ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಗಾಂಧೀಜಿಯ ಒಡನಾಡಿಯಾಗಿದ್ದ ಎಚ್.ಎಸ್. ದೊರೆಸ್ವಾಮಿಯವರಿಗೆ ಅವಹೇಳನಕಾರಿ ಟೀಕೆ ಮಾಡಿರುವ ಬಿಜೆಪಿ ಶಾಸಕ ಬಸವರಾಜ ಪಾಟೀಲ್ ಯತ್ನಾಳ್ ಅವರ ಹೇಳಿಕೆ ಖಂಡನೀಯ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು “ನಾಡಿನ ಸಾಕ್ಷಿಪ್ರಜ್ಞೆಯಾಗಿರುವ ದೊರೆಸ್ವಾಮಿಯವರ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನಿಸಿರುವ ಯತ್ನಾಳ್ ಆಗಸಕ್ಕೆ ಉಗಿದು ತಮ್ಮ ಮುಖಕ್ಕೆ ಸಿಡಿಸಿಕೊಂಡಿರುವುದು ಎಂತಹ ಚೋದ್ಯ” ಎಂದು ವ್ಯಂಗ್ಯವಾಡಿದ್ದಾರೆ.
ನಾಡಿನ ಸಾಕ್ಷಿಪ್ರಜ್ಞೆಯಾಗಿರುವ ದೊರೆಸ್ವಾಮಿಯವರ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನಿಸಿರುವ ಯತ್ನಾಳ್ ಆಗಸಕ್ಕೆ ಉಗಿದು ತಮ್ಮ ಮುಖಕ್ಕೆ ಸಿಡಿಸಿಕೊಂಡಿರುವುದು ಎಂತಹ ಚೋದ್ಯ.
(2/2)— H D Kumaraswamy (@hd_kumaraswamy) February 25, 2020
ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ’ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಶತಾಯುಷಿ ಎಚ್.ಎಸ್ ದೊರೆಸ್ವಾಮಿಯವರ ಕುರಿತು ಪಾಕಿಸ್ತಾನದ ಏಜೆಂಟ್, ನಕಲಿ ಹೋರಾಟಗಾರ’ ಎಂದೆಲ್ಲಾ ಅವಮಾನ ಮಾಡಿದ್ದರು.
ಇದನ್ನೂ ಓದಿ: ದೊರೆಸ್ವಾಮಿಯವರನ್ನು ಅವಮಾನಿಸಿದ ಶಾಸಕ ಯತ್ನಾಳ್ ಮೇಲಿವೆ 23 ಗಂಭೀರ ಪ್ರಕರಣಗಳು..