Homeಚಳವಳಿರೈತ ಹೋರಾಟಕ್ಕೆ ಒಂದು ವರ್ಷ: ಇಂದಿನ ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ

ರೈತ ಹೋರಾಟಕ್ಕೆ ಒಂದು ವರ್ಷ: ಇಂದಿನ ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ

- Advertisement -
- Advertisement -

ದೆಹಲಿ ಗಡಿಗಳಲ್ಲಿ ರೈತ ಹೋರಾಟ ಆರಂಭವಾಗಿ ನವೆಂಬರ್ 26ಕ್ಕೆ ಒಂದು ವರ್ಷ. ಈ ಐತಿಹಾಸಿಕ ಹೋರಾಟದ ದಿನಕ್ಕೆ ಸಾಕ್ಷಿಯಾಗಲು ಸಾವಿರಾರು ರೈತರು ಈಗಾಗಲೇ ಪ್ರತಿಭಟನಾ ನಿರತ ಗಡಿಗಳಲ್ಲಿ ಬಂದು ಸೇರಿದ್ದಾರೆ. ಇಂದು (ನ.26) ಚಳವಳಿಯ ’ಭಾಗಶಃ ವಿಜಯ’ ಆಚರಿಸಲಾಗುವುದು ಮತ್ತು ಉಳಿದ ಹಕ್ಕೊತ್ತಾಯಗಳನ್ನು ಪೂರೈಸುವಂತೆ ಒತ್ತಾಯಿಸಲಾಗುವುದು’ ಎಂದು ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ.

ಇಂದು ದೇಶಾದ್ಯಂತ ನಡೆಯಲಿರುವ ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ. ದೆಹಲಿಯಿಂದ ದೂರವಿರುವ ರಾಜ್ಯಗಳ ರಾಜಧಾನಿಗಳಲ್ಲಿ, ವಿವಿಧ ಬಗೆಯ ಪ್ರತಿಭಟನೆಗಳ ಜೊತೆಗೆ ಟ್ರ್ಯಾಕ್ಟರ್ ರ್‍ಯಾಲಿಗಳನ್ನು ಆಯೋಜಿಸಲಾಗುವುದು. ರೈತ ಹೋರಾಟವನ್ನು ಬೆಂಬಲಿಸಿ ವಿಶ್ವದಾದ್ಯಂತ ಅಂತರಾಷ್ಟ್ರೀಯ ರೈತ ಸಂಘಟನೆಗಳು ಮತ್ತು ಭಾರತೀಯ ವಲಸಿಗರು ‘ಐಕ್ಯತಾ ಕಾರ್ಯಕ್ರಮ’ಗಳನ್ನು ನಡೆಸಲು ಯೋಜನೆ ರೂಪಿಸಿವೆ ಎಂದು ಎಸ್‌ಕೆಎಂ ತಿಳಿಸಿದೆ.

“ನವೆಂಬರ್ 26 ರಂದು, ಮಧ್ಯಾಹ್ನ 12 ರಿಂದ 2 ರವರೆಗೆ ಲಂಡನ್‌ನಲ್ಲಿ ಭಾರತೀಯ ಹೈಕಮಿಷನ್ ಎದುರು ಪ್ರತಿಭಟನೆ ನಡೆಯಲಿದೆ. ಅದೇ ದಿನ, ವ್ಯಾಂಕೋವರ್, ಕೆನಡಾದ ಸರ್ರೆಯಲ್ಲಿ ಪ್ರತಿಭಟನೆ ಇರುತ್ತದೆ. ನವೆಂಬರ್ 30 ರಂದು ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿ ಪ್ರತಿಭಟನೆ ನಡೆಯಲಿದೆ. ಡಿಸೆಂಬರ್ 4 ರಂದು ಕ್ಯಾಲಿಫೋರ್ನಿಯಾದಲ್ಲಿ ಕಾರ್ ರ್ಯಾಲಿ ಮತ್ತು ನ್ಯೂಯಾರ್ಕ್ ನಲ್ಲಿ ಮೆರವಣಿಗೆಯನ್ನು ಆಯೋಜಿಸಲಾಗಿದೆ. ಸ್ಯಾನ್ ಜೋಸ್ ಗುರುದ್ವಾರದಲ್ಲಿ ರೈತ ಹುತಾತ್ಮರ ಸ್ಮರಣಾರ್ಥ ಮತ್ತು ಮೇಣದಬತ್ತಿಯ ಜಾಗರಣೆ ನಡೆಯಲಿದೆ. ಡಿಸೆಂಬರ್ 8 ರಂದು ಆಸ್ಟ್ರಿಯಾದ ವಿಯೆನ್ನಾದಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿದೆ” ಎಂದು ಎಸ್‌ಕೆಎಂ ತಿಳಿಸಿದೆ.

ಇದನ್ನೂ ಓದಿ: ನವೆಂಬರ್‌ 29 ರಂದು 60 ಟ್ರ್ಯಾಕ್ಟರ್‌ಗಳಲ್ಲಿ ಸಂಸತ್ತಿಗೆ ಮೆರವಣಿಗೆ: ರಾಕೇಶ್ ಟಿಕಾಯತ್

ಕರ್ನಾಟಕ: ನವೆಂಬರ್ 26 ರಾಜ್ಯದ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳ ಬಂದ್

ಕೇಂದ್ರ ಸರ್ಕಾರ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಾಪಸ್ ತೆಗೆದುಕೊಳ್ಳುವುದಾಗಿ ಘೋಷಿಸಿದೆ. ಆದರೆ ಕೇಂದ್ರಕ್ಕೆ ಅನುಗುಣವಾಗಿ ಕರ್ನಾಟಕ ರಾಜ್ಯವು ಎಪಿಎಂಸಿ ಮತ್ತು ಭೂಸುಧಾರಣ ಕಾಯ್ದೆಗೆ ತಂದಿರುವ ತಿದ್ದುಪಡಿಗಳನ್ನು ವಾಪಸ್ ಪಡೆದುಕೊಳ್ಳಬೇಕೆಂದು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹಿಸಿದೆ. ಅದಕ್ಕಾಗಿ ಇಂದು ರಾಜ್ಯದ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡಿ ಪ್ರತಿಭಟಿಸಲು ಕರೆ ನೀಡಿದೆ.

ಬೆಂಗಳೂರಿನ ಹೊಸಕೋಟೆ, ದೇವನಹಳ್ಳಿ ಬಳಿ ಹೆದ್ದಾರಿ ಬಂದ್ ಹೋರಾಟ ನಡೆಯಲಿದೆ. ಅಲ್ಲದೆ ರಾಮನಗರ, ಮಂಡ್ಯ, ರಾಯಚೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಹೆದ್ದಾರಿ ಬಂದ್ ಹೋರಾಟ ನಡೆಯಲಿದೆ ರೈತ ಮುಖಂಡರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯಾಧ್ಯಕ್ಷರಾದ ಕೋಡಿಹಳ್ಳಿ ಚಂದ್ರಶೇಖರ್‌ರವರು ಮಾತನಾಡಿ, “ಕೇಂದ್ರದ ಕರಾಳ ಕಾಯ್ದೆಗಳು ಸಂಸತ್ತಿನಲ್ಲಿ ರದ್ದುಗೊಳ್ಳಬೇಕಿದೆ. ಜೊತೆಗೆ ಎಂಎಸ್‌ಪಿ ಜಾರಿಗೆ ಕಾನೂನು ಬೇಕೆಂದು ಆಗ್ರಹಿಸಿ ಚಳವಳಿ ಮುಂದುವರೆಯಲಿದೆ. ಕರ್ನಾಟಕ ಸರ್ಕಾರ ತಿದ್ದುಪಡಿ ಮಾಡಿರುವ ಮೂರು ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ನವೆಂಬರ್ 26 ರಂದು ಹೆದ್ದಾರಿ ಬಂದ್ ನಡೆಯಲಿದೆ. ಸಾರ್ವಜನಿಕರು ಅಂದು ಪ್ರಯಾಣ ಮಾಡದೇ ರೈತ ಹೋರಾಟಕ್ಕೆ ಬೆಂಬಲಿಸಿಬೇಕು” ಎಂದು ಮನವಿ ಮಾಡಿದ್ದಾರೆ.

ಬೆಂಗಳೂರಿನಿಂದ ಶ್ರೀರಂಗಪಟ್ಟಣದ ಕಡೆಗೆ ಈಗಾಗಲೇ ಬೈಕ್ ರ್‍ಯಾಲಿ ನಡೆಯುತ್ತಿದೆ.

ಇದನ್ನೂ ಓದಿ: ಎಂಸ್‌ಪಿಯತ್ತ ರೈತರ ಚಿತ್ತ: ದೆಹಲಿ ಗಡಿಗಳತ್ತ ಮುನ್ನುಗ್ಗುತ್ತಿರುವ ಪ್ರತಿಭಟನಾಕಾರರ ದಂಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...