Homeಮುಖಪುಟಯಡಿಯೂರಪ್ಪನವರೆ, ಶೇ.4% ಬಡ್ಡಿದರದ ಅಗ್ರಿಗೋಲ್ಡ್ ಯೋಜನೆ ಮತ್ತೆ ತನ್ನಿ.

ಯಡಿಯೂರಪ್ಪನವರೆ, ಶೇ.4% ಬಡ್ಡಿದರದ ಅಗ್ರಿಗೋಲ್ಡ್ ಯೋಜನೆ ಮತ್ತೆ ತನ್ನಿ.

- Advertisement -
- Advertisement -

ಸನ್ಮಾನ್ಯ ಮುಖ್ಯಮಂತ್ರಿಗಳೇ ನಿಮ್ಮ ಕಾರ್ಯವು ಶ್ಲಾಘನೀಯ. ಇದೇ ಸಂದರ್ಭದಲ್ಲಿ ನನ್ನದೊಂದು ಮನವಿ.
ರಾಜ್ಯದ ರೈತರು ಒಂದೆಡೆ ಬರ, ಮತ್ತೊಂದೆಡೆ ಪ್ರವಾಹ ಹಾಗೂ ಈಗ ಕೊರೊನಾ ಲಾಕ್ ಡೌನ್ ನಿಂದ ಆರ್ಥಿಕವಾಗಿ ಕಂಗಾಲಾಗಿದ್ದಾರೆ ಎಂಬುದನ್ನು ರೈತಹೋರಾಟಗಾರರಾದ ತಾವು ಬಲ್ಲಿರಿ. ಈ ನಡುವೆಯೇ
ಈಗ ತಾನೆ ಕೃಷಿ ಚಟುವಟಿಕೆಗಳು ಆರಂಭವಾಗಿವೆ.

ಕೃಷಿಕರು ತಮ್ಮ ಕೃಷಿ ಚಟುವಟಿಕೆಗಾಗಿ ತಮ್ಮಲ್ಲಿ ಇದ್ದ ಒಂದಷ್ಟು ಒಡವೆಗಳನ್ನು ಬ್ಯಾಂಕ್ ಗಳಲ್ಲಿ ಇಟ್ಟು ಸರ್ಕಾರ ನೀಡಿದ್ದ ಅಗ್ರಿಗೋಲ್ಡ್ ಲೋನ್ ಅಡಿಯಲ್ಲಿ ನಾಲ್ಕು ಪರ್ಸೆಂಟ್ ಬಡ್ಡಿದರದಲ್ಲಿ ಸಾಲ ತೆಗೆದುಕೊಳ್ಳುತ್ತಿದ್ದರು. ಆದರೆ ತಮ್ಮ ಸರ್ಕಾರ ಈ ಅಗ್ರಿಗೋಲ್ಡ್ ಸಹಾಯ ಯೋಜನೆಯನ್ನು ರದ್ದು ಪಡಿಸಿರುವುದರಿಂದಾಗಿ ಈಗ ವಾರ್ಷಿಕ ಶೇ.10.45 ದರದಲ್ಲಿ ಚಿನ್ನ ಅಡವಿಡಬೇಕಿದೆ.

ಈಗಾಗಲೇ ರಾಜ್ಯದ್ಯಂತ ವಿವಿಧ ಬ್ಯಾಂಕ್ ಗಳಲ್ಲಿ ಅಗ್ರಿಗೋಲ್ಡ್ ಯೋಜನೆಯಡಿ ಚಿನ್ನ ಅಡವಿಟ್ಟಿರುವ ರೈತರಿಗೆ ಈಗಿನ 10.45 ದರದಲ್ಲಿ ಬಡ್ಡಿ ವಿಧಿಸಿರುವುದರಿಂದ ಅನೇಕ ರೈತರಿಗೆ ಅದಕ್ಕೆ ಅಷ್ಡು ಬಡ್ಡಿ ಪಾವತಿ ಮಾಡಿ ಅಡವಿಟ್ಟ ಚಿನ್ನವನ್ನು ಬಿಡಿಸಿಕೊಳ್ಳಲಾಗದ ದುಃಸ್ಥಿತಿಯಲ್ಲಿ ಇದ್ದಾರೆ.

ರೈತಪರವಾಗಿ ಯೋಚಿಸುವ ತಾವು, ಹಿಂದೆ ಇದ್ದ ಅಗ್ರಿಗೋಲ್ಡ್ ಯೋಜನೆಯನ್ನು ಮತ್ತೆ ತರಬೇಕು. ಇದು ಸ್ವಾವಲಂಭಿ ರೈತರಿಗೆ ಒಳ್ಳೆಯ ಮಾರ್ಗವಾಗಿದೆ.

ಈಗಾಗಲೇ 10.45% ಇರುವ ಬಡ್ಡಿದರವನ್ನು ದಯಮಾಡಿ ರದ್ದುಗೊಳಿಸಿ ಹಿಂದಿನ 4% ದರದ ಬಡ್ಡಿಯಲ್ಲಿ ರೈತರಿಂದ ಬಡ್ಡಿ ವಸೂಲಿ ಮಾಡಲು ಆದೇಶ ನೀಡಿದರೆ ಲಕ್ಷಾಂತರ ರೈತರ ಕೋಟ್ಯಾಂತರ ರೂಪಾಯಿಯ ಚಿನ್ನ ಅವರ ಕನಸಿನ ಚಿನ್ನವನ್ನು ಅವರು ಬಿಡಿಸಿಕೊಳ್ಳಲು ಸಹಾಯವಾಗುತ್ತದೆ.

ಅನೇಕರು ತಮ್ಮ ಕೃಷಿ ಸಾಲಕ್ಕಾಗಿ ತಮ್ಮ ತಾಯಿಯ, ಸೋದರಿಯ, ಮಡದಿಯ ಇಲ್ಲವೇ ಮಕ್ಕಳ ತಾಳಿಸಹಿತವಾದ ಒಡವೆಗಳನ್ನು ಅಡಮಾನ ಮಾಡಿರುತ್ತಾರೆ. ಅವರ ನೆರೆವಿಗೆ ನಿಲ್ಲಬೇಕೆಂದು ತಮ್ಮಲ್ಲಿ ಮನವಿ ಮಾಡುತ್ತೇನೆ.

ಈಗಾಗಲೇ ಆಂದ್ರಪ್ರದೇಶ ಸರ್ಕಾರ ರೈತರ ಚಿನ್ನದ ಮೇಲಿನ ಬಡ್ಡಿಯನ್ನು ಸಂಪೂರ್ಣ ಮನ್ನಾ ಮಾಡಿರುವುದಾಗಿ ತಿಳಿದು ಬಂದಿದೆ.

ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಿದೆ, ರೈತರಿಗೆ ನರೇಗ ಯೋಜನೆಯಲ್ಲಿನ ಕೂಲಿಯನ್ನೂ ಹೆಚ್ಚು ಮಾಡಿದೆ, ಈಗ ರೈತರ ಹಿತಕ್ಕಾಗಿ ಕೃಷಿ ಚಟುವಟಿಕೆ ನಡೆಸುವುದಕ್ಕೂ ಲಾಕ್ ಡೌನ್ ಸಡಿಲಗೊಳಿಸಿದೆ.

ಇದೆಲ್ಲವೂ ರಾಜ್ಯ ಸರ್ಕಾರದ ರೈತಸ್ನೇಹಿ ನಡೆಗಳಾಗಿವೆ ಎಂಬುದನ್ನು ನೆನೆಯುತ್ತಲೇ ಬ್ಯಾಂಕುಗಳಲ್ಲಿ ರೈತರ ಚಿನ್ನದ ಮೇಲಿನ ಅಧಿಕ ಬಡ್ಡಿದರವನ್ನು ರದ್ದುಗೊಳಿಸಿ ಹಿಂದಿನ ಪದ್ದತಿಯಂತೆ 4% ಬಡ್ಡಿದರದಲ್ಲಿ ಅಗ್ರಿಗೋಲ್ಡ್ ಯೋಜನೆಯನ್ನು ಮುಂದುವರೆಸಲು ಮನವಿ ಮಾಡುತ್ತೇವೆ.

(ಲೇಖಕರು ಸಾಮಾಜಿಕ ಕಾರ್ಯಕರ್ತರು ಮತ್ತು ಯುವ ಬರಹಗಾರರು)


ಇದನ್ನೂ ಓದಿ: ಲಾಕ್‌ಡೌನ್‌ ಸಂಕಷ್ಟ: 1,610 ಕೋಟಿ ವಿಶೇಷ ಆರ್ಥಿಕ ಪ್ಯಾಕೇಜ್‌ ಘೋಷಿಸಿದ ಯಡಿಯೂರಪ್ಪ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...