Homeಕರ್ನಾಟಕಮರುಘಾ ಶರಣರು ಪೀಠ ತೊರೆಯುವಂತೆ ನಿರ್ದೇಶನ ಕೋರಿ ಹೈಕೋರ್ಟ್‌ಗೆ ಯತ್ನಾಳ್ ಪತ್ರ

ಮರುಘಾ ಶರಣರು ಪೀಠ ತೊರೆಯುವಂತೆ ನಿರ್ದೇಶನ ಕೋರಿ ಹೈಕೋರ್ಟ್‌ಗೆ ಯತ್ನಾಳ್ ಪತ್ರ

- Advertisement -
- Advertisement -

ಲೈಂಗಿಕ ಕಿರುಕುಳ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರಿಗೆ ಪೀಠತ್ಯಾಗ ಮಾಡಲು ನಿರ್ದೇಶಿಸಬೇಕು ಎಂದು ಕೋರಿ ಹೈಕೋರ್ಟ್ ಮುಖ್ಯ ನ್ಯಾಯ ಮೂರ್ತಿಗಳಿಗೆ ಹಾಗೂ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪತ್ರ ಬರೆದಿದ್ದಾರೆ.

ಮಠದ ಸಾವಿರಾರು ನೌಕರರು ಸಂಬಳ, ಸಾರಿಗೆಯ ಖರ್ಚಿಗಾಗಿ ಮತ್ತು ಜೀವನ ನಿರ್ವಹಣೆಗಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ವೈದ್ಯಕೀಯ, ಎಂಜಿನಿಯರಿಂಗ್‌ ಕಾಲೇಜು, ಬ್ಯಾಂಕ್‌ಗಳು ಸೇರಿದಂತೆ ಎಸ್‌ಜೆಎಂ ವಿದ್ಯಾಸಂಸ್ಥೆಯ ಅಧೀನದಲ್ಲಿ ರಾಜ್ಯದ ವಿವಿಧೆಡೆ ಇರುವ ನೂರಾರು ಘಟಕಗಳ ನಿತ್ಯದ ಆಡಳಿತಕ್ಕೆ ಪಾರ್ಶ್ವವಾಯು ಹೊಡೆದಂತಾಗುತ್ತದೆ ಎಂದು ಅವರು ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿವಮೂರ್ತಿ ಮುರುಘಾ ಶರಣರು ಪೀಠದಲ್ಲಿ ಮುಂದುವರಿಯುವುದು ಶ್ರೀಮಠದ ಘನ ಪರಂಪರೆಯಗೆ ಕಳಂಕ ತರುವಂತಹ ಸಂಗತಿಯಾಗಿರುತ್ತದೆ. ಆದ್ದರಿಂದ ಶಿವಮೂರ್ತಿ ಶರಣರು ಈ ಕೂಡಲೇ ಸ್ವಇಚ್ಛೆಯಿಂದ ಪೀಠತ್ಯಾಗ ಮಾಡಬೇಕು. ಇಲ್ಲವಾದಲ್ಲಿ ಅವರನ್ನು ಪದಚ್ಯುತಗೊಳಿಸುವ ಕಾನೂನುಬದ್ಧ ಪ್ರಕ್ರಿಯೆಗೆ ನಾಡಿನ ಭಕ್ತ ಸಮೂಹ ಮುಂದಾಗಲು ನಿರ್ದೇಶಿಸಬೇಕು ಎಂದು ಕೋರಿದ್ದಾರೆ.

‘ಜಗದ್ಗುರು ಮುರುಘರಾಜೇಂದ್ರ ವಿದ್ಯಾಪೀಠದ ಹಾಲಿ ಕಾರ್ಯದರ್ಶಿ ಶ್ರೀ ವಸ್ತ್ರದಮಠ ಅವರು ಶಿವಮೂರ್ತಿ ಮುರುಘಾ ಶರಣರ ಏಕಪಕ್ಷೀಯ ನೇಮಕವಾಗಿರುತ್ತದೆ. ಇವರ ನೇಮಕದಿಂದ ಸ್ಥಳೀಯ ಭಕ್ತ ಸಮೂಹ ಅಸಮಾಧಾನಗೊಂಡಿದ್ದಾರೆ. ಈಗಿನ ಸಂದಿಗ್ಧ ಸಮಯದಲ್ಲಿ ಮಠದ ಸಾವಿರಾರು ನೌಕರರು ಸಂಬಳ, ಸಾರಿಗೆಯ ಖರ್ಚಿಗಾಗಿ ಮತ್ತು ಜೀವನ ನಿರ್ವಹಣೆಗಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ವೈದ್ಯಕೀಯ, ಎಂಜಿನಿಯರಿಂಗ್ ಕಾಲೇಜು, ಬ್ಯಾಂಕ್‌ಗಳು ಸೇರಿದಂತೆ ಎಸ್‌ಜೆಎಂ ವಿದ್ಯಾಸಂಸ್ಥೆಯ ಅಧೀನದಲ್ಲಿ ರಾಜ್ಯದ ವಿವಿಧೆಡೆ ಇರುವ ನೂರಾರು ಘಟಕಗಳ ನಿತ್ಯದ ಆಡಳಿತಕ್ಕೆ ಪಾರ್ಶ್ವವಾಯು ಹೊಡೆದಂತಾಗುತ್ತದೆ. ಮಠದ ಸಾವಿರಾರು ಕೋಟಿ ರೂ. ಮೊತ್ತದ ಚರ ಮತ್ತು ಸ್ಥಿರಾಸ್ತಿ ದುರುಪಯೋಗವಾಗುವ ಸಾಧ್ಯತೆ ಇದೆ” ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

“ಮರುಘರಾಜೇಂದ್ರ ಬೃಹನ್ಮಠದ ಸಮಸ್ತ ವ್ಯವಹಾರದ ಸುಗಮ ಆಡಳಿತ ನಿರ್ವಹಣೆಗಾಗಿ ವೀರಶೈವ ಲಿಂಗಾಯತ ಸಮಾಜಕ್ಕೆ ಸೇರಿದ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಅಥವಾ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ವೀರ ಶೈವ ಲಿಂಗಾಯತ ಸಮಜಾದ ಐವರು ಪ್ರಮುಖರ ಉನ್ನತ ಮಟ್ಟದ ಮೇಲುಸ್ತುವಾರಿ ಸಮಿತಿ ಕೂಡಲೇ ನೇಮಿಸಬೇಕು” ಎಂದು ಮನವಿ ಮಾಡಿದ್ದಾರೆ.

ಈ ಸಮಿತಿಯು ಮಠದ ದೈನಂದಿನ ಆಡಳಿತ, ಆರ್ಥಿಕ ವ್ಯವಹಾರಗಳು, ಧಾರ್ಮಿಕ ಚಟುವಟಿಕೆಗಳಿಗೆ ಅಗತ್ಯವಾದ ನಿರ್ಧಾರ ಕೈಗೊಳ್ಳಲು ತಾತ್ಕಾಲಿಕ ಅಧಿಕಾರ ಹೊಂದಿರಬೇಕು. ಮೂರು ತಿಂಗಳ ಒಳಗಾಗಿ ಮಠಕ್ಕೆ ಹೊಸ ಪೀಠಾಧ್ಯಕ್ಷರನ್ನು ನೇಮಕ ಮಾಡುವ ಪ್ರಕ್ರಿಯೆಯನ್ನು ಈ ಸಮಿತಿಯೇ ನೆರವೇರಿಸಬೇಕು. ಈ ಕುರಿತು ಸಮಿತಿ ಕೈಗೊಳ್ಳುವ ಎಲ್ಲಾ ಕಾನೂನು ರೀತಿಯ ತೀರ್ಮಾನಕ್ಕೆ ಮಠದ ಸಮಸ್ತ ಸಮೂಹ ಬದ್ಧವಾಗಿರಬೇಕು ಎಂದು ನಿರ್ದೇಶಿಸಬೇಕು ಎಂದು ಕೋರಿದ್ದಾರೆ.

ಇದನ್ನೂ ಓದಿರಿ: ಮತಾಂತರದ ಆರೋಪ ಅಲ್ಲಗಳೆದ ಒಡನಾಡಿ ವಿದ್ಯಾರ್ಥಿಗಳು

ಆದೇಶ ಕಾಯ್ದಿರಿಸಿದ ಕೋರ್ಟ್

ಪ್ರೌಢಶಾಲೆ ವಿದ್ಯಾರ್ಥಿನಿಯರ ಮೇಲೆ ನಡೆದ ಲೈಂಗಿಕ ಕಿರುಕುಳ ಪ್ರಕರಣ ಕುರಿತು ಬೆಂಗಳೂರಿನ ಕಾಟನ್‌ಪೇಟೆ ಹಾಗೂ ಮೈಸೂರಿನ ನಜರಬಾದ್‌ ಠಾಣೆಯಲ್ಲಿ ಲಭ್ಯವಿರುವ ದಾಖಲೆಗಳನ್ನು ಒದಗಿಸಲು ಕೋರಿ ಸಿಆರ್‌ ಪಿಸಿ ಸೆಕ್ಷನ್‌ 91ರ ಅಡಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿತ ಆದೇಶವನ್ನು ನ್ಯಾಯಾಲಯ ಸೆ.21ಕ್ಕೆ ಕಾಯ್ದಿರಿಸಿದೆ.

ಪ್ರಕರಣದ ನಾಲ್ಕನೇ ಆರೋಪಿ ಪರಮಶಿವಯ್ಯ ಹಾಗೂ ಐದನೇ ಆರೋಪಿ ಗಂಗಾಧರಯ್ಯ ಪರವಾಗಿ ಹಾಜರಾಗಿದ್ದ ಹೈಕೋರ್ಟ್‌ ವಕೀಲ ಸಿ.ಎಚ್‌.ಹನುಮಂತರಾಯ ಈ ಅರ್ಜಿ ಸಲ್ಲಿಸಿದ್ದರು. ‌ಸರ್ಕಾರಿ ವಕೀಲರಾದ ಕೆ.ಬಿ.ನಾಗವೇಣಿ ಶನಿವಾರ ತಕರಾರು ಸಲ್ಲಿಸಿದ್ದರು. ‌‌ವಾದ, ಪ್ರತಿವಾದ ಆಲಿಸಿದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಕೆ.ಕೋಮಲಾ ಅವರು ಆದೇಶವನ್ನು ಕಾಯ್ದಿರಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...