Homeಕರ್ನಾಟಕಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಯಡಿಯೂರಪ್ಪ: ಸಿದ್ದರಾಮಯ್ಯ

ಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಯಡಿಯೂರಪ್ಪ: ಸಿದ್ದರಾಮಯ್ಯ

ಪೊಲೀಸ್ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡು ಮಾಧ್ಯಮ ಕ್ಷೇತ್ರವನ್ನು ತಮ್ಮ ಬೆರಳ ತುದಿಯಲ್ಲಿ ನಿಯಂತ್ರಿಸುವ ಅಪಾಯಕಾರಿ ಹಂತಕ್ಕೆ ಸೂಪರ್ ಸಿಎಂ ಆಗಿರುವ ವಿಜಯೇಂದ್ರ ಇಳಿದಿರುವುದು ಬಿಜೆಪಿಯ ಹೊಸ ಆಡಳಿತ ವೈಖರಿ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಮಗ, ಮೊಮ್ಮಗ ಸೇರಿದಂತೆ ತನ್ನ ಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಕ್ಷಣ ರಾಜೀನಾಮೆ ನೀಡಬೇಕು. ಈ ಇಡೀ ಹಗರಣದ ಬಗ್ಗೆ ನ್ಯಾಯಾಲಯದ ನಿಗಾದಲ್ಲಿ ತನಿಖೆಗೆ ವಿಶೇಷ ತನಿಖಾದಳವನ್ನು ರಚಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

”‘ನಾ ಖಾವುಂಗಾ ನಾ ಖಾನೆ ದೂಂಗಾ’ ಎನ್ನುತ್ತಲೇ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರ ಈ ಘೋಷಣೆಯನ್ನು ‘ಮೈ ಖಾವುಂಗಾ ಔರ್ ಖಾನೆ ದೂಂಗಾ’ ಎಂದು ತಕ್ಷಣ ಬದಲಾಯಿಸಿಕೊಳ್ಳುವುದು ಒಳಿತು. ಈ ಭ್ರಷ್ಟಾಚಾರದ ಹಣದಲ್ಲಿ ತನ್ನ ಪಾಲೆಷ್ಟು ಎನ್ನುವುದನ್ನು ಕೂಡಾ ನರೇಂದ್ರ ಮೋದಿಯವರು ತಿಳಿಸಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಆಗ ಉಳುವವನೆ ಭೂಮಿಯ ಒಡೆಯ, ಈಗ ದುಡ್ಡಿದ್ದವನೇ ಭೂಮಿಯ ಒಡೆಯ: ಸಿದ್ದರಾಮಯ್ಯ ಆತಂಕ

”ಅವೈಜ್ಞಾನಿಕ ಜಿಎಸ್‌ಟಿ ಮೂಲಕ ದೇಶದ ಜನರನ್ನು ಲೂಟಿ ಮಾಡುತ್ತಿರುವ ನರೇಂದ್ರಮೋದಿಯವರ ಜೊತೆ ಪೈಪೋಟಿಗೆ ಇಳಿದಿರುವ ಬಿಎಸ್‌ವೈ ಅವರು ತನ್ನ ಮಗ ವಿಜಯೇಂದ್ರನ ಮೂಲಕ ವಿಎಸ್‌ಟಿ (ವಿಜಯೇಂದ್ರ ಸರ್ವಿಸ್ ಟ್ಯಾಕ್ಸ್) ಮೂಲಕ ರಾಜ್ಯದ ಬೊಕ್ಕಸವನ್ನು ಲೂಟಿ ಮಾಡುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

”ಮುಖ್ಯಮಂತ್ರಿಗಳ ಮಗ ಮತ್ತು ಮೊಮ್ಮಗ ಸೇರಿ ಟೆಂಡರ್ ಪ್ರಕ್ರಿಯೆ ಸಂಪೂರ್ಣ ಮುಗಿದಿರುವ ಕಾಮಗಾರಿಯಲ್ಲಿ ವರ್ಕ್ ಆರ್ಡರ್ ಕೊಡುವ ಹಂತದಲ್ಲಿ ಗುತ್ತಿಗೆದಾರರೊಬ್ಬರಿಂದ 17 ಕೋಟಿ ಹಣ ವಸೂಲಿಗೆ ಇಳಿದಿದ್ದು, ಈ ವ್ಯವಹಾರ ಕುದುರಿಸಿದ ಇಡೀ ಲಂಚಾವತಾರವನ್ನು ಮಾಧ್ಯಮ ಸಂಸ್ಥೆಯೊಂದು ಬಯಲಿಗೆಳೆದಿದೆ”

”ರಾಜಾರೋಷವಾಗಿ ಹಣ ಒಂದೆಡೆಯಿಂದ ಇನ್ನೊಂದು ಕಡೆಗೆ ವರ್ಗಾವಣೆಯಾಗಿದೆ. ಒಂದು ಮೂಲದ ಮಾಹಿತಿಯ ಪ್ರಕಾರ ರಾಜ್ಯಗಳ ಗಡಿ ದಾಟಿ ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಮುಂತಾದ ರಾಜ್ಯಗಳಲ್ಲಿರುವ ಕಂಪೆನಿಗಳಲ್ಲಿ ಹಣ ಹೂಡಿಕೆಯಾಗಿದೆ. ಇದನ್ನು ಮನಿ ಲಾಂಡರಿಂಗ್ ಕಾಯ್ದೆಯಡಿ ತನಿಖೆಗೊಳಪಡಿಸಬೇಕಾಗುತ್ತದೆ” ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ವಿಧಾನಸಭಾ ಅಧಿವೇಶನ ಲೈವ್‌; ಕೊರೊನಾ ನಿರ್ವಹಣೆ ಬಗ್ಗೆ ಸಿದ್ದರಾಮಯ್ಯ ಮಾತು

”ಇಡೀ ಭ್ರಷ್ಟಾಚಾರದಲ್ಲಿ ಹಣ ಯಾರ ಕೈಲಿ ಕೊಡಬೇಕು? ಯಾರನ್ನು ಸಂಪರ್ಕಿಸಬೇಕು? ಎಲ್ಲಿ-ಎಷ್ಟೊತ್ತಿಗೆ ಸಂಪರ್ಕಿಸಬೇಕು? ಬಾಕಿ ಹಣವನ್ನು ಯಾವಾಗ, ಯಾವ ಖಾತೆಗೆ ವರ್ಗಾಯಿಸಬೇಕು ಎನ್ನುವುದನ್ನೆಲ್ಲಾ ವಾಟ್ಸಾಪ್ನಲ್ಲಿ ಚರ್ಚಿಸಿದ್ದಾರೆ. ಯಡಿಯೂರಪ್ಪ ಅವರ ಮೊಮ್ಮಗ ತನ್ನ ಖಾತೆಗೆ ಹಣ ವರ್ಗಾಯಿಸಿಕೊಂಡಿರುವುದಕ್ಕೆ ಸ್ಪಷ್ಟ ಸಾಕ್ಷ್ಯಗಳಿವೆ” ಎಂದು ಅವರು ಹೇಳಿದ್ದಾರೆ.

”ಗುತ್ತಿಗೆದಾರರಿಗೆ ವರ್ಕ್ ಆರ್ಡರ್ ಕೊಡಲು ವಿಜಯೇಂದ್ರ ಹೆಸರಲ್ಲಿ ಬಿಡಿಎ ಕಮಿಷನರ್ ಪ್ರಕಾಶ್ ಗುತ್ತಿಗೆದಾರರಿಂದ ರೂ.12 ಕೋಟಿ ಕೇಳುತ್ತಾರೆ. ಈ ಹಣ 37 ಕ್ರೆಸೆಂಟ್ ಹೋಟೆಲಿನ ಮಾಲೀಕ ರವಿ ಎನ್ನುವವರ ಮೂಲಕ ಸಂದಾಯವಾಗಿದ್ದನ್ನು ವಿಜಯೆಂದ್ರ ಅವರೇ ಟಿವಿ ಚಾನೆಲ್‌ನ ಸ್ಟ್ರಿಂಗ್ ಆಪರೇಷನ್‌ನಲ್ಲಿ ಒಪ್ಪಿಕೊಂಡಿದ್ದಾರೆ” ಎಂದು ಅವರು ಹೇಳಿದ್ದಾರೆ.

”ಸಿಎಂ ಮತ್ತು ಸೂಪರ್ ಸಿಎಂ ಹೆಸರಲ್ಲಿ 12 ಕೋಟಿ ರೂಪಾಯಿ ಸಂದಾಯ ಆಗಿರುವುದನ್ನು ಒಪ್ಪಿಕೊಂಡ ಬಳಿಕವೂ ಆ ಐಎಎಸ್ ಅಧಿಕಾರಿ ಮತ್ತು ಹೋಟೆಲ್ ಮಾಲೀಕರ ವಿರುದ್ಧ ದೂರು ದಾಖಲಿಸದಿರುವುದು, ಕ್ರಮ ಕೈಗೊಳ್ಳದಿರುವುದು, ಅಧಿಕಾರಿಯನ್ನು ಸೇವೆಯಿಂದ ವಜಾಗೊಳಿಸದೆ ಆಶ್ರಯ ನೀಡಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೂರೇ ದಿನಕ್ಕೆ ಅಧಿವೇಶನ ಮೊಟಕುಗೊಳಿಸಲು ಮುಂದಾದ ಸಿಎಂ ಬಿಎಸ್‌ವೈ: ಸಿದ್ದರಾಮಯ್ಯ ವಿರೋಧ

”ಮೊದಲು ಸಂದಾಯವಾಗಿರುವ ರೂ.12 ಕೋಟಿ ತನ್ನ ಕೈಗೆ ಸಿಗದೆ ಅಧಿಕಾರಿ ಕೈಗೆ ಹೋಗಿದೆ. ಆದ್ದರಿಂದ ಒಂದೋ ಐಎಎಸ್ ಅಧಿಕಾರಿ ಕೈಯಿಂದ ಆ 12 ಕೋಟಿ ವಸೂಲಿ ಮಾಡಿ ಒಪ್ಪಿಸು, ಇಲ್ಲವೇ 12 ಕೋಟಿ ಜತೆಗೆ ಇನ್ನೂ 5 ಕೋಟಿ ಸೇರಿಸಿ ತಂದು ಕೊಡಬೇಕು. ಇಲ್ಲದಿದ್ದರೆ ಕೆಲಸ ನಿಲ್ಲಿಸು ವಿಜಯೇಂದ್ರ ಬೆದರಿಸಿದ್ದಾರೆ.”

“ಎರಡನೇ ಹಂತದಲ್ಲಿ ಗುತ್ತಿಗೆದಾರರಿಂದ ವಿಎಸ್‌ಟಿ ಸಂಗ್ರಹಿಸಲು ಮುಂದಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೊಮ್ಮಗ ಶಶಿಧರ್ ಮರಡಿ ಮತ್ತು ಗುತ್ತಿಗೆದಾರರ ನಡುವಿನ ವಾಟ್ಸಾಪ್ ಚಾಟ್ ಅನ್ನೂ ಮಾಧ್ಯಮ ಸಂಸ್ಥೆ ಬಹಿರಂಗಗೊಳಿಸಿದೆ. ಲಂಚದ ರೂ.7.4 ಕೋಟಿಯನ್ನು ತನ್ನ ಖಾತೆಗೆ ಆರ್‌ಟಿಜಿಎಸ್ ಮೂಲಕ ಜಮೆ ಮಾಡಿಸಿಕೊಂಡ ಶಶಿಧರ್ ಮರಡಿ, ಉಳಿದ ನಗದು ಹಣವನ್ನು ಮುಖ್ಯಮಂತ್ರಿಗಳ ಅಳಿಯನಿಗೆ ಹುಬ್ಬಳ್ಳಿಯಲ್ಲಿ ತಲುಪಿಸುವಂತೆ ಹೇಳಿರುವ ವಾಟ್ಸಾಪ್ ಚಾಟ್ ವಿವರವನ್ನು ಟಿವಿ ಚಾನೆಲ್ ಬಹಿರಂಗಪಡಿಸಿದೆ” ಎಂದು ಅವರು ಹೇಳಿದ್ದಾರೆ.

”ಈ ಭ್ರಷ್ಟಾಚಾರವನ್ನು ಬಯಲಿಗೆಳೆದ ಮಾಧ್ಯಮ ಸಂಸ್ಥೆಯ ಮುಖ್ಯಸ್ಥರು ಮತ್ತು ಪತ್ರಕರ್ತರಿಗೆ ಜೀವ ಬೆದರಿಕೆಯೊಡ್ಡಲಾಗುತ್ತಿದೆ. ಕಂಗನಾ ರಣಾವತ್ ಎಂಬ ನಟಿಗೆ ಬೆದರಿಕೆ ಇದೆಯೆಂದು ’ವೈ’ ದರ್ಜೆ ಭದ್ರತೆ ನೀಡಲಾಗುತ್ತದೆ. ಹಗರಣವನ್ನು ಬಯಲಿಗೆಳೆದ ಪತ್ರಕರ್ತರಿಗೆ ಜೀವ ಬೆದರಿಕೆ ಹಾಕಲಾಗುತ್ತಿದೆ. ಇದು ಪ್ರಜಾಪ್ರಭುತ್ವವೋ, ರಾಕ್ಷಸ ಪ್ರಭುತ್ವವೋ” ಎಂದಿರುವ ಸಿದ್ದರಾಮಯ್ಯ, “’ಹೋಂ ನನ್ನ ಕೈಯಲ್ಲಿದೆ’ ಎನ್ನುವ ಮೂಲಕ ಗೃಹ ಇಲಾಖೆಯನ್ನು , ಪೊಲೀಸ್ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡು ಮಾಧ್ಯಮ ಕ್ಷೇತ್ರವನ್ನು ತಮ್ಮ ಬೆರಳ ತುದಿಯಲ್ಲಿ ನಿಯಂತ್ರಿಸುವ ಅಪಾಯಕಾರಿ ಹಂತಕ್ಕೆ ಸೂಪರ್ ಸಿಎಂ ಇಳಿದಿರುವುದು ಭಾರತೀಯ ಜನತಾ ಪಕ್ಷದ ಹೊಸ ಆಡಳಿತ ವೈಖರಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಸ್ವಾರ್ಥಿ ಮತ್ತು ಎಡಬಿಡಂಗಿತನದ ರಾಜಕಾರಣಿ: ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮ್ಮ ರಾಜ್ಯದ ಮುಖ್ಯ ಮಂತ್ರಿ ಮತ್ತು ಅವರ ಕುಟುಂಬ ವರ್ಗದ ಬಗ್ಗೆ ಈ ಮಟ್ಟದ ಭ್ರಷ್ಟಾಚಾರದ (ಬಹುಷಃ ದಾಖಲೆಯ ಸಮೇತ ) ಆರೋಪವಿದ್ದರೂ, ನಮ್ಮ ನಾಡಿನ ಸಾಮಾಜಿಕ ಕಾರ್ಯಕರ್ತರು, ವಿಚಾರವಂತರು, ಪತ್ರಕರ್ತರು ಹಾಗೂ ವಿರೋಧ ಪಕ್ಷದವರೂ ತೆಪ್ಪಗಿರುವದು ಏಕೆ?

    ಪತ್ರಿಕಾ ಹೇಳಿಕೆ ಹಾಗೂ ಸಾಮಾಜಿಕ ಜಾಲತಾನ ದ ಹೊರತಾಗಿ ಬೇರೆ ಏನೂ ಮಾಡುತ್ತಿಲ್ಲವಲ್ಲಾ…

    ಎಲ್ಲರ ಮನೆ ದೋಸೇನೂ ತೂತೇ ಎನ್ನುವದು ಇಲ್ಲೂ ನಿಜವೇ…

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...