Homeಕರ್ನಾಟಕಮೈತ್ರಿ ಸರ್ಕಾರದ ಶಾಸಕರಿಗೆ ಯಡಿಯೂರಪ್ಪ ಹಣದ ಆಮಿಷ: ತನಿಖೆಗೆ ಆದೇಶಿಸಿದ ಕೋರ್ಟ್

ಮೈತ್ರಿ ಸರ್ಕಾರದ ಶಾಸಕರಿಗೆ ಯಡಿಯೂರಪ್ಪ ಹಣದ ಆಮಿಷ: ತನಿಖೆಗೆ ಆದೇಶಿಸಿದ ಕೋರ್ಟ್

- Advertisement -
- Advertisement -

2019ರಲ್ಲಿ ಮೈತ್ರಿ ಸರ್ಕಾರವನ್ನು ಬೀಳಿಸುವಲ್ಲಿ ಸಿಎಂ ಯಡಿಯೂರಪ್ಪ ಪ್ರಮುಖ ಪಾತ್ರ ವಹಿಸಿದ್ದಾರೆ ಎನ್ನುವುದಕ್ಕೆ ಆಡಿಯೋ ಕ್ಲಿಪ್ ಸಾಕ್ಷಿಯಿತ್ತು. ಆದರೆ ಇದರ ತನಿಖೆಗೆ ಯಯಡಿಯೂರಪ್ಪ ತಡೆಯಾಜ್ಞೆ ತಂದಿದ್ದರು. ಆದರೆ ಈಗ ಹೈಕೋರ್ಟ್‌ನ ಕಲಬುರ್ಗಿಯ ವಿಶೇಷ ನ್ಯಾಯಪೀಠ ಈ ಪ್ರಕರಣವನ್ನು ತನಿಖೆ ನಡೆಸಲು ಆದೇಶ ನೀಡಿದೆ.

ಹೆಚ್​.ಡಿ. ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್​-ಜೆಡಿಎಸ್ ಮೈತ್ರಿ ಸರ್ಕಾರವನ್ನು ಉರುಳಿಸುವ ನಿಟ್ಟಿನಲ್ಲಿ 2019ರಲ್ಲಿ ಅಂದಿನ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಸಾಕಷ್ಟು ಕಸರತ್ತು ನಡೆಸಿದ್ದರು. ಕಾಂಗ್ರೆಸ್​-ಜೆಡಿಎಸ್​ ಶಾಸಕರನ್ನು ಸಂಪರ್ಕಿಸಿ ಅವರಿಗೆ ಹಣದ ಆಮಿಷವೊಡ್ಡಿ ಬಿಜೆಪಿ ಸರ್ಕಾರ ರಚಿಸಲು ಯತ್ನಿಸಿದ್ದರು. ಈ ಸಂಬಂಧ ಬಿಡುಗಡೆಯಾಗಿದ್ದ ಬಿ.ಎಸ್.​ ಯಡಿಯೂರಪ್ಪ​ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಕ್ಲಿಪ್​ ರಾಜ್ಯದಲ್ಲಿ ದೊಡ್ಡ ಮಟ್ಟದ ಸಂಚಲನವನ್ನು ಸೃಷ್ಟಿ ಮಾಡಿತ್ತು.

ತಮ್ಮ ತಂದೆಯ ಕಡೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಿಸಲು ಆಮಿಷವೊಡ್ಡಲಾಗಿತ್ತು ಎಂದು ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಪುತ್ರ ಶರಣಗೌಡ ಪಾಟೀಲ ಕಂದಕೂರ ಅವರಿಂದ ಬಿ.ಎಸ್.​ ಯಡಿಯೂರಪ್ಪ ವಿರುದ್ಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅಲ್ಲದೆ, ಈ ಕುರಿತ ಆಡಿಯೋ ಸಹ ಬಿಡುಗಡೆಯಾಗಿತ್ತು.

ಇದನ್ನೂ ಓದಿ: ಇಶ್ರತ್ ಜಹಾನ್ ನಕಲಿ ಎನ್ಕೌಂಟರ್: 3 ಪೊಲೀಸರನ್ನು ಬಿಡುಗಡೆ ಮಾಡಿದ ಸಿಬಿಐ ಕೋರ್ಟ್

2019 ರಲ್ಲಿ ಬಿ.ಎಸ್​. ಯಡಿಯೂರಪ್ಪ ಆಪರೇಷನ್ ಕಮಲದ ಆಡಿಯೋ ಬಿಡುಗಡೆಯಾಗುತ್ತಿದ್ದಂತೆ ಅಂದಿನ ಸ್ಪೀಕರ್​ ರಮೇಶ್​ ಕುಮಾರ್​ ಈ ಪ್ರಕರಣವನ್ನು ಎಸ್​ಐಟಿ ತನಿಖೆಗೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದರು. ಆದರೆ, ಅಂದಿನ ಸಿಎಂ ಕುಮಾರಸ್ವಾಮಿ ಈ ಪ್ರಕರಣವನ್ನು ಎಸ್​ಐಟಿ ತನಿಖೆಗೆ ನೀಡಿರಲಿಲ್ಲ. ಆದರೆ, ಪೊಲೀಸ್​ ಠಾಣೆಯಲ್ಲಿ ಸಲ್ಲಿಸಿದ ದೂರಿನ ಮೇಲೆ ಪೊಲೀಸರು ತನಿಖೆ ಕೈಗೊಳ್ಳಲೇಬೇಕಿತ್ತು.

ಆದರೆ, ಬಿಜೆಪಿ ನಾಯಕರು ಕಲಬುರ್ಗಿ ಹೈಕೋರ್ಟ್ ಪೀಠದಲ್ಲಿ ಪ್ರಕರಣದ ತನಿಖೆಗೆ ತಡೆಯಾಜ್ಞೆ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ನಂತರ ಈ ಪ್ರಕರಣವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿತ್ತು. ಹೀಗಾಗಿ ತಡೆಯಾಜ್ಞೆ ತೆರೆವುಗೊಳಿಸುವಂತೆ ಶರಣಗೌಡ ಪಾಟೀಲ ಕಂದಕೂರರಿಂದ ಮೇಲ್ಮನವಿ ಸಲ್ಲಿಸಲಾಗಿತ್ತು. ಶರಣಗೌಡ ಕಂದಕೂರ ಪರ ಹಿರಿಯ ನ್ಯಾಯವಾದಿ ರವಿವರ್ಮ ಕುಮಾರ್ ಮತ್ತು ಪಿ.ವಿಲಾಸ್ ಕುಮಾರ್ ರಿಂದ ವಾದ ಮಂಡನೆ ಮಾಡಲಾಗಿತ್ತು.

ಯಡಿಯೂರಪ್ಪ ಪರ ಅಶೋಕ್ ಹಾರನಹಳ್ಳಿ, ಸಿ.ವಿ.ನಾಗೇಶ್ ಮತ್ತು ಸರ್ಕಾರಿ ವಕೀಲರಿಂದ ವಾದ ಮಂಡನೆ ಮಾಡಲಾಗಿತ್ತು. ಕೊನೆಗೆ ವಾದ ವಿವಾದ ಆಲಿಸಿದ ಹೈಕೋರ್ಟ್ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಯಡಿಯೂರಪ್ಪ ವಿರುದ್ಧದ ಅಪರೇಷನ್ ಕಮಲ ಆಡಿಯೋ ಪ್ರಕರಣದ ತನಿಖೆಗೆ ಅವಕಾಶ ಕಲ್ಪಿಸಿ ಆದೇಶಿಸಿದೆ. ಇದು ಯಡಿಯೂರಪ್ಪನವರಿಗೆ ಮತ್ತೊಂದು ಆಘಾತ ತಂದಿದೆ.


ಇದನ್ನೂ ಓದಿ: ಯಡಿಯೂರಪ್ಪ ಆಪರೇಷನ್ ಕಮಲದ ಪಿತಾಮಹ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...