Homeಕರ್ನಾಟಕಬಳ್ಳಾರಿ: ಜಿಂದಾಲ್ ಆವರಣದಲ್ಲಿ ಸಾವಿರ ಆಕ್ಸಿಜನ್ ಬೆಡ್‌ಗಳ ಆಸ್ಪತ್ರೆ ಉದ್ಘಾಟನೆ

ಬಳ್ಳಾರಿ: ಜಿಂದಾಲ್ ಆವರಣದಲ್ಲಿ ಸಾವಿರ ಆಕ್ಸಿಜನ್ ಬೆಡ್‌ಗಳ ಆಸ್ಪತ್ರೆ ಉದ್ಘಾಟನೆ

- Advertisement -
- Advertisement -

ಬಳ್ಳಾರಿಯ ಜಿಂದಾಲ್ ಆವರಣದಲ್ಲಿ ಒಂದು ಸಾವಿರ ಆಕ್ಸಿಜನೇಟೆಡ್ ಬೆಡ್‌ಗಳ ಕೋವಿಡ್ ಕೇರ್‌ ಫೀಲ್ಡ್ ಆಸ್ಪತ್ರೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವರ್ಚುವಲ್ ಕಾರ್ಯಕ್ರಮದ ಮೂಲಕ ಉದ್ಘಾಟಿಸಿದ್ದಾರೆ.

ಕಳೆದ ವರ್ಷ ಕೋವಿಡ್ ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದಾಗ ಚಿಕಿತ್ಸೆ ಮತ್ತು ರೋಗಿಗಳ ಐಸೋಲೇಶನ್‌ಗಾಗಿ 1,100 ಹಾಸಿಗೆಗಳನ್ನು ಹೊಂದಿರುವ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಅನ್ನು ತುಮಕೂರು ರಸ್ತೆಯ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ (ಬಿಐಇಸಿ) ತೆರೆದಿತ್ತು. ಇದಕ್ಕಾಗಿ ರಾಜ್ಯ ಸರ್ಕಾರ ಕೋಟ್ಯಂತರ ರೂ ಖರ್ಚು ಮಾಡಿ ಭಾರೀ ಪ್ರಚಾರ ಗಿಟ್ಟಿಸಿತ್ತು.

ಆದರೆ, ಕೇವಲ ಒಂದೂವರೆ ತಿಂಗಳ ಬಳಿಕ ಈ ಸೆಂಟರ್‌ ಅನ್ನು ಮುಚ್ಚಲಾಗಿತ್ತು. ಕೊರೊನಾ ಎರಡನೇ ಅಲೆಯಲ್ಲಿ ಈ ಕೇಂದ್ರವಿದ್ದಿದ್ದರೇ ಹಾಸಿಗೆಗಾಗಿ ಜನ ಪರದಾಡುವ ಸ್ಥಿತಿ ಬರುತ್ತಿರಲಿಲ್ಲ ಎಂದು ಹಲವು ಸಂಘ ಸಂಸ್ಥೆಗಳು ಸರ್ಕಾರವನ್ನು ಟೀಕಿಸಿದ್ದವು.

ಇದನ್ನೂ ಓದಿ: ಪ್ರಚಾರ ಬಯಸದೆ ಸದ್ದಿಲ್ಲದೆ ಜನಸೇವೆಯಲ್ಲಿ ತೊಡಗಿದ ಬಿಎಂಸಿ-92 ವೈದ್ಯರ ತಂಡ

ಬಳ್ಳಾರಿಯ ಜೆ.ಎಸ್.ಡಬ್ಲ್ಯೂ ಸಂಸ್ಥೆ ವತಿಯಿಂದ ಸ್ಥಾಪಿಸಲಾಗಿರುವ 1 ಸಾವಿರ ಆಕ್ಸಿಜನೇಟೆಡ್ ಹಾಸಿಗೆಗಳ ‘ಕೋವಿಡ್ ಕೇರ್ ಫೀಲ್ಡ್ ಆಸ್ಪತ್ರೆ’ಯನ್ನು ಜಿಂದಾಲ್ ಆವರಣದಲ್ಲಿ ಆರಂಭಿಸಲಾಗಿದೆ.

ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್‌, ಆರೋಗ್ಯ ಸಚಿವ ಸುಧಾಕರ್‌, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌, ಜೆ.ಎಸ್.ಡಬ್ಲ್ಯೂ ಅಧ್ಯಕ್ಷ ಸಜ್ಜನ್ ಜಿಂದಾಲ್, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಮತ್ತಿತರರು ಭಾಗವಹಿಸಿದ್ದರು.

ಈ ತಾತ್ಕಾಲಿಕ ಆಸ್ಪತ್ರೆಯಲ್ಲಿ ಗುರುವಾರದಿಂದ 272 ಬೆಡ್‌ಗಳು ಚಿಕಿತ್ಸೆ ದೊರೆಯಲಿದ್ದು, ಸದ್ಯದಲ್ಲೇ 700 ಹಾಸಿಗೆಗಳು ಕೊರೊನಾ ರೋಗಿಗಳ ಉಪಯೋಗಕ್ಕೆ ಮುಕ್ತವಾಗಲಿದೆ. ಇನ್ನು ಈ ಆಸ್ಪತ್ರೆಯಲ್ಲಿ ಸೇವೆಯನ್ನು ಸಲ್ಲಿಸಲು ಬಳ್ಳಾರಿಯ ಬೆಸ್ಟ್ ನರ್ಸಿಂಗ್ ಆಸ್ಪತ್ರೆಯಲ್ಲಿ ವಿದ್ಯಾಭ್ಯಾಸ ಮಾಡಿದ್ದ ಗುಜರಾತ್‌ನ ನರ್ಸ್‌ಗಳು ರೈಲಿನ ಮೂಲಕ ಬಂದಿದ್ದಾರೆ.

ಇತ್ತಿಚೆಗೆ ರಾಜ್ಯ ಸರ್ಕಾರ ಜಿಂದಾಲ್‌ ಕಂಪನಿಗೆ 3677 ಎಕರೆ ಭೂಮಿ ಮಾರಾಟ ಮಾಡಿದೆ.


ಇದನ್ನೂ ಓದಿ: ಬೆಡ್‌ಗಾಗಿ ಸೋಂಕಿತರ ಪರದಾಟ: ಬೆಂಗಳೂರಿನ 10,100 ಬೆಡ್‌ಗಳ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಏನಾಯಿತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...