Homeಕರ್ನಾಟಕ"ಲೈಂಗಿಕ ಕಿರುಕುಳ ನೀಡಿರುವುದನ್ನು ಸ್ವತಃ ಯಡಿಯೂರಪ್ಪ ಒಪ್ಪಿದ್ದಾರೆ" : ಹೈಕೋರ್ಟ್‌ನಲ್ಲಿ ಸರ್ಕಾರದ ವಾದ

“ಲೈಂಗಿಕ ಕಿರುಕುಳ ನೀಡಿರುವುದನ್ನು ಸ್ವತಃ ಯಡಿಯೂರಪ್ಪ ಒಪ್ಪಿದ್ದಾರೆ” : ಹೈಕೋರ್ಟ್‌ನಲ್ಲಿ ಸರ್ಕಾರದ ವಾದ

- Advertisement -
- Advertisement -

“ಬಾಲಕಿಯ ಶರ್ಟ್ ಒಳಗೆ ಏಕೆ ಕೈ ಹಾಕಿದ್ದಿರಿ ಎಂದು ಕೇಳಿದ್ದಕ್ಕೆ, ಅವಳ ಮೇಲೆ ರೇಪ್‌ ನಡೆದಿದೆಯೊ ಇಲ್ಲವೊ ಎಂಬುವುದನ್ನು ಚೆಕ್ ಮಾಡಲು ಹಾಕಿದ್ದೆ” ಎಂದು ಸ್ವತಃ ಯಡಿಯೂರಪ್ಪನವರೇ ಸಂತ್ರಸ್ತೆಯ ತಾಯಿಗೆ ಹೇಳಿದ್ದಾರೆ. ಯಡಿಯೂರಪ್ಪನವರ ಈ ನಡೆಯಿಂದ ಲೈಂಗಿಕ ದೌರ್ಜನ್ಯ ಎಸಗಿರುವುದು ಸ್ಪಷ್ಟವಾಗಿದೆ” ಎಂದು ರಾಜ್ಯ ಸರ್ಕಾರವು ಬುಧವಾರ (ಡಿ.18) ಹೈಕೋರ್ಟ್‌ಗೆ ಹೇಳಿದೆ.

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತನ್ನ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯ ವಿಚಾರಣೆಯು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠದಲ್ಲಿ ಬುಧವಾರ ನಡೆಯಿತು.

ಈ ವೇಳೆ ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ.ರವಿವರ್ಮ ಕುಮಾರ್‌ ಅವರು “ಸ್ವತಃ ಯಡಿಯೂರಪ್ಪ ಅವರು “ಬಾಲಕಿಯ ಮೇಲೆ ರೇಪ್‌ ನಡೆದಿದೆಯೊ ಇಲ್ಲವೊ ಎಂದು ಪರಿಶೀಲಿಸಲು ಆಕೆಯ ಶರ್ಟ್‌ ಒಳಕೆ ಕೈ ಹಾಕಿದ್ದೆ” ಎಂದು ಹೇಳಿರುವಾಗ ಅವರ ಈ ಕೃತ್ಯ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯವಲ್ಲವೇ? ಲೈಂಗಿಕ ದೌರ್ಜನ್ಯ ನಡೆದಿರುವುದು ಸ್ಪಷ್ಟವಾಗಿದೆ” ಎಂದು ವಾದಿಸಿದರು.

ಪೋಕ್ಸೋ ಪ್ರಕರಣ ರದ್ದುಪಡಿಸುವಂತೆ ಕೋರಿ ಯಡಿಯೂರಪ್ಪ ಅವರು ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸುವಂತೆ ನ್ಯಾಯಪೀಠಕ್ಕೆ ಮನವಿ ಮಾಡಿದರು.

ಪ್ರೊ. ರವಿವರ್ಮ ಕುಮಾರ್ ಅವರ ವಾದವನ್ನು ಬಲವಾಗಿ ಅಲ್ಲಗಳೆದ ಅರ್ಜಿದಾರರ ಪರ ಹಿರಿಯ ವಕೀಲ ಸಿ.ವಿ ನಾಗೇಶ್ ಅವರು “ಸಂತ್ರಸ್ತ ಬಾಲಕಿಯ ತಾಯಿ ಈ ಪ್ರಕರಣದಲ್ಲಿ ದೂರುದಾರರು (ಈಗ ಮೃತರಾಗಿದ್ದಾರೆ). ಆದರೆ, ಆಕೆ ಇಂತಹುದೇ ದೂರುಗಳನ್ನು ಹಲವು ಅಧಿಕಾರಿಗಳು, ಸಂಬಂಧಿಗಳು, ರಾಜಕಾರಣಿಗಳ ಮೇಲೆ ದಾಖಲಿಸಿದ್ದು, ಒಟ್ಟು 53 ದೂರುಗಳನ್ನು ದಾಖಲಿಸಿದ್ದಾರೆ” ಎಂದರು.

“ಒಂದೂವರೆ ತಿಂಗಳ ನಂತರ ಪ್ರಕರಣ ದಾಖಲಿಸಲಾಗಿದೆ. ಯಡಿಯೂರಪ್ಪ ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂಬ ಬಾಲಕಿಯ ಹೇಳಿಕೆ ಇದೆ. ವಾಸ್ತವವನ್ನು ಗಮನಿಸಿದಾಗ, ಹಲವು ಜನರ ಸಮ್ಮುಖದಲ್ಲಿ ಇಂತಹ ಘಟನೆ ನಡೆಯಲು ಸಾಧ್ಯವಿತ್ತೇ? ಬಾಲಕಿಯ ಹೇಳಿಕೆ ಆಧರಿಸಿ ಆರೋಪ ಪಟ್ಟಿ ದಾಖಲಿಸಲಾಗಿದೆ. ಕೆಲವರ ಹೇಳಿಕೆ ಪಡೆದಿದ್ದರೂ ಅವರನ್ನು ಸಾಕ್ಷಿಯಾಗಿ ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿಲ್ಲ” ಎಂದು ಹೇಳಿದರು.

ಆಗ, ನ್ಯಾಯಮೂರ್ತಿ ನಾಗಪ್ರಸನ್ನ ಅವರು “ನ್ಯಾಯಾಲಯ ಈ ಹಂತದಲ್ಲಿ ಬಾಲಕಿಯ ಸಿಆರ್‌ಪಿಸಿ ಸೆಕ್ಷನ್‌ 164ರ ಹೇಳಿಕೆಯನ್ನು ಪರಿಗಣಿಸಬೇಕಲ್ಲವೇ?” ಎಂದು ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನಾಗೇಶ್‌ ಅವರು “ಯಡಿಯೂರಪ್ಪ ಅವರಿಗೆ 82 ವರ್ಷ ವಯಸ್ಸಾಗಿದೆ. ಅವರ ಕೈಗಳು ನಡುಗುತ್ತವೆ. ಲೈಟ್‌ ಸ್ವಿಚ್‌ ಹಾಕಲೂ ನಮಗೆ ಹೇಳುತ್ತಾರೆ ಎಂದು ಅವರ ಮನೆಯ ಕೆಲಸದವರ ಹೇಳಿಕೆಯಿದೆ. ಬಾಲಕಿ ರೂಮಿಗೆ ಹೋಗಿರಲಿಲ್ಲ ಎಂಬ ಸಾಕ್ಷಿಯ ಹೇಳಿಕೆ ಇದೆ. ಅಂಗರಕ್ಷಕರು ಯಡಿಯೂರಪ್ಪನವರ ಆಜುಬಾಜಿನಲ್ಲೇ ಇರುತ್ತಾರೆ. ಅಲ್ಲಿದ್ದ ಎಲ್ಲಾ ಸಾಕ್ಷಿಗಳೂ ಇಂತಹ ಘಟನೆ ನಡೆದಿಲ್ಲ, ಯಡಿಯೂರಪ್ಪ ಹಾಲ್‌ ಬಿಟ್ಟು ಎಲ್ಲೂ ಹೋಗಿರಲಿಲ್ಲ ಎಂದು ಹೇಳಿದ್ದಾರೆ. ಆದರೂ, ತನಿಖಾಧಿಕಾರಿ ಕೇವಲ ಬಾಲಕಿಯ ಹೇಳಿಕೆ ಆಧರಿಸಿ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಮಹಿಳೆ ದೂರು ನೀಡುವ ಮುನ್ನ ರಾಜಕಾರಣಿಯೊಬ್ಬರನ್ನು ಭೇಟಿ ಮಾಡಿ ಠಾಣೆಗೆ ಬಂದಿದ್ದರು. ಹೀಗಾಗಿ, ಇದರ ಹಿಂದೆ ಕಾಣದ ಹಿತಾಸಕ್ತಿ ಅಡಗಿದೆ” ಎಂದರು.

ಆಗ ಪ್ರೊ.ರವಿವರ್ಮ ಕುಮಾರ್ ಅವರು ಆರೋಪ ಪಟ್ಟಿಯ ಮತ್ತಷ್ಟು ಅಂಶಗಳನ್ನು ಓದಲು ಮುಂದಾದರು. ಈ ಹಂತದಲ್ಲಿ ಪೀಠವು ಕೆಲವು ಅಂಶಗಳನ್ನು ಮುಕ್ತ ನ್ಯಾಯಾಲಯದಲ್ಲಿ ಓದುವುದು ಬೇಡ ಎಂದು ತಡೆಯಿತು. ಅಂತಿಮವಾಗಿ ವಿಚಾರಣೆಯನ್ನು ಗುರುವಾರಕ್ಕೆ (ಡಿ.19) ಮುಂದೂಡಿತು.

ಕೃಪೆ : ಬಾರ್ & ಬೆಂಚ್

ಇದನ್ನೂ ಓದಿ : ವಕ್ಫ್ ಗೊಂದಲ ಪರಿಶೀಲನೆಗೆ ಸಮಿತಿ : ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...