Homeಕರ್ನಾಟಕ"ಲೈಂಗಿಕ ಕಿರುಕುಳ ನೀಡಿರುವುದನ್ನು ಸ್ವತಃ ಯಡಿಯೂರಪ್ಪ ಒಪ್ಪಿದ್ದಾರೆ" : ಹೈಕೋರ್ಟ್‌ನಲ್ಲಿ ಸರ್ಕಾರದ ವಾದ

“ಲೈಂಗಿಕ ಕಿರುಕುಳ ನೀಡಿರುವುದನ್ನು ಸ್ವತಃ ಯಡಿಯೂರಪ್ಪ ಒಪ್ಪಿದ್ದಾರೆ” : ಹೈಕೋರ್ಟ್‌ನಲ್ಲಿ ಸರ್ಕಾರದ ವಾದ

- Advertisement -
- Advertisement -

“ಬಾಲಕಿಯ ಶರ್ಟ್ ಒಳಗೆ ಏಕೆ ಕೈ ಹಾಕಿದ್ದಿರಿ ಎಂದು ಕೇಳಿದ್ದಕ್ಕೆ, ಅವಳ ಮೇಲೆ ರೇಪ್‌ ನಡೆದಿದೆಯೊ ಇಲ್ಲವೊ ಎಂಬುವುದನ್ನು ಚೆಕ್ ಮಾಡಲು ಹಾಕಿದ್ದೆ” ಎಂದು ಸ್ವತಃ ಯಡಿಯೂರಪ್ಪನವರೇ ಸಂತ್ರಸ್ತೆಯ ತಾಯಿಗೆ ಹೇಳಿದ್ದಾರೆ. ಯಡಿಯೂರಪ್ಪನವರ ಈ ನಡೆಯಿಂದ ಲೈಂಗಿಕ ದೌರ್ಜನ್ಯ ಎಸಗಿರುವುದು ಸ್ಪಷ್ಟವಾಗಿದೆ” ಎಂದು ರಾಜ್ಯ ಸರ್ಕಾರವು ಬುಧವಾರ (ಡಿ.18) ಹೈಕೋರ್ಟ್‌ಗೆ ಹೇಳಿದೆ.

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತನ್ನ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯ ವಿಚಾರಣೆಯು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠದಲ್ಲಿ ಬುಧವಾರ ನಡೆಯಿತು.

ಈ ವೇಳೆ ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ.ರವಿವರ್ಮ ಕುಮಾರ್‌ ಅವರು “ಸ್ವತಃ ಯಡಿಯೂರಪ್ಪ ಅವರು “ಬಾಲಕಿಯ ಮೇಲೆ ರೇಪ್‌ ನಡೆದಿದೆಯೊ ಇಲ್ಲವೊ ಎಂದು ಪರಿಶೀಲಿಸಲು ಆಕೆಯ ಶರ್ಟ್‌ ಒಳಕೆ ಕೈ ಹಾಕಿದ್ದೆ” ಎಂದು ಹೇಳಿರುವಾಗ ಅವರ ಈ ಕೃತ್ಯ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯವಲ್ಲವೇ? ಲೈಂಗಿಕ ದೌರ್ಜನ್ಯ ನಡೆದಿರುವುದು ಸ್ಪಷ್ಟವಾಗಿದೆ” ಎಂದು ವಾದಿಸಿದರು.

ಪೋಕ್ಸೋ ಪ್ರಕರಣ ರದ್ದುಪಡಿಸುವಂತೆ ಕೋರಿ ಯಡಿಯೂರಪ್ಪ ಅವರು ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸುವಂತೆ ನ್ಯಾಯಪೀಠಕ್ಕೆ ಮನವಿ ಮಾಡಿದರು.

ಪ್ರೊ. ರವಿವರ್ಮ ಕುಮಾರ್ ಅವರ ವಾದವನ್ನು ಬಲವಾಗಿ ಅಲ್ಲಗಳೆದ ಅರ್ಜಿದಾರರ ಪರ ಹಿರಿಯ ವಕೀಲ ಸಿ.ವಿ ನಾಗೇಶ್ ಅವರು “ಸಂತ್ರಸ್ತ ಬಾಲಕಿಯ ತಾಯಿ ಈ ಪ್ರಕರಣದಲ್ಲಿ ದೂರುದಾರರು (ಈಗ ಮೃತರಾಗಿದ್ದಾರೆ). ಆದರೆ, ಆಕೆ ಇಂತಹುದೇ ದೂರುಗಳನ್ನು ಹಲವು ಅಧಿಕಾರಿಗಳು, ಸಂಬಂಧಿಗಳು, ರಾಜಕಾರಣಿಗಳ ಮೇಲೆ ದಾಖಲಿಸಿದ್ದು, ಒಟ್ಟು 53 ದೂರುಗಳನ್ನು ದಾಖಲಿಸಿದ್ದಾರೆ” ಎಂದರು.

“ಒಂದೂವರೆ ತಿಂಗಳ ನಂತರ ಪ್ರಕರಣ ದಾಖಲಿಸಲಾಗಿದೆ. ಯಡಿಯೂರಪ್ಪ ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂಬ ಬಾಲಕಿಯ ಹೇಳಿಕೆ ಇದೆ. ವಾಸ್ತವವನ್ನು ಗಮನಿಸಿದಾಗ, ಹಲವು ಜನರ ಸಮ್ಮುಖದಲ್ಲಿ ಇಂತಹ ಘಟನೆ ನಡೆಯಲು ಸಾಧ್ಯವಿತ್ತೇ? ಬಾಲಕಿಯ ಹೇಳಿಕೆ ಆಧರಿಸಿ ಆರೋಪ ಪಟ್ಟಿ ದಾಖಲಿಸಲಾಗಿದೆ. ಕೆಲವರ ಹೇಳಿಕೆ ಪಡೆದಿದ್ದರೂ ಅವರನ್ನು ಸಾಕ್ಷಿಯಾಗಿ ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿಲ್ಲ” ಎಂದು ಹೇಳಿದರು.

ಆಗ, ನ್ಯಾಯಮೂರ್ತಿ ನಾಗಪ್ರಸನ್ನ ಅವರು “ನ್ಯಾಯಾಲಯ ಈ ಹಂತದಲ್ಲಿ ಬಾಲಕಿಯ ಸಿಆರ್‌ಪಿಸಿ ಸೆಕ್ಷನ್‌ 164ರ ಹೇಳಿಕೆಯನ್ನು ಪರಿಗಣಿಸಬೇಕಲ್ಲವೇ?” ಎಂದು ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನಾಗೇಶ್‌ ಅವರು “ಯಡಿಯೂರಪ್ಪ ಅವರಿಗೆ 82 ವರ್ಷ ವಯಸ್ಸಾಗಿದೆ. ಅವರ ಕೈಗಳು ನಡುಗುತ್ತವೆ. ಲೈಟ್‌ ಸ್ವಿಚ್‌ ಹಾಕಲೂ ನಮಗೆ ಹೇಳುತ್ತಾರೆ ಎಂದು ಅವರ ಮನೆಯ ಕೆಲಸದವರ ಹೇಳಿಕೆಯಿದೆ. ಬಾಲಕಿ ರೂಮಿಗೆ ಹೋಗಿರಲಿಲ್ಲ ಎಂಬ ಸಾಕ್ಷಿಯ ಹೇಳಿಕೆ ಇದೆ. ಅಂಗರಕ್ಷಕರು ಯಡಿಯೂರಪ್ಪನವರ ಆಜುಬಾಜಿನಲ್ಲೇ ಇರುತ್ತಾರೆ. ಅಲ್ಲಿದ್ದ ಎಲ್ಲಾ ಸಾಕ್ಷಿಗಳೂ ಇಂತಹ ಘಟನೆ ನಡೆದಿಲ್ಲ, ಯಡಿಯೂರಪ್ಪ ಹಾಲ್‌ ಬಿಟ್ಟು ಎಲ್ಲೂ ಹೋಗಿರಲಿಲ್ಲ ಎಂದು ಹೇಳಿದ್ದಾರೆ. ಆದರೂ, ತನಿಖಾಧಿಕಾರಿ ಕೇವಲ ಬಾಲಕಿಯ ಹೇಳಿಕೆ ಆಧರಿಸಿ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಮಹಿಳೆ ದೂರು ನೀಡುವ ಮುನ್ನ ರಾಜಕಾರಣಿಯೊಬ್ಬರನ್ನು ಭೇಟಿ ಮಾಡಿ ಠಾಣೆಗೆ ಬಂದಿದ್ದರು. ಹೀಗಾಗಿ, ಇದರ ಹಿಂದೆ ಕಾಣದ ಹಿತಾಸಕ್ತಿ ಅಡಗಿದೆ” ಎಂದರು.

ಆಗ ಪ್ರೊ.ರವಿವರ್ಮ ಕುಮಾರ್ ಅವರು ಆರೋಪ ಪಟ್ಟಿಯ ಮತ್ತಷ್ಟು ಅಂಶಗಳನ್ನು ಓದಲು ಮುಂದಾದರು. ಈ ಹಂತದಲ್ಲಿ ಪೀಠವು ಕೆಲವು ಅಂಶಗಳನ್ನು ಮುಕ್ತ ನ್ಯಾಯಾಲಯದಲ್ಲಿ ಓದುವುದು ಬೇಡ ಎಂದು ತಡೆಯಿತು. ಅಂತಿಮವಾಗಿ ವಿಚಾರಣೆಯನ್ನು ಗುರುವಾರಕ್ಕೆ (ಡಿ.19) ಮುಂದೂಡಿತು.

ಕೃಪೆ : ಬಾರ್ & ಬೆಂಚ್

ಇದನ್ನೂ ಓದಿ : ವಕ್ಫ್ ಗೊಂದಲ ಪರಿಶೀಲನೆಗೆ ಸಮಿತಿ : ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...