Homeಕರ್ನಾಟಕಯಲ್ಲಾಪುರ ಉಪಸಮರದಲ್ಲಿ ದೇಶಪಾಂಡೆ ಹಠಕ್ಕೆ ಹೆದರಿದ ಅನರ್ಹ ಶಾಸಕ ಶಿವರಾಮ್‌ ಹೆಬ್ಬಾರ್!

ಯಲ್ಲಾಪುರ ಉಪಸಮರದಲ್ಲಿ ದೇಶಪಾಂಡೆ ಹಠಕ್ಕೆ ಹೆದರಿದ ಅನರ್ಹ ಶಾಸಕ ಶಿವರಾಮ್‌ ಹೆಬ್ಬಾರ್!

- Advertisement -
- Advertisement -

“ನಾನು ಅಭಿವೃದ್ಧಿಗಾಗಿ ಬಿಜೆಪಿ ಸೇರಿದ್ದೇನೆ… ಕಾಂಗ್ರೆಸಲ್ಲಿ ದೇಶಪಾಂಡೆ ಕಾಟ ತಾಳಲಾಗದೆ ಹೊರಬರಬೇಕಾಯ್ತು…” ಎಂದು ಯಲ್ಲಾಪುರ ಮುಂಡಗೋಡ-ಬನವಾಸಿ ಕ್ಷೇತ್ರದಾದ್ಯಂತ ಗೋಳಾಡುತ್ತ ಪ್ರಚಾರ ಮಾಡುತ್ತಿರುವ ಬಿಜೆಪಿ ಅಭ್ಯರ್ಥಿ “ಅನರ್ಹ” ಶಾಸಕ ಶಿವರಾಮ ಹೆಬ್ಬಾರ್‌ ಮಾತನ್ನು ಯಾರೆಂದರೆ ಯಾರೂ ನಂಬುತ್ತಿಲ್ಲ.

2018ರ ಅಸೆಂಬ್ಲಿ ಎಲೆಕ್ಷನ್ ರಿಸಲ್ಟ್ ಬಂದ ಮರುಘಳಿಗೆಯೇ ಹೆಬ್ಬಾರ ವ್ಯವಹಾರ ಚತುರೆ ಹೆಂಡತಿ, ಗಂಡನ ಬಿಜೆಪಿಗೆ ಸೇರಿಸಲು ಯಡ್ಡಿ ಮಗ ವಿಜಯೇಂದ್ರ ಜತೆ ಡೀಲ್ ನಡೆಸಿದ್ದು ಆಡಿಯೋ ಕೇಳಿದರ‍್ಯಾರೂ ಮರೆತಿಲ್ಲ! ಹೆಬ್ಬಾರ್ ಮಂತ್ರಿಗಿರಿ ದುರಾಸೆಗೆ ಬಿದ್ದೇ ಪಕ್ಷಾಂತರ ಮಾಡಿ ಅನವಶ್ಯಕ ಎಲೆಕ್ಷನ್ ಜನರ ಮೇಲೆ ಹೇರಿದ್ದಾನೆಂಬ ಕೂಗು ಇಡೀ ಕ್ಷೇತ್ರದಲ್ಲಿದೆ. ಮೂಲ ಬಿಜೆಪಿಗರಂತೂ ಹೆಬ್ಬಾರ ಮುಸುಡಿ ಕಂಡರೆ ಮೂಗು ಮುರಿಯುತ್ತಾರೆ. ನೋಟಾ ಬಟನ್ನಾದರೂ ಒತ್ತುತ್ತೇವೆಯೇ ಹೊರತು ಕೊಳಕು ರಾಜಕೀಯ ಮಾಡುವ ಹೆಬ್ಬಾರ್‌ ಗೆಲ್ಲಿಸಲಾರೆವೆಂದು ಕಟ್ಟರ್ ಕಮಲಿಗರು ಕೆರಳಿದ್ದಾರೆ!!

ಮಂತ್ರಿಯಾಗಿ ಜೀವನದ ಕೊನೆಯ ಆಸೆ ಈಡೇರಿಸಿಕೊಳ್ಳಬೇಕೆಂಬ ತೆವಲಿಗೆ ಬಿದ್ದಿರುವ ಹೆಬ್ಬಾರ್‌ ಲೆಕ್ಕಾಚಾರ ಸರಳ ಅಂಕಗಣಿತದಲ್ಲಿದೆ. ನಂಗೆ ಕಳೆದ ಬಾರಿ ಬಿದ್ದ ಮತದೊಂದಿಗೆ ಆಗಿನ ಎದುರಾಳಿ ವಿ.ಎಸ್.ಪಾಟೀಲ್ ಈಗ ಜತೆಗಿರುವುದರಿಂದ ಪ್ಲಸ್ ಆಗಿದೆ. ಸ್ವಜಾತಿ ಹವ್ಯಕರಲ್ಲಿ ಬೇಸರವಿದ್ದರೂ ಸ್ವರ್ಣವಲ್ಲಿ ಸ್ವಾಮಿಗಳ ಫರ್ಮಾನಿಂದ ಲಾಭ ಆಗ್ತದೆ. ಎದುರಾಳಿ ಕಾಂಗ್ರೆಸ್‌ನ ಭೀಮಣ್ಣ ನಾಯ್ಕಗೆ ಆತನ ದೀವರ ಜಾತಿ ಮತ ಬಿಟ್ಟರೆ ಬೇರಾರದೂ ಸಿಗದು. ಅದಿರು ವ್ಯವಹಾರದ ಕೊಪ್ಪರಿಗೆ ಹಣದಿಂದ ಪ್ರಚಾರ ಸಲೀಸಾಗುತ್ತದೆಂಬ ಅಂದಾಜು ಹೆಬ್ಬಾರ್ ಹಾಕಿದ್ದಾರೆ. ಆದರೆ ಅಷ್ಟು ಸರಳವಾಗಿಲ್ಲ ಉಪಚುನಾವಣಾ ಅಖಾಡ.

ಕಳೆದ ಬಾರಿ ಕೇವಲ 1,400 ಮತದಂತರದಿಂದ ಗೆದ್ದಿದ್ದ ಹೆಬ್ಬಾರ್‌ಗೆ ದಡ ತಲುಪಿಸಿದ್ದೇ ಮುಸ್ಲಿಮ್, ಕ್ರಿಶ್ಚಿಯನ್ನರು. 20 ಸಾವಿರದಷ್ಟಿರುವ ಈ ಅಲ್ಪಸಂಖ್ಯಾತರ ಬೆಂಬಲ ಈ ಸಲ ಹೆಬ್ಬಾರ್‌ಗೆ ಸಿಗಲಾರದು. ಬಿಜೆಪಿಯಿಂದ ಶಾಸಕನಾಗಬೇಕೆಂದು ಕಳೆದ ಬಾರಿಯೇ ಬಿಜೆಪಿ ಪಾಲಾಗಿರುವ ಜಿಪಂ ಸದಸ್ಯ ಎಲ್.ಟಿ.ಪಾಟೀಲ್‌ಗೆ ಹೆಬ್ಬಾರ್ ಬಿಜೆಪಿಗೆ ಬಂದಿದ್ದು ಸಹಿಸಲಾಗುತ್ತಿಲ್ಲ. ಸುಮಾರು 25 ಸಾವಿರ ಮತದಾರರಿರುವ ಮರಾಠ ಸಮುದಾಯದ ಪಾಟೀಲ ಮೂಲತಃ ದೇಶಪಾಂಡೆಯ ಅತ್ಯಾಪ್ತ ಶಿಷ್ಯ. ಈ ಪಾಟೀಲ್ ಕಳೆದ ಬಾರಿ ದೊಡ್ಡ ಮೊತ್ತಕ್ಕೆ ಡೀಲಾಗಿ ಹೆಬ್ಬಾರ್‌ಗೆ ಹೆಲ್ಪ್ ಮಾಡಿದ್ದ. ಆದರೀಗ ದೇಶಪಾಂಡೆ ಕಣ್ಸನ್ನೆಗೇ ಉಲ್ಟಾ ಹೊಡೆಯುತ್ತಿದ್ದಾನೆ.

ಹಿಂದಿನ ಪ್ರತಿಸ್ಪರ್ಧಿ ವಿ.ಎಸ್.ಪಾಟೀಲ್ ಸ್ವಜಾತಿ ದೊರೆ ಯಡ್ಡಿ ಮುಲಾಜಿಗೆ ಬಹಿರಂಗವಾಗಿ ಓಡಾಡಿಕೊಂಡಿದ್ದಾನಾದರೂ ಒಳಗೊಳಗೇ ಹೆಬ್ಬಾರ್ ಸೋಲಲಿ ಎಂದೇ “ಹಾರೈಸು”ತ್ತಿದ್ದಾರೆ. ಈತನ ಮಗ ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಸೇರಿದ್ದು ಹೆಬ್ಬಾರ್‌ ರನ್ನು ದಂಗುಬಡಿಸಿದೆ.

ಸ್ವಜಾತಿಯ ಸ್ವ-ಪಕ್ಷದ ಹಿತಶತ್ರುಗಳಾದ ಪ್ರಮೋದ್ ಹೆಗಡೆ. ಗುರುಮುರಿಗೆ ಸಂಸದ ಅನಂತ್ಮಾಣಿಗಳ ಅರ್ಥವಾಗದ ಅಂತರಾಳ ಹೆಬ್ಬಾರ್‌ರನ್ನು ಅಂಜಿಸುತ್ತಲೇ ಇದೆ. ಬಿಜೆಪಿ ಜಿಲ್ಲಾಧ್ಯಕ್ಷನಾಗಿದ್ದಾಗಲೇ ಅನಂತ್ಮಾಣಿಯಿಂದ ಕೆನ್‌ಕೆನ್ನೆಗೆ ಬಾರಿಸಿಕೊಂಡು ಬಿಜೆಪಿ ಸೇರಿದ್ದ ಹೆಬ್ಬಾರ್‌ರಿಗೆ ಆತನ ಸಹಕಾರ ಸಿಗುವುದಾದರೂ ಹೇಗೆ? ಅನಂತ್ಮಾಣಿಗೆ ಸ್ವ-ಪಕ್ಷದ ಹೆಬ್ಬಾರ್‌ಗಿಂತಲೂ ವಿರೋಧಿ ಪಡೆಯ ಭೀಮಣ್ಣ ನಾಯ್ಕ ಎಂದರೇನೇ ಕಾಳಜಿ ಜಾಸ್ತಿ. ಸ್ಪೀಕರ್ ಕಾಗೇರಿಯಂತೂ ತನ್ನ ಮಂತ್ರಿಗಿರಿಗೆ ಸಂಚಕಾರ ತರುವ, ಸ್ವ-ಜಾತಿ ಹವ್ಯಕರಲ್ಲಿ ಪ್ರತಿಸ್ಪರ್ಧಿಯಾಗುವ ಹೆಬ್ಬಾರ್ ಗೆಲ್ಲುವುದು ಸಹಜವಾಗೇ ಬೇಡವಾಗಿದೆ. ಇಷ್ಟಾಗಿಯೂ ಈ ಹವ್ಯಕ ಲೀಡರ್‌ಗಳೆಲ್ಲ ತಮ್ಮ ಕುಲಗುರು ಸ್ವರ್ಣವಲ್ಲಿ ಸ್ವಾಮಿ ಮಂತ್ರಾಕ್ಷತೆಗೆ ಮಣಿದರೆ ಹವ್ಯಕರ ಮತ ಸಿಗಬಹುದೇ ಹೊರತು ಅಹಿಂದ ಮತ ತರಲು ಸಾಧ್ಯವೇ ಇಲ್ಲ.

ಇದೆಲ್ಲಕ್ಕಿಂತ ಕೈ ಕಮಾಂಡ್ ದೇಶಪಾಂಡೆಯ ಜಿದ್ದೊಂದೇ ಅಖಾಡದಲ್ಲಿ ಹೆಬ್ಬಾರ್‌ರನ್ನು ಹೈರಾಣಾಗಿಸಿದೆ. ದೇಶಪಾಂಡೆ ತನ್ನ ರಾಜಕೀಯ ಇತಿಹಾಸದಲ್ಲಿ ಯಾರನ್ನೂ ಗೆಲ್ಲಿಸಲು ಪ್ರಯತ್ನಿಸಿದ್ದೇ ಇಲ್ಲ. ಆತನದೇನಿದ್ದರೂ ಸೋಲಿಸುವ ಕರಾಮತ್ತು. ಆದರೆ ಈ ಬಾರಿ ದೇಶಪಾಂಡೆ ಹೇಗಾದರೂ ಮಾಡಿ ಹೆಬ್ಬಾರ್‌ರನ್ನು ಹೆಡೆಮುರಿ ಕಟ್ಟಿ ಬೇಡ್ತಿ ನದಿಯಲ್ಲಿ ಬಿಡಬೇಕೆಂಬ ಹಠಕ್ಕೆ ಬಿದ್ದಿದ್ದಾರೆ. ತನ್ನನ್ನು ಕಾಂಗ್ರೆಸಲ್ಲಿದ್ದಾಗಲೂ ಕೆಣಕುತ್ತಿದ್ದ ಹೆಬ್ಬಾರ್ ಪಾರ್ಟಿ ಬಿಡಲಿಕ್ಕೆ ತಾನೇ ಕಾರಣವೆಂದು ಹೇಳಿದ್ದು ಕೆರಳಿಸಿದೆ. ಕ್ಷೇತ್ರದ ಮುಂಡಗೋಡದಲ್ಲಿ ದೇಶಪಾಂಡೆಗೆ ಹಿಡಿತವಿದೆ. ಕ್ಷೇತ್ರ ಪುನರ್ ವಿಂಗಡಣೆಗೂ ಮೊದಲು ಮುಂಡಗೋಡ ದೇಶಪಾಂಡೆಯ ಹಳಿಯಾಳ ಕ್ಷೇತ್ರದ ಜತೆಗಿತ್ತು. ಇಲ್ಲಿಯೇ ಬಿಡಾರ ಹೂಡಿರುವ ದೇಶಪಾಂಡೆ ಹೆಬ್ಬಾರ್‌ನ ಸೋಲಿಸಲು ಸಕಲ ಸ್ಟ್ರಾಟರ್ಜಿ ಮಾಡುತ್ತಿದ್ಧಾರೆ. ಬ್ರಾಹ್ಮಣೇತರ ಮರಾಠ, ಗೌಳಿ, ಸಿದ್ದಿ, ಬುಡಕಟ್ಟು, ದಲಿತ ಮತ ಬ್ಯಾಂಕ್ ಮೇಲೆ ದೇಶಪಾಂಡೆ ಗಮನ ಕೇಂದ್ರೀಕರಿಸಿರುವುದು ಹೆಬ್ಬಾರ್‌ಗೂ ಗೊತ್ತಾಗಿದೆ.

ದೇಶಪಾಂಡೆ ತಂತ್ರಗಾರಿಕೆಗೆ ಹೆಬ್ಬಾರ್ ಒಂಥರಾ ಡೆಸ್ಟರೇಟ್ ಆದಂತಿದೆ. ಅರಣ್ಯ ಅತಿಕ್ರಮಣದಾರರ ಸಂಘಟಕ ರವೀಂದ್ರ ನಾಯ್ಕರನ್ನು ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ದೇಶಪಾಂಡೆ ಕರೆತಂದಿದ್ದಾರೆ. ಬಹುತೇಕ ಜಿ.ಪಂ- ತಾ.ಪಂ- ಗ್ರಾಪಂ.ನ ಕಾಂಗ್ರೆಸ್ ಮೆಂಬರ್‌ಗಳು ಹೆಬ್ಬಾರ್ ಜತೆಗಿದ್ದರೂ ದೇಶಪಾಂಡೆಯ “ಋಣ” ಇರುವುದರಿಂದ ಆತನ ರಹಸ್ಯ ನಿರ್ದೇಶನಕ್ಕೆ ಬದ್ಧರಾಗಿದ್ದಾರೆಂಬುದು ಎಲೆಕ್ಷನ್ ವಿಶ್ಲೇಷಕರ ಆಂಬೋಣ.

ಕಾಂಗ್ರೆಸ್ ಕ್ಯಾಂಡಿಡೇಟ್ ಭೀಮಣ್ಣ ನಾಯ್ಕ ಪಾಪದ ಆಸಾಮಿ. ಹಲವು ಎಲೆಕ್ಷನ್‌ನಲ್ಲಿ ಸೋತವನೆಂಬ ಸಿಂಪಥಿ ಕ್ಷೇತ್ರದಲ್ಲಿದೆ. ’ಮಾಜಿ ಸಿಎಂ ಬಂ’ ಭಾಮೈದನೆಂಬ ಅಂಶ ಆತನಿಗೆ ಸ್ವಜಾತಿ ದೀವರ 15 ಸಾವಿರದಷ್ಟಿರುವ ಮತದಲ್ಲಿ ಹೆಚ್ಚಿನದು ಪಡೆಯಲು ಅನುಕೂಲವಾಗಿದೆ. ನೆರೆ ಬಂದಾಗ ಸಮ್ಮಿಶ್ರ ಸರ್ಕಾರ ಉರುಳಿಸಲು ಮುಂಬೈನ ಐಷಾರಾಮಿ ಹೋಟೆಲ್‌ನಲ್ಲಿ “ಆಟ” ಆಡುತ್ತಿದ್ದ ಹೆಬ್ಬಾರ್ ಬಗ್ಗೆ ಕ್ಷೇತ್ರದಲ್ಲಿ ಸಿಟ್ಟಿದೆ. ಮೂಲಸೌಕರ್ಯ, ರಸ್ತೆಯಂಥ ಸೌಲಭ್ಯ ಒದಗಿಸುವ ಹೆಬ್ಬಾರ್‌ನ ಭರವಸೆ ಎರಡು ಬಾರಿ ಶಾಸಕರಾದರೂ ಈಡೇರಿಲ್ಲವೆಂಬ ಬೇಸರ ಜನರಿಗಿದೆ.

ಬಿಜೆಪಿಯ ಟಾಪ್ ಲೀಡರ್‌ಗಳು ಎರಡೆರಡು ಬಾರಿ ಸಂಧಾನ ಸಭೆ ನಡೆಸಿದರೂ ಬಿಜೆಪಿಯ ಬಹುತೇಕ ಘಟಕಗಳಿನ್ನೂ ಫೀಲ್ಡಿಗೆ ಇಳಿದಿಲ್ಲ. ಹೆಬ್ಬಾರ್ ಗ್ಯಾಂಗಿನ ಜತೆ ಸೇರಲು ಮೂಲ ಬಿಜೆಪಿಗರ ಮನಸು ಒಪ್ಪುತ್ತಿಲ್ಲ. ಹೊರನೋಟಕ್ಕೆ ಹೆಬ್ಬಾರ್ ಹವಾ ಜೋರಿರುವಂತೆ ಕಂಡರೂ ಆತನಿಗೆ ಸ್ವಜಾತಿ ಹವ್ಯಕರು ಮತ್ತು ಯಡ್ಡಿ ದೆಸೆಯಿಂದ 25 ಸಾವಿರದಷ್ಟಿರುವ ಲಿಂಗಾಯತರ ಮತ ಬಿಟ್ಟರೆ ಉಳಿದ ಯಾವ ಸಮುದಾಯದ ಮತವೂ ದೊಡ್ಡ ಪ್ರಮಾಣದಲ್ಲಿ ದಕ್ಕಲಾರದು.

ಕ್ಷೇತ್ರ ವ್ಯಾಪ್ತಿಯ ಏಳು ಜಿಪಂ ಕ್ಷೇತ್ರಗಳ ಪೈಕಿ ನಾಲ್ಕು ಬಿಜೆಪಿ (ಇಬ್ಬರು ಕಾಂಗ್ರೆಸ್‌ನಿಂದ ಹೋದವರು) ಪರವಿದ್ದರೆ ಮೂರು ಕಾಂಗ್ರೆಸ್ ಕಡೆಗಿದೆ. ದೇಶಪಾಂಡೆ ಕರಾರುವಾಕ್ಯ ದಾಳ ಉರುಳಿಸಿದಂತೆ ಕಾಂಗ್ರೆಸ್ ಕ್ಯಾಂಡಿಡೇಟ್ ಬಲಗೊಳ್ಳುತ್ತಿದ್ದಾರೆ. ಸದ್ಯಕ್ಕೆ ಎತ್ತಿಂದೆತ್ತ ಲೆಕ್ಕಹಾಕಿ ತಾಳೆ ನೋಡಿದರೂ ಕ್ಷೇತ್ರ ಯಾವ ಮೂಲೆಯಲ್ಲಿ ನಿಂತು ಕಣ್ಣು ಹಾಯಿಸಿದರೂ ಪಕ್ಷಾಂತರಿ ಹೆಬ್ಬಾರ್‌ಗೆ ಅಖಾಡ ಕಠಿಣ ಆಗುತ್ತಿರುವುದು ಸ್ಪಷ್ಟವಾಗುತ್ತಿದೆ. ದೇಶಪಾಂಡೆ ಇದೇ ನಿಷ್ಠೆ-ಬದ್ಧತೆ-ಹಠದಿಂದ ಕಡೆವರೆಗೂ ಹೋರಾಡಿದರೆ ಕ್ಷೇತ್ರಕ್ಕೆ ಮೋಸ-ವಂಚನೆ ಮಾಡಿದ ಹೆಬ್ಬಾರ್‌ಗೊಂದು ನೈತಿಕ ಪಾಠವಾಗೋದು ಗ್ಯಾರಂಟಿ ಎಂಬುದು ಕ್ಷೇತ್ರದಲ್ಲಿ ಕೇಳಿಬರುವ ಸಾಮಾನ್ಯ ಮಾತು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...