Homeಮುಖಪುಟಯಡಿಯೂರಪ್ಪನವರೆ, ಶೇ.4% ಬಡ್ಡಿದರದ ಅಗ್ರಿಗೋಲ್ಡ್ ಯೋಜನೆ ಮತ್ತೆ ತನ್ನಿ.

ಯಡಿಯೂರಪ್ಪನವರೆ, ಶೇ.4% ಬಡ್ಡಿದರದ ಅಗ್ರಿಗೋಲ್ಡ್ ಯೋಜನೆ ಮತ್ತೆ ತನ್ನಿ.

- Advertisement -
- Advertisement -

ಸನ್ಮಾನ್ಯ ಮುಖ್ಯಮಂತ್ರಿಗಳೇ ನಿಮ್ಮ ಕಾರ್ಯವು ಶ್ಲಾಘನೀಯ. ಇದೇ ಸಂದರ್ಭದಲ್ಲಿ ನನ್ನದೊಂದು ಮನವಿ.
ರಾಜ್ಯದ ರೈತರು ಒಂದೆಡೆ ಬರ, ಮತ್ತೊಂದೆಡೆ ಪ್ರವಾಹ ಹಾಗೂ ಈಗ ಕೊರೊನಾ ಲಾಕ್ ಡೌನ್ ನಿಂದ ಆರ್ಥಿಕವಾಗಿ ಕಂಗಾಲಾಗಿದ್ದಾರೆ ಎಂಬುದನ್ನು ರೈತಹೋರಾಟಗಾರರಾದ ತಾವು ಬಲ್ಲಿರಿ. ಈ ನಡುವೆಯೇ
ಈಗ ತಾನೆ ಕೃಷಿ ಚಟುವಟಿಕೆಗಳು ಆರಂಭವಾಗಿವೆ.

ಕೃಷಿಕರು ತಮ್ಮ ಕೃಷಿ ಚಟುವಟಿಕೆಗಾಗಿ ತಮ್ಮಲ್ಲಿ ಇದ್ದ ಒಂದಷ್ಟು ಒಡವೆಗಳನ್ನು ಬ್ಯಾಂಕ್ ಗಳಲ್ಲಿ ಇಟ್ಟು ಸರ್ಕಾರ ನೀಡಿದ್ದ ಅಗ್ರಿಗೋಲ್ಡ್ ಲೋನ್ ಅಡಿಯಲ್ಲಿ ನಾಲ್ಕು ಪರ್ಸೆಂಟ್ ಬಡ್ಡಿದರದಲ್ಲಿ ಸಾಲ ತೆಗೆದುಕೊಳ್ಳುತ್ತಿದ್ದರು. ಆದರೆ ತಮ್ಮ ಸರ್ಕಾರ ಈ ಅಗ್ರಿಗೋಲ್ಡ್ ಸಹಾಯ ಯೋಜನೆಯನ್ನು ರದ್ದು ಪಡಿಸಿರುವುದರಿಂದಾಗಿ ಈಗ ವಾರ್ಷಿಕ ಶೇ.10.45 ದರದಲ್ಲಿ ಚಿನ್ನ ಅಡವಿಡಬೇಕಿದೆ.

ಈಗಾಗಲೇ ರಾಜ್ಯದ್ಯಂತ ವಿವಿಧ ಬ್ಯಾಂಕ್ ಗಳಲ್ಲಿ ಅಗ್ರಿಗೋಲ್ಡ್ ಯೋಜನೆಯಡಿ ಚಿನ್ನ ಅಡವಿಟ್ಟಿರುವ ರೈತರಿಗೆ ಈಗಿನ 10.45 ದರದಲ್ಲಿ ಬಡ್ಡಿ ವಿಧಿಸಿರುವುದರಿಂದ ಅನೇಕ ರೈತರಿಗೆ ಅದಕ್ಕೆ ಅಷ್ಡು ಬಡ್ಡಿ ಪಾವತಿ ಮಾಡಿ ಅಡವಿಟ್ಟ ಚಿನ್ನವನ್ನು ಬಿಡಿಸಿಕೊಳ್ಳಲಾಗದ ದುಃಸ್ಥಿತಿಯಲ್ಲಿ ಇದ್ದಾರೆ.

ರೈತಪರವಾಗಿ ಯೋಚಿಸುವ ತಾವು, ಹಿಂದೆ ಇದ್ದ ಅಗ್ರಿಗೋಲ್ಡ್ ಯೋಜನೆಯನ್ನು ಮತ್ತೆ ತರಬೇಕು. ಇದು ಸ್ವಾವಲಂಭಿ ರೈತರಿಗೆ ಒಳ್ಳೆಯ ಮಾರ್ಗವಾಗಿದೆ.

ಈಗಾಗಲೇ 10.45% ಇರುವ ಬಡ್ಡಿದರವನ್ನು ದಯಮಾಡಿ ರದ್ದುಗೊಳಿಸಿ ಹಿಂದಿನ 4% ದರದ ಬಡ್ಡಿಯಲ್ಲಿ ರೈತರಿಂದ ಬಡ್ಡಿ ವಸೂಲಿ ಮಾಡಲು ಆದೇಶ ನೀಡಿದರೆ ಲಕ್ಷಾಂತರ ರೈತರ ಕೋಟ್ಯಾಂತರ ರೂಪಾಯಿಯ ಚಿನ್ನ ಅವರ ಕನಸಿನ ಚಿನ್ನವನ್ನು ಅವರು ಬಿಡಿಸಿಕೊಳ್ಳಲು ಸಹಾಯವಾಗುತ್ತದೆ.

ಅನೇಕರು ತಮ್ಮ ಕೃಷಿ ಸಾಲಕ್ಕಾಗಿ ತಮ್ಮ ತಾಯಿಯ, ಸೋದರಿಯ, ಮಡದಿಯ ಇಲ್ಲವೇ ಮಕ್ಕಳ ತಾಳಿಸಹಿತವಾದ ಒಡವೆಗಳನ್ನು ಅಡಮಾನ ಮಾಡಿರುತ್ತಾರೆ. ಅವರ ನೆರೆವಿಗೆ ನಿಲ್ಲಬೇಕೆಂದು ತಮ್ಮಲ್ಲಿ ಮನವಿ ಮಾಡುತ್ತೇನೆ.

ಈಗಾಗಲೇ ಆಂದ್ರಪ್ರದೇಶ ಸರ್ಕಾರ ರೈತರ ಚಿನ್ನದ ಮೇಲಿನ ಬಡ್ಡಿಯನ್ನು ಸಂಪೂರ್ಣ ಮನ್ನಾ ಮಾಡಿರುವುದಾಗಿ ತಿಳಿದು ಬಂದಿದೆ.

ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಿದೆ, ರೈತರಿಗೆ ನರೇಗ ಯೋಜನೆಯಲ್ಲಿನ ಕೂಲಿಯನ್ನೂ ಹೆಚ್ಚು ಮಾಡಿದೆ, ಈಗ ರೈತರ ಹಿತಕ್ಕಾಗಿ ಕೃಷಿ ಚಟುವಟಿಕೆ ನಡೆಸುವುದಕ್ಕೂ ಲಾಕ್ ಡೌನ್ ಸಡಿಲಗೊಳಿಸಿದೆ.

ಇದೆಲ್ಲವೂ ರಾಜ್ಯ ಸರ್ಕಾರದ ರೈತಸ್ನೇಹಿ ನಡೆಗಳಾಗಿವೆ ಎಂಬುದನ್ನು ನೆನೆಯುತ್ತಲೇ ಬ್ಯಾಂಕುಗಳಲ್ಲಿ ರೈತರ ಚಿನ್ನದ ಮೇಲಿನ ಅಧಿಕ ಬಡ್ಡಿದರವನ್ನು ರದ್ದುಗೊಳಿಸಿ ಹಿಂದಿನ ಪದ್ದತಿಯಂತೆ 4% ಬಡ್ಡಿದರದಲ್ಲಿ ಅಗ್ರಿಗೋಲ್ಡ್ ಯೋಜನೆಯನ್ನು ಮುಂದುವರೆಸಲು ಮನವಿ ಮಾಡುತ್ತೇವೆ.

(ಲೇಖಕರು ಸಾಮಾಜಿಕ ಕಾರ್ಯಕರ್ತರು ಮತ್ತು ಯುವ ಬರಹಗಾರರು)


ಇದನ್ನೂ ಓದಿ: ಲಾಕ್‌ಡೌನ್‌ ಸಂಕಷ್ಟ: 1,610 ಕೋಟಿ ವಿಶೇಷ ಆರ್ಥಿಕ ಪ್ಯಾಕೇಜ್‌ ಘೋಷಿಸಿದ ಯಡಿಯೂರಪ್ಪ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...