Homeಮುಖಪುಟಯಡಿಯೂರಪ್ಪನವರೆ, ಶೇ.4% ಬಡ್ಡಿದರದ ಅಗ್ರಿಗೋಲ್ಡ್ ಯೋಜನೆ ಮತ್ತೆ ತನ್ನಿ.

ಯಡಿಯೂರಪ್ಪನವರೆ, ಶೇ.4% ಬಡ್ಡಿದರದ ಅಗ್ರಿಗೋಲ್ಡ್ ಯೋಜನೆ ಮತ್ತೆ ತನ್ನಿ.

- Advertisement -
- Advertisement -

ಸನ್ಮಾನ್ಯ ಮುಖ್ಯಮಂತ್ರಿಗಳೇ ನಿಮ್ಮ ಕಾರ್ಯವು ಶ್ಲಾಘನೀಯ. ಇದೇ ಸಂದರ್ಭದಲ್ಲಿ ನನ್ನದೊಂದು ಮನವಿ.
ರಾಜ್ಯದ ರೈತರು ಒಂದೆಡೆ ಬರ, ಮತ್ತೊಂದೆಡೆ ಪ್ರವಾಹ ಹಾಗೂ ಈಗ ಕೊರೊನಾ ಲಾಕ್ ಡೌನ್ ನಿಂದ ಆರ್ಥಿಕವಾಗಿ ಕಂಗಾಲಾಗಿದ್ದಾರೆ ಎಂಬುದನ್ನು ರೈತಹೋರಾಟಗಾರರಾದ ತಾವು ಬಲ್ಲಿರಿ. ಈ ನಡುವೆಯೇ
ಈಗ ತಾನೆ ಕೃಷಿ ಚಟುವಟಿಕೆಗಳು ಆರಂಭವಾಗಿವೆ.

ಕೃಷಿಕರು ತಮ್ಮ ಕೃಷಿ ಚಟುವಟಿಕೆಗಾಗಿ ತಮ್ಮಲ್ಲಿ ಇದ್ದ ಒಂದಷ್ಟು ಒಡವೆಗಳನ್ನು ಬ್ಯಾಂಕ್ ಗಳಲ್ಲಿ ಇಟ್ಟು ಸರ್ಕಾರ ನೀಡಿದ್ದ ಅಗ್ರಿಗೋಲ್ಡ್ ಲೋನ್ ಅಡಿಯಲ್ಲಿ ನಾಲ್ಕು ಪರ್ಸೆಂಟ್ ಬಡ್ಡಿದರದಲ್ಲಿ ಸಾಲ ತೆಗೆದುಕೊಳ್ಳುತ್ತಿದ್ದರು. ಆದರೆ ತಮ್ಮ ಸರ್ಕಾರ ಈ ಅಗ್ರಿಗೋಲ್ಡ್ ಸಹಾಯ ಯೋಜನೆಯನ್ನು ರದ್ದು ಪಡಿಸಿರುವುದರಿಂದಾಗಿ ಈಗ ವಾರ್ಷಿಕ ಶೇ.10.45 ದರದಲ್ಲಿ ಚಿನ್ನ ಅಡವಿಡಬೇಕಿದೆ.

ಈಗಾಗಲೇ ರಾಜ್ಯದ್ಯಂತ ವಿವಿಧ ಬ್ಯಾಂಕ್ ಗಳಲ್ಲಿ ಅಗ್ರಿಗೋಲ್ಡ್ ಯೋಜನೆಯಡಿ ಚಿನ್ನ ಅಡವಿಟ್ಟಿರುವ ರೈತರಿಗೆ ಈಗಿನ 10.45 ದರದಲ್ಲಿ ಬಡ್ಡಿ ವಿಧಿಸಿರುವುದರಿಂದ ಅನೇಕ ರೈತರಿಗೆ ಅದಕ್ಕೆ ಅಷ್ಡು ಬಡ್ಡಿ ಪಾವತಿ ಮಾಡಿ ಅಡವಿಟ್ಟ ಚಿನ್ನವನ್ನು ಬಿಡಿಸಿಕೊಳ್ಳಲಾಗದ ದುಃಸ್ಥಿತಿಯಲ್ಲಿ ಇದ್ದಾರೆ.

ರೈತಪರವಾಗಿ ಯೋಚಿಸುವ ತಾವು, ಹಿಂದೆ ಇದ್ದ ಅಗ್ರಿಗೋಲ್ಡ್ ಯೋಜನೆಯನ್ನು ಮತ್ತೆ ತರಬೇಕು. ಇದು ಸ್ವಾವಲಂಭಿ ರೈತರಿಗೆ ಒಳ್ಳೆಯ ಮಾರ್ಗವಾಗಿದೆ.

ಈಗಾಗಲೇ 10.45% ಇರುವ ಬಡ್ಡಿದರವನ್ನು ದಯಮಾಡಿ ರದ್ದುಗೊಳಿಸಿ ಹಿಂದಿನ 4% ದರದ ಬಡ್ಡಿಯಲ್ಲಿ ರೈತರಿಂದ ಬಡ್ಡಿ ವಸೂಲಿ ಮಾಡಲು ಆದೇಶ ನೀಡಿದರೆ ಲಕ್ಷಾಂತರ ರೈತರ ಕೋಟ್ಯಾಂತರ ರೂಪಾಯಿಯ ಚಿನ್ನ ಅವರ ಕನಸಿನ ಚಿನ್ನವನ್ನು ಅವರು ಬಿಡಿಸಿಕೊಳ್ಳಲು ಸಹಾಯವಾಗುತ್ತದೆ.

ಅನೇಕರು ತಮ್ಮ ಕೃಷಿ ಸಾಲಕ್ಕಾಗಿ ತಮ್ಮ ತಾಯಿಯ, ಸೋದರಿಯ, ಮಡದಿಯ ಇಲ್ಲವೇ ಮಕ್ಕಳ ತಾಳಿಸಹಿತವಾದ ಒಡವೆಗಳನ್ನು ಅಡಮಾನ ಮಾಡಿರುತ್ತಾರೆ. ಅವರ ನೆರೆವಿಗೆ ನಿಲ್ಲಬೇಕೆಂದು ತಮ್ಮಲ್ಲಿ ಮನವಿ ಮಾಡುತ್ತೇನೆ.

ಈಗಾಗಲೇ ಆಂದ್ರಪ್ರದೇಶ ಸರ್ಕಾರ ರೈತರ ಚಿನ್ನದ ಮೇಲಿನ ಬಡ್ಡಿಯನ್ನು ಸಂಪೂರ್ಣ ಮನ್ನಾ ಮಾಡಿರುವುದಾಗಿ ತಿಳಿದು ಬಂದಿದೆ.

ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಿದೆ, ರೈತರಿಗೆ ನರೇಗ ಯೋಜನೆಯಲ್ಲಿನ ಕೂಲಿಯನ್ನೂ ಹೆಚ್ಚು ಮಾಡಿದೆ, ಈಗ ರೈತರ ಹಿತಕ್ಕಾಗಿ ಕೃಷಿ ಚಟುವಟಿಕೆ ನಡೆಸುವುದಕ್ಕೂ ಲಾಕ್ ಡೌನ್ ಸಡಿಲಗೊಳಿಸಿದೆ.

ಇದೆಲ್ಲವೂ ರಾಜ್ಯ ಸರ್ಕಾರದ ರೈತಸ್ನೇಹಿ ನಡೆಗಳಾಗಿವೆ ಎಂಬುದನ್ನು ನೆನೆಯುತ್ತಲೇ ಬ್ಯಾಂಕುಗಳಲ್ಲಿ ರೈತರ ಚಿನ್ನದ ಮೇಲಿನ ಅಧಿಕ ಬಡ್ಡಿದರವನ್ನು ರದ್ದುಗೊಳಿಸಿ ಹಿಂದಿನ ಪದ್ದತಿಯಂತೆ 4% ಬಡ್ಡಿದರದಲ್ಲಿ ಅಗ್ರಿಗೋಲ್ಡ್ ಯೋಜನೆಯನ್ನು ಮುಂದುವರೆಸಲು ಮನವಿ ಮಾಡುತ್ತೇವೆ.

(ಲೇಖಕರು ಸಾಮಾಜಿಕ ಕಾರ್ಯಕರ್ತರು ಮತ್ತು ಯುವ ಬರಹಗಾರರು)


ಇದನ್ನೂ ಓದಿ: ಲಾಕ್‌ಡೌನ್‌ ಸಂಕಷ್ಟ: 1,610 ಕೋಟಿ ವಿಶೇಷ ಆರ್ಥಿಕ ಪ್ಯಾಕೇಜ್‌ ಘೋಷಿಸಿದ ಯಡಿಯೂರಪ್ಪ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...