Homeಕರ್ನಾಟಕಮರುಘಾ ಶರಣರು ಪೀಠ ತೊರೆಯುವಂತೆ ನಿರ್ದೇಶನ ಕೋರಿ ಹೈಕೋರ್ಟ್‌ಗೆ ಯತ್ನಾಳ್ ಪತ್ರ

ಮರುಘಾ ಶರಣರು ಪೀಠ ತೊರೆಯುವಂತೆ ನಿರ್ದೇಶನ ಕೋರಿ ಹೈಕೋರ್ಟ್‌ಗೆ ಯತ್ನಾಳ್ ಪತ್ರ

- Advertisement -
- Advertisement -

ಲೈಂಗಿಕ ಕಿರುಕುಳ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರಿಗೆ ಪೀಠತ್ಯಾಗ ಮಾಡಲು ನಿರ್ದೇಶಿಸಬೇಕು ಎಂದು ಕೋರಿ ಹೈಕೋರ್ಟ್ ಮುಖ್ಯ ನ್ಯಾಯ ಮೂರ್ತಿಗಳಿಗೆ ಹಾಗೂ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪತ್ರ ಬರೆದಿದ್ದಾರೆ.

ಮಠದ ಸಾವಿರಾರು ನೌಕರರು ಸಂಬಳ, ಸಾರಿಗೆಯ ಖರ್ಚಿಗಾಗಿ ಮತ್ತು ಜೀವನ ನಿರ್ವಹಣೆಗಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ವೈದ್ಯಕೀಯ, ಎಂಜಿನಿಯರಿಂಗ್‌ ಕಾಲೇಜು, ಬ್ಯಾಂಕ್‌ಗಳು ಸೇರಿದಂತೆ ಎಸ್‌ಜೆಎಂ ವಿದ್ಯಾಸಂಸ್ಥೆಯ ಅಧೀನದಲ್ಲಿ ರಾಜ್ಯದ ವಿವಿಧೆಡೆ ಇರುವ ನೂರಾರು ಘಟಕಗಳ ನಿತ್ಯದ ಆಡಳಿತಕ್ಕೆ ಪಾರ್ಶ್ವವಾಯು ಹೊಡೆದಂತಾಗುತ್ತದೆ ಎಂದು ಅವರು ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿವಮೂರ್ತಿ ಮುರುಘಾ ಶರಣರು ಪೀಠದಲ್ಲಿ ಮುಂದುವರಿಯುವುದು ಶ್ರೀಮಠದ ಘನ ಪರಂಪರೆಯಗೆ ಕಳಂಕ ತರುವಂತಹ ಸಂಗತಿಯಾಗಿರುತ್ತದೆ. ಆದ್ದರಿಂದ ಶಿವಮೂರ್ತಿ ಶರಣರು ಈ ಕೂಡಲೇ ಸ್ವಇಚ್ಛೆಯಿಂದ ಪೀಠತ್ಯಾಗ ಮಾಡಬೇಕು. ಇಲ್ಲವಾದಲ್ಲಿ ಅವರನ್ನು ಪದಚ್ಯುತಗೊಳಿಸುವ ಕಾನೂನುಬದ್ಧ ಪ್ರಕ್ರಿಯೆಗೆ ನಾಡಿನ ಭಕ್ತ ಸಮೂಹ ಮುಂದಾಗಲು ನಿರ್ದೇಶಿಸಬೇಕು ಎಂದು ಕೋರಿದ್ದಾರೆ.

‘ಜಗದ್ಗುರು ಮುರುಘರಾಜೇಂದ್ರ ವಿದ್ಯಾಪೀಠದ ಹಾಲಿ ಕಾರ್ಯದರ್ಶಿ ಶ್ರೀ ವಸ್ತ್ರದಮಠ ಅವರು ಶಿವಮೂರ್ತಿ ಮುರುಘಾ ಶರಣರ ಏಕಪಕ್ಷೀಯ ನೇಮಕವಾಗಿರುತ್ತದೆ. ಇವರ ನೇಮಕದಿಂದ ಸ್ಥಳೀಯ ಭಕ್ತ ಸಮೂಹ ಅಸಮಾಧಾನಗೊಂಡಿದ್ದಾರೆ. ಈಗಿನ ಸಂದಿಗ್ಧ ಸಮಯದಲ್ಲಿ ಮಠದ ಸಾವಿರಾರು ನೌಕರರು ಸಂಬಳ, ಸಾರಿಗೆಯ ಖರ್ಚಿಗಾಗಿ ಮತ್ತು ಜೀವನ ನಿರ್ವಹಣೆಗಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ವೈದ್ಯಕೀಯ, ಎಂಜಿನಿಯರಿಂಗ್ ಕಾಲೇಜು, ಬ್ಯಾಂಕ್‌ಗಳು ಸೇರಿದಂತೆ ಎಸ್‌ಜೆಎಂ ವಿದ್ಯಾಸಂಸ್ಥೆಯ ಅಧೀನದಲ್ಲಿ ರಾಜ್ಯದ ವಿವಿಧೆಡೆ ಇರುವ ನೂರಾರು ಘಟಕಗಳ ನಿತ್ಯದ ಆಡಳಿತಕ್ಕೆ ಪಾರ್ಶ್ವವಾಯು ಹೊಡೆದಂತಾಗುತ್ತದೆ. ಮಠದ ಸಾವಿರಾರು ಕೋಟಿ ರೂ. ಮೊತ್ತದ ಚರ ಮತ್ತು ಸ್ಥಿರಾಸ್ತಿ ದುರುಪಯೋಗವಾಗುವ ಸಾಧ್ಯತೆ ಇದೆ” ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

“ಮರುಘರಾಜೇಂದ್ರ ಬೃಹನ್ಮಠದ ಸಮಸ್ತ ವ್ಯವಹಾರದ ಸುಗಮ ಆಡಳಿತ ನಿರ್ವಹಣೆಗಾಗಿ ವೀರಶೈವ ಲಿಂಗಾಯತ ಸಮಾಜಕ್ಕೆ ಸೇರಿದ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಅಥವಾ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ವೀರ ಶೈವ ಲಿಂಗಾಯತ ಸಮಜಾದ ಐವರು ಪ್ರಮುಖರ ಉನ್ನತ ಮಟ್ಟದ ಮೇಲುಸ್ತುವಾರಿ ಸಮಿತಿ ಕೂಡಲೇ ನೇಮಿಸಬೇಕು” ಎಂದು ಮನವಿ ಮಾಡಿದ್ದಾರೆ.

ಈ ಸಮಿತಿಯು ಮಠದ ದೈನಂದಿನ ಆಡಳಿತ, ಆರ್ಥಿಕ ವ್ಯವಹಾರಗಳು, ಧಾರ್ಮಿಕ ಚಟುವಟಿಕೆಗಳಿಗೆ ಅಗತ್ಯವಾದ ನಿರ್ಧಾರ ಕೈಗೊಳ್ಳಲು ತಾತ್ಕಾಲಿಕ ಅಧಿಕಾರ ಹೊಂದಿರಬೇಕು. ಮೂರು ತಿಂಗಳ ಒಳಗಾಗಿ ಮಠಕ್ಕೆ ಹೊಸ ಪೀಠಾಧ್ಯಕ್ಷರನ್ನು ನೇಮಕ ಮಾಡುವ ಪ್ರಕ್ರಿಯೆಯನ್ನು ಈ ಸಮಿತಿಯೇ ನೆರವೇರಿಸಬೇಕು. ಈ ಕುರಿತು ಸಮಿತಿ ಕೈಗೊಳ್ಳುವ ಎಲ್ಲಾ ಕಾನೂನು ರೀತಿಯ ತೀರ್ಮಾನಕ್ಕೆ ಮಠದ ಸಮಸ್ತ ಸಮೂಹ ಬದ್ಧವಾಗಿರಬೇಕು ಎಂದು ನಿರ್ದೇಶಿಸಬೇಕು ಎಂದು ಕೋರಿದ್ದಾರೆ.

ಇದನ್ನೂ ಓದಿರಿ: ಮತಾಂತರದ ಆರೋಪ ಅಲ್ಲಗಳೆದ ಒಡನಾಡಿ ವಿದ್ಯಾರ್ಥಿಗಳು

ಆದೇಶ ಕಾಯ್ದಿರಿಸಿದ ಕೋರ್ಟ್

ಪ್ರೌಢಶಾಲೆ ವಿದ್ಯಾರ್ಥಿನಿಯರ ಮೇಲೆ ನಡೆದ ಲೈಂಗಿಕ ಕಿರುಕುಳ ಪ್ರಕರಣ ಕುರಿತು ಬೆಂಗಳೂರಿನ ಕಾಟನ್‌ಪೇಟೆ ಹಾಗೂ ಮೈಸೂರಿನ ನಜರಬಾದ್‌ ಠಾಣೆಯಲ್ಲಿ ಲಭ್ಯವಿರುವ ದಾಖಲೆಗಳನ್ನು ಒದಗಿಸಲು ಕೋರಿ ಸಿಆರ್‌ ಪಿಸಿ ಸೆಕ್ಷನ್‌ 91ರ ಅಡಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿತ ಆದೇಶವನ್ನು ನ್ಯಾಯಾಲಯ ಸೆ.21ಕ್ಕೆ ಕಾಯ್ದಿರಿಸಿದೆ.

ಪ್ರಕರಣದ ನಾಲ್ಕನೇ ಆರೋಪಿ ಪರಮಶಿವಯ್ಯ ಹಾಗೂ ಐದನೇ ಆರೋಪಿ ಗಂಗಾಧರಯ್ಯ ಪರವಾಗಿ ಹಾಜರಾಗಿದ್ದ ಹೈಕೋರ್ಟ್‌ ವಕೀಲ ಸಿ.ಎಚ್‌.ಹನುಮಂತರಾಯ ಈ ಅರ್ಜಿ ಸಲ್ಲಿಸಿದ್ದರು. ‌ಸರ್ಕಾರಿ ವಕೀಲರಾದ ಕೆ.ಬಿ.ನಾಗವೇಣಿ ಶನಿವಾರ ತಕರಾರು ಸಲ್ಲಿಸಿದ್ದರು. ‌‌ವಾದ, ಪ್ರತಿವಾದ ಆಲಿಸಿದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಕೆ.ಕೋಮಲಾ ಅವರು ಆದೇಶವನ್ನು ಕಾಯ್ದಿರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...