Homeಕರ್ನಾಟಕಸುಳ್ಳು ಸುದ್ದಿಗಳ ವಿರುದ್ಧ ಎಚ್ಚರಿಕೆ ಕೊಟ್ಟ ಯಡಿಯೂರಪ್ಪ ಅವರ ಹೇಳಿಕೆಗೆ ಟ್ವಿಟ್ಟರಿನಲ್ಲಿ ಪರ ವಿರೋಧದ ಟ್ರೆಂಡ್

ಸುಳ್ಳು ಸುದ್ದಿಗಳ ವಿರುದ್ಧ ಎಚ್ಚರಿಕೆ ಕೊಟ್ಟ ಯಡಿಯೂರಪ್ಪ ಅವರ ಹೇಳಿಕೆಗೆ ಟ್ವಿಟ್ಟರಿನಲ್ಲಿ ಪರ ವಿರೋಧದ ಟ್ರೆಂಡ್

- Advertisement -
- Advertisement -

ಕೊರೊನಾ ವೈರಸನ್ನು ಮುಸ್ಲಿಮರು ಹರಡುತ್ತಿದ್ದಾರೆ ಎಂದು ಅಪಪ್ರಚಾರ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು  ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನಿನ್ನೆ ಎಚ್ಚರಿಕೆ ಕೊಟ್ಟಿರುವುದು ಭಾರಿ ವಾದ ಪ್ರತಿವಾದಗಳಿಗೆ ಎಡೆಮಾಡಿಕೊಟ್ಟಿದೆ.

ನಿನ್ನೆಯಿಂದ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಚರ್ಚೆಗಳಾಗುತ್ತಿದ್ದು, ಈಗ ಟ್ವಿಟ್ಟರಿನಲ್ಲಿ ಯಡಿಯೂರಪ್ಪ ಅವರ ಹೇಳಿಕೆಯನ್ನು ಬೆಂಬಲಿಸಿ ಹಾಗೂ ವಿರೋಧಿಸುವ ಪೋಸ್ಟುಗಳು ಟ್ರೆಂಡ್ ಆಗುತ್ತಿವೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇನ್ನೊಂದು ಚಾನಲ್ ಜತೆ ಮಾತಾಡಿದಾಗಲೂ ಅದದೇ ಶಬ್ದಗಳನ್ನೂ, ಖಡಕ್ಕಾಗಿ, ಸ್ಪಷ್ಟವಾಗಿ ಹೇಳಿದ್ದಾರೆ. ಇದರಲ್ಲೂ…

Posted by Dinesh Kumar Dinoo on Monday, April 6, 2020

ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬೆಂಬಲಿಸಿ ಹಲವರು ಟ್ವೀಟ್ ಮಾಡಿದ್ದು, ಮುಖ್ಯಮಂತ್ರಿಗಳು ಮಾಡಿದ್ದು ಸರಿಯಾಗಿಯೆ ಇದೆ, ಒಂದು ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ರಾಜಧರ್ಮ ಪಾಲಿಸಿದ್ದಾರೆ ಎಂದು #WeStandWithBSY ಎಂಬ ಹ್ಯಾಶ್ ಟ್ಯಾಗ್ ಬಳಸಿ ಅವರಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಸರೇಶ್ ಕುಮಾರ್. ಜಿ. ಆರ್ ಎನ್ನುವ ಟ್ವಿಟ್ಟರ್ ಹ್ಯಾಂಡೆಲ್ ನಿಂದ “ರಾಷ್ಟ್ರಕವಿ ಕುವೆಂಪುರವರ ವಿಶ್ವಮಾನವ ಸಂದೇಶವನ್ನ ಅರ್ಥ ಆಗುವ ರೀತಿಯಲ್ಲಿ ಮಾಧ್ಯಮಗಳಿಗೆ ಬೆವರಿಳಿಸಿದ, ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟ ಎಂದು ತೋರಿಸಿರುವ ಯಡಿಯೂರಪ್ಪ ಜೊತೆ ಜೊತೆ ನಾವಿದ್ದೇವೆ” ಎಂದು ಟ್ವೀಟ್ ಮಾಡಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು “ಕೊರೊನಾ ಹಾವಳಿಗೆ ಜಾತಿ-ಧರ್ಮಗಳ ಬಣ್ಣಹಚ್ಚಿ ಸಮಾಜವನ್ನು ಒಡೆಯುವ ಕೆಲಸವನ್ನು ಕೆಲವರು, ಸುಳ್ಳು ಸುದ್ದಿ,ತಿರುಚಿದ ವಿಡಿಯೋ ತುಣುಕುಗಳ ಮೂಲಕ ಮಾಡುತ್ತಿದ್ದಾರೆ. ಇಂತಹವರ ಬಗ್ಗೆ ಯಡಿಯೂರಪ್ಪನವರು ಖಡಕ್ ಎಚ್ಚರಿಕೆ ನೀಡಿರುವುದನ್ನು ನಾನು ಸ್ವಾಗತಿಸಿ ಬೆಂಬಲಿಸುತ್ತೇನೆ. ಅವರು ನುಡಿದಂತೆ ನಡೆಯ ಬೇಕೆಂದು ಆಗ್ರಹಿಸುತ್ತೇನೆ” ಎಂದು ಇಂದು ಮಧ್ಯಾಹ್ನ ಟ್ವೀಟ್‌ ಮಾಡಿದ್ದರು.

ನಮ್ಮ ರಾಹುಲ್ ಎನ್ನುವ ಟ್ವಿಟ್ಟರ್ ಹ್ಯಾಂಡಲ್ “ಕೊರೋನಾ ಸೋಂಕಿನ ಜೊತೆ ಕೋಮುವಾದದ ಸೋಂಕನ್ನು ಅಂಟಿಸಬೇಡಿ ಎಂಬ ಹೇಳಿಕೆ ನೀಡಿದ ಯಡಿಯೂರಪ್ಪನವರಿಗೆ ಅಭಿನಂದನೆಗಳು. ಅನ್ಯ ಕೆಲವು ಭಾಜಪ ಮುಖಂಡರಗಳು ಇದನ್ನು ನೋಡಿ ಕಲಿಯಲಿ. ಬನ್ನಿ ನಾವೆಲ್ಲರೂ ಒಗ್ಗಟ್ಟಿನಿಂದ ಹೋರಾಡೋಣ” ಎನ್ನುವ ಟ್ವಿಟ್ಟರ್ ಹಾಕಿ ದಿನೇಶ್ ಗುಂಡುರಾವ್ ಮಾತು ಎಂದು ಹೇಳಿ ಯಡಿಯೂರಪ್ಪರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಪ್ರತೀಕ್ ಗುಪ್ತ ಎಂಬವರು “ನಾನು ಬಿಜೆಪಿಯ ಮುಖ್ಯಮಂತ್ರಿಯೊಬ್ಬರ ಪರವಾಗಿ ನಿಲ್ಲುತ್ತೇನೆ ಎಂದು ಭಾವಿಸಿಯೇ ಇರಲಿಲ್ಲ” ಎಂದು ಟ್ವೀಟ್ ಮಾಡುತ್ತಿದ್ದಾರೆ.

ಸಂಘ ಪರಿವಾರವು ಮುಸ್ಲಿಮರ ಬಗ್ಗೆ ದ್ವಂದ್ವ ನಿಲುವು ಹೊಂದಿದೆ ಎಂದು ಇನ್ನೊಂದು ಟ್ವೀಟ್ ಹೇಳಿದೆ.

ಇದಲ್ಲದೆ ಮುಖ್ಯಮಂತ್ರಿಗಳ ಹೇಳಿಕೆಗೆ ಬಿಜಿಪಿ ಬೆಂಬಲಿಗರಿಂದಲೇ ವಿರೋಧ ಎದ್ದಿದೆ. ಮುಖ್ಯಮಂತ್ರಿಗಳನ್ನು ಬದಲಿಸಿ, ನಾವು ಮುಖ್ಯಮಂತ್ರಿಗಳನ್ನು ವಿರೋಧಿಸುತ್ತೇವೆ ಎಂದು ಹೇಳಿ #WELOSTHOPEBSY ಹ್ಯಾಶ್ ಟ್ಯಾಗ್ ಮೂಲಕ ಅವರನ್ನು ಬದಲಾಯಿಸುವಂತೆ ಅಮಿತ್ ಶಾ ಅವರಿಗೆ ಮನವಿ ಮಾಡುತ್ತಿದ್ದಾರೆ.

ಚೌಕಿದಾರ್ ಅಜಯ್ ಎಂಬ ಟ್ವಿಟ್ಟರ್ ಹ್ಯಾಂಡಲ್ “ಕರ್ನಾಟಕದ ಮುಖ್ಯಮಂತ್ರಿಯನ್ನು ಬದಲಿಸಿ” ಎಂದು ಬರೆದುಕೊಂಡಿದ್ದಾರೆ.

 

ಒಟ್ಟಿನಲ್ಲಿ ಯಡಿಯೂರಪ್ಪ ಅವರ ಹೇಳಿಕೆಯೂ ರಾಜಕೀಯವಾಗಿ ಬಿಸಿ ಬಿಸಿ ಚರ್ಚೆಯನ್ನು ಉಂಟು ಮಾಡಿದ್ದು. ಸಾಮಾಜಿಕ ಜಾಲತಾಣದಾದ್ಯಂತ ಭಾರೀ ಚರ್ಚೆಯನ್ನು ಉಂಟುಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...