Homeಮುಖಪುಟಯತ್ನಾಳ್‌ರವರನ್ನು ತಕ್ಷಣ ಅಮಾನತು ಮಾಡಬೇಕು: ಸಿದ್ದರಾಮಯ್ಯ ಆಗ್ರಹ

ಯತ್ನಾಳ್‌ರವರನ್ನು ತಕ್ಷಣ ಅಮಾನತು ಮಾಡಬೇಕು: ಸಿದ್ದರಾಮಯ್ಯ ಆಗ್ರಹ

- Advertisement -
- Advertisement -

ಬಸವನಗೌಡ ಪಾಟೀಲ್ ಯತ್ನಾಳ್ ಅವರು ಸದನಕ್ಕೆ ಅಗೌರವ ತೋರಿದ್ದಾರೆ. ಸಂವಿಧಾನದ ಹೆಸರಲ್ಲಿ ಪ್ರಮಾಣ ಮಾಡಿದವರು ಒಬ್ಬ ಹಿರಿಯ ಸ್ವಾತಂತ್ರ್ಯ ಹೋರಾಟಗಾರನಿಗೆ ಅವಮಾನಿಸಿರುವುದು ಸಂವಿಧಾನಕ್ಕೆ ಮಾಡಿರುವ ಅವಮಾನ. ಇಂತಹ ದೇಶದ್ರೋಹಿಗಳ ಜೊತೆ ಕಲಾಪದಲ್ಲಿ ಕುಳಿತುಕೊಳ್ಳಲು ನಾವು ಸಿದ್ಧರಿಲ್ಲ. ಅವರನ್ನು ಸಭಾಧ್ಯಕ್ಷರು ತಕ್ಷಣ ಅಮಾನತು ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಬಿಜೆಪಿ ನಾಯಕರು, ಮಂತ್ರಿಗಳು ಯತ್ನಾಳ್ ಹೇಳಿಕೆಯನ್ನು ಖಂಡಿಸುವ ಬದಲು ಬೆಂಬಲಿಸಿ ಮಾತನಾಡುತ್ತಾರೆ. ಪಕ್ಷದ ಶಾಸಕನೊಬ್ಬ ದೇಶದ ಸ್ವಾತಂತ್ರ್ಯ ಚಳುವಳಿಗೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನಿಸುವುದು ವೈಯಕ್ತಿಕ ಅಭಿಪ್ರಾಯ ಹೇಗಾಗುತ್ತದೆ? ಹಾಗಾದರೆ ಯತ್ನಾಳ್ ಹೇಳಿಕೆಗೆ ಬಿಜೆಪಿ ಸಮ್ಮತಿ ಇದೆಯೇ ಎಂಬುದನ್ನು ಅಧಿಕೃತವಾಗಿ ಸ್ಪಷ್ಟಪಡಿಸಲಿ ಎಂದು ಒತ್ತಾಯಿಸಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿಯವರನ್ನು ಒಂದು ಪಕ್ಷಕ್ಕೆ ಕಟ್ಟಿಹಾಕುವುದು ಸರಿಯಲ್ಲ. ಅವರು ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಮತ್ತು ತದನಂತರದ ಕಾಲದಲ್ಲೂ ಹತ್ತಾರು ಹೋರಾಟಗಳಲ್ಲಿ ಬಾಗಿಯಾಗಿ ಜೈಲುವಾಸ ಅನುಭವಿಸಿದ್ದಕ್ಕೆ ಸಾಕ್ಷಿಗಳಿವೆ. ಅವರು ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ 14 ತಿಂಗಳು ಜೈಲುವಾಸ ಅನುಭವಿಸಿದ್ದಕ್ಕೆ ದಾಖಲೆ ಇದೆ.  ತುರ್ತು ಪರಿಸ್ಥಿತಿಯಲ್ಲಿ ಜೈಲಿಗೆ ಹೋಗಿದ್ದರು. ದಲಿತರು, ಒಬಿಸಿ ಸೇರಿದಂತೆ ಹಲವು ಹೋರಾಟ ಮಾಡಿದವರು. ನಾನು ಮುಖ್ಯಮಂತ್ರಿಯಾಗಿದ್ದಾಗ ನಮ್ಮ ಸರ್ಕಾರದ ವಿರುದ್ಧವೂ ಪ್ರತಿಭಟನೆ ನಡೆಸಿದ್ದರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದಲ್ಲಿ ನನ್ನ ನೇತೃತ್ವದ ಕಾಂಗ್ರೆಸ್ ಸರ್ಕಾರ ಇದ್ದಾಗಲೂ ಅವರು ಆಡಳಿತರೂಢ ಸರ್ಕಾರದ ವಿರುದ್ಧ ಅನೇಕ ಗಮನಾರ್ಹ ಪ್ರತಿಭಟನೆಗಳನ್ನು ಹೋರಾಟಗಳನ್ನು ನಡೆಸಿರುವ ಸಾಕಷ್ಟು ಉದಾಹರಣೆಗಳಿವೆ. ದಲಿತರು ಹಿಂದುಳಿದವರಿಗಾಗಿ ನಿರಂತರ ಹೋರಾಟ ನಡೆಸಿದ್ದಾರೆ. ಅಂತಹ ವ್ಯಕ್ತಿಯ ಬಗ್ಗೆ ಶಾಸಕ ಯತ್ನಾಳ್ ಇಂತಹ ಕೀಳು ಮಟ್ಟದ ಹೇಳಿಕೆ ನೀಡಿರುವುದು ಸರಿಯಲ್ಲ. ಆದರೆ, ಈ ಕುರಿತು ಸದನದಲ್ಲಿ ಚರ್ಚೆಗೆ ಅವಕಾಶ ಕೇಳಿದ್ರೆ ಸ್ಪೀಕರ್ ಕಾನೂನು ಸಚಿವರನ್ನು ಕೇಳಬೇಕು ಎನ್ನುವ ಮೂಲಕ ಸದನವನ್ನು ತಪ್ಪು ದಾರಿಗೆ ಎಳೆದಿದ್ದಾರೆ” ಎಂದು ಸಿದ್ದು ಕಿಡಿಕಾರಿದರು.

ಇನ್ನು ಸ್ಪೀಕರ್​ಗೆ ವಿಶೇಷ ಅಧಿಕಾರ ಇದೆ. ಆದರೆ, ಕಾನೂನು ಸಚಿವರನ್ನು ಕೇಳಿ ಹೇಳುತ್ತಾರೆ. ಸಂವಿಧಾನ ಇಲ್ಲ ಅಂದಿದ್ರೆ ನಾವು ಶಾಸಕರಾಗ್ತಿರಲಿಲ್ಲ, ಇಲ್ಲಿ ದೊರೆಸ್ವಾಮಿ ಮುಖ್ಯ ಅಲ್ಲ, ಇಡೀ ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡಿರುವ ಅವಮಾನ ಹಾಗೂ ದೇಶದ್ರೋಹದ ಕೆಲಸ, ಸದನಕ್ಕೆ ಅಗೌರವ ಕೊಡುವ ರೀತಿ ವರ್ತನೆ ಮಾಡಿದ್ರೆ ಅವರನ್ನು ಅಮಾನತು ಮಾಡಬೇಕು ಎಂದರು.

ಸದನಕ್ಕೆ ಅಗೌರವ ತೋರುವ‌ ಸದಸ್ಯರನ್ನು ಅಮಾನತು ಮಾಡಬೇಕೆಂದು ಮಧ್ಯಪ್ರದೇಶ ಹೈಕೋರ್ಟ್ ಆದೇಶ ನೀಡಿತ್ತು. ಆ ತೀರ್ಪನ್ನು ಆಧಾರವಾಗಿಟ್ಟುಕೊಂಡು ಯತ್ನಾಳ್ ಅವರನ್ನು ಅಮಾನತು ಮಾಡುವಂತೆ ಸಭಾಧ್ಯಕ್ಷರಲ್ಲಿ ಒತ್ತಾಯ ಮಾಡಿದ್ದೇವೆ. ಆದರೆ ನಮಗೆ ಮಾತನಾಡಲು ಅವಕಾಶವನ್ನೇ ನೀಡದಿರುವ ಸಭಾಧ್ಯಕ್ಷರ ವರ್ತನೆ ಸರಿ ಅಲ್ಲ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...