Homeಮುಖಪುಟದೇಶಕ್ಕೆ ಕಾಲಿಟ್ಟ ಯೆಲ್ಲೋ ಫಂಗಸ್: ದೆಹಲಿಯಲ್ಲಿ ಮೊದಲ ಪ್ರಕರಣ ಪತ್ತೆ

ದೇಶಕ್ಕೆ ಕಾಲಿಟ್ಟ ಯೆಲ್ಲೋ ಫಂಗಸ್: ದೆಹಲಿಯಲ್ಲಿ ಮೊದಲ ಪ್ರಕರಣ ಪತ್ತೆ

- Advertisement -
- Advertisement -

ಕೊರೊನಾ ಸಾಂಕ್ರಾಮಿಕದಿಂದ ನಲುಗಿರುವ ದೇಶದಲ್ಲಿ ಬ್ಲಾಕ್ ಫಂಗಸ್, ವೈಟ್ ಫಂಗಸ್ ಸೋಂಕು ಹಬ್ಬುತ್ತಿದೆ. ಇದರ ನಡುವೆಯೇ ಯೆಲ್ಲೋ ಫಂಗಸ್​ (Yellow Fungus) ಸಹ ಕಂಡು ಬಂದಿದ್ದು ದೇಶದಲ್ಲಿ ಮತ್ತಷ್ಟು ಆತಂಕ ಮನೆ ಮಾಡಿದೆ.

ಈಗಾಗಲೇ ಎಲ್ಲಾ ರಾಜ್ಯಗಳಲ್ಲೂ ಬ್ಲಾಕ್ ಫಂಗಸ್ ಸೋಂಕನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಲಾಗಿದೆ. ಬ್ಲಾಕ್​ ಫಂಗಸ್ ಪ್ರಕರಣಗಳು​ ಎಲ್ಲಾ ರಾಜ್ಯಗಳಲ್ಲೂ ದಾಖಲಾಗಿದ್ದು, ಅನೇಕರು ಮೃತಪಟ್ಟಿದ್ದಾರೆ. ಕರ್ನಾಟಕದಲ್ಲೂ 300 ಜನ ಈ ಸೋಂಕಿಗೆ ತುತ್ತಾಗಿದ್ದಾರೆ ಎಂದು ಸ್ವತಃ ಆರೋಗ್ಯ ಸಚಿವ ಸುಧಾಕರ್​ ಸ್ಪಷ್ಟಪಡಿಸಿದ್ದಾರೆ.

ದೇಶದಲ್ಲೇ ದೆಹಲಿಯ ಘಾಜಿಯಬಾದ್‌ನಲ್ಲಿ ಮೊದಲ ಯೆಲ್ಲೋ ಫಂಗಸ್ ಪ್ರಕರಣ ಪತ್ತೆಯಾಗಿದೆ. ಈವರೆಗಿನ ಕಪ್ಪು, ಬಿಳಿ ಫಂಗಸ್‌ಗಿಂತ ಈ ಯೆಲ್ಲೋ ಫಂಗಸ್ ಮತ್ತಷ್ಟು ಮಾರಕವಾಗಿರಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಜನಾಕ್ರೋಶದ ಸ್ಫೋಟ: ರಾಜ್ಯಾದ್ಯಂತ ಮನೆಗಳಲ್ಲಿಯೇ ಭುಗಿಲೆದ್ದ ಪ್ರತಿಭಟನೆಗಳು

ಈ ವೈರಸ್​ ಬಾಧಿತರಲ್ಲಿ ಆಲಸ್ಯ, ತೂಕ ಇಳಿಕೆ, ಹಸಿವೇ ಆಗದಿರುವುದು ಅಥವಾ ಕಡಿಮೆ ಹಸಿವಾಗುವುದು, ಕೀವು ಸೋರುವುದು ಸೇರಿದಂತೆ ಹಲವಾರು ಲಕ್ಷಣಗಳು ಕಂಡು ಬರುತ್ತದೆ ಎಂದು ತಿಳಿದು ಬಂದಿದೆ. ಯೆಲ್ಲೋ ಫಂಗಸ್ ಸೋಂಕಿನ ರೋಗ ಲಕ್ಷಣ ಕಂಡು ಬಂದ ತಕ್ಷಣ ರೋಗಿಗಳು ವೈದ್ಯರನ್ನು ಕಾಣುವುದು ಉತ್ತಮ ಎಂದು ಎಚ್ಚರಿಸಲಾಗಿದೆ.

ನೈರ್ಮಲ್ಯ ಕೊರತೆಯಿಂದ ಈ ಫಂಗಸ್ ಹರಡುವ ಸಾಧ್ಯತೆ ಇದೆ. ಕಣ್ಣು ಸೇರಿ ದೇಹದ ಎಲ್ಲಾ ಭಾಗಗಳಿಗೂ ಡ್ಯಾಮೇಜ್ ಮಾಡಬಲ್ಲದು ಎನ್ನಲಾಗಿದೆ. ಇಎನ್‌ಟಿ ಶಸ್ತ್ರಚಿಕಿತ್ಸಕ ಡಾ. ಬ್ರಿಜ್ ಪಾಲ್ ತ್ಯಾಗಿ ಅವರಿಂದ ಈ ಮಾಹಿತಿ ಹೊರಬಿದ್ದಿದ್ದು, ಡಾ. ತ್ಯಾಗಿ, ಈಗ ದೆಹಲಿಯಲ್ಲಿ ಹಳದಿ ಫಂಗಸ್ ರೋಗಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಯೆಲ್ಲೋ ಫಂಗಸ್​ಗೆ ಔಷಧ ಇದೆಯೇ? ಇದಕ್ಕೆ ಯಾವ ಚಿಕಿತ್ಸೆ ನೀಡಬೇಕು? ಈ ವೈರಸ್​ ವಿರುದ್ಧದ ಹೋರಾಟಕ್ಕೆ ತಯಾರಿ ಹೇಗೆ ಮಾಡಬೇಕು? ಎಂಬ ಅಂಶಗಳು ಮತ್ತಷ್ಟು ಅಧ್ಯಯನದಿಂದ ಹೊರ ಬೀಳಬೇಕಿದೆ. ಆದರೆ, ಕೊರೊನಾ ಸಂಕಷ್ಟದಲ್ಲಿರುವ ದೇಶದಲ್ಲಿ ಬ್ಲಾಕ್, ವೈಟ್, ಹಳದಿ ಫಂಗಸ್‌ಗಳು ಆತಂಕ ಸೃಷ್ಟಿ ಮಾಡಿರುವುದು ಸುಳ್ಳಲ್ಲ.


ಇದನ್ನೂ ಓದಿ: ರೈತ ಹೋರಾಟಕ್ಕೆ 6 ತಿಂಗಳು- ಹೇಗಿದೆ ಪ್ರತಿಭಟನಾ ನಿರತ ಗಡಿಗಳಲ್ಲಿನ ಪರಿಸ್ಥಿತಿ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...