Homeಮುಖಪುಟಯತ್ನಾಳ್‌ರವರನ್ನು ತಕ್ಷಣ ಅಮಾನತು ಮಾಡಬೇಕು: ಸಿದ್ದರಾಮಯ್ಯ ಆಗ್ರಹ

ಯತ್ನಾಳ್‌ರವರನ್ನು ತಕ್ಷಣ ಅಮಾನತು ಮಾಡಬೇಕು: ಸಿದ್ದರಾಮಯ್ಯ ಆಗ್ರಹ

- Advertisement -
- Advertisement -

ಬಸವನಗೌಡ ಪಾಟೀಲ್ ಯತ್ನಾಳ್ ಅವರು ಸದನಕ್ಕೆ ಅಗೌರವ ತೋರಿದ್ದಾರೆ. ಸಂವಿಧಾನದ ಹೆಸರಲ್ಲಿ ಪ್ರಮಾಣ ಮಾಡಿದವರು ಒಬ್ಬ ಹಿರಿಯ ಸ್ವಾತಂತ್ರ್ಯ ಹೋರಾಟಗಾರನಿಗೆ ಅವಮಾನಿಸಿರುವುದು ಸಂವಿಧಾನಕ್ಕೆ ಮಾಡಿರುವ ಅವಮಾನ. ಇಂತಹ ದೇಶದ್ರೋಹಿಗಳ ಜೊತೆ ಕಲಾಪದಲ್ಲಿ ಕುಳಿತುಕೊಳ್ಳಲು ನಾವು ಸಿದ್ಧರಿಲ್ಲ. ಅವರನ್ನು ಸಭಾಧ್ಯಕ್ಷರು ತಕ್ಷಣ ಅಮಾನತು ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಬಿಜೆಪಿ ನಾಯಕರು, ಮಂತ್ರಿಗಳು ಯತ್ನಾಳ್ ಹೇಳಿಕೆಯನ್ನು ಖಂಡಿಸುವ ಬದಲು ಬೆಂಬಲಿಸಿ ಮಾತನಾಡುತ್ತಾರೆ. ಪಕ್ಷದ ಶಾಸಕನೊಬ್ಬ ದೇಶದ ಸ್ವಾತಂತ್ರ್ಯ ಚಳುವಳಿಗೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನಿಸುವುದು ವೈಯಕ್ತಿಕ ಅಭಿಪ್ರಾಯ ಹೇಗಾಗುತ್ತದೆ? ಹಾಗಾದರೆ ಯತ್ನಾಳ್ ಹೇಳಿಕೆಗೆ ಬಿಜೆಪಿ ಸಮ್ಮತಿ ಇದೆಯೇ ಎಂಬುದನ್ನು ಅಧಿಕೃತವಾಗಿ ಸ್ಪಷ್ಟಪಡಿಸಲಿ ಎಂದು ಒತ್ತಾಯಿಸಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿಯವರನ್ನು ಒಂದು ಪಕ್ಷಕ್ಕೆ ಕಟ್ಟಿಹಾಕುವುದು ಸರಿಯಲ್ಲ. ಅವರು ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಮತ್ತು ತದನಂತರದ ಕಾಲದಲ್ಲೂ ಹತ್ತಾರು ಹೋರಾಟಗಳಲ್ಲಿ ಬಾಗಿಯಾಗಿ ಜೈಲುವಾಸ ಅನುಭವಿಸಿದ್ದಕ್ಕೆ ಸಾಕ್ಷಿಗಳಿವೆ. ಅವರು ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ 14 ತಿಂಗಳು ಜೈಲುವಾಸ ಅನುಭವಿಸಿದ್ದಕ್ಕೆ ದಾಖಲೆ ಇದೆ.  ತುರ್ತು ಪರಿಸ್ಥಿತಿಯಲ್ಲಿ ಜೈಲಿಗೆ ಹೋಗಿದ್ದರು. ದಲಿತರು, ಒಬಿಸಿ ಸೇರಿದಂತೆ ಹಲವು ಹೋರಾಟ ಮಾಡಿದವರು. ನಾನು ಮುಖ್ಯಮಂತ್ರಿಯಾಗಿದ್ದಾಗ ನಮ್ಮ ಸರ್ಕಾರದ ವಿರುದ್ಧವೂ ಪ್ರತಿಭಟನೆ ನಡೆಸಿದ್ದರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದಲ್ಲಿ ನನ್ನ ನೇತೃತ್ವದ ಕಾಂಗ್ರೆಸ್ ಸರ್ಕಾರ ಇದ್ದಾಗಲೂ ಅವರು ಆಡಳಿತರೂಢ ಸರ್ಕಾರದ ವಿರುದ್ಧ ಅನೇಕ ಗಮನಾರ್ಹ ಪ್ರತಿಭಟನೆಗಳನ್ನು ಹೋರಾಟಗಳನ್ನು ನಡೆಸಿರುವ ಸಾಕಷ್ಟು ಉದಾಹರಣೆಗಳಿವೆ. ದಲಿತರು ಹಿಂದುಳಿದವರಿಗಾಗಿ ನಿರಂತರ ಹೋರಾಟ ನಡೆಸಿದ್ದಾರೆ. ಅಂತಹ ವ್ಯಕ್ತಿಯ ಬಗ್ಗೆ ಶಾಸಕ ಯತ್ನಾಳ್ ಇಂತಹ ಕೀಳು ಮಟ್ಟದ ಹೇಳಿಕೆ ನೀಡಿರುವುದು ಸರಿಯಲ್ಲ. ಆದರೆ, ಈ ಕುರಿತು ಸದನದಲ್ಲಿ ಚರ್ಚೆಗೆ ಅವಕಾಶ ಕೇಳಿದ್ರೆ ಸ್ಪೀಕರ್ ಕಾನೂನು ಸಚಿವರನ್ನು ಕೇಳಬೇಕು ಎನ್ನುವ ಮೂಲಕ ಸದನವನ್ನು ತಪ್ಪು ದಾರಿಗೆ ಎಳೆದಿದ್ದಾರೆ” ಎಂದು ಸಿದ್ದು ಕಿಡಿಕಾರಿದರು.

ಇನ್ನು ಸ್ಪೀಕರ್​ಗೆ ವಿಶೇಷ ಅಧಿಕಾರ ಇದೆ. ಆದರೆ, ಕಾನೂನು ಸಚಿವರನ್ನು ಕೇಳಿ ಹೇಳುತ್ತಾರೆ. ಸಂವಿಧಾನ ಇಲ್ಲ ಅಂದಿದ್ರೆ ನಾವು ಶಾಸಕರಾಗ್ತಿರಲಿಲ್ಲ, ಇಲ್ಲಿ ದೊರೆಸ್ವಾಮಿ ಮುಖ್ಯ ಅಲ್ಲ, ಇಡೀ ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡಿರುವ ಅವಮಾನ ಹಾಗೂ ದೇಶದ್ರೋಹದ ಕೆಲಸ, ಸದನಕ್ಕೆ ಅಗೌರವ ಕೊಡುವ ರೀತಿ ವರ್ತನೆ ಮಾಡಿದ್ರೆ ಅವರನ್ನು ಅಮಾನತು ಮಾಡಬೇಕು ಎಂದರು.

ಸದನಕ್ಕೆ ಅಗೌರವ ತೋರುವ‌ ಸದಸ್ಯರನ್ನು ಅಮಾನತು ಮಾಡಬೇಕೆಂದು ಮಧ್ಯಪ್ರದೇಶ ಹೈಕೋರ್ಟ್ ಆದೇಶ ನೀಡಿತ್ತು. ಆ ತೀರ್ಪನ್ನು ಆಧಾರವಾಗಿಟ್ಟುಕೊಂಡು ಯತ್ನಾಳ್ ಅವರನ್ನು ಅಮಾನತು ಮಾಡುವಂತೆ ಸಭಾಧ್ಯಕ್ಷರಲ್ಲಿ ಒತ್ತಾಯ ಮಾಡಿದ್ದೇವೆ. ಆದರೆ ನಮಗೆ ಮಾತನಾಡಲು ಅವಕಾಶವನ್ನೇ ನೀಡದಿರುವ ಸಭಾಧ್ಯಕ್ಷರ ವರ್ತನೆ ಸರಿ ಅಲ್ಲ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...