Homeಕರೋನಾ ತಲ್ಲಣಸಂಸದರು, ಸಚಿವರ ಕಾರು ಖರೀದಿಯ ಹಣ ಹೆಚ್ಚಿಸಿದ ಯಡಿಯೂರಪ್ಪ ಸರ್ಕಾರ!

ಸಂಸದರು, ಸಚಿವರ ಕಾರು ಖರೀದಿಯ ಹಣ ಹೆಚ್ಚಿಸಿದ ಯಡಿಯೂರಪ್ಪ ಸರ್ಕಾರ!

ಕೊರೊನಾದಿಂದ ರಾಜ್ಯದ ಜನರು ಸಂಕಷ್ಟಕ್ಕೆ ಈಡಾಗಿದ್ದಾರೆ. ಬೆಲೆ ಏರಿಕೆ ಜನ ಸಾಮಾನ್ಯರನ್ನು ಹಿಂಸಿಸುತ್ತಿದೆ. ಇಂತಹ ಸಂದರ್ಭದಲ್ಲಿ ಯಡಿಯೂರಪ್ಪ ಸರ್ಕಾರ ಕಾರು ಖರೀದಿಯ ಮೊತ್ತ ಹೆಚ್ಚಿಸಿದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗ ಮತ್ತು ಆರ್ಥಿಕ ಬಿಕ್ಕಟ್ಟಿನಿಂದ ಇಡೀ ವಿಶ್ವವೇ ತಲ್ಲಣಿಸಿದೆ. ರಾಜ್ಯ ಕೂಡ ಆರ್ಥಿಕ ಬಿಕ್ಕಟಿನಲ್ಲಿದೆ ಎಂದು ಸರ್ಕಾರ ಹೇಳಿಕೊಂಡಿದೆ . ಈ ನಡುವೆಯೇ ಕರ್ನಾಟಕ ಸರ್ಕಾರ ತನ್ನ 32 ಮಂತ್ರಿಗಳು ಮತ್ತು 28 ಸಂಸದರಿಗೆ ಕಾರು ಖರೀದಿಸಲು ನೀಡುತ್ತಿದ್ದ ಹಣವನ್ನು 23 ಲಕ್ಷಕ್ಕೆ ಏರಿಕೆ ಮಾಡಿದೆ.

ಸಿಬ್ಬಂದಿ ಮತ್ತು ಆಡಳಿತ ಸೇವೆಗಳ ಇಲಾಖೆ (ಡಿಪಿಎಆರ್) ಹೊರಡಿಸಿರುವ ಆದೇಶದ ಪ್ರಕಾರ, ರಾಜ್ಯದ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಮಂತ್ರಿಗಳು ಮತ್ತು ಸಂಸದರಿಗೆ ವಾಹನಗಳನ್ನು ಖರೀದಿಸುವ ಭತ್ಯೆಯನ್ನು 22 ಲಕ್ಷ ರೂ.ಗಳಿಂದ 23 ಲಕ್ಷ ರೂ.ಗೆ ಹೆಚ್ಚಿಸಿದೆ.

ಕೊರೊನಾ ಸಂಕಷ್ಟದಿಂದ ಈಗಾಗಲೇ ರಾಜ್ಯದ ಜನರು ಸಂಕಷ್ಟಕ್ಕೆ ಈಡಾಗಿದ್ದಾರೆ. ಬೆಲೆ ಏರಿಕೆ ಎಂಬುದು ಜನ ಸಾಮಾನ್ಯರನ್ನು ಹಿಂಸಿಸುತ್ತಿದೆ. ಇಂತಹ ಸಂದರ್ಭದಲ್ಲಿ ಯಡಿಯೂರಪ್ಪ ಸರ್ಕಾರ ಕಾರು ಖರೀದಿಯ ಮೊತ್ತವನ್ನು ಹೆಚ್ಚಿಸಿದೆ. ಕಾರು ಖರೀದಿಗೆ ಮೊತ್ತವನ್ನು ಹೆಚ್ಚು ಮಾಡಬೇಕೆಂದು ಸಂಸದರು, ಶಾಸಕರು ಒತ್ತಡ ಹೇರಿದ್ದ ಹಿನ್ನೆಲೆ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಸ್ಮಾರ್ಟ್‌ ಸಿಟಿ ನಿರ್ಮಾಣ, ನದಿಗಳನ್ನು ಸ್ವಚ್ಚಗೊಳಿಸುವುದು ಯಾವಾಗ? ಬಿಜೆಪಿ ಉತ್ತರಿಸಲಿ: ಅಖಿಲೇಶ್

ಸರ್ಕಾರದ ಈ ಕ್ರಮವನ್ನು ವಿರೋಧ ಪಕ್ಷಗಳು ಟೀಕಿಸಿವೆ. ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ’ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಒಂದು ವರ್ಷಕ್ಕೆ ನಿರ್ಧಾರವನ್ನು ಮುಂದೂಡಬೇಕಾಗಿತ್ತು, ಸರ್ಕಾರ ಈಗಾಗಲೇ 85,000 ಕೋಟಿ ರೂ.ಗಳ ಸಾಲವನ್ನು ತೆಗೆದುಕೊಂಡಿದೆ’ ಎಂದಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೆಖಿಸಿದೆ.

ಇನ್ನು ನಿಯಮಗಳ ಪ್ರಕಾರ, ಮಂತ್ರಿಗಳು ಅಥವಾ ಚುನಾಯಿತ ಪ್ರತಿನಿಧಿಗಳು ತಮ್ಮ ಕಾರುಗಳನ್ನು ಒಂದು ಲಕ್ಷ ಕಿ.ಮೀ ಓಟವನ್ನು ಪೂರ್ಣಗೊಳಿಸಿದ ನಂತರ ಅಥವಾ ಖರೀದಿಸಿದ ಏಳು ವರ್ಷಗಳ ನಂತರ ಮಾತ್ರ ಬದಲಾಯಿಸಬಹುದು. ಅದರ ನಂತರ, ಈ ಕಾರನ್ನು ಸಾಮಾನ್ಯವಾಗಿ ಜಿಲ್ಲಾ ಕೇಂದ್ರಗಳಲ್ಲಿ ಇರಿಸಲಾಗುತ್ತದೆ. ವಿಐಪಿಗಳು ಜಿಲ್ಲೆಗಳಿಗೆ ಭೇಟಿ ನೀಡುವಾಗ ಅವರ ಪ್ರಯಾಣದ ಅವಶ್ಯಕತೆಗಳಿಗಾಗಿ ಇವುಗಳನ್ನು ಬಳಸಲಾಗುತ್ತದೆ.

ಈ ವರ್ಷದ ಆರಂಭದಲ್ಲಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಂದಾಜು 33 ಲಕ್ಷ ರೂ ಬೆಲೆಬಾಳುವ ಟೊಯೋಟಾ ಫಾರ್ಚೂನರ್ ಎಂಬ ಐಷಾರಾಮಿ ಕಾರು ಖರೀದಿಸಿದ್ದಾರೆ. ಜೆಡಿಎಸ್ ವರಿಷ್ಠ ಹಾಗೂ ರಾಜ್ಯಸಭಾ ಸದಸ್ಯ ದೇವೇಗೌಡರು ರಾಜ್ಯಸಭಾ ಸದಸ್ಯರಾದ ನಂತರ ರಾಜ್ಯ ಸರ್ಕಾರ 60 ಲಕ್ಷ ರೂ. ಬೆಲೆಯ ವೋಲ್ವೋ ಹೊಸ ಕಾರನ್ನು ಖರೀದಿಸಿ ನೀಡಿದೆ.

ಸಾಂಕ್ರಾಮಿಕ ರೋಗ ಕೊರೊನಾದಿಂದ ರಾಜ್ಯದ ಆರ್ಥಿಕ ಸ್ಥಿತಿ ನೆನೆಗುದಿಗೆ ಬಿದ್ದಿದೆ. ಇದರ ನೆಪದಲ್ಲಿ ರಾಜ್ಯದಲ್ಲಿ ಅನೇಕ ಮೂಲಭೂತ ಅಭಿವೃದ್ಧಿ ಕಾರ್ಯಗಳಿಗೂ ಅನುದಾನ ಕಡಿತಗೊಳಿಸಲಾಗಿದೆ. ಆದರೆ ಜನಪ್ರತಿನಿಧಿಗಳ ದುಂದುವೆಚ್ಚಕ್ಕೆ ಮಾತ್ರ ಕಡಿವಾಣ ಬಿದ್ದಿಲ್ಲ.


ಇದನ್ನೂ ಓದಿ: ರಾಜಕೀಯವಾಗಿ ಮಾತ್ರವಲ್ಲ, ಸಾಮಾಜಿಕವಾಗಿಯೂ ಪ್ರಜಾಪ್ರಭುತ್ವ ಇರಬೇಕು – ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...