Homeಚಳವಳಿರೈತ ಹೋರಾಟಕ್ಕೆ ಒಂದು ವರ್ಷ: ಇಂದಿನ ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ

ರೈತ ಹೋರಾಟಕ್ಕೆ ಒಂದು ವರ್ಷ: ಇಂದಿನ ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ

- Advertisement -
- Advertisement -

ದೆಹಲಿ ಗಡಿಗಳಲ್ಲಿ ರೈತ ಹೋರಾಟ ಆರಂಭವಾಗಿ ನವೆಂಬರ್ 26ಕ್ಕೆ ಒಂದು ವರ್ಷ. ಈ ಐತಿಹಾಸಿಕ ಹೋರಾಟದ ದಿನಕ್ಕೆ ಸಾಕ್ಷಿಯಾಗಲು ಸಾವಿರಾರು ರೈತರು ಈಗಾಗಲೇ ಪ್ರತಿಭಟನಾ ನಿರತ ಗಡಿಗಳಲ್ಲಿ ಬಂದು ಸೇರಿದ್ದಾರೆ. ಇಂದು (ನ.26) ಚಳವಳಿಯ ’ಭಾಗಶಃ ವಿಜಯ’ ಆಚರಿಸಲಾಗುವುದು ಮತ್ತು ಉಳಿದ ಹಕ್ಕೊತ್ತಾಯಗಳನ್ನು ಪೂರೈಸುವಂತೆ ಒತ್ತಾಯಿಸಲಾಗುವುದು’ ಎಂದು ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ.

ಇಂದು ದೇಶಾದ್ಯಂತ ನಡೆಯಲಿರುವ ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ. ದೆಹಲಿಯಿಂದ ದೂರವಿರುವ ರಾಜ್ಯಗಳ ರಾಜಧಾನಿಗಳಲ್ಲಿ, ವಿವಿಧ ಬಗೆಯ ಪ್ರತಿಭಟನೆಗಳ ಜೊತೆಗೆ ಟ್ರ್ಯಾಕ್ಟರ್ ರ್‍ಯಾಲಿಗಳನ್ನು ಆಯೋಜಿಸಲಾಗುವುದು. ರೈತ ಹೋರಾಟವನ್ನು ಬೆಂಬಲಿಸಿ ವಿಶ್ವದಾದ್ಯಂತ ಅಂತರಾಷ್ಟ್ರೀಯ ರೈತ ಸಂಘಟನೆಗಳು ಮತ್ತು ಭಾರತೀಯ ವಲಸಿಗರು ‘ಐಕ್ಯತಾ ಕಾರ್ಯಕ್ರಮ’ಗಳನ್ನು ನಡೆಸಲು ಯೋಜನೆ ರೂಪಿಸಿವೆ ಎಂದು ಎಸ್‌ಕೆಎಂ ತಿಳಿಸಿದೆ.

“ನವೆಂಬರ್ 26 ರಂದು, ಮಧ್ಯಾಹ್ನ 12 ರಿಂದ 2 ರವರೆಗೆ ಲಂಡನ್‌ನಲ್ಲಿ ಭಾರತೀಯ ಹೈಕಮಿಷನ್ ಎದುರು ಪ್ರತಿಭಟನೆ ನಡೆಯಲಿದೆ. ಅದೇ ದಿನ, ವ್ಯಾಂಕೋವರ್, ಕೆನಡಾದ ಸರ್ರೆಯಲ್ಲಿ ಪ್ರತಿಭಟನೆ ಇರುತ್ತದೆ. ನವೆಂಬರ್ 30 ರಂದು ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿ ಪ್ರತಿಭಟನೆ ನಡೆಯಲಿದೆ. ಡಿಸೆಂಬರ್ 4 ರಂದು ಕ್ಯಾಲಿಫೋರ್ನಿಯಾದಲ್ಲಿ ಕಾರ್ ರ್ಯಾಲಿ ಮತ್ತು ನ್ಯೂಯಾರ್ಕ್ ನಲ್ಲಿ ಮೆರವಣಿಗೆಯನ್ನು ಆಯೋಜಿಸಲಾಗಿದೆ. ಸ್ಯಾನ್ ಜೋಸ್ ಗುರುದ್ವಾರದಲ್ಲಿ ರೈತ ಹುತಾತ್ಮರ ಸ್ಮರಣಾರ್ಥ ಮತ್ತು ಮೇಣದಬತ್ತಿಯ ಜಾಗರಣೆ ನಡೆಯಲಿದೆ. ಡಿಸೆಂಬರ್ 8 ರಂದು ಆಸ್ಟ್ರಿಯಾದ ವಿಯೆನ್ನಾದಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿದೆ” ಎಂದು ಎಸ್‌ಕೆಎಂ ತಿಳಿಸಿದೆ.

ಇದನ್ನೂ ಓದಿ: ನವೆಂಬರ್‌ 29 ರಂದು 60 ಟ್ರ್ಯಾಕ್ಟರ್‌ಗಳಲ್ಲಿ ಸಂಸತ್ತಿಗೆ ಮೆರವಣಿಗೆ: ರಾಕೇಶ್ ಟಿಕಾಯತ್

ಕರ್ನಾಟಕ: ನವೆಂಬರ್ 26 ರಾಜ್ಯದ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳ ಬಂದ್

ಕೇಂದ್ರ ಸರ್ಕಾರ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಾಪಸ್ ತೆಗೆದುಕೊಳ್ಳುವುದಾಗಿ ಘೋಷಿಸಿದೆ. ಆದರೆ ಕೇಂದ್ರಕ್ಕೆ ಅನುಗುಣವಾಗಿ ಕರ್ನಾಟಕ ರಾಜ್ಯವು ಎಪಿಎಂಸಿ ಮತ್ತು ಭೂಸುಧಾರಣ ಕಾಯ್ದೆಗೆ ತಂದಿರುವ ತಿದ್ದುಪಡಿಗಳನ್ನು ವಾಪಸ್ ಪಡೆದುಕೊಳ್ಳಬೇಕೆಂದು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹಿಸಿದೆ. ಅದಕ್ಕಾಗಿ ಇಂದು ರಾಜ್ಯದ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡಿ ಪ್ರತಿಭಟಿಸಲು ಕರೆ ನೀಡಿದೆ.

ಬೆಂಗಳೂರಿನ ಹೊಸಕೋಟೆ, ದೇವನಹಳ್ಳಿ ಬಳಿ ಹೆದ್ದಾರಿ ಬಂದ್ ಹೋರಾಟ ನಡೆಯಲಿದೆ. ಅಲ್ಲದೆ ರಾಮನಗರ, ಮಂಡ್ಯ, ರಾಯಚೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಹೆದ್ದಾರಿ ಬಂದ್ ಹೋರಾಟ ನಡೆಯಲಿದೆ ರೈತ ಮುಖಂಡರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯಾಧ್ಯಕ್ಷರಾದ ಕೋಡಿಹಳ್ಳಿ ಚಂದ್ರಶೇಖರ್‌ರವರು ಮಾತನಾಡಿ, “ಕೇಂದ್ರದ ಕರಾಳ ಕಾಯ್ದೆಗಳು ಸಂಸತ್ತಿನಲ್ಲಿ ರದ್ದುಗೊಳ್ಳಬೇಕಿದೆ. ಜೊತೆಗೆ ಎಂಎಸ್‌ಪಿ ಜಾರಿಗೆ ಕಾನೂನು ಬೇಕೆಂದು ಆಗ್ರಹಿಸಿ ಚಳವಳಿ ಮುಂದುವರೆಯಲಿದೆ. ಕರ್ನಾಟಕ ಸರ್ಕಾರ ತಿದ್ದುಪಡಿ ಮಾಡಿರುವ ಮೂರು ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ನವೆಂಬರ್ 26 ರಂದು ಹೆದ್ದಾರಿ ಬಂದ್ ನಡೆಯಲಿದೆ. ಸಾರ್ವಜನಿಕರು ಅಂದು ಪ್ರಯಾಣ ಮಾಡದೇ ರೈತ ಹೋರಾಟಕ್ಕೆ ಬೆಂಬಲಿಸಿಬೇಕು” ಎಂದು ಮನವಿ ಮಾಡಿದ್ದಾರೆ.

ಬೆಂಗಳೂರಿನಿಂದ ಶ್ರೀರಂಗಪಟ್ಟಣದ ಕಡೆಗೆ ಈಗಾಗಲೇ ಬೈಕ್ ರ್‍ಯಾಲಿ ನಡೆಯುತ್ತಿದೆ.

ಇದನ್ನೂ ಓದಿ: ಎಂಸ್‌ಪಿಯತ್ತ ರೈತರ ಚಿತ್ತ: ದೆಹಲಿ ಗಡಿಗಳತ್ತ ಮುನ್ನುಗ್ಗುತ್ತಿರುವ ಪ್ರತಿಭಟನಾಕಾರರ ದಂಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...