Homeಕರ್ನಾಟಕಸುಳ್ಳು ಸುದ್ದಿಗಳ ವಿರುದ್ಧ ಎಚ್ಚರಿಕೆ ಕೊಟ್ಟ ಯಡಿಯೂರಪ್ಪ ಅವರ ಹೇಳಿಕೆಗೆ ಟ್ವಿಟ್ಟರಿನಲ್ಲಿ ಪರ ವಿರೋಧದ ಟ್ರೆಂಡ್

ಸುಳ್ಳು ಸುದ್ದಿಗಳ ವಿರುದ್ಧ ಎಚ್ಚರಿಕೆ ಕೊಟ್ಟ ಯಡಿಯೂರಪ್ಪ ಅವರ ಹೇಳಿಕೆಗೆ ಟ್ವಿಟ್ಟರಿನಲ್ಲಿ ಪರ ವಿರೋಧದ ಟ್ರೆಂಡ್

- Advertisement -
- Advertisement -

ಕೊರೊನಾ ವೈರಸನ್ನು ಮುಸ್ಲಿಮರು ಹರಡುತ್ತಿದ್ದಾರೆ ಎಂದು ಅಪಪ್ರಚಾರ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು  ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನಿನ್ನೆ ಎಚ್ಚರಿಕೆ ಕೊಟ್ಟಿರುವುದು ಭಾರಿ ವಾದ ಪ್ರತಿವಾದಗಳಿಗೆ ಎಡೆಮಾಡಿಕೊಟ್ಟಿದೆ.

ನಿನ್ನೆಯಿಂದ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಚರ್ಚೆಗಳಾಗುತ್ತಿದ್ದು, ಈಗ ಟ್ವಿಟ್ಟರಿನಲ್ಲಿ ಯಡಿಯೂರಪ್ಪ ಅವರ ಹೇಳಿಕೆಯನ್ನು ಬೆಂಬಲಿಸಿ ಹಾಗೂ ವಿರೋಧಿಸುವ ಪೋಸ್ಟುಗಳು ಟ್ರೆಂಡ್ ಆಗುತ್ತಿವೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇನ್ನೊಂದು ಚಾನಲ್ ಜತೆ ಮಾತಾಡಿದಾಗಲೂ ಅದದೇ ಶಬ್ದಗಳನ್ನೂ, ಖಡಕ್ಕಾಗಿ, ಸ್ಪಷ್ಟವಾಗಿ ಹೇಳಿದ್ದಾರೆ. ಇದರಲ್ಲೂ…

Posted by Dinesh Kumar Dinoo on Monday, April 6, 2020

ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬೆಂಬಲಿಸಿ ಹಲವರು ಟ್ವೀಟ್ ಮಾಡಿದ್ದು, ಮುಖ್ಯಮಂತ್ರಿಗಳು ಮಾಡಿದ್ದು ಸರಿಯಾಗಿಯೆ ಇದೆ, ಒಂದು ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ರಾಜಧರ್ಮ ಪಾಲಿಸಿದ್ದಾರೆ ಎಂದು #WeStandWithBSY ಎಂಬ ಹ್ಯಾಶ್ ಟ್ಯಾಗ್ ಬಳಸಿ ಅವರಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಸರೇಶ್ ಕುಮಾರ್. ಜಿ. ಆರ್ ಎನ್ನುವ ಟ್ವಿಟ್ಟರ್ ಹ್ಯಾಂಡೆಲ್ ನಿಂದ “ರಾಷ್ಟ್ರಕವಿ ಕುವೆಂಪುರವರ ವಿಶ್ವಮಾನವ ಸಂದೇಶವನ್ನ ಅರ್ಥ ಆಗುವ ರೀತಿಯಲ್ಲಿ ಮಾಧ್ಯಮಗಳಿಗೆ ಬೆವರಿಳಿಸಿದ, ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟ ಎಂದು ತೋರಿಸಿರುವ ಯಡಿಯೂರಪ್ಪ ಜೊತೆ ಜೊತೆ ನಾವಿದ್ದೇವೆ” ಎಂದು ಟ್ವೀಟ್ ಮಾಡಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು “ಕೊರೊನಾ ಹಾವಳಿಗೆ ಜಾತಿ-ಧರ್ಮಗಳ ಬಣ್ಣಹಚ್ಚಿ ಸಮಾಜವನ್ನು ಒಡೆಯುವ ಕೆಲಸವನ್ನು ಕೆಲವರು, ಸುಳ್ಳು ಸುದ್ದಿ,ತಿರುಚಿದ ವಿಡಿಯೋ ತುಣುಕುಗಳ ಮೂಲಕ ಮಾಡುತ್ತಿದ್ದಾರೆ. ಇಂತಹವರ ಬಗ್ಗೆ ಯಡಿಯೂರಪ್ಪನವರು ಖಡಕ್ ಎಚ್ಚರಿಕೆ ನೀಡಿರುವುದನ್ನು ನಾನು ಸ್ವಾಗತಿಸಿ ಬೆಂಬಲಿಸುತ್ತೇನೆ. ಅವರು ನುಡಿದಂತೆ ನಡೆಯ ಬೇಕೆಂದು ಆಗ್ರಹಿಸುತ್ತೇನೆ” ಎಂದು ಇಂದು ಮಧ್ಯಾಹ್ನ ಟ್ವೀಟ್‌ ಮಾಡಿದ್ದರು.

ನಮ್ಮ ರಾಹುಲ್ ಎನ್ನುವ ಟ್ವಿಟ್ಟರ್ ಹ್ಯಾಂಡಲ್ “ಕೊರೋನಾ ಸೋಂಕಿನ ಜೊತೆ ಕೋಮುವಾದದ ಸೋಂಕನ್ನು ಅಂಟಿಸಬೇಡಿ ಎಂಬ ಹೇಳಿಕೆ ನೀಡಿದ ಯಡಿಯೂರಪ್ಪನವರಿಗೆ ಅಭಿನಂದನೆಗಳು. ಅನ್ಯ ಕೆಲವು ಭಾಜಪ ಮುಖಂಡರಗಳು ಇದನ್ನು ನೋಡಿ ಕಲಿಯಲಿ. ಬನ್ನಿ ನಾವೆಲ್ಲರೂ ಒಗ್ಗಟ್ಟಿನಿಂದ ಹೋರಾಡೋಣ” ಎನ್ನುವ ಟ್ವಿಟ್ಟರ್ ಹಾಕಿ ದಿನೇಶ್ ಗುಂಡುರಾವ್ ಮಾತು ಎಂದು ಹೇಳಿ ಯಡಿಯೂರಪ್ಪರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಪ್ರತೀಕ್ ಗುಪ್ತ ಎಂಬವರು “ನಾನು ಬಿಜೆಪಿಯ ಮುಖ್ಯಮಂತ್ರಿಯೊಬ್ಬರ ಪರವಾಗಿ ನಿಲ್ಲುತ್ತೇನೆ ಎಂದು ಭಾವಿಸಿಯೇ ಇರಲಿಲ್ಲ” ಎಂದು ಟ್ವೀಟ್ ಮಾಡುತ್ತಿದ್ದಾರೆ.

ಸಂಘ ಪರಿವಾರವು ಮುಸ್ಲಿಮರ ಬಗ್ಗೆ ದ್ವಂದ್ವ ನಿಲುವು ಹೊಂದಿದೆ ಎಂದು ಇನ್ನೊಂದು ಟ್ವೀಟ್ ಹೇಳಿದೆ.

ಇದಲ್ಲದೆ ಮುಖ್ಯಮಂತ್ರಿಗಳ ಹೇಳಿಕೆಗೆ ಬಿಜಿಪಿ ಬೆಂಬಲಿಗರಿಂದಲೇ ವಿರೋಧ ಎದ್ದಿದೆ. ಮುಖ್ಯಮಂತ್ರಿಗಳನ್ನು ಬದಲಿಸಿ, ನಾವು ಮುಖ್ಯಮಂತ್ರಿಗಳನ್ನು ವಿರೋಧಿಸುತ್ತೇವೆ ಎಂದು ಹೇಳಿ #WELOSTHOPEBSY ಹ್ಯಾಶ್ ಟ್ಯಾಗ್ ಮೂಲಕ ಅವರನ್ನು ಬದಲಾಯಿಸುವಂತೆ ಅಮಿತ್ ಶಾ ಅವರಿಗೆ ಮನವಿ ಮಾಡುತ್ತಿದ್ದಾರೆ.

ಚೌಕಿದಾರ್ ಅಜಯ್ ಎಂಬ ಟ್ವಿಟ್ಟರ್ ಹ್ಯಾಂಡಲ್ “ಕರ್ನಾಟಕದ ಮುಖ್ಯಮಂತ್ರಿಯನ್ನು ಬದಲಿಸಿ” ಎಂದು ಬರೆದುಕೊಂಡಿದ್ದಾರೆ.

 

ಒಟ್ಟಿನಲ್ಲಿ ಯಡಿಯೂರಪ್ಪ ಅವರ ಹೇಳಿಕೆಯೂ ರಾಜಕೀಯವಾಗಿ ಬಿಸಿ ಬಿಸಿ ಚರ್ಚೆಯನ್ನು ಉಂಟು ಮಾಡಿದ್ದು. ಸಾಮಾಜಿಕ ಜಾಲತಾಣದಾದ್ಯಂತ ಭಾರೀ ಚರ್ಚೆಯನ್ನು ಉಂಟುಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...