Homeಕರ್ನಾಟಕಮರುಘಾ ಶರಣರು ಪೀಠ ತೊರೆಯುವಂತೆ ನಿರ್ದೇಶನ ಕೋರಿ ಹೈಕೋರ್ಟ್‌ಗೆ ಯತ್ನಾಳ್ ಪತ್ರ

ಮರುಘಾ ಶರಣರು ಪೀಠ ತೊರೆಯುವಂತೆ ನಿರ್ದೇಶನ ಕೋರಿ ಹೈಕೋರ್ಟ್‌ಗೆ ಯತ್ನಾಳ್ ಪತ್ರ

- Advertisement -
- Advertisement -

ಲೈಂಗಿಕ ಕಿರುಕುಳ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರಿಗೆ ಪೀಠತ್ಯಾಗ ಮಾಡಲು ನಿರ್ದೇಶಿಸಬೇಕು ಎಂದು ಕೋರಿ ಹೈಕೋರ್ಟ್ ಮುಖ್ಯ ನ್ಯಾಯ ಮೂರ್ತಿಗಳಿಗೆ ಹಾಗೂ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪತ್ರ ಬರೆದಿದ್ದಾರೆ.

ಮಠದ ಸಾವಿರಾರು ನೌಕರರು ಸಂಬಳ, ಸಾರಿಗೆಯ ಖರ್ಚಿಗಾಗಿ ಮತ್ತು ಜೀವನ ನಿರ್ವಹಣೆಗಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ವೈದ್ಯಕೀಯ, ಎಂಜಿನಿಯರಿಂಗ್‌ ಕಾಲೇಜು, ಬ್ಯಾಂಕ್‌ಗಳು ಸೇರಿದಂತೆ ಎಸ್‌ಜೆಎಂ ವಿದ್ಯಾಸಂಸ್ಥೆಯ ಅಧೀನದಲ್ಲಿ ರಾಜ್ಯದ ವಿವಿಧೆಡೆ ಇರುವ ನೂರಾರು ಘಟಕಗಳ ನಿತ್ಯದ ಆಡಳಿತಕ್ಕೆ ಪಾರ್ಶ್ವವಾಯು ಹೊಡೆದಂತಾಗುತ್ತದೆ ಎಂದು ಅವರು ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿವಮೂರ್ತಿ ಮುರುಘಾ ಶರಣರು ಪೀಠದಲ್ಲಿ ಮುಂದುವರಿಯುವುದು ಶ್ರೀಮಠದ ಘನ ಪರಂಪರೆಯಗೆ ಕಳಂಕ ತರುವಂತಹ ಸಂಗತಿಯಾಗಿರುತ್ತದೆ. ಆದ್ದರಿಂದ ಶಿವಮೂರ್ತಿ ಶರಣರು ಈ ಕೂಡಲೇ ಸ್ವಇಚ್ಛೆಯಿಂದ ಪೀಠತ್ಯಾಗ ಮಾಡಬೇಕು. ಇಲ್ಲವಾದಲ್ಲಿ ಅವರನ್ನು ಪದಚ್ಯುತಗೊಳಿಸುವ ಕಾನೂನುಬದ್ಧ ಪ್ರಕ್ರಿಯೆಗೆ ನಾಡಿನ ಭಕ್ತ ಸಮೂಹ ಮುಂದಾಗಲು ನಿರ್ದೇಶಿಸಬೇಕು ಎಂದು ಕೋರಿದ್ದಾರೆ.

‘ಜಗದ್ಗುರು ಮುರುಘರಾಜೇಂದ್ರ ವಿದ್ಯಾಪೀಠದ ಹಾಲಿ ಕಾರ್ಯದರ್ಶಿ ಶ್ರೀ ವಸ್ತ್ರದಮಠ ಅವರು ಶಿವಮೂರ್ತಿ ಮುರುಘಾ ಶರಣರ ಏಕಪಕ್ಷೀಯ ನೇಮಕವಾಗಿರುತ್ತದೆ. ಇವರ ನೇಮಕದಿಂದ ಸ್ಥಳೀಯ ಭಕ್ತ ಸಮೂಹ ಅಸಮಾಧಾನಗೊಂಡಿದ್ದಾರೆ. ಈಗಿನ ಸಂದಿಗ್ಧ ಸಮಯದಲ್ಲಿ ಮಠದ ಸಾವಿರಾರು ನೌಕರರು ಸಂಬಳ, ಸಾರಿಗೆಯ ಖರ್ಚಿಗಾಗಿ ಮತ್ತು ಜೀವನ ನಿರ್ವಹಣೆಗಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ವೈದ್ಯಕೀಯ, ಎಂಜಿನಿಯರಿಂಗ್ ಕಾಲೇಜು, ಬ್ಯಾಂಕ್‌ಗಳು ಸೇರಿದಂತೆ ಎಸ್‌ಜೆಎಂ ವಿದ್ಯಾಸಂಸ್ಥೆಯ ಅಧೀನದಲ್ಲಿ ರಾಜ್ಯದ ವಿವಿಧೆಡೆ ಇರುವ ನೂರಾರು ಘಟಕಗಳ ನಿತ್ಯದ ಆಡಳಿತಕ್ಕೆ ಪಾರ್ಶ್ವವಾಯು ಹೊಡೆದಂತಾಗುತ್ತದೆ. ಮಠದ ಸಾವಿರಾರು ಕೋಟಿ ರೂ. ಮೊತ್ತದ ಚರ ಮತ್ತು ಸ್ಥಿರಾಸ್ತಿ ದುರುಪಯೋಗವಾಗುವ ಸಾಧ್ಯತೆ ಇದೆ” ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

“ಮರುಘರಾಜೇಂದ್ರ ಬೃಹನ್ಮಠದ ಸಮಸ್ತ ವ್ಯವಹಾರದ ಸುಗಮ ಆಡಳಿತ ನಿರ್ವಹಣೆಗಾಗಿ ವೀರಶೈವ ಲಿಂಗಾಯತ ಸಮಾಜಕ್ಕೆ ಸೇರಿದ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಅಥವಾ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ವೀರ ಶೈವ ಲಿಂಗಾಯತ ಸಮಜಾದ ಐವರು ಪ್ರಮುಖರ ಉನ್ನತ ಮಟ್ಟದ ಮೇಲುಸ್ತುವಾರಿ ಸಮಿತಿ ಕೂಡಲೇ ನೇಮಿಸಬೇಕು” ಎಂದು ಮನವಿ ಮಾಡಿದ್ದಾರೆ.

ಈ ಸಮಿತಿಯು ಮಠದ ದೈನಂದಿನ ಆಡಳಿತ, ಆರ್ಥಿಕ ವ್ಯವಹಾರಗಳು, ಧಾರ್ಮಿಕ ಚಟುವಟಿಕೆಗಳಿಗೆ ಅಗತ್ಯವಾದ ನಿರ್ಧಾರ ಕೈಗೊಳ್ಳಲು ತಾತ್ಕಾಲಿಕ ಅಧಿಕಾರ ಹೊಂದಿರಬೇಕು. ಮೂರು ತಿಂಗಳ ಒಳಗಾಗಿ ಮಠಕ್ಕೆ ಹೊಸ ಪೀಠಾಧ್ಯಕ್ಷರನ್ನು ನೇಮಕ ಮಾಡುವ ಪ್ರಕ್ರಿಯೆಯನ್ನು ಈ ಸಮಿತಿಯೇ ನೆರವೇರಿಸಬೇಕು. ಈ ಕುರಿತು ಸಮಿತಿ ಕೈಗೊಳ್ಳುವ ಎಲ್ಲಾ ಕಾನೂನು ರೀತಿಯ ತೀರ್ಮಾನಕ್ಕೆ ಮಠದ ಸಮಸ್ತ ಸಮೂಹ ಬದ್ಧವಾಗಿರಬೇಕು ಎಂದು ನಿರ್ದೇಶಿಸಬೇಕು ಎಂದು ಕೋರಿದ್ದಾರೆ.

ಇದನ್ನೂ ಓದಿರಿ: ಮತಾಂತರದ ಆರೋಪ ಅಲ್ಲಗಳೆದ ಒಡನಾಡಿ ವಿದ್ಯಾರ್ಥಿಗಳು

ಆದೇಶ ಕಾಯ್ದಿರಿಸಿದ ಕೋರ್ಟ್

ಪ್ರೌಢಶಾಲೆ ವಿದ್ಯಾರ್ಥಿನಿಯರ ಮೇಲೆ ನಡೆದ ಲೈಂಗಿಕ ಕಿರುಕುಳ ಪ್ರಕರಣ ಕುರಿತು ಬೆಂಗಳೂರಿನ ಕಾಟನ್‌ಪೇಟೆ ಹಾಗೂ ಮೈಸೂರಿನ ನಜರಬಾದ್‌ ಠಾಣೆಯಲ್ಲಿ ಲಭ್ಯವಿರುವ ದಾಖಲೆಗಳನ್ನು ಒದಗಿಸಲು ಕೋರಿ ಸಿಆರ್‌ ಪಿಸಿ ಸೆಕ್ಷನ್‌ 91ರ ಅಡಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿತ ಆದೇಶವನ್ನು ನ್ಯಾಯಾಲಯ ಸೆ.21ಕ್ಕೆ ಕಾಯ್ದಿರಿಸಿದೆ.

ಪ್ರಕರಣದ ನಾಲ್ಕನೇ ಆರೋಪಿ ಪರಮಶಿವಯ್ಯ ಹಾಗೂ ಐದನೇ ಆರೋಪಿ ಗಂಗಾಧರಯ್ಯ ಪರವಾಗಿ ಹಾಜರಾಗಿದ್ದ ಹೈಕೋರ್ಟ್‌ ವಕೀಲ ಸಿ.ಎಚ್‌.ಹನುಮಂತರಾಯ ಈ ಅರ್ಜಿ ಸಲ್ಲಿಸಿದ್ದರು. ‌ಸರ್ಕಾರಿ ವಕೀಲರಾದ ಕೆ.ಬಿ.ನಾಗವೇಣಿ ಶನಿವಾರ ತಕರಾರು ಸಲ್ಲಿಸಿದ್ದರು. ‌‌ವಾದ, ಪ್ರತಿವಾದ ಆಲಿಸಿದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಕೆ.ಕೋಮಲಾ ಅವರು ಆದೇಶವನ್ನು ಕಾಯ್ದಿರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...