Homeಅಂಕಣಗಳುಯಡೂರಪ್ಪ ಯಯಾತಿ ಓತ್ತಾಯಿದ್ದನಂತೆ!- ಕಟ್ಟೆಪುರಾಣ

ಯಡೂರಪ್ಪ ಯಯಾತಿ ಓತ್ತಾಯಿದ್ದನಂತೆ!- ಕಟ್ಟೆಪುರಾಣ

- Advertisement -
- Advertisement -

ಉಗ್ರಿ ಚಾಡಿ ಹೇಳುವ ದನಿಯಲ್ಲಿ

‘ನೋಡೆ ಜುಮ್ಮಿ, ಈ ಬಿಜೆಪಿ ಸರಕಾರದೋರು ಕೊರೋನಾ ತಡಿಯಕ್ಕೆ ಅಂತ ಇರೊ ಅವುಸ್ದಿ, ಮಾತ್ರೆ, ಸ್ಯಾನಿಟೈಸರು, ಕಿಟ್ಟು, ಬೆಡ್ಡು ಇದನ್ಯಲ್ಲ ತಗಳವಾಗ ಒಂದುಕ್ಯರಡು ಅಂತ ದುಡ್ಡು ಕೊಟ್ಟು ಕೋಟ್ಯಾಂತರ್ರುಪಾಯಿ ಹ್ವಡದವುರಂತೆ’ ಎಂದ.

‘ಅಯ್ಯೋ ಇನ್ಯಂಥ ಗತಿಗ್ಯಟ್ಟ ಮುಂಡೆ ಮಕ್ಕಳಿವುರೂ, ಇದರಲ್ಲು ದುಡ್ಡು ವಡದರೇ’ ಎಂದಳು.

‘ಇದರಲ್ಲೆ ಕಣೆ ಹ್ವಡಿಯದು. ಯಾಕಂದ್ರೆ ಜನ ನಂಬದಿಲ್ಲ ಅಂತ ಅವುರಿಗೂ ಗೊತ್ತು.’

‘ಮನಸ್ಯಂಗೆ ಬತ್ಲ ಅವುರಿಗೆ ಹ್ಯಣ ತಿನ್ನೊ ನನ್ನ ಮಕ್ಕಳಿವುರು.’

‘ಆ ಟೈಮಲ್ಲಿ ಮನಸು ಕ್ಯಲಸ ಮಾಡದಿಲ್ಲ ಕಣಕ್ಕ. ಜನಗಳೂ ಇಗಿರೊ ಕಷ್ಟದಲ್ಲಿ ಅದ್ನ್ಯಲ್ಲ ನೋಡದಿಲ್ಲ. ಕೇಳದಿಲ್ಲ ಅಂತ ಅವುರಿಗೂ ಗೊತ್ತು’ ಎಂದ ವಾಟಿಸ್ಸೆ.

‘ಅಂಗರಿವುರು ಜನಗಳ ಉಳಸದಿಲ್ಲ ಬುಡು.’

‘ಜನಗಳ ಉಳಸರಾಗಿದ್ರೆ ಇಂತ ತೀರಮಾನ ತಗತಿದ್ರೇನಕ್ಕ.’

‘ಯಾವ ತೀರಮಾನ.’

‘ಕೆಲವು ಜಿಲ್ಲೆಯ ಮಧ್ಯಾಹ್ನದ ಮ್ಯಾಲೆ ಲಾಕ್‍ಡವುನ್ ಮಾಡ್ತಾ ಅವುರೆ. ಅಲ್ಲ ಕಣಕ್ಕ ವತ್ತರಿಂದ ಜನ ನಾಯಿ ತಿರಿಗಿದಂಗೆ ತಿರಗಿ ಮೂರುಗಂಟಿಗೆ ಮನಿಗೆ ಸೇರಿಕತ್ತರೆ. ಅಮ್ಯಾಲೆ ಲಾಕ್‍ಡವುನ್ ಆದ್ರೆಷ್ಟು ಬುಟ್ಟರೆಸ್ಟೂ ಇಂತದೂ ತಿಳಿಯದಿಲವಲ್ಲ ಏನೇಳನ.’

‘ಎಡೂರಪ್ಪನಿಗಾಗ್ಲೆ ವಯಿಸಾಯ್ತು ಕಣೊ, ಇಂತ ಸೂಕುಸ್ಮೆ ಹ್ವಳಿಯದಿಲ್ಲ ಅವುನಿಗೆ.’

‘ನಿಜಕಣೊ ಉಗ್ರಿ, ಅದ್ಕೆ ನೊಡು ಯಯಾತಿ ಓತ್ತಾಕುಂತವುನೆ.’

‘ಯಯ್ಯಾತಿ ಅಂದ್ರೇನ್ಲ.’

‘ಅದು ಪುಸ್ತಗ ಕಣಕ್ಕ ಮುದುಕರ್ಯಲ್ಲ ಓದೊ ಪುಸ್ತಕ.’

‘ಅದ್ಯಂತೆದ್ಲ ಮುದುಕುರೋದೊ ಪುಸಗ.’

‘ಅದರ ಕತೆ ಗೊತ್ತೇನಕ್ಕ.’

‘ನನಿಗೇನು ಗೊತ್ತು ಹೇಳ್ಳ.’

‘ಯಯಾತಿ ಒಬ್ಬ ರಾಜ ಕಣಕ್ಕ. ರಾಜ ಅಂದ ಮ್ಯಾಲೆ ಹೆಂಗಸರ ಚಟ ಇದ್ದೇ ಇರತದೆ. ಅಂಗೆ ಇವುನು ರುಶಿಮುನಿ ಮಗಳ ಹಿಡಕಳಕ್ಕೋದ ಅವುಳೋಗಿ ಅವುರಪ್ಪನಿಗೇಳಿದ್ಲು.’

‘ರಾಜನಿಗೆ ಹೆಡತಿ ಇರಲಿಲ್ವೆ?’

‘ಇರತರೆ ಕಣಕ್ಕ. ಅವುರ್ಯಲ್ಲ ನ್ಯಪಕಿರತರೆ ಇವುರು ಮಾತ್ರ ಚನ್ನಾಗಿರೊರನ್ಯಲ್ಲ ಹಿಡಕಳಕ್ಕೋಯ್ತರೆ, ಅಂಗೆ ಯಯಾತಿನೂ ಹೋಗಿ ಬ್ರಾಂಬ್ರುಡುಗಿ ಕೆಣಕಿದ. ಸಾಮಾನ್ಯವಾಗಿ ಬ್ರಾಂಬ್ರುಡುಗಿರಿಗೆ ಸೆಕ್ಸ್ ಕಡಮೆ. ಅದ್ಕೆ ಹೋಗಿ ಅವುರಪ್ಪನಿಗೇಳಿದ್ಲು.’

‘ಸರಿಯಾಗೆ ಮ್ಯಾಡವುಳೆ ಬುಡು.’

‘ಅವುರಪ್ಪ ಮಹಾಕೋಪಿಸ್ಟ. ಅವುನೋಗಿ ಯಯಾತಿ ಬೈದು ನಿನ್ನ ಪ್ರಾಯದಿಂದ್ಲೆ ಹಿಂಗೆ ಮಾಡಿದ್ದಿ ಅದ್ಕೆ ನೀನು ಮುದುಕಾಗೋಗತ್ತಗೆ ಅಂತ ಶಾಪ ಕೊಟ್ಟ. ಆ ಕೂಡ್ಳೆ ಯಯಾತಿ ನಮ್ಮ ಸೀರ ಮಾವನಂಗಾದ.’

‘ಅಯ್ಯೋ ಪಾಪ ಅಂತ ಸಾಪನೇನ್ಲ ಕೊಡದು.’

‘ಅದವುನಿಗೂ ಗೊತ್ತಾಯ್ತು ಕಣಕ್ಕ. ಅದ್ಕೆ ಯಯಾತಿಗೆ ನಿನ್ನ ಮುಪ್ಪ ಯಾರಿಗಾರ ಕೊಟ್ರೆ ಅವುರ ಹರೇಯ ನಿನಿಗೆ ಬತ್ತದೆ ಹೋಗು ಅಂದ. ಸರಿ ಯಯಾತಿ ಬಂದು ಯಾರಾರ ನನ್ನ ಮುಪ್ಪ ತಗಳಿ ಅರ್ದ ರಾಜ್ಯ ಕೊಡ್ತಿನಿ ಅಂದ ಯಾರೂ ಬರಲಿಲ್ಲ.’

‘ಅದ್ಯಂಗೆ ಬಂದರ್ಲ ಮುಪ್ಪು ಯಾರಿಗೆ ಬೇಕೇಳು.’

‘ಅಂಗೆ ಆಯ್ತು ಕಣಕ್ಕ. ಕಡಿಗೆ ಅಪ್ಪನ ಗೋಳಾಟ ನೋಡಕ್ಕಾಗದೆ ಮಗನೆ ಬಂದು ಈಸ್ಕಂಡ. ಅಪ್ಪ ಹರೇವುದೋನಾದ. ಮಗ ಮುದುಕಾದ ಅದ ನೊಡಿ ಸ್ವಸೆ ನ್ಯಾಣಾಯ್ಕಂಡು ಸತ್ತೋದ್ಲು. ಅದು ಗೊತ್ತಿಲ್ಲದೆ ಯಯಾತಿ ಹೆಡತಿ ಹಿಡಕಳಕ್ಕೊದ. ಅವುಳು ನಿನ್ನ ಪ್ರಾಯ ನನ್ನ ಮಗಂದು ಮುಟ್ಟುಬ್ಯಾಡ ಅಂದ್ಲು. ಯಾಯತಿ ಅಳತ ತಿರಗ ಮಗನಿಗೆ ಪ್ರಾಯಕೊಟ್ಟು ಮುದುಕಾದ.’

‘ಚನಾಗ್ಯದೆ ಕಂಡ್ಳ ಕತೆ. ಇದ್ಯಾಕ್ಕೋತ್ತ ಅವುನೆ ಎಡೂರಪ್ಪಾ.’

‘ಯಾಕೆ ಅಂದ್ರೆ ಆಗ್ಲೆ ಯಪ್ಪಂತೆಟ್ಟು ವರ್ಸಾಯ್ತ ಅದೆ. ಶೋಬಕ್ಕನೂ ದೂರಾಗ್ಯವುಳೆ. ಪ್ರಾಯ ಹೋಯ್ತಾ ಅದೆ. ಹೈಕಮಾಂಡು ಎಡೂರಪ್ಪನೆ ಇಳಿಲಿ ಅಂತ ಕಿರುಕುಳ ಕೊಡ್ತಾ ಅವುರೆ. ಕೊರೋನಾ ಸಮಸ್ಯೆ ಹಠಗಾಯಿಸಿಗಂಡದೆ. ಜ್ವತೆಲಿರೊ ಮಂತ್ರಿಗಳು ಕೊರೋನಾದಲ್ಲೂ ಕಾಸು ತಿಂತಾ ಅವುರೆ. ಅಂತೂ ಸೂಕುಸ್ಮುವಾಗಿ ನೋಡಿದ್ರೆ ಯಯಾತಿ ಗೋಳಾಟ ಹೆಡೂರಪ್ಪನಿಗೂ ಹಠಗಾಯಿಸಿಗಂಡದೆ. ಮುಪ್ಪು ಅನಿವಾರ್ಯ ಅಧಿಕಾರದಿಂದ ಇಳಿಯೋದು ಅನಿವಾರ್ಯ, ವಿಜಯೇಂದ್ರನ್ನ ಮುಂದೆ ತರೋದು ಅನಿವಾರ್ಯ, ಇಂತ ಅನಿವಾರ್ಯಗಳೆ ಎಡೂರಪ್ಪನ್ನ ಬಗ್ಗಸಬಹುದು ಕಣಕ್ಕ.’

‘ಅದೇನಾರ ಆಗ್ಲಿ ಬಡುವುರು ತಿನ್ನ ಅಕ್ಕಿನೆ ಕಡಮೆ ಮಾಡ್ಯವುನಂತೆ ಇವುನಿಗೆ ವಳ್ಳೆದಾದತೆ?’

‘!?


ಇದನ್ನು ಓದಿ: ಡಿ.ಕೆ.ಶಿ ಬಿಜೆಪಿಗಳ ಹೆದರಸ್ತನೆ ಬುಡೊ. ನೋ ಡವುಟು – ಚಂದ್ರೇಗೌಡರ ಕಟ್ಟೆಪುರಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...