Homeಮುಖಪುಟದೇಶಕ್ಕೆ ಕಾಲಿಟ್ಟ ಯೆಲ್ಲೋ ಫಂಗಸ್: ದೆಹಲಿಯಲ್ಲಿ ಮೊದಲ ಪ್ರಕರಣ ಪತ್ತೆ

ದೇಶಕ್ಕೆ ಕಾಲಿಟ್ಟ ಯೆಲ್ಲೋ ಫಂಗಸ್: ದೆಹಲಿಯಲ್ಲಿ ಮೊದಲ ಪ್ರಕರಣ ಪತ್ತೆ

- Advertisement -
- Advertisement -

ಕೊರೊನಾ ಸಾಂಕ್ರಾಮಿಕದಿಂದ ನಲುಗಿರುವ ದೇಶದಲ್ಲಿ ಬ್ಲಾಕ್ ಫಂಗಸ್, ವೈಟ್ ಫಂಗಸ್ ಸೋಂಕು ಹಬ್ಬುತ್ತಿದೆ. ಇದರ ನಡುವೆಯೇ ಯೆಲ್ಲೋ ಫಂಗಸ್​ (Yellow Fungus) ಸಹ ಕಂಡು ಬಂದಿದ್ದು ದೇಶದಲ್ಲಿ ಮತ್ತಷ್ಟು ಆತಂಕ ಮನೆ ಮಾಡಿದೆ.

ಈಗಾಗಲೇ ಎಲ್ಲಾ ರಾಜ್ಯಗಳಲ್ಲೂ ಬ್ಲಾಕ್ ಫಂಗಸ್ ಸೋಂಕನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಲಾಗಿದೆ. ಬ್ಲಾಕ್​ ಫಂಗಸ್ ಪ್ರಕರಣಗಳು​ ಎಲ್ಲಾ ರಾಜ್ಯಗಳಲ್ಲೂ ದಾಖಲಾಗಿದ್ದು, ಅನೇಕರು ಮೃತಪಟ್ಟಿದ್ದಾರೆ. ಕರ್ನಾಟಕದಲ್ಲೂ 300 ಜನ ಈ ಸೋಂಕಿಗೆ ತುತ್ತಾಗಿದ್ದಾರೆ ಎಂದು ಸ್ವತಃ ಆರೋಗ್ಯ ಸಚಿವ ಸುಧಾಕರ್​ ಸ್ಪಷ್ಟಪಡಿಸಿದ್ದಾರೆ.

ದೇಶದಲ್ಲೇ ದೆಹಲಿಯ ಘಾಜಿಯಬಾದ್‌ನಲ್ಲಿ ಮೊದಲ ಯೆಲ್ಲೋ ಫಂಗಸ್ ಪ್ರಕರಣ ಪತ್ತೆಯಾಗಿದೆ. ಈವರೆಗಿನ ಕಪ್ಪು, ಬಿಳಿ ಫಂಗಸ್‌ಗಿಂತ ಈ ಯೆಲ್ಲೋ ಫಂಗಸ್ ಮತ್ತಷ್ಟು ಮಾರಕವಾಗಿರಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಜನಾಕ್ರೋಶದ ಸ್ಫೋಟ: ರಾಜ್ಯಾದ್ಯಂತ ಮನೆಗಳಲ್ಲಿಯೇ ಭುಗಿಲೆದ್ದ ಪ್ರತಿಭಟನೆಗಳು

ಈ ವೈರಸ್​ ಬಾಧಿತರಲ್ಲಿ ಆಲಸ್ಯ, ತೂಕ ಇಳಿಕೆ, ಹಸಿವೇ ಆಗದಿರುವುದು ಅಥವಾ ಕಡಿಮೆ ಹಸಿವಾಗುವುದು, ಕೀವು ಸೋರುವುದು ಸೇರಿದಂತೆ ಹಲವಾರು ಲಕ್ಷಣಗಳು ಕಂಡು ಬರುತ್ತದೆ ಎಂದು ತಿಳಿದು ಬಂದಿದೆ. ಯೆಲ್ಲೋ ಫಂಗಸ್ ಸೋಂಕಿನ ರೋಗ ಲಕ್ಷಣ ಕಂಡು ಬಂದ ತಕ್ಷಣ ರೋಗಿಗಳು ವೈದ್ಯರನ್ನು ಕಾಣುವುದು ಉತ್ತಮ ಎಂದು ಎಚ್ಚರಿಸಲಾಗಿದೆ.

ನೈರ್ಮಲ್ಯ ಕೊರತೆಯಿಂದ ಈ ಫಂಗಸ್ ಹರಡುವ ಸಾಧ್ಯತೆ ಇದೆ. ಕಣ್ಣು ಸೇರಿ ದೇಹದ ಎಲ್ಲಾ ಭಾಗಗಳಿಗೂ ಡ್ಯಾಮೇಜ್ ಮಾಡಬಲ್ಲದು ಎನ್ನಲಾಗಿದೆ. ಇಎನ್‌ಟಿ ಶಸ್ತ್ರಚಿಕಿತ್ಸಕ ಡಾ. ಬ್ರಿಜ್ ಪಾಲ್ ತ್ಯಾಗಿ ಅವರಿಂದ ಈ ಮಾಹಿತಿ ಹೊರಬಿದ್ದಿದ್ದು, ಡಾ. ತ್ಯಾಗಿ, ಈಗ ದೆಹಲಿಯಲ್ಲಿ ಹಳದಿ ಫಂಗಸ್ ರೋಗಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಯೆಲ್ಲೋ ಫಂಗಸ್​ಗೆ ಔಷಧ ಇದೆಯೇ? ಇದಕ್ಕೆ ಯಾವ ಚಿಕಿತ್ಸೆ ನೀಡಬೇಕು? ಈ ವೈರಸ್​ ವಿರುದ್ಧದ ಹೋರಾಟಕ್ಕೆ ತಯಾರಿ ಹೇಗೆ ಮಾಡಬೇಕು? ಎಂಬ ಅಂಶಗಳು ಮತ್ತಷ್ಟು ಅಧ್ಯಯನದಿಂದ ಹೊರ ಬೀಳಬೇಕಿದೆ. ಆದರೆ, ಕೊರೊನಾ ಸಂಕಷ್ಟದಲ್ಲಿರುವ ದೇಶದಲ್ಲಿ ಬ್ಲಾಕ್, ವೈಟ್, ಹಳದಿ ಫಂಗಸ್‌ಗಳು ಆತಂಕ ಸೃಷ್ಟಿ ಮಾಡಿರುವುದು ಸುಳ್ಳಲ್ಲ.


ಇದನ್ನೂ ಓದಿ: ರೈತ ಹೋರಾಟಕ್ಕೆ 6 ತಿಂಗಳು- ಹೇಗಿದೆ ಪ್ರತಿಭಟನಾ ನಿರತ ಗಡಿಗಳಲ್ಲಿನ ಪರಿಸ್ಥಿತಿ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...