Homeಕರ್ನಾಟಕಯಲ್ಲಾಪುರ ಉಪಸಮರದಲ್ಲಿ ದೇಶಪಾಂಡೆ ಹಠಕ್ಕೆ ಹೆದರಿದ ಅನರ್ಹ ಶಾಸಕ ಶಿವರಾಮ್‌ ಹೆಬ್ಬಾರ್!

ಯಲ್ಲಾಪುರ ಉಪಸಮರದಲ್ಲಿ ದೇಶಪಾಂಡೆ ಹಠಕ್ಕೆ ಹೆದರಿದ ಅನರ್ಹ ಶಾಸಕ ಶಿವರಾಮ್‌ ಹೆಬ್ಬಾರ್!

- Advertisement -
- Advertisement -

“ನಾನು ಅಭಿವೃದ್ಧಿಗಾಗಿ ಬಿಜೆಪಿ ಸೇರಿದ್ದೇನೆ… ಕಾಂಗ್ರೆಸಲ್ಲಿ ದೇಶಪಾಂಡೆ ಕಾಟ ತಾಳಲಾಗದೆ ಹೊರಬರಬೇಕಾಯ್ತು…” ಎಂದು ಯಲ್ಲಾಪುರ ಮುಂಡಗೋಡ-ಬನವಾಸಿ ಕ್ಷೇತ್ರದಾದ್ಯಂತ ಗೋಳಾಡುತ್ತ ಪ್ರಚಾರ ಮಾಡುತ್ತಿರುವ ಬಿಜೆಪಿ ಅಭ್ಯರ್ಥಿ “ಅನರ್ಹ” ಶಾಸಕ ಶಿವರಾಮ ಹೆಬ್ಬಾರ್‌ ಮಾತನ್ನು ಯಾರೆಂದರೆ ಯಾರೂ ನಂಬುತ್ತಿಲ್ಲ.

2018ರ ಅಸೆಂಬ್ಲಿ ಎಲೆಕ್ಷನ್ ರಿಸಲ್ಟ್ ಬಂದ ಮರುಘಳಿಗೆಯೇ ಹೆಬ್ಬಾರ ವ್ಯವಹಾರ ಚತುರೆ ಹೆಂಡತಿ, ಗಂಡನ ಬಿಜೆಪಿಗೆ ಸೇರಿಸಲು ಯಡ್ಡಿ ಮಗ ವಿಜಯೇಂದ್ರ ಜತೆ ಡೀಲ್ ನಡೆಸಿದ್ದು ಆಡಿಯೋ ಕೇಳಿದರ‍್ಯಾರೂ ಮರೆತಿಲ್ಲ! ಹೆಬ್ಬಾರ್ ಮಂತ್ರಿಗಿರಿ ದುರಾಸೆಗೆ ಬಿದ್ದೇ ಪಕ್ಷಾಂತರ ಮಾಡಿ ಅನವಶ್ಯಕ ಎಲೆಕ್ಷನ್ ಜನರ ಮೇಲೆ ಹೇರಿದ್ದಾನೆಂಬ ಕೂಗು ಇಡೀ ಕ್ಷೇತ್ರದಲ್ಲಿದೆ. ಮೂಲ ಬಿಜೆಪಿಗರಂತೂ ಹೆಬ್ಬಾರ ಮುಸುಡಿ ಕಂಡರೆ ಮೂಗು ಮುರಿಯುತ್ತಾರೆ. ನೋಟಾ ಬಟನ್ನಾದರೂ ಒತ್ತುತ್ತೇವೆಯೇ ಹೊರತು ಕೊಳಕು ರಾಜಕೀಯ ಮಾಡುವ ಹೆಬ್ಬಾರ್‌ ಗೆಲ್ಲಿಸಲಾರೆವೆಂದು ಕಟ್ಟರ್ ಕಮಲಿಗರು ಕೆರಳಿದ್ದಾರೆ!!

ಮಂತ್ರಿಯಾಗಿ ಜೀವನದ ಕೊನೆಯ ಆಸೆ ಈಡೇರಿಸಿಕೊಳ್ಳಬೇಕೆಂಬ ತೆವಲಿಗೆ ಬಿದ್ದಿರುವ ಹೆಬ್ಬಾರ್‌ ಲೆಕ್ಕಾಚಾರ ಸರಳ ಅಂಕಗಣಿತದಲ್ಲಿದೆ. ನಂಗೆ ಕಳೆದ ಬಾರಿ ಬಿದ್ದ ಮತದೊಂದಿಗೆ ಆಗಿನ ಎದುರಾಳಿ ವಿ.ಎಸ್.ಪಾಟೀಲ್ ಈಗ ಜತೆಗಿರುವುದರಿಂದ ಪ್ಲಸ್ ಆಗಿದೆ. ಸ್ವಜಾತಿ ಹವ್ಯಕರಲ್ಲಿ ಬೇಸರವಿದ್ದರೂ ಸ್ವರ್ಣವಲ್ಲಿ ಸ್ವಾಮಿಗಳ ಫರ್ಮಾನಿಂದ ಲಾಭ ಆಗ್ತದೆ. ಎದುರಾಳಿ ಕಾಂಗ್ರೆಸ್‌ನ ಭೀಮಣ್ಣ ನಾಯ್ಕಗೆ ಆತನ ದೀವರ ಜಾತಿ ಮತ ಬಿಟ್ಟರೆ ಬೇರಾರದೂ ಸಿಗದು. ಅದಿರು ವ್ಯವಹಾರದ ಕೊಪ್ಪರಿಗೆ ಹಣದಿಂದ ಪ್ರಚಾರ ಸಲೀಸಾಗುತ್ತದೆಂಬ ಅಂದಾಜು ಹೆಬ್ಬಾರ್ ಹಾಕಿದ್ದಾರೆ. ಆದರೆ ಅಷ್ಟು ಸರಳವಾಗಿಲ್ಲ ಉಪಚುನಾವಣಾ ಅಖಾಡ.

ಕಳೆದ ಬಾರಿ ಕೇವಲ 1,400 ಮತದಂತರದಿಂದ ಗೆದ್ದಿದ್ದ ಹೆಬ್ಬಾರ್‌ಗೆ ದಡ ತಲುಪಿಸಿದ್ದೇ ಮುಸ್ಲಿಮ್, ಕ್ರಿಶ್ಚಿಯನ್ನರು. 20 ಸಾವಿರದಷ್ಟಿರುವ ಈ ಅಲ್ಪಸಂಖ್ಯಾತರ ಬೆಂಬಲ ಈ ಸಲ ಹೆಬ್ಬಾರ್‌ಗೆ ಸಿಗಲಾರದು. ಬಿಜೆಪಿಯಿಂದ ಶಾಸಕನಾಗಬೇಕೆಂದು ಕಳೆದ ಬಾರಿಯೇ ಬಿಜೆಪಿ ಪಾಲಾಗಿರುವ ಜಿಪಂ ಸದಸ್ಯ ಎಲ್.ಟಿ.ಪಾಟೀಲ್‌ಗೆ ಹೆಬ್ಬಾರ್ ಬಿಜೆಪಿಗೆ ಬಂದಿದ್ದು ಸಹಿಸಲಾಗುತ್ತಿಲ್ಲ. ಸುಮಾರು 25 ಸಾವಿರ ಮತದಾರರಿರುವ ಮರಾಠ ಸಮುದಾಯದ ಪಾಟೀಲ ಮೂಲತಃ ದೇಶಪಾಂಡೆಯ ಅತ್ಯಾಪ್ತ ಶಿಷ್ಯ. ಈ ಪಾಟೀಲ್ ಕಳೆದ ಬಾರಿ ದೊಡ್ಡ ಮೊತ್ತಕ್ಕೆ ಡೀಲಾಗಿ ಹೆಬ್ಬಾರ್‌ಗೆ ಹೆಲ್ಪ್ ಮಾಡಿದ್ದ. ಆದರೀಗ ದೇಶಪಾಂಡೆ ಕಣ್ಸನ್ನೆಗೇ ಉಲ್ಟಾ ಹೊಡೆಯುತ್ತಿದ್ದಾನೆ.

ಹಿಂದಿನ ಪ್ರತಿಸ್ಪರ್ಧಿ ವಿ.ಎಸ್.ಪಾಟೀಲ್ ಸ್ವಜಾತಿ ದೊರೆ ಯಡ್ಡಿ ಮುಲಾಜಿಗೆ ಬಹಿರಂಗವಾಗಿ ಓಡಾಡಿಕೊಂಡಿದ್ದಾನಾದರೂ ಒಳಗೊಳಗೇ ಹೆಬ್ಬಾರ್ ಸೋಲಲಿ ಎಂದೇ “ಹಾರೈಸು”ತ್ತಿದ್ದಾರೆ. ಈತನ ಮಗ ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಸೇರಿದ್ದು ಹೆಬ್ಬಾರ್‌ ರನ್ನು ದಂಗುಬಡಿಸಿದೆ.

ಸ್ವಜಾತಿಯ ಸ್ವ-ಪಕ್ಷದ ಹಿತಶತ್ರುಗಳಾದ ಪ್ರಮೋದ್ ಹೆಗಡೆ. ಗುರುಮುರಿಗೆ ಸಂಸದ ಅನಂತ್ಮಾಣಿಗಳ ಅರ್ಥವಾಗದ ಅಂತರಾಳ ಹೆಬ್ಬಾರ್‌ರನ್ನು ಅಂಜಿಸುತ್ತಲೇ ಇದೆ. ಬಿಜೆಪಿ ಜಿಲ್ಲಾಧ್ಯಕ್ಷನಾಗಿದ್ದಾಗಲೇ ಅನಂತ್ಮಾಣಿಯಿಂದ ಕೆನ್‌ಕೆನ್ನೆಗೆ ಬಾರಿಸಿಕೊಂಡು ಬಿಜೆಪಿ ಸೇರಿದ್ದ ಹೆಬ್ಬಾರ್‌ರಿಗೆ ಆತನ ಸಹಕಾರ ಸಿಗುವುದಾದರೂ ಹೇಗೆ? ಅನಂತ್ಮಾಣಿಗೆ ಸ್ವ-ಪಕ್ಷದ ಹೆಬ್ಬಾರ್‌ಗಿಂತಲೂ ವಿರೋಧಿ ಪಡೆಯ ಭೀಮಣ್ಣ ನಾಯ್ಕ ಎಂದರೇನೇ ಕಾಳಜಿ ಜಾಸ್ತಿ. ಸ್ಪೀಕರ್ ಕಾಗೇರಿಯಂತೂ ತನ್ನ ಮಂತ್ರಿಗಿರಿಗೆ ಸಂಚಕಾರ ತರುವ, ಸ್ವ-ಜಾತಿ ಹವ್ಯಕರಲ್ಲಿ ಪ್ರತಿಸ್ಪರ್ಧಿಯಾಗುವ ಹೆಬ್ಬಾರ್ ಗೆಲ್ಲುವುದು ಸಹಜವಾಗೇ ಬೇಡವಾಗಿದೆ. ಇಷ್ಟಾಗಿಯೂ ಈ ಹವ್ಯಕ ಲೀಡರ್‌ಗಳೆಲ್ಲ ತಮ್ಮ ಕುಲಗುರು ಸ್ವರ್ಣವಲ್ಲಿ ಸ್ವಾಮಿ ಮಂತ್ರಾಕ್ಷತೆಗೆ ಮಣಿದರೆ ಹವ್ಯಕರ ಮತ ಸಿಗಬಹುದೇ ಹೊರತು ಅಹಿಂದ ಮತ ತರಲು ಸಾಧ್ಯವೇ ಇಲ್ಲ.

ಇದೆಲ್ಲಕ್ಕಿಂತ ಕೈ ಕಮಾಂಡ್ ದೇಶಪಾಂಡೆಯ ಜಿದ್ದೊಂದೇ ಅಖಾಡದಲ್ಲಿ ಹೆಬ್ಬಾರ್‌ರನ್ನು ಹೈರಾಣಾಗಿಸಿದೆ. ದೇಶಪಾಂಡೆ ತನ್ನ ರಾಜಕೀಯ ಇತಿಹಾಸದಲ್ಲಿ ಯಾರನ್ನೂ ಗೆಲ್ಲಿಸಲು ಪ್ರಯತ್ನಿಸಿದ್ದೇ ಇಲ್ಲ. ಆತನದೇನಿದ್ದರೂ ಸೋಲಿಸುವ ಕರಾಮತ್ತು. ಆದರೆ ಈ ಬಾರಿ ದೇಶಪಾಂಡೆ ಹೇಗಾದರೂ ಮಾಡಿ ಹೆಬ್ಬಾರ್‌ರನ್ನು ಹೆಡೆಮುರಿ ಕಟ್ಟಿ ಬೇಡ್ತಿ ನದಿಯಲ್ಲಿ ಬಿಡಬೇಕೆಂಬ ಹಠಕ್ಕೆ ಬಿದ್ದಿದ್ದಾರೆ. ತನ್ನನ್ನು ಕಾಂಗ್ರೆಸಲ್ಲಿದ್ದಾಗಲೂ ಕೆಣಕುತ್ತಿದ್ದ ಹೆಬ್ಬಾರ್ ಪಾರ್ಟಿ ಬಿಡಲಿಕ್ಕೆ ತಾನೇ ಕಾರಣವೆಂದು ಹೇಳಿದ್ದು ಕೆರಳಿಸಿದೆ. ಕ್ಷೇತ್ರದ ಮುಂಡಗೋಡದಲ್ಲಿ ದೇಶಪಾಂಡೆಗೆ ಹಿಡಿತವಿದೆ. ಕ್ಷೇತ್ರ ಪುನರ್ ವಿಂಗಡಣೆಗೂ ಮೊದಲು ಮುಂಡಗೋಡ ದೇಶಪಾಂಡೆಯ ಹಳಿಯಾಳ ಕ್ಷೇತ್ರದ ಜತೆಗಿತ್ತು. ಇಲ್ಲಿಯೇ ಬಿಡಾರ ಹೂಡಿರುವ ದೇಶಪಾಂಡೆ ಹೆಬ್ಬಾರ್‌ನ ಸೋಲಿಸಲು ಸಕಲ ಸ್ಟ್ರಾಟರ್ಜಿ ಮಾಡುತ್ತಿದ್ಧಾರೆ. ಬ್ರಾಹ್ಮಣೇತರ ಮರಾಠ, ಗೌಳಿ, ಸಿದ್ದಿ, ಬುಡಕಟ್ಟು, ದಲಿತ ಮತ ಬ್ಯಾಂಕ್ ಮೇಲೆ ದೇಶಪಾಂಡೆ ಗಮನ ಕೇಂದ್ರೀಕರಿಸಿರುವುದು ಹೆಬ್ಬಾರ್‌ಗೂ ಗೊತ್ತಾಗಿದೆ.

ದೇಶಪಾಂಡೆ ತಂತ್ರಗಾರಿಕೆಗೆ ಹೆಬ್ಬಾರ್ ಒಂಥರಾ ಡೆಸ್ಟರೇಟ್ ಆದಂತಿದೆ. ಅರಣ್ಯ ಅತಿಕ್ರಮಣದಾರರ ಸಂಘಟಕ ರವೀಂದ್ರ ನಾಯ್ಕರನ್ನು ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ದೇಶಪಾಂಡೆ ಕರೆತಂದಿದ್ದಾರೆ. ಬಹುತೇಕ ಜಿ.ಪಂ- ತಾ.ಪಂ- ಗ್ರಾಪಂ.ನ ಕಾಂಗ್ರೆಸ್ ಮೆಂಬರ್‌ಗಳು ಹೆಬ್ಬಾರ್ ಜತೆಗಿದ್ದರೂ ದೇಶಪಾಂಡೆಯ “ಋಣ” ಇರುವುದರಿಂದ ಆತನ ರಹಸ್ಯ ನಿರ್ದೇಶನಕ್ಕೆ ಬದ್ಧರಾಗಿದ್ದಾರೆಂಬುದು ಎಲೆಕ್ಷನ್ ವಿಶ್ಲೇಷಕರ ಆಂಬೋಣ.

ಕಾಂಗ್ರೆಸ್ ಕ್ಯಾಂಡಿಡೇಟ್ ಭೀಮಣ್ಣ ನಾಯ್ಕ ಪಾಪದ ಆಸಾಮಿ. ಹಲವು ಎಲೆಕ್ಷನ್‌ನಲ್ಲಿ ಸೋತವನೆಂಬ ಸಿಂಪಥಿ ಕ್ಷೇತ್ರದಲ್ಲಿದೆ. ’ಮಾಜಿ ಸಿಎಂ ಬಂ’ ಭಾಮೈದನೆಂಬ ಅಂಶ ಆತನಿಗೆ ಸ್ವಜಾತಿ ದೀವರ 15 ಸಾವಿರದಷ್ಟಿರುವ ಮತದಲ್ಲಿ ಹೆಚ್ಚಿನದು ಪಡೆಯಲು ಅನುಕೂಲವಾಗಿದೆ. ನೆರೆ ಬಂದಾಗ ಸಮ್ಮಿಶ್ರ ಸರ್ಕಾರ ಉರುಳಿಸಲು ಮುಂಬೈನ ಐಷಾರಾಮಿ ಹೋಟೆಲ್‌ನಲ್ಲಿ “ಆಟ” ಆಡುತ್ತಿದ್ದ ಹೆಬ್ಬಾರ್ ಬಗ್ಗೆ ಕ್ಷೇತ್ರದಲ್ಲಿ ಸಿಟ್ಟಿದೆ. ಮೂಲಸೌಕರ್ಯ, ರಸ್ತೆಯಂಥ ಸೌಲಭ್ಯ ಒದಗಿಸುವ ಹೆಬ್ಬಾರ್‌ನ ಭರವಸೆ ಎರಡು ಬಾರಿ ಶಾಸಕರಾದರೂ ಈಡೇರಿಲ್ಲವೆಂಬ ಬೇಸರ ಜನರಿಗಿದೆ.

ಬಿಜೆಪಿಯ ಟಾಪ್ ಲೀಡರ್‌ಗಳು ಎರಡೆರಡು ಬಾರಿ ಸಂಧಾನ ಸಭೆ ನಡೆಸಿದರೂ ಬಿಜೆಪಿಯ ಬಹುತೇಕ ಘಟಕಗಳಿನ್ನೂ ಫೀಲ್ಡಿಗೆ ಇಳಿದಿಲ್ಲ. ಹೆಬ್ಬಾರ್ ಗ್ಯಾಂಗಿನ ಜತೆ ಸೇರಲು ಮೂಲ ಬಿಜೆಪಿಗರ ಮನಸು ಒಪ್ಪುತ್ತಿಲ್ಲ. ಹೊರನೋಟಕ್ಕೆ ಹೆಬ್ಬಾರ್ ಹವಾ ಜೋರಿರುವಂತೆ ಕಂಡರೂ ಆತನಿಗೆ ಸ್ವಜಾತಿ ಹವ್ಯಕರು ಮತ್ತು ಯಡ್ಡಿ ದೆಸೆಯಿಂದ 25 ಸಾವಿರದಷ್ಟಿರುವ ಲಿಂಗಾಯತರ ಮತ ಬಿಟ್ಟರೆ ಉಳಿದ ಯಾವ ಸಮುದಾಯದ ಮತವೂ ದೊಡ್ಡ ಪ್ರಮಾಣದಲ್ಲಿ ದಕ್ಕಲಾರದು.

ಕ್ಷೇತ್ರ ವ್ಯಾಪ್ತಿಯ ಏಳು ಜಿಪಂ ಕ್ಷೇತ್ರಗಳ ಪೈಕಿ ನಾಲ್ಕು ಬಿಜೆಪಿ (ಇಬ್ಬರು ಕಾಂಗ್ರೆಸ್‌ನಿಂದ ಹೋದವರು) ಪರವಿದ್ದರೆ ಮೂರು ಕಾಂಗ್ರೆಸ್ ಕಡೆಗಿದೆ. ದೇಶಪಾಂಡೆ ಕರಾರುವಾಕ್ಯ ದಾಳ ಉರುಳಿಸಿದಂತೆ ಕಾಂಗ್ರೆಸ್ ಕ್ಯಾಂಡಿಡೇಟ್ ಬಲಗೊಳ್ಳುತ್ತಿದ್ದಾರೆ. ಸದ್ಯಕ್ಕೆ ಎತ್ತಿಂದೆತ್ತ ಲೆಕ್ಕಹಾಕಿ ತಾಳೆ ನೋಡಿದರೂ ಕ್ಷೇತ್ರ ಯಾವ ಮೂಲೆಯಲ್ಲಿ ನಿಂತು ಕಣ್ಣು ಹಾಯಿಸಿದರೂ ಪಕ್ಷಾಂತರಿ ಹೆಬ್ಬಾರ್‌ಗೆ ಅಖಾಡ ಕಠಿಣ ಆಗುತ್ತಿರುವುದು ಸ್ಪಷ್ಟವಾಗುತ್ತಿದೆ. ದೇಶಪಾಂಡೆ ಇದೇ ನಿಷ್ಠೆ-ಬದ್ಧತೆ-ಹಠದಿಂದ ಕಡೆವರೆಗೂ ಹೋರಾಡಿದರೆ ಕ್ಷೇತ್ರಕ್ಕೆ ಮೋಸ-ವಂಚನೆ ಮಾಡಿದ ಹೆಬ್ಬಾರ್‌ಗೊಂದು ನೈತಿಕ ಪಾಠವಾಗೋದು ಗ್ಯಾರಂಟಿ ಎಂಬುದು ಕ್ಷೇತ್ರದಲ್ಲಿ ಕೇಳಿಬರುವ ಸಾಮಾನ್ಯ ಮಾತು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...