Homeಕರ್ನಾಟಕಮೈತ್ರಿ ಸರ್ಕಾರದ ಶಾಸಕರಿಗೆ ಯಡಿಯೂರಪ್ಪ ಹಣದ ಆಮಿಷ: ತನಿಖೆಗೆ ಆದೇಶಿಸಿದ ಕೋರ್ಟ್

ಮೈತ್ರಿ ಸರ್ಕಾರದ ಶಾಸಕರಿಗೆ ಯಡಿಯೂರಪ್ಪ ಹಣದ ಆಮಿಷ: ತನಿಖೆಗೆ ಆದೇಶಿಸಿದ ಕೋರ್ಟ್

- Advertisement -
- Advertisement -

2019ರಲ್ಲಿ ಮೈತ್ರಿ ಸರ್ಕಾರವನ್ನು ಬೀಳಿಸುವಲ್ಲಿ ಸಿಎಂ ಯಡಿಯೂರಪ್ಪ ಪ್ರಮುಖ ಪಾತ್ರ ವಹಿಸಿದ್ದಾರೆ ಎನ್ನುವುದಕ್ಕೆ ಆಡಿಯೋ ಕ್ಲಿಪ್ ಸಾಕ್ಷಿಯಿತ್ತು. ಆದರೆ ಇದರ ತನಿಖೆಗೆ ಯಯಡಿಯೂರಪ್ಪ ತಡೆಯಾಜ್ಞೆ ತಂದಿದ್ದರು. ಆದರೆ ಈಗ ಹೈಕೋರ್ಟ್‌ನ ಕಲಬುರ್ಗಿಯ ವಿಶೇಷ ನ್ಯಾಯಪೀಠ ಈ ಪ್ರಕರಣವನ್ನು ತನಿಖೆ ನಡೆಸಲು ಆದೇಶ ನೀಡಿದೆ.

ಹೆಚ್​.ಡಿ. ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್​-ಜೆಡಿಎಸ್ ಮೈತ್ರಿ ಸರ್ಕಾರವನ್ನು ಉರುಳಿಸುವ ನಿಟ್ಟಿನಲ್ಲಿ 2019ರಲ್ಲಿ ಅಂದಿನ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಸಾಕಷ್ಟು ಕಸರತ್ತು ನಡೆಸಿದ್ದರು. ಕಾಂಗ್ರೆಸ್​-ಜೆಡಿಎಸ್​ ಶಾಸಕರನ್ನು ಸಂಪರ್ಕಿಸಿ ಅವರಿಗೆ ಹಣದ ಆಮಿಷವೊಡ್ಡಿ ಬಿಜೆಪಿ ಸರ್ಕಾರ ರಚಿಸಲು ಯತ್ನಿಸಿದ್ದರು. ಈ ಸಂಬಂಧ ಬಿಡುಗಡೆಯಾಗಿದ್ದ ಬಿ.ಎಸ್.​ ಯಡಿಯೂರಪ್ಪ​ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಕ್ಲಿಪ್​ ರಾಜ್ಯದಲ್ಲಿ ದೊಡ್ಡ ಮಟ್ಟದ ಸಂಚಲನವನ್ನು ಸೃಷ್ಟಿ ಮಾಡಿತ್ತು.

ತಮ್ಮ ತಂದೆಯ ಕಡೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಿಸಲು ಆಮಿಷವೊಡ್ಡಲಾಗಿತ್ತು ಎಂದು ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಪುತ್ರ ಶರಣಗೌಡ ಪಾಟೀಲ ಕಂದಕೂರ ಅವರಿಂದ ಬಿ.ಎಸ್.​ ಯಡಿಯೂರಪ್ಪ ವಿರುದ್ಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅಲ್ಲದೆ, ಈ ಕುರಿತ ಆಡಿಯೋ ಸಹ ಬಿಡುಗಡೆಯಾಗಿತ್ತು.

ಇದನ್ನೂ ಓದಿ: ಇಶ್ರತ್ ಜಹಾನ್ ನಕಲಿ ಎನ್ಕೌಂಟರ್: 3 ಪೊಲೀಸರನ್ನು ಬಿಡುಗಡೆ ಮಾಡಿದ ಸಿಬಿಐ ಕೋರ್ಟ್

2019 ರಲ್ಲಿ ಬಿ.ಎಸ್​. ಯಡಿಯೂರಪ್ಪ ಆಪರೇಷನ್ ಕಮಲದ ಆಡಿಯೋ ಬಿಡುಗಡೆಯಾಗುತ್ತಿದ್ದಂತೆ ಅಂದಿನ ಸ್ಪೀಕರ್​ ರಮೇಶ್​ ಕುಮಾರ್​ ಈ ಪ್ರಕರಣವನ್ನು ಎಸ್​ಐಟಿ ತನಿಖೆಗೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದರು. ಆದರೆ, ಅಂದಿನ ಸಿಎಂ ಕುಮಾರಸ್ವಾಮಿ ಈ ಪ್ರಕರಣವನ್ನು ಎಸ್​ಐಟಿ ತನಿಖೆಗೆ ನೀಡಿರಲಿಲ್ಲ. ಆದರೆ, ಪೊಲೀಸ್​ ಠಾಣೆಯಲ್ಲಿ ಸಲ್ಲಿಸಿದ ದೂರಿನ ಮೇಲೆ ಪೊಲೀಸರು ತನಿಖೆ ಕೈಗೊಳ್ಳಲೇಬೇಕಿತ್ತು.

ಆದರೆ, ಬಿಜೆಪಿ ನಾಯಕರು ಕಲಬುರ್ಗಿ ಹೈಕೋರ್ಟ್ ಪೀಠದಲ್ಲಿ ಪ್ರಕರಣದ ತನಿಖೆಗೆ ತಡೆಯಾಜ್ಞೆ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ನಂತರ ಈ ಪ್ರಕರಣವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿತ್ತು. ಹೀಗಾಗಿ ತಡೆಯಾಜ್ಞೆ ತೆರೆವುಗೊಳಿಸುವಂತೆ ಶರಣಗೌಡ ಪಾಟೀಲ ಕಂದಕೂರರಿಂದ ಮೇಲ್ಮನವಿ ಸಲ್ಲಿಸಲಾಗಿತ್ತು. ಶರಣಗೌಡ ಕಂದಕೂರ ಪರ ಹಿರಿಯ ನ್ಯಾಯವಾದಿ ರವಿವರ್ಮ ಕುಮಾರ್ ಮತ್ತು ಪಿ.ವಿಲಾಸ್ ಕುಮಾರ್ ರಿಂದ ವಾದ ಮಂಡನೆ ಮಾಡಲಾಗಿತ್ತು.

ಯಡಿಯೂರಪ್ಪ ಪರ ಅಶೋಕ್ ಹಾರನಹಳ್ಳಿ, ಸಿ.ವಿ.ನಾಗೇಶ್ ಮತ್ತು ಸರ್ಕಾರಿ ವಕೀಲರಿಂದ ವಾದ ಮಂಡನೆ ಮಾಡಲಾಗಿತ್ತು. ಕೊನೆಗೆ ವಾದ ವಿವಾದ ಆಲಿಸಿದ ಹೈಕೋರ್ಟ್ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಯಡಿಯೂರಪ್ಪ ವಿರುದ್ಧದ ಅಪರೇಷನ್ ಕಮಲ ಆಡಿಯೋ ಪ್ರಕರಣದ ತನಿಖೆಗೆ ಅವಕಾಶ ಕಲ್ಪಿಸಿ ಆದೇಶಿಸಿದೆ. ಇದು ಯಡಿಯೂರಪ್ಪನವರಿಗೆ ಮತ್ತೊಂದು ಆಘಾತ ತಂದಿದೆ.


ಇದನ್ನೂ ಓದಿ: ಯಡಿಯೂರಪ್ಪ ಆಪರೇಷನ್ ಕಮಲದ ಪಿತಾಮಹ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ: ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಡಿ.ಕೆ.ಶಿವಕುಮಾರ್

ರಾಜ್ಯದ ಜಲಾಶಯಗಳಲ್ಲಿ ನೀರಿನ ಲಭ್ಯತೆ ಕಡಿಮೆಯಿರುವಾಗ ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕಾದ ಹೊಣೆಗಾರಿಕೆ ಇದೆ. ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಎಂದು...

‘ಅಸ್ತಿತ್ವದ ಸಮಸ್ಯೆಯಲ್ಲ, ಹೊಣೆಗಾರಿಕೆಯೇ ಮುಖ್ಯ’: ಆರ್‌ಎಸ್‌ಎಸ್ ನೋಂದಣಿ ಕುರಿತು ಬಿ.ಎಲ್. ಸಂತೋಷ್ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಹಾಗೂ ಅದರ ಕಾನೂನಾತ್ಮಕ ಅಸ್ತಿತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹಾಗೂ ಕರ್ನಾಟಕದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್...

ನಾನು ‘ದಿಮಾಗಿ ನಕ್ಸಲ್’ ಆಗಿದ್ದರೆ ಅದಕ್ಕೆ ಹೆಮ್ಮೆ ಇದೆ: ಮೋದಿ-ರಿಜಿಜು ವಿರುದ್ಧ ಚಿದಂಬರಂ ತಿರುಗೇಟು

ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಳಸಿದ್ದ ‘ದಿಮಾಗಿ ನಕ್ಸಲರು’ (ವೈಚಾರಿಕ ನಕ್ಸಲರು) ಎಂಬ ಪದ ಬಳಕೆ ದೇಶದ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಪ್ರಧಾನಿಯವರ ಈ...

CAA ವಿರೋಧಿ ಪ್ರತಿಭಟನೆಗೆ ಕಾರಣವಾಗಿದ್ದ ಪ್ರಶ್ನೆಗಳು ಮತ್ತೆ ಜನಗಣತಿಯಲ್ಲಿ-ವರದಿ

ಶೀಘ್ರದಲ್ಲೇ ಪ್ರಾರಂಭವಾಗಲಿರುವ ಜನಗಣತಿಯ ಜನಸಂಖ್ಯಾ ಎಣಿಕೆ ಹಂತವು, 2011ರ ಜನಗಣತಿಗೆ ಹೋಲಿಸಿದರೆ 14 ಹೊಸ ಅಥವಾ ಮಾರ್ಪಡಿಸಿದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಪೈಕಿ ಹಲವು ಪ್ರಶ್ನೆಗಳು 2020ರಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ರಾಷ್ಟ್ರೀಯ ಜನಸಂಖ್ಯಾ ನೋಂದಣಿ...

ಹಿಂಗೋಲಿ ಶಾಲೆಯಲ್ಲಿ ಪ್ರಾಂಶುಪಾಲರ ಮದ್ಯಪಾನ, ಶಿಕ್ಷಕರ ಅಭಾವ: ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ಅಭಿಜೀತ್ ದೀಪ್ಕೆ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಲಿಂಬಾಲಾ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶೈಕ್ಷಣಿಕ ವಾತಾವರಣ ಸಂಪೂರ್ಣವಾಗಿ ಕುಸಿದಿದ್ದು, ಶಾಲಾ ಪ್ರಾಂಶುಪಾಲರ ಹೊಣೆಗೇಡಿತನ ಮತ್ತು ಆಡಳಿತ ಮಂಡಳಿಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರ ಆಕ್ರೋಶ ಮುಗಿಲುಮುಟ್ಟಿದೆ. ಶಾಲೆಯ ಪ್ರಾಂಶುಪಾಲರು...

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ? CAG ವರದಿ

ದೇಶಾದ್ಯಂತ ನೆರೆ, ಬರ, ಭೂಕುಸಿತದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ ಭಾರಿ ಪ್ರಮಾಣದ ಕಡಿತವಾಗುತ್ತಿರುವುದು ಈಗ ನಿರೂಪಿತವಾಗಿದೆ. ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ...

EFLU ವಿದ್ಯಾರ್ಥಿ ಸಂಘದ ಮುಖಂಡರು, NSUI ಸದಸ್ಯರ ಮೇಲೆ ರಾಡ್ ಮತ್ತು ಬಿಯರ್ ಬಾಟಲಿಗಳಿಂದ ಹಲ್ಲೆ; ABVP ಸದಸ್ಯರ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ನ ಪ್ರತಿಷ್ಠಿತ ಇಂಗ್ಲಿಷ್ ಮತ್ತು ವಿದೇಶಿ ಭಾಷಾ ವಿಶ್ವವಿದ್ಯಾಲಯ (ಇಎಫ್‌ಎಲ್‌ಯು - EFLU) ಕ್ಯಾಂಪಸ್‌ನಲ್ಲಿ ಭೀಕರ ಹಿಂಸಾಚಾರ ಸಂಭವಿಸಿದ್ದು, ವಿದ್ಯಾರ್ಥಿ ಸಂಘದ ಮುಖಂಡರು ಹಾಗೂ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಸದಸ್ಯರ ಮೇಲೆ...

NALSAR ವಿವಾದ : ಕಾನೂನು ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿದ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ

ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಹೊರಡಿಸಿದ್ದ ನಿರ್ದೇಶನಗಳ ಕುರಿತು ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಥ) ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಕ್ಷಮೆಯಾಚಿಸಿದ್ದಾರೆ. ಹೈದರಾಬಾದ್‌ನ ನಲ್ಸಾರ್...

ವಿಮಲ್ ‘ಏಲೈಚಿ’ ಜಾಹೀರಾತು ವಿವಾದ: ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ಮಹಾರಾಷ್ಟ್ರ ಎಫ್‌ಡಿಎ ಶೋಕಾಸ್ ನೋಟಿಸ್

ಬಾಲಿವುಡ್‌ನ ಖ್ಯಾತ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರುಗಳು ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. 'ವಿಮಲ್ ಏಲೈಚಿ' ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ...

ಹನೂರು ಶೂಟೌಟ್ ಪ್ರಕರಣ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲು

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯತ್ ವಾಪ್ತಿಯ ಅರಣ್ಯ ಪ್ರದೇಶದಲ್ಲಿ ಮೂವರು ಗುಂಡೇಟಿಗೆ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್​​​​ಐಆರ್ ದಾಖಲಾಗಿದೆ. ಅರಣ್ಯ ಸಿಬ್ಬಂದಿಯ ಗುಂಡೇಟಿಗೆ ಹನೂರು...