Homeಮುಖಪುಟಯಡಿಯೂರಪ್ಪ ಮುಖ್ಯಮಂತ್ರಿ ಅಷ್ಟೇ - ಬಸನಗೌಡ ಪಾಟೀಲ್ ಯತ್ನಾಳ್

ಯಡಿಯೂರಪ್ಪ ಮುಖ್ಯಮಂತ್ರಿ ಅಷ್ಟೇ – ಬಸನಗೌಡ ಪಾಟೀಲ್ ಯತ್ನಾಳ್

- Advertisement -
- Advertisement -

ಭಿನ್ನಮತೀಯ ಶಾಸಕರು ಸಭೆ ಸೇರಿ ಯಡಿಯೂರಪ್ಪ ವಿರುದ್ಧ ಚರ್ಚಿಸಿದ್ದಾರೆ ಎಂಬ ವರ್ತಮಾನದ ಬೆನ್ನಿಗೇ ಯಡಿಯೂರಪ್ಪ ಮುಖ್ಯಮಂತ್ರಿ ಅಷ್ಟೇ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡುವ ಮೂಲಕ ಮತ್ತುಷ್ಟು ವಿವಾದಕ್ಕೆ ಕಾರಣರಾಗಿದ್ದಾರೆ.

ಹಿಂದೆ ಅಟಲ್ ಬಿಹಾರಿ ವಾಜಪೇಯಿ, ಲಾಲ್ ಕೃಷ್ಣ ಅಡ್ವಾಣಿ ನಮ್ಮ ನಾಯಕರಾಗಿದ್ದರು. ಈಗ ನರೇಂದ್ರ ಮೋದಿ, ಅಮಿತ್ ಶಾ ಮತ್ತು ಜೆ.ಪಿ.ನಡ್ಡಾ ನಮ್ಮ ನಾಯಕರು. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಅಷ್ಟೇ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ನಾಯಕತ್ವವನ್ನು ಒಪ್ಪಿಕೊಳ್ಳಲು ನಿರಾಕರಿಸಿದ್ದಾರೆ.

ಸಚಿವ ಸ್ಥಾನ ವಂಚಿತರಾಗಿರುವ ಉಮೇಶ್ ಕತ್ತಿ ಅವರ ಬೆಂಗಳೂರಿನ ನಿವಾಸದಲ್ಲಿ ಐವರು ಬಿಜೆಪಿ ಶಾಸಕರು ಒಂದೆಡೆ ಸೇರಿ ಬಂಡಾಯದ ಮುನ್ಸೂಚನೆಯನ್ನು ನೀಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬೆನ್ನಿಗೆ ನಿಂತಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ತಮ್ಮ ರಾಗ ಬದಲಿಸಿದ್ದಾರೆ.

ನಾವು ಉಮೇಶ್ ಕತ್ತಿ ನಿವಾಸದಲ್ಲಿ ಸೇರಿ ಊಟ, ಮಾವಿನ ಹಣ್ಣು ಸೇವಿಸಿದ್ದೇವೆ. ಹರಟೆ ಹೊರದಿದ್ದೇವೆ. ಸಣ್ಣ ಪುಟ್ಟ ರಾಜಕೀಯ ವಿಚಾರ ಮಾಡಿದ್ದೇವೆ. ಅದೇ ವಿಷಯವನ್ನು ಮಾಧ್ಯಮಗಳ ಮುಂದೆ ಹೇಳಲು ಸಾಧ್ಯವಿಲ್ಲ. ನಾವು ಮುಖ್ಯಮಂತ್ರಿಗಳ ವಿರುದ್ದವಾಗಲೀ, ಹೈಕಮಾಂಡ್ ವಿರುದ್ಧವಾಗಲೀ ಸಭೆ ನಡೆಸಿಲ್ಲ ಯತ್ನಾಳ್‌ ಹೇಳಿದ್ದಾರೆ.

ನಾಯಕತ್ವದ ಬದಲಾವಣೆ ಕುರಿತು ನಾನು ಏನೂ ಹೇಳಲಾರೆ. ನಾಯಕತ್ವ ಬದಲಾವಣೆ ಹೈಕಮಾಂಡ್‌ಗೆ ಬಿಟ್ಟಿದ್ದು. ಬದಲಾವಣೆ ಮಾಡಿದರೂ ಒಪ್ಪುತ್ತೇವೆ. ಮುಂದುವರಿಯಲಿ ಅಂದರೂ ಬದ್ದರಾಗಿರುತ್ತೇವೆ. ಹೈಕಮಾಂಡ್ ಏನು ಹೇಳುತ್ತೋ ಅದನ್ನಷ್ಟೇ ಪಾಲಿಸುತ್ತೇವೆ. ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ದವಾಗಿರುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಅಭಿವೃದ್ದಿ ಕೆಲಸಗಳು ಆಗಿಲ್ಲ. ಅದನ್ನು ಮುಖ್ಯಮಂತ್ರಿಗೂ ಹೇಳಿದ್ದೇವೆ. ನೀವು ಬಂದು ಮುಖ್ಯಮಂತ್ರಿಗಳ ಮುಂದೆ ಹೇಳಿ ಅಂದರೂ ನೇರವಾಗಿ ಹೇಳುತ್ತೇನೆ. ನನಗೆ ಹಣ ಬಿಡುಗಡೆ ಆಗಿಲ್ಲ. ಅದಕ್ಕೆ ಅಸಮಾಧಾನ ಇರುವುದು ಸತ್ಯ ಎಂದು ವಿವರಿಸಿದ್ದಾರೆ.

ನಾನು ಸಚಿವ ಸ್ಥಾನ ಕೇಳಿಲ್ಲ. ಕೇಳುವುದೂ ಇಲ್ಲ. ಯಡಿಯೂರಪ್ಪ ಇರುವವರೆಗೂ ಅವರನ್ನು ಕೇಳುವುದಿಲ್ಲ. ಹಿರಿಯರು ಅವರು. ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿದವರಲ್ಲಿ ಯಡಿಯೂರಪ್ಪ, ಅನಂತಕುಮಾರ್ ಮತ್ತು ಈಶ್ವರಪ್ಪ, ಮಲ್ಲಿಕಾರ್ಜುನಯ್ಯ, ಆನಂತರ ನಾನೇ ಹಿರಿಯ. ಪಕ್ಷಕ್ಕಾಗಿ ದುಡಿದವರಲ್ಲಿ ಒಬ್ಬ ಎಂದು ಹೇಳಿಕೊಂಡಿದ್ದಾರೆ.

ನಮ್ಮಲ್ಲಿ ಹೈಕಮಾಂಡ್ ಬಲಿಷ್ಠವಾಗಿದೆ. ಅವರ ವಿರುದ್ದ ಮಾತನಾಡಲಾರೆವು. ಉಮೇಶ್ ಕತ್ತಿ ಅವರಿಗೆ ಸಚಿವರ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿಗಳೇ ಹೇಳಿದ್ದಾರೆ. ನುಡಿದಂತೆ ನಡೆಯಬೇಕು. ರಮೇಶ್ ಕತ್ತಿ ಅವರಿಗೆ ರಾಜ್ಯಸಭಾ ಸದಸ್ಯ ಸ್ಥಾನವನ್ನೂ ಕೇಳಿಲ್ಲ. ಸಣ್ಣಪುಟ್ಟ ರಾಜಕೀಯ ವಿಚಾರಗಳು ಚರ್ಚೆಯಾಗಿದೆಯೇ ಹೊರತು  ಅಸಮಾಧಾನ ವ್ಯಕ್ತವಾಗಿಲ್ಲ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.


ಇದನ್ನೂ ಓದಿ: ಬಿಜೆಪಿಯಲ್ಲಿ ಮತ್ತೆ ಭುಗಿಲೆದ್ದ ಭಿನ್ನಮತ; ಬಿಎಸ್‌ವೈ ಸ್ಥಾನಕ್ಕೆ ’ಕತ್ತಿ’ಯಿಂದ ಕುತ್ತು? 


Also Read: Karnataka government drops naming of flyover after “Veer” Savarkar

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...