Homeಮುಖಪುಟಯಡಿಯೂರಪ್ಪನವರೆ, ಶೇ.4% ಬಡ್ಡಿದರದ ಅಗ್ರಿಗೋಲ್ಡ್ ಯೋಜನೆ ಮತ್ತೆ ತನ್ನಿ.

ಯಡಿಯೂರಪ್ಪನವರೆ, ಶೇ.4% ಬಡ್ಡಿದರದ ಅಗ್ರಿಗೋಲ್ಡ್ ಯೋಜನೆ ಮತ್ತೆ ತನ್ನಿ.

- Advertisement -
- Advertisement -

ಸನ್ಮಾನ್ಯ ಮುಖ್ಯಮಂತ್ರಿಗಳೇ ನಿಮ್ಮ ಕಾರ್ಯವು ಶ್ಲಾಘನೀಯ. ಇದೇ ಸಂದರ್ಭದಲ್ಲಿ ನನ್ನದೊಂದು ಮನವಿ.
ರಾಜ್ಯದ ರೈತರು ಒಂದೆಡೆ ಬರ, ಮತ್ತೊಂದೆಡೆ ಪ್ರವಾಹ ಹಾಗೂ ಈಗ ಕೊರೊನಾ ಲಾಕ್ ಡೌನ್ ನಿಂದ ಆರ್ಥಿಕವಾಗಿ ಕಂಗಾಲಾಗಿದ್ದಾರೆ ಎಂಬುದನ್ನು ರೈತಹೋರಾಟಗಾರರಾದ ತಾವು ಬಲ್ಲಿರಿ. ಈ ನಡುವೆಯೇ
ಈಗ ತಾನೆ ಕೃಷಿ ಚಟುವಟಿಕೆಗಳು ಆರಂಭವಾಗಿವೆ.

ಕೃಷಿಕರು ತಮ್ಮ ಕೃಷಿ ಚಟುವಟಿಕೆಗಾಗಿ ತಮ್ಮಲ್ಲಿ ಇದ್ದ ಒಂದಷ್ಟು ಒಡವೆಗಳನ್ನು ಬ್ಯಾಂಕ್ ಗಳಲ್ಲಿ ಇಟ್ಟು ಸರ್ಕಾರ ನೀಡಿದ್ದ ಅಗ್ರಿಗೋಲ್ಡ್ ಲೋನ್ ಅಡಿಯಲ್ಲಿ ನಾಲ್ಕು ಪರ್ಸೆಂಟ್ ಬಡ್ಡಿದರದಲ್ಲಿ ಸಾಲ ತೆಗೆದುಕೊಳ್ಳುತ್ತಿದ್ದರು. ಆದರೆ ತಮ್ಮ ಸರ್ಕಾರ ಈ ಅಗ್ರಿಗೋಲ್ಡ್ ಸಹಾಯ ಯೋಜನೆಯನ್ನು ರದ್ದು ಪಡಿಸಿರುವುದರಿಂದಾಗಿ ಈಗ ವಾರ್ಷಿಕ ಶೇ.10.45 ದರದಲ್ಲಿ ಚಿನ್ನ ಅಡವಿಡಬೇಕಿದೆ.

ಈಗಾಗಲೇ ರಾಜ್ಯದ್ಯಂತ ವಿವಿಧ ಬ್ಯಾಂಕ್ ಗಳಲ್ಲಿ ಅಗ್ರಿಗೋಲ್ಡ್ ಯೋಜನೆಯಡಿ ಚಿನ್ನ ಅಡವಿಟ್ಟಿರುವ ರೈತರಿಗೆ ಈಗಿನ 10.45 ದರದಲ್ಲಿ ಬಡ್ಡಿ ವಿಧಿಸಿರುವುದರಿಂದ ಅನೇಕ ರೈತರಿಗೆ ಅದಕ್ಕೆ ಅಷ್ಡು ಬಡ್ಡಿ ಪಾವತಿ ಮಾಡಿ ಅಡವಿಟ್ಟ ಚಿನ್ನವನ್ನು ಬಿಡಿಸಿಕೊಳ್ಳಲಾಗದ ದುಃಸ್ಥಿತಿಯಲ್ಲಿ ಇದ್ದಾರೆ.

ರೈತಪರವಾಗಿ ಯೋಚಿಸುವ ತಾವು, ಹಿಂದೆ ಇದ್ದ ಅಗ್ರಿಗೋಲ್ಡ್ ಯೋಜನೆಯನ್ನು ಮತ್ತೆ ತರಬೇಕು. ಇದು ಸ್ವಾವಲಂಭಿ ರೈತರಿಗೆ ಒಳ್ಳೆಯ ಮಾರ್ಗವಾಗಿದೆ.

ಈಗಾಗಲೇ 10.45% ಇರುವ ಬಡ್ಡಿದರವನ್ನು ದಯಮಾಡಿ ರದ್ದುಗೊಳಿಸಿ ಹಿಂದಿನ 4% ದರದ ಬಡ್ಡಿಯಲ್ಲಿ ರೈತರಿಂದ ಬಡ್ಡಿ ವಸೂಲಿ ಮಾಡಲು ಆದೇಶ ನೀಡಿದರೆ ಲಕ್ಷಾಂತರ ರೈತರ ಕೋಟ್ಯಾಂತರ ರೂಪಾಯಿಯ ಚಿನ್ನ ಅವರ ಕನಸಿನ ಚಿನ್ನವನ್ನು ಅವರು ಬಿಡಿಸಿಕೊಳ್ಳಲು ಸಹಾಯವಾಗುತ್ತದೆ.

ಅನೇಕರು ತಮ್ಮ ಕೃಷಿ ಸಾಲಕ್ಕಾಗಿ ತಮ್ಮ ತಾಯಿಯ, ಸೋದರಿಯ, ಮಡದಿಯ ಇಲ್ಲವೇ ಮಕ್ಕಳ ತಾಳಿಸಹಿತವಾದ ಒಡವೆಗಳನ್ನು ಅಡಮಾನ ಮಾಡಿರುತ್ತಾರೆ. ಅವರ ನೆರೆವಿಗೆ ನಿಲ್ಲಬೇಕೆಂದು ತಮ್ಮಲ್ಲಿ ಮನವಿ ಮಾಡುತ್ತೇನೆ.

ಈಗಾಗಲೇ ಆಂದ್ರಪ್ರದೇಶ ಸರ್ಕಾರ ರೈತರ ಚಿನ್ನದ ಮೇಲಿನ ಬಡ್ಡಿಯನ್ನು ಸಂಪೂರ್ಣ ಮನ್ನಾ ಮಾಡಿರುವುದಾಗಿ ತಿಳಿದು ಬಂದಿದೆ.

ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಿದೆ, ರೈತರಿಗೆ ನರೇಗ ಯೋಜನೆಯಲ್ಲಿನ ಕೂಲಿಯನ್ನೂ ಹೆಚ್ಚು ಮಾಡಿದೆ, ಈಗ ರೈತರ ಹಿತಕ್ಕಾಗಿ ಕೃಷಿ ಚಟುವಟಿಕೆ ನಡೆಸುವುದಕ್ಕೂ ಲಾಕ್ ಡೌನ್ ಸಡಿಲಗೊಳಿಸಿದೆ.

ಇದೆಲ್ಲವೂ ರಾಜ್ಯ ಸರ್ಕಾರದ ರೈತಸ್ನೇಹಿ ನಡೆಗಳಾಗಿವೆ ಎಂಬುದನ್ನು ನೆನೆಯುತ್ತಲೇ ಬ್ಯಾಂಕುಗಳಲ್ಲಿ ರೈತರ ಚಿನ್ನದ ಮೇಲಿನ ಅಧಿಕ ಬಡ್ಡಿದರವನ್ನು ರದ್ದುಗೊಳಿಸಿ ಹಿಂದಿನ ಪದ್ದತಿಯಂತೆ 4% ಬಡ್ಡಿದರದಲ್ಲಿ ಅಗ್ರಿಗೋಲ್ಡ್ ಯೋಜನೆಯನ್ನು ಮುಂದುವರೆಸಲು ಮನವಿ ಮಾಡುತ್ತೇವೆ.

(ಲೇಖಕರು ಸಾಮಾಜಿಕ ಕಾರ್ಯಕರ್ತರು ಮತ್ತು ಯುವ ಬರಹಗಾರರು)


ಇದನ್ನೂ ಓದಿ: ಲಾಕ್‌ಡೌನ್‌ ಸಂಕಷ್ಟ: 1,610 ಕೋಟಿ ವಿಶೇಷ ಆರ್ಥಿಕ ಪ್ಯಾಕೇಜ್‌ ಘೋಷಿಸಿದ ಯಡಿಯೂರಪ್ಪ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...