Homeಮುಖಪುಟದೇಶಕ್ಕೆ ಕಾಲಿಟ್ಟ ಯೆಲ್ಲೋ ಫಂಗಸ್: ದೆಹಲಿಯಲ್ಲಿ ಮೊದಲ ಪ್ರಕರಣ ಪತ್ತೆ

ದೇಶಕ್ಕೆ ಕಾಲಿಟ್ಟ ಯೆಲ್ಲೋ ಫಂಗಸ್: ದೆಹಲಿಯಲ್ಲಿ ಮೊದಲ ಪ್ರಕರಣ ಪತ್ತೆ

- Advertisement -
- Advertisement -

ಕೊರೊನಾ ಸಾಂಕ್ರಾಮಿಕದಿಂದ ನಲುಗಿರುವ ದೇಶದಲ್ಲಿ ಬ್ಲಾಕ್ ಫಂಗಸ್, ವೈಟ್ ಫಂಗಸ್ ಸೋಂಕು ಹಬ್ಬುತ್ತಿದೆ. ಇದರ ನಡುವೆಯೇ ಯೆಲ್ಲೋ ಫಂಗಸ್​ (Yellow Fungus) ಸಹ ಕಂಡು ಬಂದಿದ್ದು ದೇಶದಲ್ಲಿ ಮತ್ತಷ್ಟು ಆತಂಕ ಮನೆ ಮಾಡಿದೆ.

ಈಗಾಗಲೇ ಎಲ್ಲಾ ರಾಜ್ಯಗಳಲ್ಲೂ ಬ್ಲಾಕ್ ಫಂಗಸ್ ಸೋಂಕನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಲಾಗಿದೆ. ಬ್ಲಾಕ್​ ಫಂಗಸ್ ಪ್ರಕರಣಗಳು​ ಎಲ್ಲಾ ರಾಜ್ಯಗಳಲ್ಲೂ ದಾಖಲಾಗಿದ್ದು, ಅನೇಕರು ಮೃತಪಟ್ಟಿದ್ದಾರೆ. ಕರ್ನಾಟಕದಲ್ಲೂ 300 ಜನ ಈ ಸೋಂಕಿಗೆ ತುತ್ತಾಗಿದ್ದಾರೆ ಎಂದು ಸ್ವತಃ ಆರೋಗ್ಯ ಸಚಿವ ಸುಧಾಕರ್​ ಸ್ಪಷ್ಟಪಡಿಸಿದ್ದಾರೆ.

ದೇಶದಲ್ಲೇ ದೆಹಲಿಯ ಘಾಜಿಯಬಾದ್‌ನಲ್ಲಿ ಮೊದಲ ಯೆಲ್ಲೋ ಫಂಗಸ್ ಪ್ರಕರಣ ಪತ್ತೆಯಾಗಿದೆ. ಈವರೆಗಿನ ಕಪ್ಪು, ಬಿಳಿ ಫಂಗಸ್‌ಗಿಂತ ಈ ಯೆಲ್ಲೋ ಫಂಗಸ್ ಮತ್ತಷ್ಟು ಮಾರಕವಾಗಿರಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಜನಾಕ್ರೋಶದ ಸ್ಫೋಟ: ರಾಜ್ಯಾದ್ಯಂತ ಮನೆಗಳಲ್ಲಿಯೇ ಭುಗಿಲೆದ್ದ ಪ್ರತಿಭಟನೆಗಳು

ಈ ವೈರಸ್​ ಬಾಧಿತರಲ್ಲಿ ಆಲಸ್ಯ, ತೂಕ ಇಳಿಕೆ, ಹಸಿವೇ ಆಗದಿರುವುದು ಅಥವಾ ಕಡಿಮೆ ಹಸಿವಾಗುವುದು, ಕೀವು ಸೋರುವುದು ಸೇರಿದಂತೆ ಹಲವಾರು ಲಕ್ಷಣಗಳು ಕಂಡು ಬರುತ್ತದೆ ಎಂದು ತಿಳಿದು ಬಂದಿದೆ. ಯೆಲ್ಲೋ ಫಂಗಸ್ ಸೋಂಕಿನ ರೋಗ ಲಕ್ಷಣ ಕಂಡು ಬಂದ ತಕ್ಷಣ ರೋಗಿಗಳು ವೈದ್ಯರನ್ನು ಕಾಣುವುದು ಉತ್ತಮ ಎಂದು ಎಚ್ಚರಿಸಲಾಗಿದೆ.

ನೈರ್ಮಲ್ಯ ಕೊರತೆಯಿಂದ ಈ ಫಂಗಸ್ ಹರಡುವ ಸಾಧ್ಯತೆ ಇದೆ. ಕಣ್ಣು ಸೇರಿ ದೇಹದ ಎಲ್ಲಾ ಭಾಗಗಳಿಗೂ ಡ್ಯಾಮೇಜ್ ಮಾಡಬಲ್ಲದು ಎನ್ನಲಾಗಿದೆ. ಇಎನ್‌ಟಿ ಶಸ್ತ್ರಚಿಕಿತ್ಸಕ ಡಾ. ಬ್ರಿಜ್ ಪಾಲ್ ತ್ಯಾಗಿ ಅವರಿಂದ ಈ ಮಾಹಿತಿ ಹೊರಬಿದ್ದಿದ್ದು, ಡಾ. ತ್ಯಾಗಿ, ಈಗ ದೆಹಲಿಯಲ್ಲಿ ಹಳದಿ ಫಂಗಸ್ ರೋಗಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಯೆಲ್ಲೋ ಫಂಗಸ್​ಗೆ ಔಷಧ ಇದೆಯೇ? ಇದಕ್ಕೆ ಯಾವ ಚಿಕಿತ್ಸೆ ನೀಡಬೇಕು? ಈ ವೈರಸ್​ ವಿರುದ್ಧದ ಹೋರಾಟಕ್ಕೆ ತಯಾರಿ ಹೇಗೆ ಮಾಡಬೇಕು? ಎಂಬ ಅಂಶಗಳು ಮತ್ತಷ್ಟು ಅಧ್ಯಯನದಿಂದ ಹೊರ ಬೀಳಬೇಕಿದೆ. ಆದರೆ, ಕೊರೊನಾ ಸಂಕಷ್ಟದಲ್ಲಿರುವ ದೇಶದಲ್ಲಿ ಬ್ಲಾಕ್, ವೈಟ್, ಹಳದಿ ಫಂಗಸ್‌ಗಳು ಆತಂಕ ಸೃಷ್ಟಿ ಮಾಡಿರುವುದು ಸುಳ್ಳಲ್ಲ.


ಇದನ್ನೂ ಓದಿ: ರೈತ ಹೋರಾಟಕ್ಕೆ 6 ತಿಂಗಳು- ಹೇಗಿದೆ ಪ್ರತಿಭಟನಾ ನಿರತ ಗಡಿಗಳಲ್ಲಿನ ಪರಿಸ್ಥಿತಿ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....