Homeಕರ್ನಾಟಕಮೈತ್ರಿ ಸರ್ಕಾರದ ಶಾಸಕರಿಗೆ ಯಡಿಯೂರಪ್ಪ ಹಣದ ಆಮಿಷ: ತನಿಖೆಗೆ ಆದೇಶಿಸಿದ ಕೋರ್ಟ್

ಮೈತ್ರಿ ಸರ್ಕಾರದ ಶಾಸಕರಿಗೆ ಯಡಿಯೂರಪ್ಪ ಹಣದ ಆಮಿಷ: ತನಿಖೆಗೆ ಆದೇಶಿಸಿದ ಕೋರ್ಟ್

- Advertisement -
- Advertisement -

2019ರಲ್ಲಿ ಮೈತ್ರಿ ಸರ್ಕಾರವನ್ನು ಬೀಳಿಸುವಲ್ಲಿ ಸಿಎಂ ಯಡಿಯೂರಪ್ಪ ಪ್ರಮುಖ ಪಾತ್ರ ವಹಿಸಿದ್ದಾರೆ ಎನ್ನುವುದಕ್ಕೆ ಆಡಿಯೋ ಕ್ಲಿಪ್ ಸಾಕ್ಷಿಯಿತ್ತು. ಆದರೆ ಇದರ ತನಿಖೆಗೆ ಯಯಡಿಯೂರಪ್ಪ ತಡೆಯಾಜ್ಞೆ ತಂದಿದ್ದರು. ಆದರೆ ಈಗ ಹೈಕೋರ್ಟ್‌ನ ಕಲಬುರ್ಗಿಯ ವಿಶೇಷ ನ್ಯಾಯಪೀಠ ಈ ಪ್ರಕರಣವನ್ನು ತನಿಖೆ ನಡೆಸಲು ಆದೇಶ ನೀಡಿದೆ.

ಹೆಚ್​.ಡಿ. ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್​-ಜೆಡಿಎಸ್ ಮೈತ್ರಿ ಸರ್ಕಾರವನ್ನು ಉರುಳಿಸುವ ನಿಟ್ಟಿನಲ್ಲಿ 2019ರಲ್ಲಿ ಅಂದಿನ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಸಾಕಷ್ಟು ಕಸರತ್ತು ನಡೆಸಿದ್ದರು. ಕಾಂಗ್ರೆಸ್​-ಜೆಡಿಎಸ್​ ಶಾಸಕರನ್ನು ಸಂಪರ್ಕಿಸಿ ಅವರಿಗೆ ಹಣದ ಆಮಿಷವೊಡ್ಡಿ ಬಿಜೆಪಿ ಸರ್ಕಾರ ರಚಿಸಲು ಯತ್ನಿಸಿದ್ದರು. ಈ ಸಂಬಂಧ ಬಿಡುಗಡೆಯಾಗಿದ್ದ ಬಿ.ಎಸ್.​ ಯಡಿಯೂರಪ್ಪ​ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಕ್ಲಿಪ್​ ರಾಜ್ಯದಲ್ಲಿ ದೊಡ್ಡ ಮಟ್ಟದ ಸಂಚಲನವನ್ನು ಸೃಷ್ಟಿ ಮಾಡಿತ್ತು.

ತಮ್ಮ ತಂದೆಯ ಕಡೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಿಸಲು ಆಮಿಷವೊಡ್ಡಲಾಗಿತ್ತು ಎಂದು ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಪುತ್ರ ಶರಣಗೌಡ ಪಾಟೀಲ ಕಂದಕೂರ ಅವರಿಂದ ಬಿ.ಎಸ್.​ ಯಡಿಯೂರಪ್ಪ ವಿರುದ್ಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅಲ್ಲದೆ, ಈ ಕುರಿತ ಆಡಿಯೋ ಸಹ ಬಿಡುಗಡೆಯಾಗಿತ್ತು.

ಇದನ್ನೂ ಓದಿ: ಇಶ್ರತ್ ಜಹಾನ್ ನಕಲಿ ಎನ್ಕೌಂಟರ್: 3 ಪೊಲೀಸರನ್ನು ಬಿಡುಗಡೆ ಮಾಡಿದ ಸಿಬಿಐ ಕೋರ್ಟ್

2019 ರಲ್ಲಿ ಬಿ.ಎಸ್​. ಯಡಿಯೂರಪ್ಪ ಆಪರೇಷನ್ ಕಮಲದ ಆಡಿಯೋ ಬಿಡುಗಡೆಯಾಗುತ್ತಿದ್ದಂತೆ ಅಂದಿನ ಸ್ಪೀಕರ್​ ರಮೇಶ್​ ಕುಮಾರ್​ ಈ ಪ್ರಕರಣವನ್ನು ಎಸ್​ಐಟಿ ತನಿಖೆಗೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದರು. ಆದರೆ, ಅಂದಿನ ಸಿಎಂ ಕುಮಾರಸ್ವಾಮಿ ಈ ಪ್ರಕರಣವನ್ನು ಎಸ್​ಐಟಿ ತನಿಖೆಗೆ ನೀಡಿರಲಿಲ್ಲ. ಆದರೆ, ಪೊಲೀಸ್​ ಠಾಣೆಯಲ್ಲಿ ಸಲ್ಲಿಸಿದ ದೂರಿನ ಮೇಲೆ ಪೊಲೀಸರು ತನಿಖೆ ಕೈಗೊಳ್ಳಲೇಬೇಕಿತ್ತು.

ಆದರೆ, ಬಿಜೆಪಿ ನಾಯಕರು ಕಲಬುರ್ಗಿ ಹೈಕೋರ್ಟ್ ಪೀಠದಲ್ಲಿ ಪ್ರಕರಣದ ತನಿಖೆಗೆ ತಡೆಯಾಜ್ಞೆ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ನಂತರ ಈ ಪ್ರಕರಣವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿತ್ತು. ಹೀಗಾಗಿ ತಡೆಯಾಜ್ಞೆ ತೆರೆವುಗೊಳಿಸುವಂತೆ ಶರಣಗೌಡ ಪಾಟೀಲ ಕಂದಕೂರರಿಂದ ಮೇಲ್ಮನವಿ ಸಲ್ಲಿಸಲಾಗಿತ್ತು. ಶರಣಗೌಡ ಕಂದಕೂರ ಪರ ಹಿರಿಯ ನ್ಯಾಯವಾದಿ ರವಿವರ್ಮ ಕುಮಾರ್ ಮತ್ತು ಪಿ.ವಿಲಾಸ್ ಕುಮಾರ್ ರಿಂದ ವಾದ ಮಂಡನೆ ಮಾಡಲಾಗಿತ್ತು.

ಯಡಿಯೂರಪ್ಪ ಪರ ಅಶೋಕ್ ಹಾರನಹಳ್ಳಿ, ಸಿ.ವಿ.ನಾಗೇಶ್ ಮತ್ತು ಸರ್ಕಾರಿ ವಕೀಲರಿಂದ ವಾದ ಮಂಡನೆ ಮಾಡಲಾಗಿತ್ತು. ಕೊನೆಗೆ ವಾದ ವಿವಾದ ಆಲಿಸಿದ ಹೈಕೋರ್ಟ್ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಯಡಿಯೂರಪ್ಪ ವಿರುದ್ಧದ ಅಪರೇಷನ್ ಕಮಲ ಆಡಿಯೋ ಪ್ರಕರಣದ ತನಿಖೆಗೆ ಅವಕಾಶ ಕಲ್ಪಿಸಿ ಆದೇಶಿಸಿದೆ. ಇದು ಯಡಿಯೂರಪ್ಪನವರಿಗೆ ಮತ್ತೊಂದು ಆಘಾತ ತಂದಿದೆ.


ಇದನ್ನೂ ಓದಿ: ಯಡಿಯೂರಪ್ಪ ಆಪರೇಷನ್ ಕಮಲದ ಪಿತಾಮಹ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....