Homeಮುಖಪುಟಭಾರತ್ ಜೋಡೋ ವರ್ಷಾಚರಣೆ: ದ್ವೇಷ ಅಳಿದು, ದೇಶ ಒಗ್ಗೂಡಿಸುವವರೆಗೂ ಯಾತ್ರೆ ಮುಂದುವರಿಯುತ್ತದೆ; ರಾಹುಲ್

ಭಾರತ್ ಜೋಡೋ ವರ್ಷಾಚರಣೆ: ದ್ವೇಷ ಅಳಿದು, ದೇಶ ಒಗ್ಗೂಡಿಸುವವರೆಗೂ ಯಾತ್ರೆ ಮುಂದುವರಿಯುತ್ತದೆ; ರಾಹುಲ್

- Advertisement -
- Advertisement -

ಭಾರತ್ ಜೋಡೋ ಯಾತ್ರೆಯ ಪ್ರಾರಂಭವಾಗಿ ಇಂದಿಗೆ ಒಂದು ವರ್ಷವಾಯಿತು. ಈ ಮೊದಲ ಭಾರತ್ ಜೋಡೋ ವಾರ್ಷಿಕೋತ್ಸವದಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದ್ವೇಷವನ್ನು ತೊಡೆದುಹಾಕಲು ಮತ್ತು ಭಾರತವನ್ನು ಒಗ್ಗೂಡಿಸುವವರೆಗೂ ಈ ಯಾತ್ರೆ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ.

”ಕಳೆದ ವರ್ಷ ಇದೇ ದಿನದಂದು ಪ್ರಾರಂಭವಾದ ಭಾರತ್ ಜೋಡೋ ಯಾತ್ರೆಯು ಕನ್ಯಾಕುಮಾರಿಯಿಂದ ಕಾಶ್ಮೀರವರೆಗೆ 4,000 ಕಿಮೀ ಪೂರ್ಣಗೊಳಿಸಿತು” ಎಂದು ರಾಹುಲ್ ಗಾಂಧಿ ಅವರು ವೀಡಿಯೋ ಮಾಂಟೇಜ್ ಹಂಚಿಕೊಂಡಿದ್ದಾರೆ.

”ಭಾರತ ಜೋಡೋ ಯಾತ್ರೆಯ ಕೋಟ್ಯಾಂತರ ಹೆಜ್ಜೆಗಳು ಏಕತೆ ಮತ್ತು ಪ್ರೀತಿಯ ಕಡೆಗೆ ಸಾಗಿವೆ. ಈ ಹೆಜ್ಜೆಗಳು ದೇಶಕ್ಕೆ ಉತ್ತಮ ನಾಳೆಯ ಅಡಿಪಾಯವಾಗಿವೆ” ಎಂದು ಹೇಳಿದರು.

”ಈ ಪಯಣ ಮುಂದುವರಿಯುತ್ತದೆ – ದ್ವೇಷವನ್ನು ನಿರ್ಮೂಲನೆ ಮಾಡುವವರೆಗೆ, ಭಾರತವು ಒಂದಾಗುವವರೆಗೆ. ಇದು ನನ್ನ ಭರವಸೆ!” ಎಂದು ಹೇಳಿದರು.

ಯಾತ್ರೆಯ ಅವಧಿಯಲ್ಲಿ, ರಾಹುಲ್ ಗಾಂಧಿಯವರು 12 ಸಾರ್ವಜನಿಕ ಸಭೆಗಳು, 100 ಕ್ಕೂ ಹೆಚ್ಚು ಬೀದಿ ಸಭೆಗಳು ಮತ್ತು 13 ಪತ್ರಿಕಾಗೋಷ್ಠಿಗಳನ್ನು ಉದ್ದೇಶಿಸಿ ಮಾತನಾಡಿದರು. ಅವರು 275ಕ್ಕೂ ಹೆಚ್ಚು ಯೋಜಿತ ವಾಕಿಂಗ್ ಸಂವಹನಗಳನ್ನು ಮತ್ತು 100ಕ್ಕೂ ಹೆಚ್ಚು ಕುಳಿತುಕೊಂಡು ಸಂವಹನಗಳನ್ನು ಮಾಡಿದ್ದಾರೆ.

ಈ ಭಾರತ್ ಜೋಡೋ ಯಾತ್ರೆಯಿಂದ ಕಾಂಗ್ರೆಸ್‌ಗೆ ಒಂದು ದೊಡ್ಡ ಟೇಕ್‌ವೇ ಸಿಕ್ಕಂತಾಗಿದೆ. ಇದುರಾಹುಲ್ ಗಾಂಧಿಯವರ ಇಮೇಜ್‌ನ್ನು ಹೆಚ್ಚಿಸಿದೆ. ಅರೆಕಾಲಿಕ ರಾಜಕಾರಣಯಿಂದ ಪ್ರಬುದ್ಧ ಮತ್ತು ವಿರೋಧಿಗಳು ಗಂಭೀರವಾಗಿ ಪರಿಗಣಿಸುವ ವ್ಯಕ್ತಿಯಾಗಿ ರಾಹುಲ್ ಗುರುತಿಸಿಕೊಳ್ಳುವಲ್ಲಿ ಈ ಯಾತ್ರೆ ಸಹಕಾರಿಯಾಗಿದೆ ಎಂದು ಹಲವು ರಾಜಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಯಾತ್ರೆ ಮೂಲಕ 4,000 ಕಿಲೋಮೀಟರ್‌ಗಳಿಗಿಂತ ಹೆಚ್ಚು ದೂರ ಕ್ರಮಿಸಿದ ಗಾಂಧಿಯವರು, ತಮ್ಮ ಬೆಂಬಲಿಗರು ಮತ್ತು ವಿರೋಧಿಗಳ ಗಮನವನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದರು. ಕಮಲ್ ಹಾಸನ್, ಪೂಜಾ ಭಟ್, ರಿಯಾ ಸೇನ್, ಸ್ವರಾ ಭಾಸ್ಕರ್, ರಶ್ಮಿ ದೇಸಾಯಿ, ಆಕಾಂಕ್ಷಾ ಪುರಿ ಮತ್ತು ಅಮೋಲ್ ಪಾಲೇಕರ್ ಅವರಂತಹ ಚಲನಚಿತ್ರ ಮತ್ತು ಟಿವಿ ಸೆಲೆಬ್ರಿಟಿಗಳು ಅವರೊಂದಿಗೆ ಹೆಜ್ಜೆಹಾಕಿದರು.

ಅಲ್ಲದೆ, ಮಾಜಿ ಸೇನಾ ಮುಖ್ಯಸ್ಥ ಜನರಲ್ (ನಿವೃತ್ತ) ದೀಪಕ್ ಕಪೂರ್ ಮತ್ತು ಮಾಜಿ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ (ನಿವೃತ್ತ) ಎಲ್ ರಾಮದಾಸ್ ಸೇರಿದಂತೆ ಬರಹಗಾರರು ಮತ್ತು ಮಿಲಿಟರಿ ಯೋಧರು ಮತ್ತು ಮಾಜಿ ಆರ್‌ಬಿಐ ಗವರ್ನರ್ ರಘುರಾಮ್ ರಾಜನ್ ಮತ್ತು ಮಾಜಿ ಹಣಕಾಸು ಕಾರ್ಯದರ್ಶಿ ಅರವಿಂದ್ ಮಾಯಾರಾಮ್ ಸಹ ಯಾತ್ರೆಯಲ್ಲಿ ಭಾಗವಹಿಸಿದ್ದರು.

ನ್ಯಾಷನಲ್ ಕಾನ್ಫರೆನ್ಸ್‌ನ ಫಾರೂಕ್ ಅಬ್ದುಲ್ಲಾ ಮತ್ತು ಒಮರ್ ಅಬ್ದುಲ್ಲಾ, ಪಿಡಿಪಿಯ ಮೆಹಬೂಬಾ ಮುಫ್ತಿ, ಶಿವಸೇನೆಯ ಆದಿತ್ಯ ಠಾಕ್ರೆ, ಪ್ರಿಯಾಂಕಾ ಚತುರ್ವೇದಿ ಮತ್ತು ಸಂಜಯ್ ರಾವುತ್ ಮತ್ತು ಎನ್‌ಸಿಪಿಯ ಸುಪ್ರಿಯಾ ಸುಳೆ ಅವರಂತಹ ವಿರೋಧ ಪಕ್ಷದ ನಾಯಕರೂ ಮೆರವಣಿಗೆಯಲ್ಲಿ ಸಮಯಗಳಲ್ಲಿ ರಾಹುಲ್ ಗಾಂಧಿಯವರೊಂದಿಗೆ ನಡೆದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...