Homeಕರ್ನಾಟಕ"ಲೈಂಗಿಕ ಕಿರುಕುಳ ನೀಡಿರುವುದನ್ನು ಸ್ವತಃ ಯಡಿಯೂರಪ್ಪ ಒಪ್ಪಿದ್ದಾರೆ" : ಹೈಕೋರ್ಟ್‌ನಲ್ಲಿ ಸರ್ಕಾರದ ವಾದ

“ಲೈಂಗಿಕ ಕಿರುಕುಳ ನೀಡಿರುವುದನ್ನು ಸ್ವತಃ ಯಡಿಯೂರಪ್ಪ ಒಪ್ಪಿದ್ದಾರೆ” : ಹೈಕೋರ್ಟ್‌ನಲ್ಲಿ ಸರ್ಕಾರದ ವಾದ

- Advertisement -
- Advertisement -

“ಬಾಲಕಿಯ ಶರ್ಟ್ ಒಳಗೆ ಏಕೆ ಕೈ ಹಾಕಿದ್ದಿರಿ ಎಂದು ಕೇಳಿದ್ದಕ್ಕೆ, ಅವಳ ಮೇಲೆ ರೇಪ್‌ ನಡೆದಿದೆಯೊ ಇಲ್ಲವೊ ಎಂಬುವುದನ್ನು ಚೆಕ್ ಮಾಡಲು ಹಾಕಿದ್ದೆ” ಎಂದು ಸ್ವತಃ ಯಡಿಯೂರಪ್ಪನವರೇ ಸಂತ್ರಸ್ತೆಯ ತಾಯಿಗೆ ಹೇಳಿದ್ದಾರೆ. ಯಡಿಯೂರಪ್ಪನವರ ಈ ನಡೆಯಿಂದ ಲೈಂಗಿಕ ದೌರ್ಜನ್ಯ ಎಸಗಿರುವುದು ಸ್ಪಷ್ಟವಾಗಿದೆ” ಎಂದು ರಾಜ್ಯ ಸರ್ಕಾರವು ಬುಧವಾರ (ಡಿ.18) ಹೈಕೋರ್ಟ್‌ಗೆ ಹೇಳಿದೆ.

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತನ್ನ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯ ವಿಚಾರಣೆಯು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠದಲ್ಲಿ ಬುಧವಾರ ನಡೆಯಿತು.

ಈ ವೇಳೆ ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ.ರವಿವರ್ಮ ಕುಮಾರ್‌ ಅವರು “ಸ್ವತಃ ಯಡಿಯೂರಪ್ಪ ಅವರು “ಬಾಲಕಿಯ ಮೇಲೆ ರೇಪ್‌ ನಡೆದಿದೆಯೊ ಇಲ್ಲವೊ ಎಂದು ಪರಿಶೀಲಿಸಲು ಆಕೆಯ ಶರ್ಟ್‌ ಒಳಕೆ ಕೈ ಹಾಕಿದ್ದೆ” ಎಂದು ಹೇಳಿರುವಾಗ ಅವರ ಈ ಕೃತ್ಯ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯವಲ್ಲವೇ? ಲೈಂಗಿಕ ದೌರ್ಜನ್ಯ ನಡೆದಿರುವುದು ಸ್ಪಷ್ಟವಾಗಿದೆ” ಎಂದು ವಾದಿಸಿದರು.

ಪೋಕ್ಸೋ ಪ್ರಕರಣ ರದ್ದುಪಡಿಸುವಂತೆ ಕೋರಿ ಯಡಿಯೂರಪ್ಪ ಅವರು ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸುವಂತೆ ನ್ಯಾಯಪೀಠಕ್ಕೆ ಮನವಿ ಮಾಡಿದರು.

ಪ್ರೊ. ರವಿವರ್ಮ ಕುಮಾರ್ ಅವರ ವಾದವನ್ನು ಬಲವಾಗಿ ಅಲ್ಲಗಳೆದ ಅರ್ಜಿದಾರರ ಪರ ಹಿರಿಯ ವಕೀಲ ಸಿ.ವಿ ನಾಗೇಶ್ ಅವರು “ಸಂತ್ರಸ್ತ ಬಾಲಕಿಯ ತಾಯಿ ಈ ಪ್ರಕರಣದಲ್ಲಿ ದೂರುದಾರರು (ಈಗ ಮೃತರಾಗಿದ್ದಾರೆ). ಆದರೆ, ಆಕೆ ಇಂತಹುದೇ ದೂರುಗಳನ್ನು ಹಲವು ಅಧಿಕಾರಿಗಳು, ಸಂಬಂಧಿಗಳು, ರಾಜಕಾರಣಿಗಳ ಮೇಲೆ ದಾಖಲಿಸಿದ್ದು, ಒಟ್ಟು 53 ದೂರುಗಳನ್ನು ದಾಖಲಿಸಿದ್ದಾರೆ” ಎಂದರು.

“ಒಂದೂವರೆ ತಿಂಗಳ ನಂತರ ಪ್ರಕರಣ ದಾಖಲಿಸಲಾಗಿದೆ. ಯಡಿಯೂರಪ್ಪ ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂಬ ಬಾಲಕಿಯ ಹೇಳಿಕೆ ಇದೆ. ವಾಸ್ತವವನ್ನು ಗಮನಿಸಿದಾಗ, ಹಲವು ಜನರ ಸಮ್ಮುಖದಲ್ಲಿ ಇಂತಹ ಘಟನೆ ನಡೆಯಲು ಸಾಧ್ಯವಿತ್ತೇ? ಬಾಲಕಿಯ ಹೇಳಿಕೆ ಆಧರಿಸಿ ಆರೋಪ ಪಟ್ಟಿ ದಾಖಲಿಸಲಾಗಿದೆ. ಕೆಲವರ ಹೇಳಿಕೆ ಪಡೆದಿದ್ದರೂ ಅವರನ್ನು ಸಾಕ್ಷಿಯಾಗಿ ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿಲ್ಲ” ಎಂದು ಹೇಳಿದರು.

ಆಗ, ನ್ಯಾಯಮೂರ್ತಿ ನಾಗಪ್ರಸನ್ನ ಅವರು “ನ್ಯಾಯಾಲಯ ಈ ಹಂತದಲ್ಲಿ ಬಾಲಕಿಯ ಸಿಆರ್‌ಪಿಸಿ ಸೆಕ್ಷನ್‌ 164ರ ಹೇಳಿಕೆಯನ್ನು ಪರಿಗಣಿಸಬೇಕಲ್ಲವೇ?” ಎಂದು ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನಾಗೇಶ್‌ ಅವರು “ಯಡಿಯೂರಪ್ಪ ಅವರಿಗೆ 82 ವರ್ಷ ವಯಸ್ಸಾಗಿದೆ. ಅವರ ಕೈಗಳು ನಡುಗುತ್ತವೆ. ಲೈಟ್‌ ಸ್ವಿಚ್‌ ಹಾಕಲೂ ನಮಗೆ ಹೇಳುತ್ತಾರೆ ಎಂದು ಅವರ ಮನೆಯ ಕೆಲಸದವರ ಹೇಳಿಕೆಯಿದೆ. ಬಾಲಕಿ ರೂಮಿಗೆ ಹೋಗಿರಲಿಲ್ಲ ಎಂಬ ಸಾಕ್ಷಿಯ ಹೇಳಿಕೆ ಇದೆ. ಅಂಗರಕ್ಷಕರು ಯಡಿಯೂರಪ್ಪನವರ ಆಜುಬಾಜಿನಲ್ಲೇ ಇರುತ್ತಾರೆ. ಅಲ್ಲಿದ್ದ ಎಲ್ಲಾ ಸಾಕ್ಷಿಗಳೂ ಇಂತಹ ಘಟನೆ ನಡೆದಿಲ್ಲ, ಯಡಿಯೂರಪ್ಪ ಹಾಲ್‌ ಬಿಟ್ಟು ಎಲ್ಲೂ ಹೋಗಿರಲಿಲ್ಲ ಎಂದು ಹೇಳಿದ್ದಾರೆ. ಆದರೂ, ತನಿಖಾಧಿಕಾರಿ ಕೇವಲ ಬಾಲಕಿಯ ಹೇಳಿಕೆ ಆಧರಿಸಿ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಮಹಿಳೆ ದೂರು ನೀಡುವ ಮುನ್ನ ರಾಜಕಾರಣಿಯೊಬ್ಬರನ್ನು ಭೇಟಿ ಮಾಡಿ ಠಾಣೆಗೆ ಬಂದಿದ್ದರು. ಹೀಗಾಗಿ, ಇದರ ಹಿಂದೆ ಕಾಣದ ಹಿತಾಸಕ್ತಿ ಅಡಗಿದೆ” ಎಂದರು.

ಆಗ ಪ್ರೊ.ರವಿವರ್ಮ ಕುಮಾರ್ ಅವರು ಆರೋಪ ಪಟ್ಟಿಯ ಮತ್ತಷ್ಟು ಅಂಶಗಳನ್ನು ಓದಲು ಮುಂದಾದರು. ಈ ಹಂತದಲ್ಲಿ ಪೀಠವು ಕೆಲವು ಅಂಶಗಳನ್ನು ಮುಕ್ತ ನ್ಯಾಯಾಲಯದಲ್ಲಿ ಓದುವುದು ಬೇಡ ಎಂದು ತಡೆಯಿತು. ಅಂತಿಮವಾಗಿ ವಿಚಾರಣೆಯನ್ನು ಗುರುವಾರಕ್ಕೆ (ಡಿ.19) ಮುಂದೂಡಿತು.

ಕೃಪೆ : ಬಾರ್ & ಬೆಂಚ್

ಇದನ್ನೂ ಓದಿ : ವಕ್ಫ್ ಗೊಂದಲ ಪರಿಶೀಲನೆಗೆ ಸಮಿತಿ : ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...