Homeಅಂಕಣಗಳುಯಡೂರಪ್ಪ ಯಯಾತಿ ಓತ್ತಾಯಿದ್ದನಂತೆ!- ಕಟ್ಟೆಪುರಾಣ

ಯಡೂರಪ್ಪ ಯಯಾತಿ ಓತ್ತಾಯಿದ್ದನಂತೆ!- ಕಟ್ಟೆಪುರಾಣ

- Advertisement -
- Advertisement -

ಉಗ್ರಿ ಚಾಡಿ ಹೇಳುವ ದನಿಯಲ್ಲಿ

‘ನೋಡೆ ಜುಮ್ಮಿ, ಈ ಬಿಜೆಪಿ ಸರಕಾರದೋರು ಕೊರೋನಾ ತಡಿಯಕ್ಕೆ ಅಂತ ಇರೊ ಅವುಸ್ದಿ, ಮಾತ್ರೆ, ಸ್ಯಾನಿಟೈಸರು, ಕಿಟ್ಟು, ಬೆಡ್ಡು ಇದನ್ಯಲ್ಲ ತಗಳವಾಗ ಒಂದುಕ್ಯರಡು ಅಂತ ದುಡ್ಡು ಕೊಟ್ಟು ಕೋಟ್ಯಾಂತರ್ರುಪಾಯಿ ಹ್ವಡದವುರಂತೆ’ ಎಂದ.

‘ಅಯ್ಯೋ ಇನ್ಯಂಥ ಗತಿಗ್ಯಟ್ಟ ಮುಂಡೆ ಮಕ್ಕಳಿವುರೂ, ಇದರಲ್ಲು ದುಡ್ಡು ವಡದರೇ’ ಎಂದಳು.

‘ಇದರಲ್ಲೆ ಕಣೆ ಹ್ವಡಿಯದು. ಯಾಕಂದ್ರೆ ಜನ ನಂಬದಿಲ್ಲ ಅಂತ ಅವುರಿಗೂ ಗೊತ್ತು.’

‘ಮನಸ್ಯಂಗೆ ಬತ್ಲ ಅವುರಿಗೆ ಹ್ಯಣ ತಿನ್ನೊ ನನ್ನ ಮಕ್ಕಳಿವುರು.’

‘ಆ ಟೈಮಲ್ಲಿ ಮನಸು ಕ್ಯಲಸ ಮಾಡದಿಲ್ಲ ಕಣಕ್ಕ. ಜನಗಳೂ ಇಗಿರೊ ಕಷ್ಟದಲ್ಲಿ ಅದ್ನ್ಯಲ್ಲ ನೋಡದಿಲ್ಲ. ಕೇಳದಿಲ್ಲ ಅಂತ ಅವುರಿಗೂ ಗೊತ್ತು’ ಎಂದ ವಾಟಿಸ್ಸೆ.

‘ಅಂಗರಿವುರು ಜನಗಳ ಉಳಸದಿಲ್ಲ ಬುಡು.’

‘ಜನಗಳ ಉಳಸರಾಗಿದ್ರೆ ಇಂತ ತೀರಮಾನ ತಗತಿದ್ರೇನಕ್ಕ.’

‘ಯಾವ ತೀರಮಾನ.’

‘ಕೆಲವು ಜಿಲ್ಲೆಯ ಮಧ್ಯಾಹ್ನದ ಮ್ಯಾಲೆ ಲಾಕ್‍ಡವುನ್ ಮಾಡ್ತಾ ಅವುರೆ. ಅಲ್ಲ ಕಣಕ್ಕ ವತ್ತರಿಂದ ಜನ ನಾಯಿ ತಿರಿಗಿದಂಗೆ ತಿರಗಿ ಮೂರುಗಂಟಿಗೆ ಮನಿಗೆ ಸೇರಿಕತ್ತರೆ. ಅಮ್ಯಾಲೆ ಲಾಕ್‍ಡವುನ್ ಆದ್ರೆಷ್ಟು ಬುಟ್ಟರೆಸ್ಟೂ ಇಂತದೂ ತಿಳಿಯದಿಲವಲ್ಲ ಏನೇಳನ.’

‘ಎಡೂರಪ್ಪನಿಗಾಗ್ಲೆ ವಯಿಸಾಯ್ತು ಕಣೊ, ಇಂತ ಸೂಕುಸ್ಮೆ ಹ್ವಳಿಯದಿಲ್ಲ ಅವುನಿಗೆ.’

‘ನಿಜಕಣೊ ಉಗ್ರಿ, ಅದ್ಕೆ ನೊಡು ಯಯಾತಿ ಓತ್ತಾಕುಂತವುನೆ.’

‘ಯಯ್ಯಾತಿ ಅಂದ್ರೇನ್ಲ.’

‘ಅದು ಪುಸ್ತಗ ಕಣಕ್ಕ ಮುದುಕರ್ಯಲ್ಲ ಓದೊ ಪುಸ್ತಕ.’

‘ಅದ್ಯಂತೆದ್ಲ ಮುದುಕುರೋದೊ ಪುಸಗ.’

‘ಅದರ ಕತೆ ಗೊತ್ತೇನಕ್ಕ.’

‘ನನಿಗೇನು ಗೊತ್ತು ಹೇಳ್ಳ.’

‘ಯಯಾತಿ ಒಬ್ಬ ರಾಜ ಕಣಕ್ಕ. ರಾಜ ಅಂದ ಮ್ಯಾಲೆ ಹೆಂಗಸರ ಚಟ ಇದ್ದೇ ಇರತದೆ. ಅಂಗೆ ಇವುನು ರುಶಿಮುನಿ ಮಗಳ ಹಿಡಕಳಕ್ಕೋದ ಅವುಳೋಗಿ ಅವುರಪ್ಪನಿಗೇಳಿದ್ಲು.’

‘ರಾಜನಿಗೆ ಹೆಡತಿ ಇರಲಿಲ್ವೆ?’

‘ಇರತರೆ ಕಣಕ್ಕ. ಅವುರ್ಯಲ್ಲ ನ್ಯಪಕಿರತರೆ ಇವುರು ಮಾತ್ರ ಚನ್ನಾಗಿರೊರನ್ಯಲ್ಲ ಹಿಡಕಳಕ್ಕೋಯ್ತರೆ, ಅಂಗೆ ಯಯಾತಿನೂ ಹೋಗಿ ಬ್ರಾಂಬ್ರುಡುಗಿ ಕೆಣಕಿದ. ಸಾಮಾನ್ಯವಾಗಿ ಬ್ರಾಂಬ್ರುಡುಗಿರಿಗೆ ಸೆಕ್ಸ್ ಕಡಮೆ. ಅದ್ಕೆ ಹೋಗಿ ಅವುರಪ್ಪನಿಗೇಳಿದ್ಲು.’

‘ಸರಿಯಾಗೆ ಮ್ಯಾಡವುಳೆ ಬುಡು.’

‘ಅವುರಪ್ಪ ಮಹಾಕೋಪಿಸ್ಟ. ಅವುನೋಗಿ ಯಯಾತಿ ಬೈದು ನಿನ್ನ ಪ್ರಾಯದಿಂದ್ಲೆ ಹಿಂಗೆ ಮಾಡಿದ್ದಿ ಅದ್ಕೆ ನೀನು ಮುದುಕಾಗೋಗತ್ತಗೆ ಅಂತ ಶಾಪ ಕೊಟ್ಟ. ಆ ಕೂಡ್ಳೆ ಯಯಾತಿ ನಮ್ಮ ಸೀರ ಮಾವನಂಗಾದ.’

‘ಅಯ್ಯೋ ಪಾಪ ಅಂತ ಸಾಪನೇನ್ಲ ಕೊಡದು.’

‘ಅದವುನಿಗೂ ಗೊತ್ತಾಯ್ತು ಕಣಕ್ಕ. ಅದ್ಕೆ ಯಯಾತಿಗೆ ನಿನ್ನ ಮುಪ್ಪ ಯಾರಿಗಾರ ಕೊಟ್ರೆ ಅವುರ ಹರೇಯ ನಿನಿಗೆ ಬತ್ತದೆ ಹೋಗು ಅಂದ. ಸರಿ ಯಯಾತಿ ಬಂದು ಯಾರಾರ ನನ್ನ ಮುಪ್ಪ ತಗಳಿ ಅರ್ದ ರಾಜ್ಯ ಕೊಡ್ತಿನಿ ಅಂದ ಯಾರೂ ಬರಲಿಲ್ಲ.’

‘ಅದ್ಯಂಗೆ ಬಂದರ್ಲ ಮುಪ್ಪು ಯಾರಿಗೆ ಬೇಕೇಳು.’

‘ಅಂಗೆ ಆಯ್ತು ಕಣಕ್ಕ. ಕಡಿಗೆ ಅಪ್ಪನ ಗೋಳಾಟ ನೋಡಕ್ಕಾಗದೆ ಮಗನೆ ಬಂದು ಈಸ್ಕಂಡ. ಅಪ್ಪ ಹರೇವುದೋನಾದ. ಮಗ ಮುದುಕಾದ ಅದ ನೊಡಿ ಸ್ವಸೆ ನ್ಯಾಣಾಯ್ಕಂಡು ಸತ್ತೋದ್ಲು. ಅದು ಗೊತ್ತಿಲ್ಲದೆ ಯಯಾತಿ ಹೆಡತಿ ಹಿಡಕಳಕ್ಕೊದ. ಅವುಳು ನಿನ್ನ ಪ್ರಾಯ ನನ್ನ ಮಗಂದು ಮುಟ್ಟುಬ್ಯಾಡ ಅಂದ್ಲು. ಯಾಯತಿ ಅಳತ ತಿರಗ ಮಗನಿಗೆ ಪ್ರಾಯಕೊಟ್ಟು ಮುದುಕಾದ.’

‘ಚನಾಗ್ಯದೆ ಕಂಡ್ಳ ಕತೆ. ಇದ್ಯಾಕ್ಕೋತ್ತ ಅವುನೆ ಎಡೂರಪ್ಪಾ.’

‘ಯಾಕೆ ಅಂದ್ರೆ ಆಗ್ಲೆ ಯಪ್ಪಂತೆಟ್ಟು ವರ್ಸಾಯ್ತ ಅದೆ. ಶೋಬಕ್ಕನೂ ದೂರಾಗ್ಯವುಳೆ. ಪ್ರಾಯ ಹೋಯ್ತಾ ಅದೆ. ಹೈಕಮಾಂಡು ಎಡೂರಪ್ಪನೆ ಇಳಿಲಿ ಅಂತ ಕಿರುಕುಳ ಕೊಡ್ತಾ ಅವುರೆ. ಕೊರೋನಾ ಸಮಸ್ಯೆ ಹಠಗಾಯಿಸಿಗಂಡದೆ. ಜ್ವತೆಲಿರೊ ಮಂತ್ರಿಗಳು ಕೊರೋನಾದಲ್ಲೂ ಕಾಸು ತಿಂತಾ ಅವುರೆ. ಅಂತೂ ಸೂಕುಸ್ಮುವಾಗಿ ನೋಡಿದ್ರೆ ಯಯಾತಿ ಗೋಳಾಟ ಹೆಡೂರಪ್ಪನಿಗೂ ಹಠಗಾಯಿಸಿಗಂಡದೆ. ಮುಪ್ಪು ಅನಿವಾರ್ಯ ಅಧಿಕಾರದಿಂದ ಇಳಿಯೋದು ಅನಿವಾರ್ಯ, ವಿಜಯೇಂದ್ರನ್ನ ಮುಂದೆ ತರೋದು ಅನಿವಾರ್ಯ, ಇಂತ ಅನಿವಾರ್ಯಗಳೆ ಎಡೂರಪ್ಪನ್ನ ಬಗ್ಗಸಬಹುದು ಕಣಕ್ಕ.’

‘ಅದೇನಾರ ಆಗ್ಲಿ ಬಡುವುರು ತಿನ್ನ ಅಕ್ಕಿನೆ ಕಡಮೆ ಮಾಡ್ಯವುನಂತೆ ಇವುನಿಗೆ ವಳ್ಳೆದಾದತೆ?’

‘!?


ಇದನ್ನು ಓದಿ: ಡಿ.ಕೆ.ಶಿ ಬಿಜೆಪಿಗಳ ಹೆದರಸ್ತನೆ ಬುಡೊ. ನೋ ಡವುಟು – ಚಂದ್ರೇಗೌಡರ ಕಟ್ಟೆಪುರಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...