Homeಮುಖಪುಟಯಡಿಯೂರಪ್ಪನವರೆ, ಶೇ.4% ಬಡ್ಡಿದರದ ಅಗ್ರಿಗೋಲ್ಡ್ ಯೋಜನೆ ಮತ್ತೆ ತನ್ನಿ.

ಯಡಿಯೂರಪ್ಪನವರೆ, ಶೇ.4% ಬಡ್ಡಿದರದ ಅಗ್ರಿಗೋಲ್ಡ್ ಯೋಜನೆ ಮತ್ತೆ ತನ್ನಿ.

- Advertisement -
- Advertisement -

ಸನ್ಮಾನ್ಯ ಮುಖ್ಯಮಂತ್ರಿಗಳೇ ನಿಮ್ಮ ಕಾರ್ಯವು ಶ್ಲಾಘನೀಯ. ಇದೇ ಸಂದರ್ಭದಲ್ಲಿ ನನ್ನದೊಂದು ಮನವಿ.
ರಾಜ್ಯದ ರೈತರು ಒಂದೆಡೆ ಬರ, ಮತ್ತೊಂದೆಡೆ ಪ್ರವಾಹ ಹಾಗೂ ಈಗ ಕೊರೊನಾ ಲಾಕ್ ಡೌನ್ ನಿಂದ ಆರ್ಥಿಕವಾಗಿ ಕಂಗಾಲಾಗಿದ್ದಾರೆ ಎಂಬುದನ್ನು ರೈತಹೋರಾಟಗಾರರಾದ ತಾವು ಬಲ್ಲಿರಿ. ಈ ನಡುವೆಯೇ
ಈಗ ತಾನೆ ಕೃಷಿ ಚಟುವಟಿಕೆಗಳು ಆರಂಭವಾಗಿವೆ.

ಕೃಷಿಕರು ತಮ್ಮ ಕೃಷಿ ಚಟುವಟಿಕೆಗಾಗಿ ತಮ್ಮಲ್ಲಿ ಇದ್ದ ಒಂದಷ್ಟು ಒಡವೆಗಳನ್ನು ಬ್ಯಾಂಕ್ ಗಳಲ್ಲಿ ಇಟ್ಟು ಸರ್ಕಾರ ನೀಡಿದ್ದ ಅಗ್ರಿಗೋಲ್ಡ್ ಲೋನ್ ಅಡಿಯಲ್ಲಿ ನಾಲ್ಕು ಪರ್ಸೆಂಟ್ ಬಡ್ಡಿದರದಲ್ಲಿ ಸಾಲ ತೆಗೆದುಕೊಳ್ಳುತ್ತಿದ್ದರು. ಆದರೆ ತಮ್ಮ ಸರ್ಕಾರ ಈ ಅಗ್ರಿಗೋಲ್ಡ್ ಸಹಾಯ ಯೋಜನೆಯನ್ನು ರದ್ದು ಪಡಿಸಿರುವುದರಿಂದಾಗಿ ಈಗ ವಾರ್ಷಿಕ ಶೇ.10.45 ದರದಲ್ಲಿ ಚಿನ್ನ ಅಡವಿಡಬೇಕಿದೆ.

ಈಗಾಗಲೇ ರಾಜ್ಯದ್ಯಂತ ವಿವಿಧ ಬ್ಯಾಂಕ್ ಗಳಲ್ಲಿ ಅಗ್ರಿಗೋಲ್ಡ್ ಯೋಜನೆಯಡಿ ಚಿನ್ನ ಅಡವಿಟ್ಟಿರುವ ರೈತರಿಗೆ ಈಗಿನ 10.45 ದರದಲ್ಲಿ ಬಡ್ಡಿ ವಿಧಿಸಿರುವುದರಿಂದ ಅನೇಕ ರೈತರಿಗೆ ಅದಕ್ಕೆ ಅಷ್ಡು ಬಡ್ಡಿ ಪಾವತಿ ಮಾಡಿ ಅಡವಿಟ್ಟ ಚಿನ್ನವನ್ನು ಬಿಡಿಸಿಕೊಳ್ಳಲಾಗದ ದುಃಸ್ಥಿತಿಯಲ್ಲಿ ಇದ್ದಾರೆ.

ರೈತಪರವಾಗಿ ಯೋಚಿಸುವ ತಾವು, ಹಿಂದೆ ಇದ್ದ ಅಗ್ರಿಗೋಲ್ಡ್ ಯೋಜನೆಯನ್ನು ಮತ್ತೆ ತರಬೇಕು. ಇದು ಸ್ವಾವಲಂಭಿ ರೈತರಿಗೆ ಒಳ್ಳೆಯ ಮಾರ್ಗವಾಗಿದೆ.

ಈಗಾಗಲೇ 10.45% ಇರುವ ಬಡ್ಡಿದರವನ್ನು ದಯಮಾಡಿ ರದ್ದುಗೊಳಿಸಿ ಹಿಂದಿನ 4% ದರದ ಬಡ್ಡಿಯಲ್ಲಿ ರೈತರಿಂದ ಬಡ್ಡಿ ವಸೂಲಿ ಮಾಡಲು ಆದೇಶ ನೀಡಿದರೆ ಲಕ್ಷಾಂತರ ರೈತರ ಕೋಟ್ಯಾಂತರ ರೂಪಾಯಿಯ ಚಿನ್ನ ಅವರ ಕನಸಿನ ಚಿನ್ನವನ್ನು ಅವರು ಬಿಡಿಸಿಕೊಳ್ಳಲು ಸಹಾಯವಾಗುತ್ತದೆ.

ಅನೇಕರು ತಮ್ಮ ಕೃಷಿ ಸಾಲಕ್ಕಾಗಿ ತಮ್ಮ ತಾಯಿಯ, ಸೋದರಿಯ, ಮಡದಿಯ ಇಲ್ಲವೇ ಮಕ್ಕಳ ತಾಳಿಸಹಿತವಾದ ಒಡವೆಗಳನ್ನು ಅಡಮಾನ ಮಾಡಿರುತ್ತಾರೆ. ಅವರ ನೆರೆವಿಗೆ ನಿಲ್ಲಬೇಕೆಂದು ತಮ್ಮಲ್ಲಿ ಮನವಿ ಮಾಡುತ್ತೇನೆ.

ಈಗಾಗಲೇ ಆಂದ್ರಪ್ರದೇಶ ಸರ್ಕಾರ ರೈತರ ಚಿನ್ನದ ಮೇಲಿನ ಬಡ್ಡಿಯನ್ನು ಸಂಪೂರ್ಣ ಮನ್ನಾ ಮಾಡಿರುವುದಾಗಿ ತಿಳಿದು ಬಂದಿದೆ.

ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಿದೆ, ರೈತರಿಗೆ ನರೇಗ ಯೋಜನೆಯಲ್ಲಿನ ಕೂಲಿಯನ್ನೂ ಹೆಚ್ಚು ಮಾಡಿದೆ, ಈಗ ರೈತರ ಹಿತಕ್ಕಾಗಿ ಕೃಷಿ ಚಟುವಟಿಕೆ ನಡೆಸುವುದಕ್ಕೂ ಲಾಕ್ ಡೌನ್ ಸಡಿಲಗೊಳಿಸಿದೆ.

ಇದೆಲ್ಲವೂ ರಾಜ್ಯ ಸರ್ಕಾರದ ರೈತಸ್ನೇಹಿ ನಡೆಗಳಾಗಿವೆ ಎಂಬುದನ್ನು ನೆನೆಯುತ್ತಲೇ ಬ್ಯಾಂಕುಗಳಲ್ಲಿ ರೈತರ ಚಿನ್ನದ ಮೇಲಿನ ಅಧಿಕ ಬಡ್ಡಿದರವನ್ನು ರದ್ದುಗೊಳಿಸಿ ಹಿಂದಿನ ಪದ್ದತಿಯಂತೆ 4% ಬಡ್ಡಿದರದಲ್ಲಿ ಅಗ್ರಿಗೋಲ್ಡ್ ಯೋಜನೆಯನ್ನು ಮುಂದುವರೆಸಲು ಮನವಿ ಮಾಡುತ್ತೇವೆ.

(ಲೇಖಕರು ಸಾಮಾಜಿಕ ಕಾರ್ಯಕರ್ತರು ಮತ್ತು ಯುವ ಬರಹಗಾರರು)


ಇದನ್ನೂ ಓದಿ: ಲಾಕ್‌ಡೌನ್‌ ಸಂಕಷ್ಟ: 1,610 ಕೋಟಿ ವಿಶೇಷ ಆರ್ಥಿಕ ಪ್ಯಾಕೇಜ್‌ ಘೋಷಿಸಿದ ಯಡಿಯೂರಪ್ಪ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...