Homeಕರ್ನಾಟಕ"ಲೈಂಗಿಕ ಕಿರುಕುಳ ನೀಡಿರುವುದನ್ನು ಸ್ವತಃ ಯಡಿಯೂರಪ್ಪ ಒಪ್ಪಿದ್ದಾರೆ" : ಹೈಕೋರ್ಟ್‌ನಲ್ಲಿ ಸರ್ಕಾರದ ವಾದ

“ಲೈಂಗಿಕ ಕಿರುಕುಳ ನೀಡಿರುವುದನ್ನು ಸ್ವತಃ ಯಡಿಯೂರಪ್ಪ ಒಪ್ಪಿದ್ದಾರೆ” : ಹೈಕೋರ್ಟ್‌ನಲ್ಲಿ ಸರ್ಕಾರದ ವಾದ

- Advertisement -
- Advertisement -

“ಬಾಲಕಿಯ ಶರ್ಟ್ ಒಳಗೆ ಏಕೆ ಕೈ ಹಾಕಿದ್ದಿರಿ ಎಂದು ಕೇಳಿದ್ದಕ್ಕೆ, ಅವಳ ಮೇಲೆ ರೇಪ್‌ ನಡೆದಿದೆಯೊ ಇಲ್ಲವೊ ಎಂಬುವುದನ್ನು ಚೆಕ್ ಮಾಡಲು ಹಾಕಿದ್ದೆ” ಎಂದು ಸ್ವತಃ ಯಡಿಯೂರಪ್ಪನವರೇ ಸಂತ್ರಸ್ತೆಯ ತಾಯಿಗೆ ಹೇಳಿದ್ದಾರೆ. ಯಡಿಯೂರಪ್ಪನವರ ಈ ನಡೆಯಿಂದ ಲೈಂಗಿಕ ದೌರ್ಜನ್ಯ ಎಸಗಿರುವುದು ಸ್ಪಷ್ಟವಾಗಿದೆ” ಎಂದು ರಾಜ್ಯ ಸರ್ಕಾರವು ಬುಧವಾರ (ಡಿ.18) ಹೈಕೋರ್ಟ್‌ಗೆ ಹೇಳಿದೆ.

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತನ್ನ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯ ವಿಚಾರಣೆಯು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠದಲ್ಲಿ ಬುಧವಾರ ನಡೆಯಿತು.

ಈ ವೇಳೆ ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ.ರವಿವರ್ಮ ಕುಮಾರ್‌ ಅವರು “ಸ್ವತಃ ಯಡಿಯೂರಪ್ಪ ಅವರು “ಬಾಲಕಿಯ ಮೇಲೆ ರೇಪ್‌ ನಡೆದಿದೆಯೊ ಇಲ್ಲವೊ ಎಂದು ಪರಿಶೀಲಿಸಲು ಆಕೆಯ ಶರ್ಟ್‌ ಒಳಕೆ ಕೈ ಹಾಕಿದ್ದೆ” ಎಂದು ಹೇಳಿರುವಾಗ ಅವರ ಈ ಕೃತ್ಯ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯವಲ್ಲವೇ? ಲೈಂಗಿಕ ದೌರ್ಜನ್ಯ ನಡೆದಿರುವುದು ಸ್ಪಷ್ಟವಾಗಿದೆ” ಎಂದು ವಾದಿಸಿದರು.

ಪೋಕ್ಸೋ ಪ್ರಕರಣ ರದ್ದುಪಡಿಸುವಂತೆ ಕೋರಿ ಯಡಿಯೂರಪ್ಪ ಅವರು ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸುವಂತೆ ನ್ಯಾಯಪೀಠಕ್ಕೆ ಮನವಿ ಮಾಡಿದರು.

ಪ್ರೊ. ರವಿವರ್ಮ ಕುಮಾರ್ ಅವರ ವಾದವನ್ನು ಬಲವಾಗಿ ಅಲ್ಲಗಳೆದ ಅರ್ಜಿದಾರರ ಪರ ಹಿರಿಯ ವಕೀಲ ಸಿ.ವಿ ನಾಗೇಶ್ ಅವರು “ಸಂತ್ರಸ್ತ ಬಾಲಕಿಯ ತಾಯಿ ಈ ಪ್ರಕರಣದಲ್ಲಿ ದೂರುದಾರರು (ಈಗ ಮೃತರಾಗಿದ್ದಾರೆ). ಆದರೆ, ಆಕೆ ಇಂತಹುದೇ ದೂರುಗಳನ್ನು ಹಲವು ಅಧಿಕಾರಿಗಳು, ಸಂಬಂಧಿಗಳು, ರಾಜಕಾರಣಿಗಳ ಮೇಲೆ ದಾಖಲಿಸಿದ್ದು, ಒಟ್ಟು 53 ದೂರುಗಳನ್ನು ದಾಖಲಿಸಿದ್ದಾರೆ” ಎಂದರು.

“ಒಂದೂವರೆ ತಿಂಗಳ ನಂತರ ಪ್ರಕರಣ ದಾಖಲಿಸಲಾಗಿದೆ. ಯಡಿಯೂರಪ್ಪ ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂಬ ಬಾಲಕಿಯ ಹೇಳಿಕೆ ಇದೆ. ವಾಸ್ತವವನ್ನು ಗಮನಿಸಿದಾಗ, ಹಲವು ಜನರ ಸಮ್ಮುಖದಲ್ಲಿ ಇಂತಹ ಘಟನೆ ನಡೆಯಲು ಸಾಧ್ಯವಿತ್ತೇ? ಬಾಲಕಿಯ ಹೇಳಿಕೆ ಆಧರಿಸಿ ಆರೋಪ ಪಟ್ಟಿ ದಾಖಲಿಸಲಾಗಿದೆ. ಕೆಲವರ ಹೇಳಿಕೆ ಪಡೆದಿದ್ದರೂ ಅವರನ್ನು ಸಾಕ್ಷಿಯಾಗಿ ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿಲ್ಲ” ಎಂದು ಹೇಳಿದರು.

ಆಗ, ನ್ಯಾಯಮೂರ್ತಿ ನಾಗಪ್ರಸನ್ನ ಅವರು “ನ್ಯಾಯಾಲಯ ಈ ಹಂತದಲ್ಲಿ ಬಾಲಕಿಯ ಸಿಆರ್‌ಪಿಸಿ ಸೆಕ್ಷನ್‌ 164ರ ಹೇಳಿಕೆಯನ್ನು ಪರಿಗಣಿಸಬೇಕಲ್ಲವೇ?” ಎಂದು ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನಾಗೇಶ್‌ ಅವರು “ಯಡಿಯೂರಪ್ಪ ಅವರಿಗೆ 82 ವರ್ಷ ವಯಸ್ಸಾಗಿದೆ. ಅವರ ಕೈಗಳು ನಡುಗುತ್ತವೆ. ಲೈಟ್‌ ಸ್ವಿಚ್‌ ಹಾಕಲೂ ನಮಗೆ ಹೇಳುತ್ತಾರೆ ಎಂದು ಅವರ ಮನೆಯ ಕೆಲಸದವರ ಹೇಳಿಕೆಯಿದೆ. ಬಾಲಕಿ ರೂಮಿಗೆ ಹೋಗಿರಲಿಲ್ಲ ಎಂಬ ಸಾಕ್ಷಿಯ ಹೇಳಿಕೆ ಇದೆ. ಅಂಗರಕ್ಷಕರು ಯಡಿಯೂರಪ್ಪನವರ ಆಜುಬಾಜಿನಲ್ಲೇ ಇರುತ್ತಾರೆ. ಅಲ್ಲಿದ್ದ ಎಲ್ಲಾ ಸಾಕ್ಷಿಗಳೂ ಇಂತಹ ಘಟನೆ ನಡೆದಿಲ್ಲ, ಯಡಿಯೂರಪ್ಪ ಹಾಲ್‌ ಬಿಟ್ಟು ಎಲ್ಲೂ ಹೋಗಿರಲಿಲ್ಲ ಎಂದು ಹೇಳಿದ್ದಾರೆ. ಆದರೂ, ತನಿಖಾಧಿಕಾರಿ ಕೇವಲ ಬಾಲಕಿಯ ಹೇಳಿಕೆ ಆಧರಿಸಿ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಮಹಿಳೆ ದೂರು ನೀಡುವ ಮುನ್ನ ರಾಜಕಾರಣಿಯೊಬ್ಬರನ್ನು ಭೇಟಿ ಮಾಡಿ ಠಾಣೆಗೆ ಬಂದಿದ್ದರು. ಹೀಗಾಗಿ, ಇದರ ಹಿಂದೆ ಕಾಣದ ಹಿತಾಸಕ್ತಿ ಅಡಗಿದೆ” ಎಂದರು.

ಆಗ ಪ್ರೊ.ರವಿವರ್ಮ ಕುಮಾರ್ ಅವರು ಆರೋಪ ಪಟ್ಟಿಯ ಮತ್ತಷ್ಟು ಅಂಶಗಳನ್ನು ಓದಲು ಮುಂದಾದರು. ಈ ಹಂತದಲ್ಲಿ ಪೀಠವು ಕೆಲವು ಅಂಶಗಳನ್ನು ಮುಕ್ತ ನ್ಯಾಯಾಲಯದಲ್ಲಿ ಓದುವುದು ಬೇಡ ಎಂದು ತಡೆಯಿತು. ಅಂತಿಮವಾಗಿ ವಿಚಾರಣೆಯನ್ನು ಗುರುವಾರಕ್ಕೆ (ಡಿ.19) ಮುಂದೂಡಿತು.

ಕೃಪೆ : ಬಾರ್ & ಬೆಂಚ್

ಇದನ್ನೂ ಓದಿ : ವಕ್ಫ್ ಗೊಂದಲ ಪರಿಶೀಲನೆಗೆ ಸಮಿತಿ : ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...