Homeಮುಖಪುಟಯಡಿಯೂರಪ್ಪನವರೆ, ಶೇ.4% ಬಡ್ಡಿದರದ ಅಗ್ರಿಗೋಲ್ಡ್ ಯೋಜನೆ ಮತ್ತೆ ತನ್ನಿ.

ಯಡಿಯೂರಪ್ಪನವರೆ, ಶೇ.4% ಬಡ್ಡಿದರದ ಅಗ್ರಿಗೋಲ್ಡ್ ಯೋಜನೆ ಮತ್ತೆ ತನ್ನಿ.

- Advertisement -
- Advertisement -

ಸನ್ಮಾನ್ಯ ಮುಖ್ಯಮಂತ್ರಿಗಳೇ ನಿಮ್ಮ ಕಾರ್ಯವು ಶ್ಲಾಘನೀಯ. ಇದೇ ಸಂದರ್ಭದಲ್ಲಿ ನನ್ನದೊಂದು ಮನವಿ.
ರಾಜ್ಯದ ರೈತರು ಒಂದೆಡೆ ಬರ, ಮತ್ತೊಂದೆಡೆ ಪ್ರವಾಹ ಹಾಗೂ ಈಗ ಕೊರೊನಾ ಲಾಕ್ ಡೌನ್ ನಿಂದ ಆರ್ಥಿಕವಾಗಿ ಕಂಗಾಲಾಗಿದ್ದಾರೆ ಎಂಬುದನ್ನು ರೈತಹೋರಾಟಗಾರರಾದ ತಾವು ಬಲ್ಲಿರಿ. ಈ ನಡುವೆಯೇ
ಈಗ ತಾನೆ ಕೃಷಿ ಚಟುವಟಿಕೆಗಳು ಆರಂಭವಾಗಿವೆ.

ಕೃಷಿಕರು ತಮ್ಮ ಕೃಷಿ ಚಟುವಟಿಕೆಗಾಗಿ ತಮ್ಮಲ್ಲಿ ಇದ್ದ ಒಂದಷ್ಟು ಒಡವೆಗಳನ್ನು ಬ್ಯಾಂಕ್ ಗಳಲ್ಲಿ ಇಟ್ಟು ಸರ್ಕಾರ ನೀಡಿದ್ದ ಅಗ್ರಿಗೋಲ್ಡ್ ಲೋನ್ ಅಡಿಯಲ್ಲಿ ನಾಲ್ಕು ಪರ್ಸೆಂಟ್ ಬಡ್ಡಿದರದಲ್ಲಿ ಸಾಲ ತೆಗೆದುಕೊಳ್ಳುತ್ತಿದ್ದರು. ಆದರೆ ತಮ್ಮ ಸರ್ಕಾರ ಈ ಅಗ್ರಿಗೋಲ್ಡ್ ಸಹಾಯ ಯೋಜನೆಯನ್ನು ರದ್ದು ಪಡಿಸಿರುವುದರಿಂದಾಗಿ ಈಗ ವಾರ್ಷಿಕ ಶೇ.10.45 ದರದಲ್ಲಿ ಚಿನ್ನ ಅಡವಿಡಬೇಕಿದೆ.

ಈಗಾಗಲೇ ರಾಜ್ಯದ್ಯಂತ ವಿವಿಧ ಬ್ಯಾಂಕ್ ಗಳಲ್ಲಿ ಅಗ್ರಿಗೋಲ್ಡ್ ಯೋಜನೆಯಡಿ ಚಿನ್ನ ಅಡವಿಟ್ಟಿರುವ ರೈತರಿಗೆ ಈಗಿನ 10.45 ದರದಲ್ಲಿ ಬಡ್ಡಿ ವಿಧಿಸಿರುವುದರಿಂದ ಅನೇಕ ರೈತರಿಗೆ ಅದಕ್ಕೆ ಅಷ್ಡು ಬಡ್ಡಿ ಪಾವತಿ ಮಾಡಿ ಅಡವಿಟ್ಟ ಚಿನ್ನವನ್ನು ಬಿಡಿಸಿಕೊಳ್ಳಲಾಗದ ದುಃಸ್ಥಿತಿಯಲ್ಲಿ ಇದ್ದಾರೆ.

ರೈತಪರವಾಗಿ ಯೋಚಿಸುವ ತಾವು, ಹಿಂದೆ ಇದ್ದ ಅಗ್ರಿಗೋಲ್ಡ್ ಯೋಜನೆಯನ್ನು ಮತ್ತೆ ತರಬೇಕು. ಇದು ಸ್ವಾವಲಂಭಿ ರೈತರಿಗೆ ಒಳ್ಳೆಯ ಮಾರ್ಗವಾಗಿದೆ.

ಈಗಾಗಲೇ 10.45% ಇರುವ ಬಡ್ಡಿದರವನ್ನು ದಯಮಾಡಿ ರದ್ದುಗೊಳಿಸಿ ಹಿಂದಿನ 4% ದರದ ಬಡ್ಡಿಯಲ್ಲಿ ರೈತರಿಂದ ಬಡ್ಡಿ ವಸೂಲಿ ಮಾಡಲು ಆದೇಶ ನೀಡಿದರೆ ಲಕ್ಷಾಂತರ ರೈತರ ಕೋಟ್ಯಾಂತರ ರೂಪಾಯಿಯ ಚಿನ್ನ ಅವರ ಕನಸಿನ ಚಿನ್ನವನ್ನು ಅವರು ಬಿಡಿಸಿಕೊಳ್ಳಲು ಸಹಾಯವಾಗುತ್ತದೆ.

ಅನೇಕರು ತಮ್ಮ ಕೃಷಿ ಸಾಲಕ್ಕಾಗಿ ತಮ್ಮ ತಾಯಿಯ, ಸೋದರಿಯ, ಮಡದಿಯ ಇಲ್ಲವೇ ಮಕ್ಕಳ ತಾಳಿಸಹಿತವಾದ ಒಡವೆಗಳನ್ನು ಅಡಮಾನ ಮಾಡಿರುತ್ತಾರೆ. ಅವರ ನೆರೆವಿಗೆ ನಿಲ್ಲಬೇಕೆಂದು ತಮ್ಮಲ್ಲಿ ಮನವಿ ಮಾಡುತ್ತೇನೆ.

ಈಗಾಗಲೇ ಆಂದ್ರಪ್ರದೇಶ ಸರ್ಕಾರ ರೈತರ ಚಿನ್ನದ ಮೇಲಿನ ಬಡ್ಡಿಯನ್ನು ಸಂಪೂರ್ಣ ಮನ್ನಾ ಮಾಡಿರುವುದಾಗಿ ತಿಳಿದು ಬಂದಿದೆ.

ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಿದೆ, ರೈತರಿಗೆ ನರೇಗ ಯೋಜನೆಯಲ್ಲಿನ ಕೂಲಿಯನ್ನೂ ಹೆಚ್ಚು ಮಾಡಿದೆ, ಈಗ ರೈತರ ಹಿತಕ್ಕಾಗಿ ಕೃಷಿ ಚಟುವಟಿಕೆ ನಡೆಸುವುದಕ್ಕೂ ಲಾಕ್ ಡೌನ್ ಸಡಿಲಗೊಳಿಸಿದೆ.

ಇದೆಲ್ಲವೂ ರಾಜ್ಯ ಸರ್ಕಾರದ ರೈತಸ್ನೇಹಿ ನಡೆಗಳಾಗಿವೆ ಎಂಬುದನ್ನು ನೆನೆಯುತ್ತಲೇ ಬ್ಯಾಂಕುಗಳಲ್ಲಿ ರೈತರ ಚಿನ್ನದ ಮೇಲಿನ ಅಧಿಕ ಬಡ್ಡಿದರವನ್ನು ರದ್ದುಗೊಳಿಸಿ ಹಿಂದಿನ ಪದ್ದತಿಯಂತೆ 4% ಬಡ್ಡಿದರದಲ್ಲಿ ಅಗ್ರಿಗೋಲ್ಡ್ ಯೋಜನೆಯನ್ನು ಮುಂದುವರೆಸಲು ಮನವಿ ಮಾಡುತ್ತೇವೆ.

(ಲೇಖಕರು ಸಾಮಾಜಿಕ ಕಾರ್ಯಕರ್ತರು ಮತ್ತು ಯುವ ಬರಹಗಾರರು)


ಇದನ್ನೂ ಓದಿ: ಲಾಕ್‌ಡೌನ್‌ ಸಂಕಷ್ಟ: 1,610 ಕೋಟಿ ವಿಶೇಷ ಆರ್ಥಿಕ ಪ್ಯಾಕೇಜ್‌ ಘೋಷಿಸಿದ ಯಡಿಯೂರಪ್ಪ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...