Homeಅಂಕಣಗಳುಯಡೂರಪ್ಪ ಯಯಾತಿ ಓತ್ತಾಯಿದ್ದನಂತೆ!- ಕಟ್ಟೆಪುರಾಣ

ಯಡೂರಪ್ಪ ಯಯಾತಿ ಓತ್ತಾಯಿದ್ದನಂತೆ!- ಕಟ್ಟೆಪುರಾಣ

- Advertisement -
- Advertisement -

ಉಗ್ರಿ ಚಾಡಿ ಹೇಳುವ ದನಿಯಲ್ಲಿ

‘ನೋಡೆ ಜುಮ್ಮಿ, ಈ ಬಿಜೆಪಿ ಸರಕಾರದೋರು ಕೊರೋನಾ ತಡಿಯಕ್ಕೆ ಅಂತ ಇರೊ ಅವುಸ್ದಿ, ಮಾತ್ರೆ, ಸ್ಯಾನಿಟೈಸರು, ಕಿಟ್ಟು, ಬೆಡ್ಡು ಇದನ್ಯಲ್ಲ ತಗಳವಾಗ ಒಂದುಕ್ಯರಡು ಅಂತ ದುಡ್ಡು ಕೊಟ್ಟು ಕೋಟ್ಯಾಂತರ್ರುಪಾಯಿ ಹ್ವಡದವುರಂತೆ’ ಎಂದ.

‘ಅಯ್ಯೋ ಇನ್ಯಂಥ ಗತಿಗ್ಯಟ್ಟ ಮುಂಡೆ ಮಕ್ಕಳಿವುರೂ, ಇದರಲ್ಲು ದುಡ್ಡು ವಡದರೇ’ ಎಂದಳು.

‘ಇದರಲ್ಲೆ ಕಣೆ ಹ್ವಡಿಯದು. ಯಾಕಂದ್ರೆ ಜನ ನಂಬದಿಲ್ಲ ಅಂತ ಅವುರಿಗೂ ಗೊತ್ತು.’

‘ಮನಸ್ಯಂಗೆ ಬತ್ಲ ಅವುರಿಗೆ ಹ್ಯಣ ತಿನ್ನೊ ನನ್ನ ಮಕ್ಕಳಿವುರು.’

‘ಆ ಟೈಮಲ್ಲಿ ಮನಸು ಕ್ಯಲಸ ಮಾಡದಿಲ್ಲ ಕಣಕ್ಕ. ಜನಗಳೂ ಇಗಿರೊ ಕಷ್ಟದಲ್ಲಿ ಅದ್ನ್ಯಲ್ಲ ನೋಡದಿಲ್ಲ. ಕೇಳದಿಲ್ಲ ಅಂತ ಅವುರಿಗೂ ಗೊತ್ತು’ ಎಂದ ವಾಟಿಸ್ಸೆ.

‘ಅಂಗರಿವುರು ಜನಗಳ ಉಳಸದಿಲ್ಲ ಬುಡು.’

‘ಜನಗಳ ಉಳಸರಾಗಿದ್ರೆ ಇಂತ ತೀರಮಾನ ತಗತಿದ್ರೇನಕ್ಕ.’

‘ಯಾವ ತೀರಮಾನ.’

‘ಕೆಲವು ಜಿಲ್ಲೆಯ ಮಧ್ಯಾಹ್ನದ ಮ್ಯಾಲೆ ಲಾಕ್‍ಡವುನ್ ಮಾಡ್ತಾ ಅವುರೆ. ಅಲ್ಲ ಕಣಕ್ಕ ವತ್ತರಿಂದ ಜನ ನಾಯಿ ತಿರಿಗಿದಂಗೆ ತಿರಗಿ ಮೂರುಗಂಟಿಗೆ ಮನಿಗೆ ಸೇರಿಕತ್ತರೆ. ಅಮ್ಯಾಲೆ ಲಾಕ್‍ಡವುನ್ ಆದ್ರೆಷ್ಟು ಬುಟ್ಟರೆಸ್ಟೂ ಇಂತದೂ ತಿಳಿಯದಿಲವಲ್ಲ ಏನೇಳನ.’

‘ಎಡೂರಪ್ಪನಿಗಾಗ್ಲೆ ವಯಿಸಾಯ್ತು ಕಣೊ, ಇಂತ ಸೂಕುಸ್ಮೆ ಹ್ವಳಿಯದಿಲ್ಲ ಅವುನಿಗೆ.’

‘ನಿಜಕಣೊ ಉಗ್ರಿ, ಅದ್ಕೆ ನೊಡು ಯಯಾತಿ ಓತ್ತಾಕುಂತವುನೆ.’

‘ಯಯ್ಯಾತಿ ಅಂದ್ರೇನ್ಲ.’

‘ಅದು ಪುಸ್ತಗ ಕಣಕ್ಕ ಮುದುಕರ್ಯಲ್ಲ ಓದೊ ಪುಸ್ತಕ.’

‘ಅದ್ಯಂತೆದ್ಲ ಮುದುಕುರೋದೊ ಪುಸಗ.’

‘ಅದರ ಕತೆ ಗೊತ್ತೇನಕ್ಕ.’

‘ನನಿಗೇನು ಗೊತ್ತು ಹೇಳ್ಳ.’

‘ಯಯಾತಿ ಒಬ್ಬ ರಾಜ ಕಣಕ್ಕ. ರಾಜ ಅಂದ ಮ್ಯಾಲೆ ಹೆಂಗಸರ ಚಟ ಇದ್ದೇ ಇರತದೆ. ಅಂಗೆ ಇವುನು ರುಶಿಮುನಿ ಮಗಳ ಹಿಡಕಳಕ್ಕೋದ ಅವುಳೋಗಿ ಅವುರಪ್ಪನಿಗೇಳಿದ್ಲು.’

‘ರಾಜನಿಗೆ ಹೆಡತಿ ಇರಲಿಲ್ವೆ?’

‘ಇರತರೆ ಕಣಕ್ಕ. ಅವುರ್ಯಲ್ಲ ನ್ಯಪಕಿರತರೆ ಇವುರು ಮಾತ್ರ ಚನ್ನಾಗಿರೊರನ್ಯಲ್ಲ ಹಿಡಕಳಕ್ಕೋಯ್ತರೆ, ಅಂಗೆ ಯಯಾತಿನೂ ಹೋಗಿ ಬ್ರಾಂಬ್ರುಡುಗಿ ಕೆಣಕಿದ. ಸಾಮಾನ್ಯವಾಗಿ ಬ್ರಾಂಬ್ರುಡುಗಿರಿಗೆ ಸೆಕ್ಸ್ ಕಡಮೆ. ಅದ್ಕೆ ಹೋಗಿ ಅವುರಪ್ಪನಿಗೇಳಿದ್ಲು.’

‘ಸರಿಯಾಗೆ ಮ್ಯಾಡವುಳೆ ಬುಡು.’

‘ಅವುರಪ್ಪ ಮಹಾಕೋಪಿಸ್ಟ. ಅವುನೋಗಿ ಯಯಾತಿ ಬೈದು ನಿನ್ನ ಪ್ರಾಯದಿಂದ್ಲೆ ಹಿಂಗೆ ಮಾಡಿದ್ದಿ ಅದ್ಕೆ ನೀನು ಮುದುಕಾಗೋಗತ್ತಗೆ ಅಂತ ಶಾಪ ಕೊಟ್ಟ. ಆ ಕೂಡ್ಳೆ ಯಯಾತಿ ನಮ್ಮ ಸೀರ ಮಾವನಂಗಾದ.’

‘ಅಯ್ಯೋ ಪಾಪ ಅಂತ ಸಾಪನೇನ್ಲ ಕೊಡದು.’

‘ಅದವುನಿಗೂ ಗೊತ್ತಾಯ್ತು ಕಣಕ್ಕ. ಅದ್ಕೆ ಯಯಾತಿಗೆ ನಿನ್ನ ಮುಪ್ಪ ಯಾರಿಗಾರ ಕೊಟ್ರೆ ಅವುರ ಹರೇಯ ನಿನಿಗೆ ಬತ್ತದೆ ಹೋಗು ಅಂದ. ಸರಿ ಯಯಾತಿ ಬಂದು ಯಾರಾರ ನನ್ನ ಮುಪ್ಪ ತಗಳಿ ಅರ್ದ ರಾಜ್ಯ ಕೊಡ್ತಿನಿ ಅಂದ ಯಾರೂ ಬರಲಿಲ್ಲ.’

‘ಅದ್ಯಂಗೆ ಬಂದರ್ಲ ಮುಪ್ಪು ಯಾರಿಗೆ ಬೇಕೇಳು.’

‘ಅಂಗೆ ಆಯ್ತು ಕಣಕ್ಕ. ಕಡಿಗೆ ಅಪ್ಪನ ಗೋಳಾಟ ನೋಡಕ್ಕಾಗದೆ ಮಗನೆ ಬಂದು ಈಸ್ಕಂಡ. ಅಪ್ಪ ಹರೇವುದೋನಾದ. ಮಗ ಮುದುಕಾದ ಅದ ನೊಡಿ ಸ್ವಸೆ ನ್ಯಾಣಾಯ್ಕಂಡು ಸತ್ತೋದ್ಲು. ಅದು ಗೊತ್ತಿಲ್ಲದೆ ಯಯಾತಿ ಹೆಡತಿ ಹಿಡಕಳಕ್ಕೊದ. ಅವುಳು ನಿನ್ನ ಪ್ರಾಯ ನನ್ನ ಮಗಂದು ಮುಟ್ಟುಬ್ಯಾಡ ಅಂದ್ಲು. ಯಾಯತಿ ಅಳತ ತಿರಗ ಮಗನಿಗೆ ಪ್ರಾಯಕೊಟ್ಟು ಮುದುಕಾದ.’

‘ಚನಾಗ್ಯದೆ ಕಂಡ್ಳ ಕತೆ. ಇದ್ಯಾಕ್ಕೋತ್ತ ಅವುನೆ ಎಡೂರಪ್ಪಾ.’

‘ಯಾಕೆ ಅಂದ್ರೆ ಆಗ್ಲೆ ಯಪ್ಪಂತೆಟ್ಟು ವರ್ಸಾಯ್ತ ಅದೆ. ಶೋಬಕ್ಕನೂ ದೂರಾಗ್ಯವುಳೆ. ಪ್ರಾಯ ಹೋಯ್ತಾ ಅದೆ. ಹೈಕಮಾಂಡು ಎಡೂರಪ್ಪನೆ ಇಳಿಲಿ ಅಂತ ಕಿರುಕುಳ ಕೊಡ್ತಾ ಅವುರೆ. ಕೊರೋನಾ ಸಮಸ್ಯೆ ಹಠಗಾಯಿಸಿಗಂಡದೆ. ಜ್ವತೆಲಿರೊ ಮಂತ್ರಿಗಳು ಕೊರೋನಾದಲ್ಲೂ ಕಾಸು ತಿಂತಾ ಅವುರೆ. ಅಂತೂ ಸೂಕುಸ್ಮುವಾಗಿ ನೋಡಿದ್ರೆ ಯಯಾತಿ ಗೋಳಾಟ ಹೆಡೂರಪ್ಪನಿಗೂ ಹಠಗಾಯಿಸಿಗಂಡದೆ. ಮುಪ್ಪು ಅನಿವಾರ್ಯ ಅಧಿಕಾರದಿಂದ ಇಳಿಯೋದು ಅನಿವಾರ್ಯ, ವಿಜಯೇಂದ್ರನ್ನ ಮುಂದೆ ತರೋದು ಅನಿವಾರ್ಯ, ಇಂತ ಅನಿವಾರ್ಯಗಳೆ ಎಡೂರಪ್ಪನ್ನ ಬಗ್ಗಸಬಹುದು ಕಣಕ್ಕ.’

‘ಅದೇನಾರ ಆಗ್ಲಿ ಬಡುವುರು ತಿನ್ನ ಅಕ್ಕಿನೆ ಕಡಮೆ ಮಾಡ್ಯವುನಂತೆ ಇವುನಿಗೆ ವಳ್ಳೆದಾದತೆ?’

‘!?


ಇದನ್ನು ಓದಿ: ಡಿ.ಕೆ.ಶಿ ಬಿಜೆಪಿಗಳ ಹೆದರಸ್ತನೆ ಬುಡೊ. ನೋ ಡವುಟು – ಚಂದ್ರೇಗೌಡರ ಕಟ್ಟೆಪುರಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...