Homeಕರ್ನಾಟಕಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಯಡಿಯೂರಪ್ಪ: ಸಿದ್ದರಾಮಯ್ಯ

ಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಯಡಿಯೂರಪ್ಪ: ಸಿದ್ದರಾಮಯ್ಯ

ಪೊಲೀಸ್ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡು ಮಾಧ್ಯಮ ಕ್ಷೇತ್ರವನ್ನು ತಮ್ಮ ಬೆರಳ ತುದಿಯಲ್ಲಿ ನಿಯಂತ್ರಿಸುವ ಅಪಾಯಕಾರಿ ಹಂತಕ್ಕೆ ಸೂಪರ್ ಸಿಎಂ ಆಗಿರುವ ವಿಜಯೇಂದ್ರ ಇಳಿದಿರುವುದು ಬಿಜೆಪಿಯ ಹೊಸ ಆಡಳಿತ ವೈಖರಿ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಮಗ, ಮೊಮ್ಮಗ ಸೇರಿದಂತೆ ತನ್ನ ಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಕ್ಷಣ ರಾಜೀನಾಮೆ ನೀಡಬೇಕು. ಈ ಇಡೀ ಹಗರಣದ ಬಗ್ಗೆ ನ್ಯಾಯಾಲಯದ ನಿಗಾದಲ್ಲಿ ತನಿಖೆಗೆ ವಿಶೇಷ ತನಿಖಾದಳವನ್ನು ರಚಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

”‘ನಾ ಖಾವುಂಗಾ ನಾ ಖಾನೆ ದೂಂಗಾ’ ಎನ್ನುತ್ತಲೇ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರ ಈ ಘೋಷಣೆಯನ್ನು ‘ಮೈ ಖಾವುಂಗಾ ಔರ್ ಖಾನೆ ದೂಂಗಾ’ ಎಂದು ತಕ್ಷಣ ಬದಲಾಯಿಸಿಕೊಳ್ಳುವುದು ಒಳಿತು. ಈ ಭ್ರಷ್ಟಾಚಾರದ ಹಣದಲ್ಲಿ ತನ್ನ ಪಾಲೆಷ್ಟು ಎನ್ನುವುದನ್ನು ಕೂಡಾ ನರೇಂದ್ರ ಮೋದಿಯವರು ತಿಳಿಸಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಆಗ ಉಳುವವನೆ ಭೂಮಿಯ ಒಡೆಯ, ಈಗ ದುಡ್ಡಿದ್ದವನೇ ಭೂಮಿಯ ಒಡೆಯ: ಸಿದ್ದರಾಮಯ್ಯ ಆತಂಕ

”ಅವೈಜ್ಞಾನಿಕ ಜಿಎಸ್‌ಟಿ ಮೂಲಕ ದೇಶದ ಜನರನ್ನು ಲೂಟಿ ಮಾಡುತ್ತಿರುವ ನರೇಂದ್ರಮೋದಿಯವರ ಜೊತೆ ಪೈಪೋಟಿಗೆ ಇಳಿದಿರುವ ಬಿಎಸ್‌ವೈ ಅವರು ತನ್ನ ಮಗ ವಿಜಯೇಂದ್ರನ ಮೂಲಕ ವಿಎಸ್‌ಟಿ (ವಿಜಯೇಂದ್ರ ಸರ್ವಿಸ್ ಟ್ಯಾಕ್ಸ್) ಮೂಲಕ ರಾಜ್ಯದ ಬೊಕ್ಕಸವನ್ನು ಲೂಟಿ ಮಾಡುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

”ಮುಖ್ಯಮಂತ್ರಿಗಳ ಮಗ ಮತ್ತು ಮೊಮ್ಮಗ ಸೇರಿ ಟೆಂಡರ್ ಪ್ರಕ್ರಿಯೆ ಸಂಪೂರ್ಣ ಮುಗಿದಿರುವ ಕಾಮಗಾರಿಯಲ್ಲಿ ವರ್ಕ್ ಆರ್ಡರ್ ಕೊಡುವ ಹಂತದಲ್ಲಿ ಗುತ್ತಿಗೆದಾರರೊಬ್ಬರಿಂದ 17 ಕೋಟಿ ಹಣ ವಸೂಲಿಗೆ ಇಳಿದಿದ್ದು, ಈ ವ್ಯವಹಾರ ಕುದುರಿಸಿದ ಇಡೀ ಲಂಚಾವತಾರವನ್ನು ಮಾಧ್ಯಮ ಸಂಸ್ಥೆಯೊಂದು ಬಯಲಿಗೆಳೆದಿದೆ”

”ರಾಜಾರೋಷವಾಗಿ ಹಣ ಒಂದೆಡೆಯಿಂದ ಇನ್ನೊಂದು ಕಡೆಗೆ ವರ್ಗಾವಣೆಯಾಗಿದೆ. ಒಂದು ಮೂಲದ ಮಾಹಿತಿಯ ಪ್ರಕಾರ ರಾಜ್ಯಗಳ ಗಡಿ ದಾಟಿ ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಮುಂತಾದ ರಾಜ್ಯಗಳಲ್ಲಿರುವ ಕಂಪೆನಿಗಳಲ್ಲಿ ಹಣ ಹೂಡಿಕೆಯಾಗಿದೆ. ಇದನ್ನು ಮನಿ ಲಾಂಡರಿಂಗ್ ಕಾಯ್ದೆಯಡಿ ತನಿಖೆಗೊಳಪಡಿಸಬೇಕಾಗುತ್ತದೆ” ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ವಿಧಾನಸಭಾ ಅಧಿವೇಶನ ಲೈವ್‌; ಕೊರೊನಾ ನಿರ್ವಹಣೆ ಬಗ್ಗೆ ಸಿದ್ದರಾಮಯ್ಯ ಮಾತು

”ಇಡೀ ಭ್ರಷ್ಟಾಚಾರದಲ್ಲಿ ಹಣ ಯಾರ ಕೈಲಿ ಕೊಡಬೇಕು? ಯಾರನ್ನು ಸಂಪರ್ಕಿಸಬೇಕು? ಎಲ್ಲಿ-ಎಷ್ಟೊತ್ತಿಗೆ ಸಂಪರ್ಕಿಸಬೇಕು? ಬಾಕಿ ಹಣವನ್ನು ಯಾವಾಗ, ಯಾವ ಖಾತೆಗೆ ವರ್ಗಾಯಿಸಬೇಕು ಎನ್ನುವುದನ್ನೆಲ್ಲಾ ವಾಟ್ಸಾಪ್ನಲ್ಲಿ ಚರ್ಚಿಸಿದ್ದಾರೆ. ಯಡಿಯೂರಪ್ಪ ಅವರ ಮೊಮ್ಮಗ ತನ್ನ ಖಾತೆಗೆ ಹಣ ವರ್ಗಾಯಿಸಿಕೊಂಡಿರುವುದಕ್ಕೆ ಸ್ಪಷ್ಟ ಸಾಕ್ಷ್ಯಗಳಿವೆ” ಎಂದು ಅವರು ಹೇಳಿದ್ದಾರೆ.

”ಗುತ್ತಿಗೆದಾರರಿಗೆ ವರ್ಕ್ ಆರ್ಡರ್ ಕೊಡಲು ವಿಜಯೇಂದ್ರ ಹೆಸರಲ್ಲಿ ಬಿಡಿಎ ಕಮಿಷನರ್ ಪ್ರಕಾಶ್ ಗುತ್ತಿಗೆದಾರರಿಂದ ರೂ.12 ಕೋಟಿ ಕೇಳುತ್ತಾರೆ. ಈ ಹಣ 37 ಕ್ರೆಸೆಂಟ್ ಹೋಟೆಲಿನ ಮಾಲೀಕ ರವಿ ಎನ್ನುವವರ ಮೂಲಕ ಸಂದಾಯವಾಗಿದ್ದನ್ನು ವಿಜಯೆಂದ್ರ ಅವರೇ ಟಿವಿ ಚಾನೆಲ್‌ನ ಸ್ಟ್ರಿಂಗ್ ಆಪರೇಷನ್‌ನಲ್ಲಿ ಒಪ್ಪಿಕೊಂಡಿದ್ದಾರೆ” ಎಂದು ಅವರು ಹೇಳಿದ್ದಾರೆ.

”ಸಿಎಂ ಮತ್ತು ಸೂಪರ್ ಸಿಎಂ ಹೆಸರಲ್ಲಿ 12 ಕೋಟಿ ರೂಪಾಯಿ ಸಂದಾಯ ಆಗಿರುವುದನ್ನು ಒಪ್ಪಿಕೊಂಡ ಬಳಿಕವೂ ಆ ಐಎಎಸ್ ಅಧಿಕಾರಿ ಮತ್ತು ಹೋಟೆಲ್ ಮಾಲೀಕರ ವಿರುದ್ಧ ದೂರು ದಾಖಲಿಸದಿರುವುದು, ಕ್ರಮ ಕೈಗೊಳ್ಳದಿರುವುದು, ಅಧಿಕಾರಿಯನ್ನು ಸೇವೆಯಿಂದ ವಜಾಗೊಳಿಸದೆ ಆಶ್ರಯ ನೀಡಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೂರೇ ದಿನಕ್ಕೆ ಅಧಿವೇಶನ ಮೊಟಕುಗೊಳಿಸಲು ಮುಂದಾದ ಸಿಎಂ ಬಿಎಸ್‌ವೈ: ಸಿದ್ದರಾಮಯ್ಯ ವಿರೋಧ

”ಮೊದಲು ಸಂದಾಯವಾಗಿರುವ ರೂ.12 ಕೋಟಿ ತನ್ನ ಕೈಗೆ ಸಿಗದೆ ಅಧಿಕಾರಿ ಕೈಗೆ ಹೋಗಿದೆ. ಆದ್ದರಿಂದ ಒಂದೋ ಐಎಎಸ್ ಅಧಿಕಾರಿ ಕೈಯಿಂದ ಆ 12 ಕೋಟಿ ವಸೂಲಿ ಮಾಡಿ ಒಪ್ಪಿಸು, ಇಲ್ಲವೇ 12 ಕೋಟಿ ಜತೆಗೆ ಇನ್ನೂ 5 ಕೋಟಿ ಸೇರಿಸಿ ತಂದು ಕೊಡಬೇಕು. ಇಲ್ಲದಿದ್ದರೆ ಕೆಲಸ ನಿಲ್ಲಿಸು ವಿಜಯೇಂದ್ರ ಬೆದರಿಸಿದ್ದಾರೆ.”

“ಎರಡನೇ ಹಂತದಲ್ಲಿ ಗುತ್ತಿಗೆದಾರರಿಂದ ವಿಎಸ್‌ಟಿ ಸಂಗ್ರಹಿಸಲು ಮುಂದಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೊಮ್ಮಗ ಶಶಿಧರ್ ಮರಡಿ ಮತ್ತು ಗುತ್ತಿಗೆದಾರರ ನಡುವಿನ ವಾಟ್ಸಾಪ್ ಚಾಟ್ ಅನ್ನೂ ಮಾಧ್ಯಮ ಸಂಸ್ಥೆ ಬಹಿರಂಗಗೊಳಿಸಿದೆ. ಲಂಚದ ರೂ.7.4 ಕೋಟಿಯನ್ನು ತನ್ನ ಖಾತೆಗೆ ಆರ್‌ಟಿಜಿಎಸ್ ಮೂಲಕ ಜಮೆ ಮಾಡಿಸಿಕೊಂಡ ಶಶಿಧರ್ ಮರಡಿ, ಉಳಿದ ನಗದು ಹಣವನ್ನು ಮುಖ್ಯಮಂತ್ರಿಗಳ ಅಳಿಯನಿಗೆ ಹುಬ್ಬಳ್ಳಿಯಲ್ಲಿ ತಲುಪಿಸುವಂತೆ ಹೇಳಿರುವ ವಾಟ್ಸಾಪ್ ಚಾಟ್ ವಿವರವನ್ನು ಟಿವಿ ಚಾನೆಲ್ ಬಹಿರಂಗಪಡಿಸಿದೆ” ಎಂದು ಅವರು ಹೇಳಿದ್ದಾರೆ.

”ಈ ಭ್ರಷ್ಟಾಚಾರವನ್ನು ಬಯಲಿಗೆಳೆದ ಮಾಧ್ಯಮ ಸಂಸ್ಥೆಯ ಮುಖ್ಯಸ್ಥರು ಮತ್ತು ಪತ್ರಕರ್ತರಿಗೆ ಜೀವ ಬೆದರಿಕೆಯೊಡ್ಡಲಾಗುತ್ತಿದೆ. ಕಂಗನಾ ರಣಾವತ್ ಎಂಬ ನಟಿಗೆ ಬೆದರಿಕೆ ಇದೆಯೆಂದು ’ವೈ’ ದರ್ಜೆ ಭದ್ರತೆ ನೀಡಲಾಗುತ್ತದೆ. ಹಗರಣವನ್ನು ಬಯಲಿಗೆಳೆದ ಪತ್ರಕರ್ತರಿಗೆ ಜೀವ ಬೆದರಿಕೆ ಹಾಕಲಾಗುತ್ತಿದೆ. ಇದು ಪ್ರಜಾಪ್ರಭುತ್ವವೋ, ರಾಕ್ಷಸ ಪ್ರಭುತ್ವವೋ” ಎಂದಿರುವ ಸಿದ್ದರಾಮಯ್ಯ, “’ಹೋಂ ನನ್ನ ಕೈಯಲ್ಲಿದೆ’ ಎನ್ನುವ ಮೂಲಕ ಗೃಹ ಇಲಾಖೆಯನ್ನು , ಪೊಲೀಸ್ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡು ಮಾಧ್ಯಮ ಕ್ಷೇತ್ರವನ್ನು ತಮ್ಮ ಬೆರಳ ತುದಿಯಲ್ಲಿ ನಿಯಂತ್ರಿಸುವ ಅಪಾಯಕಾರಿ ಹಂತಕ್ಕೆ ಸೂಪರ್ ಸಿಎಂ ಇಳಿದಿರುವುದು ಭಾರತೀಯ ಜನತಾ ಪಕ್ಷದ ಹೊಸ ಆಡಳಿತ ವೈಖರಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಸ್ವಾರ್ಥಿ ಮತ್ತು ಎಡಬಿಡಂಗಿತನದ ರಾಜಕಾರಣಿ: ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮ್ಮ ರಾಜ್ಯದ ಮುಖ್ಯ ಮಂತ್ರಿ ಮತ್ತು ಅವರ ಕುಟುಂಬ ವರ್ಗದ ಬಗ್ಗೆ ಈ ಮಟ್ಟದ ಭ್ರಷ್ಟಾಚಾರದ (ಬಹುಷಃ ದಾಖಲೆಯ ಸಮೇತ ) ಆರೋಪವಿದ್ದರೂ, ನಮ್ಮ ನಾಡಿನ ಸಾಮಾಜಿಕ ಕಾರ್ಯಕರ್ತರು, ವಿಚಾರವಂತರು, ಪತ್ರಕರ್ತರು ಹಾಗೂ ವಿರೋಧ ಪಕ್ಷದವರೂ ತೆಪ್ಪಗಿರುವದು ಏಕೆ?

    ಪತ್ರಿಕಾ ಹೇಳಿಕೆ ಹಾಗೂ ಸಾಮಾಜಿಕ ಜಾಲತಾನ ದ ಹೊರತಾಗಿ ಬೇರೆ ಏನೂ ಮಾಡುತ್ತಿಲ್ಲವಲ್ಲಾ…

    ಎಲ್ಲರ ಮನೆ ದೋಸೇನೂ ತೂತೇ ಎನ್ನುವದು ಇಲ್ಲೂ ನಿಜವೇ…

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....