Homeಕರ್ನಾಟಕಯಲಹಂಕ - ತಮ್ಮ ‘ನೆಲದ ಹಕ್ಕು’ಗಳಿಗಾಗಿ ಬಿಡಿಎ ವಿರುದ್ದ 17 ಹಳ್ಳಿಗಳ ರೈತರಿಂದ ಬೃಹತ್ ಪ್ರತಿಭಟನೆ

ಯಲಹಂಕ – ತಮ್ಮ ‘ನೆಲದ ಹಕ್ಕು’ಗಳಿಗಾಗಿ ಬಿಡಿಎ ವಿರುದ್ದ 17 ಹಳ್ಳಿಗಳ ರೈತರಿಂದ ಬೃಹತ್ ಪ್ರತಿಭಟನೆ

- Advertisement -
- Advertisement -

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿರ್ಮಿಸಲು ಹೊರಟಿರುವ ‘ಶಿವರಾಮ ಕಾರಂತ ಬಡಾವಣೆ ಯೋಜನೆ’ಯ ವಿರುದ್ದ, ರಾಮಗೊಂಡನ ಹಳ್ಳಿಯ ಸುತ್ತಲಿನ 17 ಹಳ್ಳಿಗಳ ರೈತರು ಯಲಹಂಕ ಸರ್ಕಾರಿ ಶಾಲೆಯ ಆವರಣದಲ್ಲಿ ಬೃಹತ್‌ ಪ್ರತಿಭಟನಾ ಸಭೆ ಶುಕ್ರವಾರದಂದು ನಡೆಸಿದ್ದಾರೆ. ಪ್ರತಿಭಟನಾ ಸಭೆಯಲ್ಲಿ ಕಂದಾಯ ಇಲಾಖೆಯ ಸಹಾಯಕ ಆಯುಕ್ತ ರಂಗನಾಥ್‌ ಮುಖಾಂತರ ಮುಖ್ಯಮಂತ್ರಿಗೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಲಾಗಿದೆ.

ಬೆಂಗಳೂರು ಅಭಿವೃದ್ದಿಯ ಹೆಸರು ಹೇಳಿ, ರಾಮಗೊಂಡನ ಹಳ್ಳಿಯ ಸುತ್ತಲಿನ 17 ಹಳ್ಳಿಗಳಲ್ಲಿ ಬಿಡಿಎ ‘ಶಿವರಾಮ ಕಾರಂತ ಬಡಾವಣೆ’ ಎಂಬ ವಸತಿ ಸೌಕರ್ಯವನ್ನು ನಿರ್ಮಿಸಲು ಹೊರಟಿದೆ. ಯೋಜನೆಯ ವಿರುದ್ದ, ಅಲ್ಲಿನ ರೈತರು ಮತ್ತು ನಿವಾಸಿಗಳು ಸುಮಾರು 47 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಶಿವರಾಮ ಕಾರಂತ್ ಬಡಾವಣೆ ಎಂಬ ‘ಅಭಿವೃದ್ಧಿ’ ಯೋಜನೆ; ದಲಿತರು-ಬಡಬಗ್ಗರ ಮೇಲೆ ಪ್ರಹಾರ

ಬೆ೦ಗಳೂರು ಅಬಿವೃದ್ಧಿ ಪ್ರಾಧಿಕಾರವು, ‘ಡಾ| ಕೆ. ಶಿವರಾಮ ಕಾರಂತ ಬಡಾವಣೆ’ಗಾಗಿ ಬೆ೦ಗಳೂರು ಉತ್ತರ ತಾಲೂಕು ರಾಮಗೊಂಡನಹಳ್ಳಿಯ ಸುತ್ತಮುತ್ತಲಿನ 17 ಹಳ್ಳಿಗಳ 3546 ಎಕರೆ 12 ಗುಂಟೆ ಭೂಮಿಯನ್ನು ಸ್ವಾಧೀನಪಡಿಸುವುದಾಗಿ ಈಗಾಗಲೆ ಹೇಳಿದೆ.

ಸಂತ್ರಸ್ತ ರೈತರು ಪ್ರಾಧಿಕಾರ ಹಾಗೂ ಸರ್ಕಾರಕ್ಕೆ ಅನೇಕ ಮನವಿಗಳನ್ನು ನೀಡಿದ ಹೊರತಾಗಿಯು ಸಮಸ್ಯೆ ಪರಿಹಾರವಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಸಂತ್ರಸ್ತ 17 ಹಳ್ಳಿಯ ರೈತರು ಇಂದು ಬೃಹತ್ ಪ್ರತಿಭಟನಾ ಸಭೆಯನ್ನು ಹಮ್ಮಿಕೊಂಡಿದ್ದರು.

“ಉದ್ದೇಶಿತ ಡಾ| ಕೆ. ಶಿವರಾಮ ಕಾರಂತ ಬಡಾವಣೆಗೆ ಒಳಪಡುವ 17 ಗ್ರಾಮಗಳು ಬಹುತೇಕ ಅಬಿವೃದ್ಧಿ ಹೊ೦ದಿರುವುದರಿಂದ ಈ ಯೋಜನೆಯನ್ನು ರದ್ದುಪಡಿಸಲು ಸುಪ್ರೀಂ ಕೋರ್ಟ್‌ಗೆ ಸರ್ಕಾರ ಮನವಿ ಸಲ್ಲಿಸಬೇಕು” ಎಂದು ರೈತರು ಸಭೆಯಲ್ಲಿ ಒಕ್ಕೊರೊಳಿನಿಂದ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ರಾಮಗೊಂಡನಹಳ್ಳಿ: ತಮ್ಮ ನೆಲವನ್ನು ಕಸಿಯುತ್ತಿರುವ ಸರ್ಕಾರದ ವಿರುದ್ಧ ಪ್ರತಿಭಟಿಸಿದ ದನಗಳು!

ಈ ಹಿಂದೆ ದೊಡ್ಡಬೆಡ್ಡ ಹಳ್ಳಿಯ ದಲಿತ ಮಹಿಳೆ ಜಯಮ್ಮ ಮತ್ತು ಶಾಂತರಾಜು ಎಂಬವರ ಮನೆಯನ್ನು ಬಿಡಿಎ ಅಧಿಕಾರಿಗಳು ಯಾವುದೇ ಸೂಚನೆ ನೀಡದೆ ಧ್ವಂಸಗೊಳಿಸಿದ್ದರು. ಅವರಿಗೆ ಕೂಡಲೆ ಪುನರ್‌ವಸತಿ ಕಲ್ಪಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ರೈತರು ತಮ್ಮ ಹೋರಾಟವನ್ನು ಮತ್ತೆ ಮುಂದುವರೆಸಿದ್ದು, ಮುಂದಿನ ತಿಂಗಳು ಅಕ್ಟೋಬರ್‌ 2ರ ಗಾಂಧಿ ಜಯಂತಿಯಂದು ಯಲಹಂಕದಲ್ಲಿ ‘‘ಅರೆ ಬೆತ್ತಲೆ ಮೆರವಣಿಗೆ” ನಡೆಸಿ ತಮ್ಮ ಹಕ್ಕುಗಳಿಗಾಗಿ ಹೋರಾಟವನ್ನು ಮುಂದುವರೆಸುವುದಾಗಿ ಹೇಳಿದ್ದಾರೆ.

ಇಲ್ಲಿನ ರೈತರು ಇತ್ತೀಚೆಗಷ್ಟೇ, ಯೋಜನೆಯ ಅನುಷ್ಠಾನದ ಹೆಸರಿನಲ್ಲಿ ಬಿಡಿಎ ಅಧಿಕಾರಿಗಳು ನಡೆಸುತ್ತಿರುವ ದೌರ್ಜ್ಯನ್ಯವನ್ನು ಖಂಡಿಸಿ, ಕೃಷ್ಣಜನ್ಮಾಷ್ಠಮಿಯ ದಿನದಂದು ‘ವಿಧಾನಸೌಧ ಚಲೋ’ ಚಳವಳಿ ನಡೆಸಿ ಸರ್ಕಾರದ ವಿರುದ್ದ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು.

ರೈತರು ಮುಖ್ಯಮಂತ್ರಿಗೆ ಸಲ್ಲಿಸಿರುವ ಪತ್ರವನ್ನು ಇಲ್ಲಿ ಕ್ಲಿಕ್ ಮಾಡಿ ವೀಕ್ಷಿಸಬಹುದಾಗಿದೆ.

ಇದನ್ನೂ ಓದಿ: ‘ಶಿವರಾಮ ಕಾರಂತ ಬಡಾವಣೆ’ ವಿವಾದ – ಸಮಸ್ಯೆ ಪರಿಹರಿಸುವಂತೆ 17 ಹಳ್ಳಿಗಳಿಂದ ಬೃಹತ್ ಪ್ರತಿಭಟನೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಡ್ಡಾದಿಡ್ಡಿ ಬೆಳವಣಿಗೆ ತಡೆಯಲು ಬಿಡಿಎ ಯ planned layoutsಗಳೇ ಮದ್ದು. ಬೆಂಗಳೂರು ಸೇರಿದಂತೆ ಉಳಿದ ಪಟ್ಟಣಗಳ ಸುತ್ರಾ ಸರ್ಕಾರದ ವತಿಯಿಂದ planning layoutಗಳನ್ನು ಮಾಡುವುದನ್ನು ಅಲ್ಲಿನ ಬೆಳೆಬೆಳೆಯದ ನೆಲದೊಡೆಯರು ತಡೆಯುತ್ತಿದ್ದಾರೆ.
    ಇದು ತುಂಬಾ ಗಂಬೀರ ಸಂಗತಿ.
    ಇಂತ ಹೊಸ layout ಗಳಲ್ಲಿ ದೊಡ್ಡ ಅಳತೆಯ(50*80,40*60 ) ನಿವೇಶನಗಳನ್ನು ಮಾಡುವುದನ್ನು ಕಯ್ ಬಿಟ್ಟು ಬಡವರಿಗೆ,ನಡುಪದರಿನ ಮಂದಿಗೆ ನೆರವಾಗುವಂತೆ ೩೦*೪೦ ರಂತ ಅಳತೆಯ ನಿವೇಶನಗಳನ್ನು ಮಾಡಿ ಹಂಚಬೇಕು. ಈಗಾಗಲೇ ಬೆಂಗಳೂರಿನಲ್ಲಿ ನೆಲೆಇರುವ ಮಂದಿಯ ಸೊತ್ತುಗಳನ್ನು ಆದಾರ್ ಕಾರ್ಡ್ ಗೆ ಜೋಡಿಸಿ, ಉಳ್ಳವರೇ ಮತ್ತೆ ನಿವೇಶನ ಪಡೆದಂತೆ ಮಾಡಬೇಕು.
    ಕೊಳ್ಳೆಮಾಡುವ ಕಾಸಗಿ ರಿಯಲ್ ಎಸ್ಟೇಟ್ ಮಾಪಿಯಾವನ್ನು ಮಟ್ಟಹಾಕಲು ಇದೊಂದು ತಕ್ಕ ದಾರಿ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...