Homeಕರ್ನಾಟಕಮೈತ್ರಿ ಸರ್ಕಾರದ ಶಾಸಕರಿಗೆ ಯಡಿಯೂರಪ್ಪ ಹಣದ ಆಮಿಷ: ತನಿಖೆಗೆ ಆದೇಶಿಸಿದ ಕೋರ್ಟ್

ಮೈತ್ರಿ ಸರ್ಕಾರದ ಶಾಸಕರಿಗೆ ಯಡಿಯೂರಪ್ಪ ಹಣದ ಆಮಿಷ: ತನಿಖೆಗೆ ಆದೇಶಿಸಿದ ಕೋರ್ಟ್

- Advertisement -
- Advertisement -

2019ರಲ್ಲಿ ಮೈತ್ರಿ ಸರ್ಕಾರವನ್ನು ಬೀಳಿಸುವಲ್ಲಿ ಸಿಎಂ ಯಡಿಯೂರಪ್ಪ ಪ್ರಮುಖ ಪಾತ್ರ ವಹಿಸಿದ್ದಾರೆ ಎನ್ನುವುದಕ್ಕೆ ಆಡಿಯೋ ಕ್ಲಿಪ್ ಸಾಕ್ಷಿಯಿತ್ತು. ಆದರೆ ಇದರ ತನಿಖೆಗೆ ಯಯಡಿಯೂರಪ್ಪ ತಡೆಯಾಜ್ಞೆ ತಂದಿದ್ದರು. ಆದರೆ ಈಗ ಹೈಕೋರ್ಟ್‌ನ ಕಲಬುರ್ಗಿಯ ವಿಶೇಷ ನ್ಯಾಯಪೀಠ ಈ ಪ್ರಕರಣವನ್ನು ತನಿಖೆ ನಡೆಸಲು ಆದೇಶ ನೀಡಿದೆ.

ಹೆಚ್​.ಡಿ. ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್​-ಜೆಡಿಎಸ್ ಮೈತ್ರಿ ಸರ್ಕಾರವನ್ನು ಉರುಳಿಸುವ ನಿಟ್ಟಿನಲ್ಲಿ 2019ರಲ್ಲಿ ಅಂದಿನ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಸಾಕಷ್ಟು ಕಸರತ್ತು ನಡೆಸಿದ್ದರು. ಕಾಂಗ್ರೆಸ್​-ಜೆಡಿಎಸ್​ ಶಾಸಕರನ್ನು ಸಂಪರ್ಕಿಸಿ ಅವರಿಗೆ ಹಣದ ಆಮಿಷವೊಡ್ಡಿ ಬಿಜೆಪಿ ಸರ್ಕಾರ ರಚಿಸಲು ಯತ್ನಿಸಿದ್ದರು. ಈ ಸಂಬಂಧ ಬಿಡುಗಡೆಯಾಗಿದ್ದ ಬಿ.ಎಸ್.​ ಯಡಿಯೂರಪ್ಪ​ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಕ್ಲಿಪ್​ ರಾಜ್ಯದಲ್ಲಿ ದೊಡ್ಡ ಮಟ್ಟದ ಸಂಚಲನವನ್ನು ಸೃಷ್ಟಿ ಮಾಡಿತ್ತು.

ತಮ್ಮ ತಂದೆಯ ಕಡೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಿಸಲು ಆಮಿಷವೊಡ್ಡಲಾಗಿತ್ತು ಎಂದು ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಪುತ್ರ ಶರಣಗೌಡ ಪಾಟೀಲ ಕಂದಕೂರ ಅವರಿಂದ ಬಿ.ಎಸ್.​ ಯಡಿಯೂರಪ್ಪ ವಿರುದ್ಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅಲ್ಲದೆ, ಈ ಕುರಿತ ಆಡಿಯೋ ಸಹ ಬಿಡುಗಡೆಯಾಗಿತ್ತು.

ಇದನ್ನೂ ಓದಿ: ಇಶ್ರತ್ ಜಹಾನ್ ನಕಲಿ ಎನ್ಕೌಂಟರ್: 3 ಪೊಲೀಸರನ್ನು ಬಿಡುಗಡೆ ಮಾಡಿದ ಸಿಬಿಐ ಕೋರ್ಟ್

2019 ರಲ್ಲಿ ಬಿ.ಎಸ್​. ಯಡಿಯೂರಪ್ಪ ಆಪರೇಷನ್ ಕಮಲದ ಆಡಿಯೋ ಬಿಡುಗಡೆಯಾಗುತ್ತಿದ್ದಂತೆ ಅಂದಿನ ಸ್ಪೀಕರ್​ ರಮೇಶ್​ ಕುಮಾರ್​ ಈ ಪ್ರಕರಣವನ್ನು ಎಸ್​ಐಟಿ ತನಿಖೆಗೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದರು. ಆದರೆ, ಅಂದಿನ ಸಿಎಂ ಕುಮಾರಸ್ವಾಮಿ ಈ ಪ್ರಕರಣವನ್ನು ಎಸ್​ಐಟಿ ತನಿಖೆಗೆ ನೀಡಿರಲಿಲ್ಲ. ಆದರೆ, ಪೊಲೀಸ್​ ಠಾಣೆಯಲ್ಲಿ ಸಲ್ಲಿಸಿದ ದೂರಿನ ಮೇಲೆ ಪೊಲೀಸರು ತನಿಖೆ ಕೈಗೊಳ್ಳಲೇಬೇಕಿತ್ತು.

ಆದರೆ, ಬಿಜೆಪಿ ನಾಯಕರು ಕಲಬುರ್ಗಿ ಹೈಕೋರ್ಟ್ ಪೀಠದಲ್ಲಿ ಪ್ರಕರಣದ ತನಿಖೆಗೆ ತಡೆಯಾಜ್ಞೆ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ನಂತರ ಈ ಪ್ರಕರಣವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿತ್ತು. ಹೀಗಾಗಿ ತಡೆಯಾಜ್ಞೆ ತೆರೆವುಗೊಳಿಸುವಂತೆ ಶರಣಗೌಡ ಪಾಟೀಲ ಕಂದಕೂರರಿಂದ ಮೇಲ್ಮನವಿ ಸಲ್ಲಿಸಲಾಗಿತ್ತು. ಶರಣಗೌಡ ಕಂದಕೂರ ಪರ ಹಿರಿಯ ನ್ಯಾಯವಾದಿ ರವಿವರ್ಮ ಕುಮಾರ್ ಮತ್ತು ಪಿ.ವಿಲಾಸ್ ಕುಮಾರ್ ರಿಂದ ವಾದ ಮಂಡನೆ ಮಾಡಲಾಗಿತ್ತು.

ಯಡಿಯೂರಪ್ಪ ಪರ ಅಶೋಕ್ ಹಾರನಹಳ್ಳಿ, ಸಿ.ವಿ.ನಾಗೇಶ್ ಮತ್ತು ಸರ್ಕಾರಿ ವಕೀಲರಿಂದ ವಾದ ಮಂಡನೆ ಮಾಡಲಾಗಿತ್ತು. ಕೊನೆಗೆ ವಾದ ವಿವಾದ ಆಲಿಸಿದ ಹೈಕೋರ್ಟ್ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಯಡಿಯೂರಪ್ಪ ವಿರುದ್ಧದ ಅಪರೇಷನ್ ಕಮಲ ಆಡಿಯೋ ಪ್ರಕರಣದ ತನಿಖೆಗೆ ಅವಕಾಶ ಕಲ್ಪಿಸಿ ಆದೇಶಿಸಿದೆ. ಇದು ಯಡಿಯೂರಪ್ಪನವರಿಗೆ ಮತ್ತೊಂದು ಆಘಾತ ತಂದಿದೆ.


ಇದನ್ನೂ ಓದಿ: ಯಡಿಯೂರಪ್ಪ ಆಪರೇಷನ್ ಕಮಲದ ಪಿತಾಮಹ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...

ಬಿಹಾರ| ಗ್ರಾಮ ತೊರೆಯಿರಿ ಅಥವಾ ‘ಘರ್ ವಾಪ್ಸಿ’ಯಾಗಿ; ಹಿಂದುತ್ವ ಗುಂಪಿನಿಂದ ಕ್ರೈಸ್ತ ಕಟುಂಬಗಳಿಗೆ ಬೆದರಿಕೆ

ಬಿಹಾರದ ಭಾಗಲ್ಪುರ ಜಿಲ್ಲೆಯ ಗೋಪಾಲಪುರ ಗ್ರಾಮದ 42 ಕ್ರಿಶ್ಚಿಯನ್ ಕುಟುಂಬಗಳಿಗೆ ಹಿಂದುತ್ವ ಗುಂಪಿನ ಸದಸ್ಯರು ಬೆದರಿಕೆ ಹಾಕಿದ್ದಾರೆ ಎಂದು 'ಕ್ಲಾರಿಯನ್ ಇಂಡಿಯಾ' ನ್ಯೂಸ್‌ ಪೋರ್ಟ್ಲ್ ವರದಿ ಮಾಡಿದೆ. 'ಘರ್ ವಾಪ್ಸಿ'ಯಾಗಿ ಅಥವಾ ಗ್ರಾಮ...

ಭೂಮಾನಂದ ಹತ್ಯೆ: ಕೊಲೆಗಾರರ ಪರ ನಿಂತ ‘ವಾಲ್ಮೀಕಿ ನಾಯಕ ಸಂಘ’ದ ವಿರುದ್ಧ ಆಕ್ರೋಶ: ಆಗಸ್ಟ್ 15ಕ್ಕೆ ಕಪ್ಪುಪಟ್ಟಿ ಪ್ರದರ್ಶನ, ಬೈಕ್ ರ್ಯಾಲಿಗೆ ಕರೆ

ರಾಯಚೂರು: ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಹುಜನ ಮುಖಂಡ ಭೂಮಾನಂದ ಅವರ ಬರ್ಬರ ಕಗ್ಗೋಲೆಯನ್ನು ಖಂಡಿಸಿ, ಕೊಲೆಗಡುಕರ ಪರವಾಗಿ ನಿಂತಿರುವ ಸಂಘಟನೆಗಳು ಹಾಗೂ ಮೌನ ವಹಿಸಿರುವ ಜನಪ್ರತಿನಿಧಿಗಳ ವಿರುದ್ಧ 'ಬಹುಜನ ಮುಖಂಡ ಭೂಮಾನಂದನ...

SIR ಅವಾಂತರ: ನಟ ಪ್ರಕಾಶ್ ರಾಜ್ ಹೆಸರೇ ವೋಟರ್ ಲಿಸ್ಟ್‌ನಿಂದ ನಾಪತ್ತೆ, ನಾಳೆ ಬೆಂಗಳೂರಲ್ಲಿ ಮಹತ್ವದ ಪತ್ರಿಕಾಗೋಷ್ಠಿ

ರಾಜ್ಯದಲ್ಲಿ ನಡೆಯುತ್ತಿರುವ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಅವಾಂತರಗಳು ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ಹೆಸರೇ ಮತದಾರರ ಪಟ್ಟಿಯಿಂದ ನಾಪತ್ತೆಯಾಗಿದೆ. ವರ್ಷಗಳಿಂದ ಮತದಾನ...

ಹಳೆ ಮತದಾರರಲ್ಲಿ ಫಾರ್ಮ್ ನಂ.6 ಕೇಳುವುದೇ ಕಾನೂನು ಬಾಹಿರ; ಚುನಾವಣಾ ಆಯೋಗದ ನಿಯಮಗಳಿಗೆ ವಿರುದ್ಧ!

"ASDDO ಪಟ್ಟಿಯಲ್ಲಿ ಹೆಸರು ಬಂದಿದ್ದರೆ ಹೆದರಿಕೊಳ್ಳುವ ಅವಶ್ಯಕತೆ ಇಲ್ಲ, ಫಾರ್ಮ್ ನಂ.6 ಸಲ್ಲಿಸುವ ಮೂಲಕ ದಾಖಲೆಗಳನ್ನು ನೀಡಿ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಬಹುದು" ಎಂದು ಚುನಾವಣಾ ಆಯೋಗ ಹೇಳುತ್ತಿದೆ. ಆದರೆ, ಹಳೆ...

SIR: ಅರ್ಹ ಮತದಾರರನ್ನು ಹೊರಗಿಟ್ಟು 1,848 ಹೊಸ ಮತಗಟ್ಟೆ ಸ್ಥಾಪಿಸಲು ಮುಂದಾದ ಚುನಾವಣಾ ಆಯೋಗ

ಒಂದೆಡೆ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹೆಸರುಗಳು ಡಿಲೀಟ್‌ ಆಗುವ ಭೀತಿ ಎದುರಾಗಿದ್ದರೆ, ಇನ್ನೊಂದೆಡೆ ರಾಜ್ಯದಲ್ಲಿ ಹೊಸದಾಗಿ 1,848 ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಲು ಕೇಂದ್ರ ಚುನಾವಣಾ...

ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಷಣದ ಬೆನ್ನಲ್ಲೇ ವೇದಿಕೆ ‘ಶುದ್ಧೀಕರಣ’: ಕೇಂದ್ರ ಸರ್ಕಾರ ಹಾಗೂ ಬಿಜೆಪಿಗೆ ಪ್ರತಿಪಕ್ಷಗಳ ತೀವ್ರ ತರಾಟೆ 

ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ಹಲ್ದ್ವಾನಿಯಲ್ಲಿರುವ ರಾಮ್‌ಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕೆಲವೇ ದಿನಗಳಲ್ಲಿ, ಬಲಪಂಥೀಯ...

ನೀಟ್ ಪೇಪರ್ ಲೀಕ್ ಪ್ರಕರಣದ ಚಾರ್ಜ್ ಶೀಟ್ ಲೀಕ್ : ಕೋರ್ಟ್ ಕಳವಳ

ನೀಟ್ ಯುಜಿ- 2026ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆಗಾಗಿ ಸ್ಥಾಪಿಸಲಾದ ವಿಶೇಷ ಫಾಸ್ಟ್ ಟ್ರ್ಯಾಕ್ (ಶೀಘ್ರ ಗತಿ) ನ್ಯಾಯಾಲಯವು, 13 ಆರೋಪಿಗಳ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿರುವ ದೋಷಾರೋಪ...