Homeಕರ್ನಾಟಕಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಯಡಿಯೂರಪ್ಪ: ಸಿದ್ದರಾಮಯ್ಯ

ಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಯಡಿಯೂರಪ್ಪ: ಸಿದ್ದರಾಮಯ್ಯ

ಪೊಲೀಸ್ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡು ಮಾಧ್ಯಮ ಕ್ಷೇತ್ರವನ್ನು ತಮ್ಮ ಬೆರಳ ತುದಿಯಲ್ಲಿ ನಿಯಂತ್ರಿಸುವ ಅಪಾಯಕಾರಿ ಹಂತಕ್ಕೆ ಸೂಪರ್ ಸಿಎಂ ಆಗಿರುವ ವಿಜಯೇಂದ್ರ ಇಳಿದಿರುವುದು ಬಿಜೆಪಿಯ ಹೊಸ ಆಡಳಿತ ವೈಖರಿ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಮಗ, ಮೊಮ್ಮಗ ಸೇರಿದಂತೆ ತನ್ನ ಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಕ್ಷಣ ರಾಜೀನಾಮೆ ನೀಡಬೇಕು. ಈ ಇಡೀ ಹಗರಣದ ಬಗ್ಗೆ ನ್ಯಾಯಾಲಯದ ನಿಗಾದಲ್ಲಿ ತನಿಖೆಗೆ ವಿಶೇಷ ತನಿಖಾದಳವನ್ನು ರಚಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

”‘ನಾ ಖಾವುಂಗಾ ನಾ ಖಾನೆ ದೂಂಗಾ’ ಎನ್ನುತ್ತಲೇ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರ ಈ ಘೋಷಣೆಯನ್ನು ‘ಮೈ ಖಾವುಂಗಾ ಔರ್ ಖಾನೆ ದೂಂಗಾ’ ಎಂದು ತಕ್ಷಣ ಬದಲಾಯಿಸಿಕೊಳ್ಳುವುದು ಒಳಿತು. ಈ ಭ್ರಷ್ಟಾಚಾರದ ಹಣದಲ್ಲಿ ತನ್ನ ಪಾಲೆಷ್ಟು ಎನ್ನುವುದನ್ನು ಕೂಡಾ ನರೇಂದ್ರ ಮೋದಿಯವರು ತಿಳಿಸಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಆಗ ಉಳುವವನೆ ಭೂಮಿಯ ಒಡೆಯ, ಈಗ ದುಡ್ಡಿದ್ದವನೇ ಭೂಮಿಯ ಒಡೆಯ: ಸಿದ್ದರಾಮಯ್ಯ ಆತಂಕ

”ಅವೈಜ್ಞಾನಿಕ ಜಿಎಸ್‌ಟಿ ಮೂಲಕ ದೇಶದ ಜನರನ್ನು ಲೂಟಿ ಮಾಡುತ್ತಿರುವ ನರೇಂದ್ರಮೋದಿಯವರ ಜೊತೆ ಪೈಪೋಟಿಗೆ ಇಳಿದಿರುವ ಬಿಎಸ್‌ವೈ ಅವರು ತನ್ನ ಮಗ ವಿಜಯೇಂದ್ರನ ಮೂಲಕ ವಿಎಸ್‌ಟಿ (ವಿಜಯೇಂದ್ರ ಸರ್ವಿಸ್ ಟ್ಯಾಕ್ಸ್) ಮೂಲಕ ರಾಜ್ಯದ ಬೊಕ್ಕಸವನ್ನು ಲೂಟಿ ಮಾಡುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

”ಮುಖ್ಯಮಂತ್ರಿಗಳ ಮಗ ಮತ್ತು ಮೊಮ್ಮಗ ಸೇರಿ ಟೆಂಡರ್ ಪ್ರಕ್ರಿಯೆ ಸಂಪೂರ್ಣ ಮುಗಿದಿರುವ ಕಾಮಗಾರಿಯಲ್ಲಿ ವರ್ಕ್ ಆರ್ಡರ್ ಕೊಡುವ ಹಂತದಲ್ಲಿ ಗುತ್ತಿಗೆದಾರರೊಬ್ಬರಿಂದ 17 ಕೋಟಿ ಹಣ ವಸೂಲಿಗೆ ಇಳಿದಿದ್ದು, ಈ ವ್ಯವಹಾರ ಕುದುರಿಸಿದ ಇಡೀ ಲಂಚಾವತಾರವನ್ನು ಮಾಧ್ಯಮ ಸಂಸ್ಥೆಯೊಂದು ಬಯಲಿಗೆಳೆದಿದೆ”

”ರಾಜಾರೋಷವಾಗಿ ಹಣ ಒಂದೆಡೆಯಿಂದ ಇನ್ನೊಂದು ಕಡೆಗೆ ವರ್ಗಾವಣೆಯಾಗಿದೆ. ಒಂದು ಮೂಲದ ಮಾಹಿತಿಯ ಪ್ರಕಾರ ರಾಜ್ಯಗಳ ಗಡಿ ದಾಟಿ ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಮುಂತಾದ ರಾಜ್ಯಗಳಲ್ಲಿರುವ ಕಂಪೆನಿಗಳಲ್ಲಿ ಹಣ ಹೂಡಿಕೆಯಾಗಿದೆ. ಇದನ್ನು ಮನಿ ಲಾಂಡರಿಂಗ್ ಕಾಯ್ದೆಯಡಿ ತನಿಖೆಗೊಳಪಡಿಸಬೇಕಾಗುತ್ತದೆ” ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ವಿಧಾನಸಭಾ ಅಧಿವೇಶನ ಲೈವ್‌; ಕೊರೊನಾ ನಿರ್ವಹಣೆ ಬಗ್ಗೆ ಸಿದ್ದರಾಮಯ್ಯ ಮಾತು

”ಇಡೀ ಭ್ರಷ್ಟಾಚಾರದಲ್ಲಿ ಹಣ ಯಾರ ಕೈಲಿ ಕೊಡಬೇಕು? ಯಾರನ್ನು ಸಂಪರ್ಕಿಸಬೇಕು? ಎಲ್ಲಿ-ಎಷ್ಟೊತ್ತಿಗೆ ಸಂಪರ್ಕಿಸಬೇಕು? ಬಾಕಿ ಹಣವನ್ನು ಯಾವಾಗ, ಯಾವ ಖಾತೆಗೆ ವರ್ಗಾಯಿಸಬೇಕು ಎನ್ನುವುದನ್ನೆಲ್ಲಾ ವಾಟ್ಸಾಪ್ನಲ್ಲಿ ಚರ್ಚಿಸಿದ್ದಾರೆ. ಯಡಿಯೂರಪ್ಪ ಅವರ ಮೊಮ್ಮಗ ತನ್ನ ಖಾತೆಗೆ ಹಣ ವರ್ಗಾಯಿಸಿಕೊಂಡಿರುವುದಕ್ಕೆ ಸ್ಪಷ್ಟ ಸಾಕ್ಷ್ಯಗಳಿವೆ” ಎಂದು ಅವರು ಹೇಳಿದ್ದಾರೆ.

”ಗುತ್ತಿಗೆದಾರರಿಗೆ ವರ್ಕ್ ಆರ್ಡರ್ ಕೊಡಲು ವಿಜಯೇಂದ್ರ ಹೆಸರಲ್ಲಿ ಬಿಡಿಎ ಕಮಿಷನರ್ ಪ್ರಕಾಶ್ ಗುತ್ತಿಗೆದಾರರಿಂದ ರೂ.12 ಕೋಟಿ ಕೇಳುತ್ತಾರೆ. ಈ ಹಣ 37 ಕ್ರೆಸೆಂಟ್ ಹೋಟೆಲಿನ ಮಾಲೀಕ ರವಿ ಎನ್ನುವವರ ಮೂಲಕ ಸಂದಾಯವಾಗಿದ್ದನ್ನು ವಿಜಯೆಂದ್ರ ಅವರೇ ಟಿವಿ ಚಾನೆಲ್‌ನ ಸ್ಟ್ರಿಂಗ್ ಆಪರೇಷನ್‌ನಲ್ಲಿ ಒಪ್ಪಿಕೊಂಡಿದ್ದಾರೆ” ಎಂದು ಅವರು ಹೇಳಿದ್ದಾರೆ.

”ಸಿಎಂ ಮತ್ತು ಸೂಪರ್ ಸಿಎಂ ಹೆಸರಲ್ಲಿ 12 ಕೋಟಿ ರೂಪಾಯಿ ಸಂದಾಯ ಆಗಿರುವುದನ್ನು ಒಪ್ಪಿಕೊಂಡ ಬಳಿಕವೂ ಆ ಐಎಎಸ್ ಅಧಿಕಾರಿ ಮತ್ತು ಹೋಟೆಲ್ ಮಾಲೀಕರ ವಿರುದ್ಧ ದೂರು ದಾಖಲಿಸದಿರುವುದು, ಕ್ರಮ ಕೈಗೊಳ್ಳದಿರುವುದು, ಅಧಿಕಾರಿಯನ್ನು ಸೇವೆಯಿಂದ ವಜಾಗೊಳಿಸದೆ ಆಶ್ರಯ ನೀಡಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೂರೇ ದಿನಕ್ಕೆ ಅಧಿವೇಶನ ಮೊಟಕುಗೊಳಿಸಲು ಮುಂದಾದ ಸಿಎಂ ಬಿಎಸ್‌ವೈ: ಸಿದ್ದರಾಮಯ್ಯ ವಿರೋಧ

”ಮೊದಲು ಸಂದಾಯವಾಗಿರುವ ರೂ.12 ಕೋಟಿ ತನ್ನ ಕೈಗೆ ಸಿಗದೆ ಅಧಿಕಾರಿ ಕೈಗೆ ಹೋಗಿದೆ. ಆದ್ದರಿಂದ ಒಂದೋ ಐಎಎಸ್ ಅಧಿಕಾರಿ ಕೈಯಿಂದ ಆ 12 ಕೋಟಿ ವಸೂಲಿ ಮಾಡಿ ಒಪ್ಪಿಸು, ಇಲ್ಲವೇ 12 ಕೋಟಿ ಜತೆಗೆ ಇನ್ನೂ 5 ಕೋಟಿ ಸೇರಿಸಿ ತಂದು ಕೊಡಬೇಕು. ಇಲ್ಲದಿದ್ದರೆ ಕೆಲಸ ನಿಲ್ಲಿಸು ವಿಜಯೇಂದ್ರ ಬೆದರಿಸಿದ್ದಾರೆ.”

“ಎರಡನೇ ಹಂತದಲ್ಲಿ ಗುತ್ತಿಗೆದಾರರಿಂದ ವಿಎಸ್‌ಟಿ ಸಂಗ್ರಹಿಸಲು ಮುಂದಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೊಮ್ಮಗ ಶಶಿಧರ್ ಮರಡಿ ಮತ್ತು ಗುತ್ತಿಗೆದಾರರ ನಡುವಿನ ವಾಟ್ಸಾಪ್ ಚಾಟ್ ಅನ್ನೂ ಮಾಧ್ಯಮ ಸಂಸ್ಥೆ ಬಹಿರಂಗಗೊಳಿಸಿದೆ. ಲಂಚದ ರೂ.7.4 ಕೋಟಿಯನ್ನು ತನ್ನ ಖಾತೆಗೆ ಆರ್‌ಟಿಜಿಎಸ್ ಮೂಲಕ ಜಮೆ ಮಾಡಿಸಿಕೊಂಡ ಶಶಿಧರ್ ಮರಡಿ, ಉಳಿದ ನಗದು ಹಣವನ್ನು ಮುಖ್ಯಮಂತ್ರಿಗಳ ಅಳಿಯನಿಗೆ ಹುಬ್ಬಳ್ಳಿಯಲ್ಲಿ ತಲುಪಿಸುವಂತೆ ಹೇಳಿರುವ ವಾಟ್ಸಾಪ್ ಚಾಟ್ ವಿವರವನ್ನು ಟಿವಿ ಚಾನೆಲ್ ಬಹಿರಂಗಪಡಿಸಿದೆ” ಎಂದು ಅವರು ಹೇಳಿದ್ದಾರೆ.

”ಈ ಭ್ರಷ್ಟಾಚಾರವನ್ನು ಬಯಲಿಗೆಳೆದ ಮಾಧ್ಯಮ ಸಂಸ್ಥೆಯ ಮುಖ್ಯಸ್ಥರು ಮತ್ತು ಪತ್ರಕರ್ತರಿಗೆ ಜೀವ ಬೆದರಿಕೆಯೊಡ್ಡಲಾಗುತ್ತಿದೆ. ಕಂಗನಾ ರಣಾವತ್ ಎಂಬ ನಟಿಗೆ ಬೆದರಿಕೆ ಇದೆಯೆಂದು ’ವೈ’ ದರ್ಜೆ ಭದ್ರತೆ ನೀಡಲಾಗುತ್ತದೆ. ಹಗರಣವನ್ನು ಬಯಲಿಗೆಳೆದ ಪತ್ರಕರ್ತರಿಗೆ ಜೀವ ಬೆದರಿಕೆ ಹಾಕಲಾಗುತ್ತಿದೆ. ಇದು ಪ್ರಜಾಪ್ರಭುತ್ವವೋ, ರಾಕ್ಷಸ ಪ್ರಭುತ್ವವೋ” ಎಂದಿರುವ ಸಿದ್ದರಾಮಯ್ಯ, “’ಹೋಂ ನನ್ನ ಕೈಯಲ್ಲಿದೆ’ ಎನ್ನುವ ಮೂಲಕ ಗೃಹ ಇಲಾಖೆಯನ್ನು , ಪೊಲೀಸ್ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡು ಮಾಧ್ಯಮ ಕ್ಷೇತ್ರವನ್ನು ತಮ್ಮ ಬೆರಳ ತುದಿಯಲ್ಲಿ ನಿಯಂತ್ರಿಸುವ ಅಪಾಯಕಾರಿ ಹಂತಕ್ಕೆ ಸೂಪರ್ ಸಿಎಂ ಇಳಿದಿರುವುದು ಭಾರತೀಯ ಜನತಾ ಪಕ್ಷದ ಹೊಸ ಆಡಳಿತ ವೈಖರಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಸ್ವಾರ್ಥಿ ಮತ್ತು ಎಡಬಿಡಂಗಿತನದ ರಾಜಕಾರಣಿ: ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮ್ಮ ರಾಜ್ಯದ ಮುಖ್ಯ ಮಂತ್ರಿ ಮತ್ತು ಅವರ ಕುಟುಂಬ ವರ್ಗದ ಬಗ್ಗೆ ಈ ಮಟ್ಟದ ಭ್ರಷ್ಟಾಚಾರದ (ಬಹುಷಃ ದಾಖಲೆಯ ಸಮೇತ ) ಆರೋಪವಿದ್ದರೂ, ನಮ್ಮ ನಾಡಿನ ಸಾಮಾಜಿಕ ಕಾರ್ಯಕರ್ತರು, ವಿಚಾರವಂತರು, ಪತ್ರಕರ್ತರು ಹಾಗೂ ವಿರೋಧ ಪಕ್ಷದವರೂ ತೆಪ್ಪಗಿರುವದು ಏಕೆ?

    ಪತ್ರಿಕಾ ಹೇಳಿಕೆ ಹಾಗೂ ಸಾಮಾಜಿಕ ಜಾಲತಾನ ದ ಹೊರತಾಗಿ ಬೇರೆ ಏನೂ ಮಾಡುತ್ತಿಲ್ಲವಲ್ಲಾ…

    ಎಲ್ಲರ ಮನೆ ದೋಸೇನೂ ತೂತೇ ಎನ್ನುವದು ಇಲ್ಲೂ ನಿಜವೇ…

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...