Homeಕರ್ನಾಟಕಮೈತ್ರಿ ಸರ್ಕಾರದ ಶಾಸಕರಿಗೆ ಯಡಿಯೂರಪ್ಪ ಹಣದ ಆಮಿಷ: ತನಿಖೆಗೆ ಆದೇಶಿಸಿದ ಕೋರ್ಟ್

ಮೈತ್ರಿ ಸರ್ಕಾರದ ಶಾಸಕರಿಗೆ ಯಡಿಯೂರಪ್ಪ ಹಣದ ಆಮಿಷ: ತನಿಖೆಗೆ ಆದೇಶಿಸಿದ ಕೋರ್ಟ್

- Advertisement -
- Advertisement -

2019ರಲ್ಲಿ ಮೈತ್ರಿ ಸರ್ಕಾರವನ್ನು ಬೀಳಿಸುವಲ್ಲಿ ಸಿಎಂ ಯಡಿಯೂರಪ್ಪ ಪ್ರಮುಖ ಪಾತ್ರ ವಹಿಸಿದ್ದಾರೆ ಎನ್ನುವುದಕ್ಕೆ ಆಡಿಯೋ ಕ್ಲಿಪ್ ಸಾಕ್ಷಿಯಿತ್ತು. ಆದರೆ ಇದರ ತನಿಖೆಗೆ ಯಯಡಿಯೂರಪ್ಪ ತಡೆಯಾಜ್ಞೆ ತಂದಿದ್ದರು. ಆದರೆ ಈಗ ಹೈಕೋರ್ಟ್‌ನ ಕಲಬುರ್ಗಿಯ ವಿಶೇಷ ನ್ಯಾಯಪೀಠ ಈ ಪ್ರಕರಣವನ್ನು ತನಿಖೆ ನಡೆಸಲು ಆದೇಶ ನೀಡಿದೆ.

ಹೆಚ್​.ಡಿ. ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್​-ಜೆಡಿಎಸ್ ಮೈತ್ರಿ ಸರ್ಕಾರವನ್ನು ಉರುಳಿಸುವ ನಿಟ್ಟಿನಲ್ಲಿ 2019ರಲ್ಲಿ ಅಂದಿನ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಸಾಕಷ್ಟು ಕಸರತ್ತು ನಡೆಸಿದ್ದರು. ಕಾಂಗ್ರೆಸ್​-ಜೆಡಿಎಸ್​ ಶಾಸಕರನ್ನು ಸಂಪರ್ಕಿಸಿ ಅವರಿಗೆ ಹಣದ ಆಮಿಷವೊಡ್ಡಿ ಬಿಜೆಪಿ ಸರ್ಕಾರ ರಚಿಸಲು ಯತ್ನಿಸಿದ್ದರು. ಈ ಸಂಬಂಧ ಬಿಡುಗಡೆಯಾಗಿದ್ದ ಬಿ.ಎಸ್.​ ಯಡಿಯೂರಪ್ಪ​ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಕ್ಲಿಪ್​ ರಾಜ್ಯದಲ್ಲಿ ದೊಡ್ಡ ಮಟ್ಟದ ಸಂಚಲನವನ್ನು ಸೃಷ್ಟಿ ಮಾಡಿತ್ತು.

ತಮ್ಮ ತಂದೆಯ ಕಡೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಿಸಲು ಆಮಿಷವೊಡ್ಡಲಾಗಿತ್ತು ಎಂದು ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಪುತ್ರ ಶರಣಗೌಡ ಪಾಟೀಲ ಕಂದಕೂರ ಅವರಿಂದ ಬಿ.ಎಸ್.​ ಯಡಿಯೂರಪ್ಪ ವಿರುದ್ಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅಲ್ಲದೆ, ಈ ಕುರಿತ ಆಡಿಯೋ ಸಹ ಬಿಡುಗಡೆಯಾಗಿತ್ತು.

ಇದನ್ನೂ ಓದಿ: ಇಶ್ರತ್ ಜಹಾನ್ ನಕಲಿ ಎನ್ಕೌಂಟರ್: 3 ಪೊಲೀಸರನ್ನು ಬಿಡುಗಡೆ ಮಾಡಿದ ಸಿಬಿಐ ಕೋರ್ಟ್

2019 ರಲ್ಲಿ ಬಿ.ಎಸ್​. ಯಡಿಯೂರಪ್ಪ ಆಪರೇಷನ್ ಕಮಲದ ಆಡಿಯೋ ಬಿಡುಗಡೆಯಾಗುತ್ತಿದ್ದಂತೆ ಅಂದಿನ ಸ್ಪೀಕರ್​ ರಮೇಶ್​ ಕುಮಾರ್​ ಈ ಪ್ರಕರಣವನ್ನು ಎಸ್​ಐಟಿ ತನಿಖೆಗೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದರು. ಆದರೆ, ಅಂದಿನ ಸಿಎಂ ಕುಮಾರಸ್ವಾಮಿ ಈ ಪ್ರಕರಣವನ್ನು ಎಸ್​ಐಟಿ ತನಿಖೆಗೆ ನೀಡಿರಲಿಲ್ಲ. ಆದರೆ, ಪೊಲೀಸ್​ ಠಾಣೆಯಲ್ಲಿ ಸಲ್ಲಿಸಿದ ದೂರಿನ ಮೇಲೆ ಪೊಲೀಸರು ತನಿಖೆ ಕೈಗೊಳ್ಳಲೇಬೇಕಿತ್ತು.

ಆದರೆ, ಬಿಜೆಪಿ ನಾಯಕರು ಕಲಬುರ್ಗಿ ಹೈಕೋರ್ಟ್ ಪೀಠದಲ್ಲಿ ಪ್ರಕರಣದ ತನಿಖೆಗೆ ತಡೆಯಾಜ್ಞೆ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ನಂತರ ಈ ಪ್ರಕರಣವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿತ್ತು. ಹೀಗಾಗಿ ತಡೆಯಾಜ್ಞೆ ತೆರೆವುಗೊಳಿಸುವಂತೆ ಶರಣಗೌಡ ಪಾಟೀಲ ಕಂದಕೂರರಿಂದ ಮೇಲ್ಮನವಿ ಸಲ್ಲಿಸಲಾಗಿತ್ತು. ಶರಣಗೌಡ ಕಂದಕೂರ ಪರ ಹಿರಿಯ ನ್ಯಾಯವಾದಿ ರವಿವರ್ಮ ಕುಮಾರ್ ಮತ್ತು ಪಿ.ವಿಲಾಸ್ ಕುಮಾರ್ ರಿಂದ ವಾದ ಮಂಡನೆ ಮಾಡಲಾಗಿತ್ತು.

ಯಡಿಯೂರಪ್ಪ ಪರ ಅಶೋಕ್ ಹಾರನಹಳ್ಳಿ, ಸಿ.ವಿ.ನಾಗೇಶ್ ಮತ್ತು ಸರ್ಕಾರಿ ವಕೀಲರಿಂದ ವಾದ ಮಂಡನೆ ಮಾಡಲಾಗಿತ್ತು. ಕೊನೆಗೆ ವಾದ ವಿವಾದ ಆಲಿಸಿದ ಹೈಕೋರ್ಟ್ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಯಡಿಯೂರಪ್ಪ ವಿರುದ್ಧದ ಅಪರೇಷನ್ ಕಮಲ ಆಡಿಯೋ ಪ್ರಕರಣದ ತನಿಖೆಗೆ ಅವಕಾಶ ಕಲ್ಪಿಸಿ ಆದೇಶಿಸಿದೆ. ಇದು ಯಡಿಯೂರಪ್ಪನವರಿಗೆ ಮತ್ತೊಂದು ಆಘಾತ ತಂದಿದೆ.


ಇದನ್ನೂ ಓದಿ: ಯಡಿಯೂರಪ್ಪ ಆಪರೇಷನ್ ಕಮಲದ ಪಿತಾಮಹ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...