Homeಕರ್ನಾಟಕಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಯಡಿಯೂರಪ್ಪ: ಸಿದ್ದರಾಮಯ್ಯ

ಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಯಡಿಯೂರಪ್ಪ: ಸಿದ್ದರಾಮಯ್ಯ

ಪೊಲೀಸ್ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡು ಮಾಧ್ಯಮ ಕ್ಷೇತ್ರವನ್ನು ತಮ್ಮ ಬೆರಳ ತುದಿಯಲ್ಲಿ ನಿಯಂತ್ರಿಸುವ ಅಪಾಯಕಾರಿ ಹಂತಕ್ಕೆ ಸೂಪರ್ ಸಿಎಂ ಆಗಿರುವ ವಿಜಯೇಂದ್ರ ಇಳಿದಿರುವುದು ಬಿಜೆಪಿಯ ಹೊಸ ಆಡಳಿತ ವೈಖರಿ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಮಗ, ಮೊಮ್ಮಗ ಸೇರಿದಂತೆ ತನ್ನ ಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಕ್ಷಣ ರಾಜೀನಾಮೆ ನೀಡಬೇಕು. ಈ ಇಡೀ ಹಗರಣದ ಬಗ್ಗೆ ನ್ಯಾಯಾಲಯದ ನಿಗಾದಲ್ಲಿ ತನಿಖೆಗೆ ವಿಶೇಷ ತನಿಖಾದಳವನ್ನು ರಚಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

”‘ನಾ ಖಾವುಂಗಾ ನಾ ಖಾನೆ ದೂಂಗಾ’ ಎನ್ನುತ್ತಲೇ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರ ಈ ಘೋಷಣೆಯನ್ನು ‘ಮೈ ಖಾವುಂಗಾ ಔರ್ ಖಾನೆ ದೂಂಗಾ’ ಎಂದು ತಕ್ಷಣ ಬದಲಾಯಿಸಿಕೊಳ್ಳುವುದು ಒಳಿತು. ಈ ಭ್ರಷ್ಟಾಚಾರದ ಹಣದಲ್ಲಿ ತನ್ನ ಪಾಲೆಷ್ಟು ಎನ್ನುವುದನ್ನು ಕೂಡಾ ನರೇಂದ್ರ ಮೋದಿಯವರು ತಿಳಿಸಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಆಗ ಉಳುವವನೆ ಭೂಮಿಯ ಒಡೆಯ, ಈಗ ದುಡ್ಡಿದ್ದವನೇ ಭೂಮಿಯ ಒಡೆಯ: ಸಿದ್ದರಾಮಯ್ಯ ಆತಂಕ

”ಅವೈಜ್ಞಾನಿಕ ಜಿಎಸ್‌ಟಿ ಮೂಲಕ ದೇಶದ ಜನರನ್ನು ಲೂಟಿ ಮಾಡುತ್ತಿರುವ ನರೇಂದ್ರಮೋದಿಯವರ ಜೊತೆ ಪೈಪೋಟಿಗೆ ಇಳಿದಿರುವ ಬಿಎಸ್‌ವೈ ಅವರು ತನ್ನ ಮಗ ವಿಜಯೇಂದ್ರನ ಮೂಲಕ ವಿಎಸ್‌ಟಿ (ವಿಜಯೇಂದ್ರ ಸರ್ವಿಸ್ ಟ್ಯಾಕ್ಸ್) ಮೂಲಕ ರಾಜ್ಯದ ಬೊಕ್ಕಸವನ್ನು ಲೂಟಿ ಮಾಡುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

”ಮುಖ್ಯಮಂತ್ರಿಗಳ ಮಗ ಮತ್ತು ಮೊಮ್ಮಗ ಸೇರಿ ಟೆಂಡರ್ ಪ್ರಕ್ರಿಯೆ ಸಂಪೂರ್ಣ ಮುಗಿದಿರುವ ಕಾಮಗಾರಿಯಲ್ಲಿ ವರ್ಕ್ ಆರ್ಡರ್ ಕೊಡುವ ಹಂತದಲ್ಲಿ ಗುತ್ತಿಗೆದಾರರೊಬ್ಬರಿಂದ 17 ಕೋಟಿ ಹಣ ವಸೂಲಿಗೆ ಇಳಿದಿದ್ದು, ಈ ವ್ಯವಹಾರ ಕುದುರಿಸಿದ ಇಡೀ ಲಂಚಾವತಾರವನ್ನು ಮಾಧ್ಯಮ ಸಂಸ್ಥೆಯೊಂದು ಬಯಲಿಗೆಳೆದಿದೆ”

”ರಾಜಾರೋಷವಾಗಿ ಹಣ ಒಂದೆಡೆಯಿಂದ ಇನ್ನೊಂದು ಕಡೆಗೆ ವರ್ಗಾವಣೆಯಾಗಿದೆ. ಒಂದು ಮೂಲದ ಮಾಹಿತಿಯ ಪ್ರಕಾರ ರಾಜ್ಯಗಳ ಗಡಿ ದಾಟಿ ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಮುಂತಾದ ರಾಜ್ಯಗಳಲ್ಲಿರುವ ಕಂಪೆನಿಗಳಲ್ಲಿ ಹಣ ಹೂಡಿಕೆಯಾಗಿದೆ. ಇದನ್ನು ಮನಿ ಲಾಂಡರಿಂಗ್ ಕಾಯ್ದೆಯಡಿ ತನಿಖೆಗೊಳಪಡಿಸಬೇಕಾಗುತ್ತದೆ” ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ವಿಧಾನಸಭಾ ಅಧಿವೇಶನ ಲೈವ್‌; ಕೊರೊನಾ ನಿರ್ವಹಣೆ ಬಗ್ಗೆ ಸಿದ್ದರಾಮಯ್ಯ ಮಾತು

”ಇಡೀ ಭ್ರಷ್ಟಾಚಾರದಲ್ಲಿ ಹಣ ಯಾರ ಕೈಲಿ ಕೊಡಬೇಕು? ಯಾರನ್ನು ಸಂಪರ್ಕಿಸಬೇಕು? ಎಲ್ಲಿ-ಎಷ್ಟೊತ್ತಿಗೆ ಸಂಪರ್ಕಿಸಬೇಕು? ಬಾಕಿ ಹಣವನ್ನು ಯಾವಾಗ, ಯಾವ ಖಾತೆಗೆ ವರ್ಗಾಯಿಸಬೇಕು ಎನ್ನುವುದನ್ನೆಲ್ಲಾ ವಾಟ್ಸಾಪ್ನಲ್ಲಿ ಚರ್ಚಿಸಿದ್ದಾರೆ. ಯಡಿಯೂರಪ್ಪ ಅವರ ಮೊಮ್ಮಗ ತನ್ನ ಖಾತೆಗೆ ಹಣ ವರ್ಗಾಯಿಸಿಕೊಂಡಿರುವುದಕ್ಕೆ ಸ್ಪಷ್ಟ ಸಾಕ್ಷ್ಯಗಳಿವೆ” ಎಂದು ಅವರು ಹೇಳಿದ್ದಾರೆ.

”ಗುತ್ತಿಗೆದಾರರಿಗೆ ವರ್ಕ್ ಆರ್ಡರ್ ಕೊಡಲು ವಿಜಯೇಂದ್ರ ಹೆಸರಲ್ಲಿ ಬಿಡಿಎ ಕಮಿಷನರ್ ಪ್ರಕಾಶ್ ಗುತ್ತಿಗೆದಾರರಿಂದ ರೂ.12 ಕೋಟಿ ಕೇಳುತ್ತಾರೆ. ಈ ಹಣ 37 ಕ್ರೆಸೆಂಟ್ ಹೋಟೆಲಿನ ಮಾಲೀಕ ರವಿ ಎನ್ನುವವರ ಮೂಲಕ ಸಂದಾಯವಾಗಿದ್ದನ್ನು ವಿಜಯೆಂದ್ರ ಅವರೇ ಟಿವಿ ಚಾನೆಲ್‌ನ ಸ್ಟ್ರಿಂಗ್ ಆಪರೇಷನ್‌ನಲ್ಲಿ ಒಪ್ಪಿಕೊಂಡಿದ್ದಾರೆ” ಎಂದು ಅವರು ಹೇಳಿದ್ದಾರೆ.

”ಸಿಎಂ ಮತ್ತು ಸೂಪರ್ ಸಿಎಂ ಹೆಸರಲ್ಲಿ 12 ಕೋಟಿ ರೂಪಾಯಿ ಸಂದಾಯ ಆಗಿರುವುದನ್ನು ಒಪ್ಪಿಕೊಂಡ ಬಳಿಕವೂ ಆ ಐಎಎಸ್ ಅಧಿಕಾರಿ ಮತ್ತು ಹೋಟೆಲ್ ಮಾಲೀಕರ ವಿರುದ್ಧ ದೂರು ದಾಖಲಿಸದಿರುವುದು, ಕ್ರಮ ಕೈಗೊಳ್ಳದಿರುವುದು, ಅಧಿಕಾರಿಯನ್ನು ಸೇವೆಯಿಂದ ವಜಾಗೊಳಿಸದೆ ಆಶ್ರಯ ನೀಡಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೂರೇ ದಿನಕ್ಕೆ ಅಧಿವೇಶನ ಮೊಟಕುಗೊಳಿಸಲು ಮುಂದಾದ ಸಿಎಂ ಬಿಎಸ್‌ವೈ: ಸಿದ್ದರಾಮಯ್ಯ ವಿರೋಧ

”ಮೊದಲು ಸಂದಾಯವಾಗಿರುವ ರೂ.12 ಕೋಟಿ ತನ್ನ ಕೈಗೆ ಸಿಗದೆ ಅಧಿಕಾರಿ ಕೈಗೆ ಹೋಗಿದೆ. ಆದ್ದರಿಂದ ಒಂದೋ ಐಎಎಸ್ ಅಧಿಕಾರಿ ಕೈಯಿಂದ ಆ 12 ಕೋಟಿ ವಸೂಲಿ ಮಾಡಿ ಒಪ್ಪಿಸು, ಇಲ್ಲವೇ 12 ಕೋಟಿ ಜತೆಗೆ ಇನ್ನೂ 5 ಕೋಟಿ ಸೇರಿಸಿ ತಂದು ಕೊಡಬೇಕು. ಇಲ್ಲದಿದ್ದರೆ ಕೆಲಸ ನಿಲ್ಲಿಸು ವಿಜಯೇಂದ್ರ ಬೆದರಿಸಿದ್ದಾರೆ.”

“ಎರಡನೇ ಹಂತದಲ್ಲಿ ಗುತ್ತಿಗೆದಾರರಿಂದ ವಿಎಸ್‌ಟಿ ಸಂಗ್ರಹಿಸಲು ಮುಂದಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೊಮ್ಮಗ ಶಶಿಧರ್ ಮರಡಿ ಮತ್ತು ಗುತ್ತಿಗೆದಾರರ ನಡುವಿನ ವಾಟ್ಸಾಪ್ ಚಾಟ್ ಅನ್ನೂ ಮಾಧ್ಯಮ ಸಂಸ್ಥೆ ಬಹಿರಂಗಗೊಳಿಸಿದೆ. ಲಂಚದ ರೂ.7.4 ಕೋಟಿಯನ್ನು ತನ್ನ ಖಾತೆಗೆ ಆರ್‌ಟಿಜಿಎಸ್ ಮೂಲಕ ಜಮೆ ಮಾಡಿಸಿಕೊಂಡ ಶಶಿಧರ್ ಮರಡಿ, ಉಳಿದ ನಗದು ಹಣವನ್ನು ಮುಖ್ಯಮಂತ್ರಿಗಳ ಅಳಿಯನಿಗೆ ಹುಬ್ಬಳ್ಳಿಯಲ್ಲಿ ತಲುಪಿಸುವಂತೆ ಹೇಳಿರುವ ವಾಟ್ಸಾಪ್ ಚಾಟ್ ವಿವರವನ್ನು ಟಿವಿ ಚಾನೆಲ್ ಬಹಿರಂಗಪಡಿಸಿದೆ” ಎಂದು ಅವರು ಹೇಳಿದ್ದಾರೆ.

”ಈ ಭ್ರಷ್ಟಾಚಾರವನ್ನು ಬಯಲಿಗೆಳೆದ ಮಾಧ್ಯಮ ಸಂಸ್ಥೆಯ ಮುಖ್ಯಸ್ಥರು ಮತ್ತು ಪತ್ರಕರ್ತರಿಗೆ ಜೀವ ಬೆದರಿಕೆಯೊಡ್ಡಲಾಗುತ್ತಿದೆ. ಕಂಗನಾ ರಣಾವತ್ ಎಂಬ ನಟಿಗೆ ಬೆದರಿಕೆ ಇದೆಯೆಂದು ’ವೈ’ ದರ್ಜೆ ಭದ್ರತೆ ನೀಡಲಾಗುತ್ತದೆ. ಹಗರಣವನ್ನು ಬಯಲಿಗೆಳೆದ ಪತ್ರಕರ್ತರಿಗೆ ಜೀವ ಬೆದರಿಕೆ ಹಾಕಲಾಗುತ್ತಿದೆ. ಇದು ಪ್ರಜಾಪ್ರಭುತ್ವವೋ, ರಾಕ್ಷಸ ಪ್ರಭುತ್ವವೋ” ಎಂದಿರುವ ಸಿದ್ದರಾಮಯ್ಯ, “’ಹೋಂ ನನ್ನ ಕೈಯಲ್ಲಿದೆ’ ಎನ್ನುವ ಮೂಲಕ ಗೃಹ ಇಲಾಖೆಯನ್ನು , ಪೊಲೀಸ್ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡು ಮಾಧ್ಯಮ ಕ್ಷೇತ್ರವನ್ನು ತಮ್ಮ ಬೆರಳ ತುದಿಯಲ್ಲಿ ನಿಯಂತ್ರಿಸುವ ಅಪಾಯಕಾರಿ ಹಂತಕ್ಕೆ ಸೂಪರ್ ಸಿಎಂ ಇಳಿದಿರುವುದು ಭಾರತೀಯ ಜನತಾ ಪಕ್ಷದ ಹೊಸ ಆಡಳಿತ ವೈಖರಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಸ್ವಾರ್ಥಿ ಮತ್ತು ಎಡಬಿಡಂಗಿತನದ ರಾಜಕಾರಣಿ: ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮ್ಮ ರಾಜ್ಯದ ಮುಖ್ಯ ಮಂತ್ರಿ ಮತ್ತು ಅವರ ಕುಟುಂಬ ವರ್ಗದ ಬಗ್ಗೆ ಈ ಮಟ್ಟದ ಭ್ರಷ್ಟಾಚಾರದ (ಬಹುಷಃ ದಾಖಲೆಯ ಸಮೇತ ) ಆರೋಪವಿದ್ದರೂ, ನಮ್ಮ ನಾಡಿನ ಸಾಮಾಜಿಕ ಕಾರ್ಯಕರ್ತರು, ವಿಚಾರವಂತರು, ಪತ್ರಕರ್ತರು ಹಾಗೂ ವಿರೋಧ ಪಕ್ಷದವರೂ ತೆಪ್ಪಗಿರುವದು ಏಕೆ?

    ಪತ್ರಿಕಾ ಹೇಳಿಕೆ ಹಾಗೂ ಸಾಮಾಜಿಕ ಜಾಲತಾನ ದ ಹೊರತಾಗಿ ಬೇರೆ ಏನೂ ಮಾಡುತ್ತಿಲ್ಲವಲ್ಲಾ…

    ಎಲ್ಲರ ಮನೆ ದೋಸೇನೂ ತೂತೇ ಎನ್ನುವದು ಇಲ್ಲೂ ನಿಜವೇ…

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...