...