Homeಕರ್ನಾಟಕಮೈತ್ರಿ ಸರ್ಕಾರದ ಶಾಸಕರಿಗೆ ಯಡಿಯೂರಪ್ಪ ಹಣದ ಆಮಿಷ: ತನಿಖೆಗೆ ಆದೇಶಿಸಿದ ಕೋರ್ಟ್

ಮೈತ್ರಿ ಸರ್ಕಾರದ ಶಾಸಕರಿಗೆ ಯಡಿಯೂರಪ್ಪ ಹಣದ ಆಮಿಷ: ತನಿಖೆಗೆ ಆದೇಶಿಸಿದ ಕೋರ್ಟ್

- Advertisement -
- Advertisement -

2019ರಲ್ಲಿ ಮೈತ್ರಿ ಸರ್ಕಾರವನ್ನು ಬೀಳಿಸುವಲ್ಲಿ ಸಿಎಂ ಯಡಿಯೂರಪ್ಪ ಪ್ರಮುಖ ಪಾತ್ರ ವಹಿಸಿದ್ದಾರೆ ಎನ್ನುವುದಕ್ಕೆ ಆಡಿಯೋ ಕ್ಲಿಪ್ ಸಾಕ್ಷಿಯಿತ್ತು. ಆದರೆ ಇದರ ತನಿಖೆಗೆ ಯಯಡಿಯೂರಪ್ಪ ತಡೆಯಾಜ್ಞೆ ತಂದಿದ್ದರು. ಆದರೆ ಈಗ ಹೈಕೋರ್ಟ್‌ನ ಕಲಬುರ್ಗಿಯ ವಿಶೇಷ ನ್ಯಾಯಪೀಠ ಈ ಪ್ರಕರಣವನ್ನು ತನಿಖೆ ನಡೆಸಲು ಆದೇಶ ನೀಡಿದೆ.

ಹೆಚ್​.ಡಿ. ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್​-ಜೆಡಿಎಸ್ ಮೈತ್ರಿ ಸರ್ಕಾರವನ್ನು ಉರುಳಿಸುವ ನಿಟ್ಟಿನಲ್ಲಿ 2019ರಲ್ಲಿ ಅಂದಿನ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಸಾಕಷ್ಟು ಕಸರತ್ತು ನಡೆಸಿದ್ದರು. ಕಾಂಗ್ರೆಸ್​-ಜೆಡಿಎಸ್​ ಶಾಸಕರನ್ನು ಸಂಪರ್ಕಿಸಿ ಅವರಿಗೆ ಹಣದ ಆಮಿಷವೊಡ್ಡಿ ಬಿಜೆಪಿ ಸರ್ಕಾರ ರಚಿಸಲು ಯತ್ನಿಸಿದ್ದರು. ಈ ಸಂಬಂಧ ಬಿಡುಗಡೆಯಾಗಿದ್ದ ಬಿ.ಎಸ್.​ ಯಡಿಯೂರಪ್ಪ​ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಕ್ಲಿಪ್​ ರಾಜ್ಯದಲ್ಲಿ ದೊಡ್ಡ ಮಟ್ಟದ ಸಂಚಲನವನ್ನು ಸೃಷ್ಟಿ ಮಾಡಿತ್ತು.

ತಮ್ಮ ತಂದೆಯ ಕಡೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಿಸಲು ಆಮಿಷವೊಡ್ಡಲಾಗಿತ್ತು ಎಂದು ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಪುತ್ರ ಶರಣಗೌಡ ಪಾಟೀಲ ಕಂದಕೂರ ಅವರಿಂದ ಬಿ.ಎಸ್.​ ಯಡಿಯೂರಪ್ಪ ವಿರುದ್ಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅಲ್ಲದೆ, ಈ ಕುರಿತ ಆಡಿಯೋ ಸಹ ಬಿಡುಗಡೆಯಾಗಿತ್ತು.

ಇದನ್ನೂ ಓದಿ: ಇಶ್ರತ್ ಜಹಾನ್ ನಕಲಿ ಎನ್ಕೌಂಟರ್: 3 ಪೊಲೀಸರನ್ನು ಬಿಡುಗಡೆ ಮಾಡಿದ ಸಿಬಿಐ ಕೋರ್ಟ್

2019 ರಲ್ಲಿ ಬಿ.ಎಸ್​. ಯಡಿಯೂರಪ್ಪ ಆಪರೇಷನ್ ಕಮಲದ ಆಡಿಯೋ ಬಿಡುಗಡೆಯಾಗುತ್ತಿದ್ದಂತೆ ಅಂದಿನ ಸ್ಪೀಕರ್​ ರಮೇಶ್​ ಕುಮಾರ್​ ಈ ಪ್ರಕರಣವನ್ನು ಎಸ್​ಐಟಿ ತನಿಖೆಗೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದರು. ಆದರೆ, ಅಂದಿನ ಸಿಎಂ ಕುಮಾರಸ್ವಾಮಿ ಈ ಪ್ರಕರಣವನ್ನು ಎಸ್​ಐಟಿ ತನಿಖೆಗೆ ನೀಡಿರಲಿಲ್ಲ. ಆದರೆ, ಪೊಲೀಸ್​ ಠಾಣೆಯಲ್ಲಿ ಸಲ್ಲಿಸಿದ ದೂರಿನ ಮೇಲೆ ಪೊಲೀಸರು ತನಿಖೆ ಕೈಗೊಳ್ಳಲೇಬೇಕಿತ್ತು.

ಆದರೆ, ಬಿಜೆಪಿ ನಾಯಕರು ಕಲಬುರ್ಗಿ ಹೈಕೋರ್ಟ್ ಪೀಠದಲ್ಲಿ ಪ್ರಕರಣದ ತನಿಖೆಗೆ ತಡೆಯಾಜ್ಞೆ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ನಂತರ ಈ ಪ್ರಕರಣವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿತ್ತು. ಹೀಗಾಗಿ ತಡೆಯಾಜ್ಞೆ ತೆರೆವುಗೊಳಿಸುವಂತೆ ಶರಣಗೌಡ ಪಾಟೀಲ ಕಂದಕೂರರಿಂದ ಮೇಲ್ಮನವಿ ಸಲ್ಲಿಸಲಾಗಿತ್ತು. ಶರಣಗೌಡ ಕಂದಕೂರ ಪರ ಹಿರಿಯ ನ್ಯಾಯವಾದಿ ರವಿವರ್ಮ ಕುಮಾರ್ ಮತ್ತು ಪಿ.ವಿಲಾಸ್ ಕುಮಾರ್ ರಿಂದ ವಾದ ಮಂಡನೆ ಮಾಡಲಾಗಿತ್ತು.

ಯಡಿಯೂರಪ್ಪ ಪರ ಅಶೋಕ್ ಹಾರನಹಳ್ಳಿ, ಸಿ.ವಿ.ನಾಗೇಶ್ ಮತ್ತು ಸರ್ಕಾರಿ ವಕೀಲರಿಂದ ವಾದ ಮಂಡನೆ ಮಾಡಲಾಗಿತ್ತು. ಕೊನೆಗೆ ವಾದ ವಿವಾದ ಆಲಿಸಿದ ಹೈಕೋರ್ಟ್ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಯಡಿಯೂರಪ್ಪ ವಿರುದ್ಧದ ಅಪರೇಷನ್ ಕಮಲ ಆಡಿಯೋ ಪ್ರಕರಣದ ತನಿಖೆಗೆ ಅವಕಾಶ ಕಲ್ಪಿಸಿ ಆದೇಶಿಸಿದೆ. ಇದು ಯಡಿಯೂರಪ್ಪನವರಿಗೆ ಮತ್ತೊಂದು ಆಘಾತ ತಂದಿದೆ.


ಇದನ್ನೂ ಓದಿ: ಯಡಿಯೂರಪ್ಪ ಆಪರೇಷನ್ ಕಮಲದ ಪಿತಾಮಹ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...