Homeಮುಖಪುಟಯಡಿಯೂರಪ್ಪ ಮುಖ್ಯಮಂತ್ರಿ ಅಷ್ಟೇ - ಬಸನಗೌಡ ಪಾಟೀಲ್ ಯತ್ನಾಳ್

ಯಡಿಯೂರಪ್ಪ ಮುಖ್ಯಮಂತ್ರಿ ಅಷ್ಟೇ – ಬಸನಗೌಡ ಪಾಟೀಲ್ ಯತ್ನಾಳ್

- Advertisement -
- Advertisement -

ಭಿನ್ನಮತೀಯ ಶಾಸಕರು ಸಭೆ ಸೇರಿ ಯಡಿಯೂರಪ್ಪ ವಿರುದ್ಧ ಚರ್ಚಿಸಿದ್ದಾರೆ ಎಂಬ ವರ್ತಮಾನದ ಬೆನ್ನಿಗೇ ಯಡಿಯೂರಪ್ಪ ಮುಖ್ಯಮಂತ್ರಿ ಅಷ್ಟೇ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡುವ ಮೂಲಕ ಮತ್ತುಷ್ಟು ವಿವಾದಕ್ಕೆ ಕಾರಣರಾಗಿದ್ದಾರೆ.

ಹಿಂದೆ ಅಟಲ್ ಬಿಹಾರಿ ವಾಜಪೇಯಿ, ಲಾಲ್ ಕೃಷ್ಣ ಅಡ್ವಾಣಿ ನಮ್ಮ ನಾಯಕರಾಗಿದ್ದರು. ಈಗ ನರೇಂದ್ರ ಮೋದಿ, ಅಮಿತ್ ಶಾ ಮತ್ತು ಜೆ.ಪಿ.ನಡ್ಡಾ ನಮ್ಮ ನಾಯಕರು. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಅಷ್ಟೇ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ನಾಯಕತ್ವವನ್ನು ಒಪ್ಪಿಕೊಳ್ಳಲು ನಿರಾಕರಿಸಿದ್ದಾರೆ.

ಸಚಿವ ಸ್ಥಾನ ವಂಚಿತರಾಗಿರುವ ಉಮೇಶ್ ಕತ್ತಿ ಅವರ ಬೆಂಗಳೂರಿನ ನಿವಾಸದಲ್ಲಿ ಐವರು ಬಿಜೆಪಿ ಶಾಸಕರು ಒಂದೆಡೆ ಸೇರಿ ಬಂಡಾಯದ ಮುನ್ಸೂಚನೆಯನ್ನು ನೀಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬೆನ್ನಿಗೆ ನಿಂತಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ತಮ್ಮ ರಾಗ ಬದಲಿಸಿದ್ದಾರೆ.

ನಾವು ಉಮೇಶ್ ಕತ್ತಿ ನಿವಾಸದಲ್ಲಿ ಸೇರಿ ಊಟ, ಮಾವಿನ ಹಣ್ಣು ಸೇವಿಸಿದ್ದೇವೆ. ಹರಟೆ ಹೊರದಿದ್ದೇವೆ. ಸಣ್ಣ ಪುಟ್ಟ ರಾಜಕೀಯ ವಿಚಾರ ಮಾಡಿದ್ದೇವೆ. ಅದೇ ವಿಷಯವನ್ನು ಮಾಧ್ಯಮಗಳ ಮುಂದೆ ಹೇಳಲು ಸಾಧ್ಯವಿಲ್ಲ. ನಾವು ಮುಖ್ಯಮಂತ್ರಿಗಳ ವಿರುದ್ದವಾಗಲೀ, ಹೈಕಮಾಂಡ್ ವಿರುದ್ಧವಾಗಲೀ ಸಭೆ ನಡೆಸಿಲ್ಲ ಯತ್ನಾಳ್‌ ಹೇಳಿದ್ದಾರೆ.

ನಾಯಕತ್ವದ ಬದಲಾವಣೆ ಕುರಿತು ನಾನು ಏನೂ ಹೇಳಲಾರೆ. ನಾಯಕತ್ವ ಬದಲಾವಣೆ ಹೈಕಮಾಂಡ್‌ಗೆ ಬಿಟ್ಟಿದ್ದು. ಬದಲಾವಣೆ ಮಾಡಿದರೂ ಒಪ್ಪುತ್ತೇವೆ. ಮುಂದುವರಿಯಲಿ ಅಂದರೂ ಬದ್ದರಾಗಿರುತ್ತೇವೆ. ಹೈಕಮಾಂಡ್ ಏನು ಹೇಳುತ್ತೋ ಅದನ್ನಷ್ಟೇ ಪಾಲಿಸುತ್ತೇವೆ. ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ದವಾಗಿರುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಅಭಿವೃದ್ದಿ ಕೆಲಸಗಳು ಆಗಿಲ್ಲ. ಅದನ್ನು ಮುಖ್ಯಮಂತ್ರಿಗೂ ಹೇಳಿದ್ದೇವೆ. ನೀವು ಬಂದು ಮುಖ್ಯಮಂತ್ರಿಗಳ ಮುಂದೆ ಹೇಳಿ ಅಂದರೂ ನೇರವಾಗಿ ಹೇಳುತ್ತೇನೆ. ನನಗೆ ಹಣ ಬಿಡುಗಡೆ ಆಗಿಲ್ಲ. ಅದಕ್ಕೆ ಅಸಮಾಧಾನ ಇರುವುದು ಸತ್ಯ ಎಂದು ವಿವರಿಸಿದ್ದಾರೆ.

ನಾನು ಸಚಿವ ಸ್ಥಾನ ಕೇಳಿಲ್ಲ. ಕೇಳುವುದೂ ಇಲ್ಲ. ಯಡಿಯೂರಪ್ಪ ಇರುವವರೆಗೂ ಅವರನ್ನು ಕೇಳುವುದಿಲ್ಲ. ಹಿರಿಯರು ಅವರು. ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿದವರಲ್ಲಿ ಯಡಿಯೂರಪ್ಪ, ಅನಂತಕುಮಾರ್ ಮತ್ತು ಈಶ್ವರಪ್ಪ, ಮಲ್ಲಿಕಾರ್ಜುನಯ್ಯ, ಆನಂತರ ನಾನೇ ಹಿರಿಯ. ಪಕ್ಷಕ್ಕಾಗಿ ದುಡಿದವರಲ್ಲಿ ಒಬ್ಬ ಎಂದು ಹೇಳಿಕೊಂಡಿದ್ದಾರೆ.

ನಮ್ಮಲ್ಲಿ ಹೈಕಮಾಂಡ್ ಬಲಿಷ್ಠವಾಗಿದೆ. ಅವರ ವಿರುದ್ದ ಮಾತನಾಡಲಾರೆವು. ಉಮೇಶ್ ಕತ್ತಿ ಅವರಿಗೆ ಸಚಿವರ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿಗಳೇ ಹೇಳಿದ್ದಾರೆ. ನುಡಿದಂತೆ ನಡೆಯಬೇಕು. ರಮೇಶ್ ಕತ್ತಿ ಅವರಿಗೆ ರಾಜ್ಯಸಭಾ ಸದಸ್ಯ ಸ್ಥಾನವನ್ನೂ ಕೇಳಿಲ್ಲ. ಸಣ್ಣಪುಟ್ಟ ರಾಜಕೀಯ ವಿಚಾರಗಳು ಚರ್ಚೆಯಾಗಿದೆಯೇ ಹೊರತು  ಅಸಮಾಧಾನ ವ್ಯಕ್ತವಾಗಿಲ್ಲ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.


ಇದನ್ನೂ ಓದಿ: ಬಿಜೆಪಿಯಲ್ಲಿ ಮತ್ತೆ ಭುಗಿಲೆದ್ದ ಭಿನ್ನಮತ; ಬಿಎಸ್‌ವೈ ಸ್ಥಾನಕ್ಕೆ ’ಕತ್ತಿ’ಯಿಂದ ಕುತ್ತು? 


Also Read: Karnataka government drops naming of flyover after “Veer” Savarkar

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...